ETV Bharat / state

ನಾನೇ ಮೈತ್ರಿ ಅಭ್ಯರ್ಥಿ, ನಾನೇ ಮೈತ್ರಿ ಅಭ್ಯರ್ಥಿ, ನಾನೇ ಮೈತ್ರಿ ಅಭ್ಯರ್ಥಿ: ರಾಮನಗರದಲ್ಲಿ ಗುಡುಗಿದ ಸಿಪಿವೈ

ಚನ್ನಪಟ್ಟಣ ಉಪ ಚುನಾವಣೆಗೆ ಎನ್​ಡಿಎ ಮೈತ್ರಿ ಪಕ್ಷದಿಂದ ನಾನೇ ಅಭ್ಯರ್ಥಿ. ನಾಳೆ, ನಾಡಿದ್ದರಲ್ಲಿ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆ. ನನ್ನ ಕಾರ್ಯಕರ್ತರಿಗೆ, ಮುಖಂಡರಿಗೆ ಯಾವುದೇ ಆತಂಕ ಬೇಡ ಎಂದು ಯೋಗೇಶ್ವರ್​​​ ಭರವಸೆ ವ್ಯಕ್ತಪಡಿಸಿದ್ದಾರೆ.

author img

By ETV Bharat Karnataka Team

Published : 2 hours ago

ರಾಮನಗರದಲ್ಲಿ ಗುಡುಗಿದ ಸಿಪಿವೈ
ರಾಮನಗರದಲ್ಲಿ ಗುಡುಗಿದ ಸಿಪಿವೈ (ETV Bharat)

ರಾಮನಗರ: "ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್​ ಅವರು ನಮ್ಮ ಕ್ಷೇತ್ರದಲ್ಲಿ ರಾಜಕೀಯ ಮಾಡಲ್ಲ. ಕಾರ್ಯಕರ್ತರಿಗೆ, ಮುಖಂಡರಿಗೆ ಯಾವುದೇ ಆತಂಕ ಬೇಡ. ನಾನೇ ಎನ್​ಡಿಎ ಮೈತ್ರಿ ಅಭ್ಯರ್ಥಿ" ಎಂದು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್​​​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್​, ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ. ಟಿಕೆಟ್‌ಗಾಗಿ ಜೆಡಿಎಸ್‌ - ಬಿಜೆಪಿ ಹಗ್ಗಜಗ್ಗಾಟದ ನಡುವೆಯೂ ಮೈತ್ರಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದ, ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌ ಬುಧವಾರ ಖಾಸಗಿ ರೆಸಾರ್ಟ್‌ನಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ಇಂದು ಸಭೆ ನಡೆಸಿದರು.

ನಾನೇ ಮೈತ್ರಿ ಅಭ್ಯರ್ಥಿ ಎಂದು ಮತ್ತೆ ಮತ್ತೆ ಹೇಳಿದ ಸಿ.ಪಿ. ಯೋಗೇಶ್ವರ್​​​ . (ETV Bharat)

ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಬಿಜೆಪಿ ಮುಖಂಡರು ಈ ಮೈತ್ರಿ ಪಕ್ಷದಿಂದ ಸಿ.ಪಿ. ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡಲಾಯಿತು‌. ಈ ಮೊದಲಿನಿಂದಲೂ ತಾವಿರುವ ಪಕ್ಷಗಳಿಗೇ ಟಾಂಗ್‌ ಕೊಡುವಲ್ಲಿ ಪರಿಣತರಾಗಿರುವ ಯೋಗೇಶ್ವರ್‌, ಬಿಜೆಪಿ ಬೆಂಬಲಿಗರ ಸಭೆ ಕರೆದು ಈ ಸಲ ಮೈತ್ರಿ ಅಭ್ಯರ್ಥಿ ಟಿಕೆಟ್ ನನಗೆ ಎಂದು ಬಹಿರಂಗವಾಗಿ ಭಾಷಣ ಮಾಡಿದರು.

ಮೈತ್ರಿ ಟಿಕೆಟ್‌ ತಮಗೇ ಎಂದು ಭರವಸೆ ವ್ಯಕ್ತಪಡಿಸುತ್ತಿದ್ದ ಅವರು ಇತ್ತೀಚಿನ ರಾಜಕೀಯ ಬೆಳವಣಿಗೆಯಿಂದಾಗಿ ಅಸಮಾಧಾನಗೊಂಡಿದ್ದಾರೆ. ಬಿಜೆಪಿ ರಾಜ್ಯ ನಾಯಕರು ಉಪಚುನಾವಣೆಯಲ್ಲಿ ಯೋಗೇಶ್ವರ್‌ಗೆ ಟಿಕೆಟ್‌ ಬೇಕು ಎಂದು ಶಿಫಾರಸು ಮಾಡಿದ್ದರೂ, ಕುಮಾರಸ್ವಾಮಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಟಿಕೆಟ್‌ ಬಿಟ್ಟುಕೊಟ್ಟರೆ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಕಷ್ಟ ಎಂದು ಮುಖಂಡರು ಒತ್ತಾಯಿಸಿದರು.

ಬಹಿರಂಗ ಭಾಷಣ ಉದ್ದೇಶಿಸಿ ಮಾತನಾಡಿದ ಅವರು, "ಈ ಭಾರಿ ಕಾರ್ಯಕರ್ತರು ಮುಖಂಡರು ಯಾವುದೇ ಆತಂಕ ಬೇಡ. ಈ ಬಾರಿ ಎಎನ್​ಡಿಎ ಮೈತ್ರಿಯಾಗಿ ನಾನೇ ಕಣಕ್ಕಿಳಿಯುವೆ. ಯಾವುದೇ ಆತಂಕ ಬೇಡ. ನಾನೇ ಮೈತ್ರಿ ಅಭ್ಯರ್ಥಿ ಎಂದು ಮೂರು ಭಾರಿ ಒತ್ತಿ ಒತ್ತಿ ಹೇಳಿದರು.

ಇದನ್ನೂ ಓದಿ: ಚನ್ನಪಟ್ಟಣ ಕದನ: ಯೋಗೇಶ್ವರ್ ಬಳಿ ಚರ್ಚಿಸುತ್ತೇವೆ, ಕುಮಾರಸ್ವಾಮಿಗೆ ಸಂಪೂರ್ಣ ಅಧಿಕಾರ: ಆರ್.ಅಶೋಕ್

ರಾಮನಗರ: "ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್​ ಅವರು ನಮ್ಮ ಕ್ಷೇತ್ರದಲ್ಲಿ ರಾಜಕೀಯ ಮಾಡಲ್ಲ. ಕಾರ್ಯಕರ್ತರಿಗೆ, ಮುಖಂಡರಿಗೆ ಯಾವುದೇ ಆತಂಕ ಬೇಡ. ನಾನೇ ಎನ್​ಡಿಎ ಮೈತ್ರಿ ಅಭ್ಯರ್ಥಿ" ಎಂದು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್​​​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್​, ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ. ಟಿಕೆಟ್‌ಗಾಗಿ ಜೆಡಿಎಸ್‌ - ಬಿಜೆಪಿ ಹಗ್ಗಜಗ್ಗಾಟದ ನಡುವೆಯೂ ಮೈತ್ರಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದ, ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌ ಬುಧವಾರ ಖಾಸಗಿ ರೆಸಾರ್ಟ್‌ನಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ಇಂದು ಸಭೆ ನಡೆಸಿದರು.

ನಾನೇ ಮೈತ್ರಿ ಅಭ್ಯರ್ಥಿ ಎಂದು ಮತ್ತೆ ಮತ್ತೆ ಹೇಳಿದ ಸಿ.ಪಿ. ಯೋಗೇಶ್ವರ್​​​ . (ETV Bharat)

ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಬಿಜೆಪಿ ಮುಖಂಡರು ಈ ಮೈತ್ರಿ ಪಕ್ಷದಿಂದ ಸಿ.ಪಿ. ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡಲಾಯಿತು‌. ಈ ಮೊದಲಿನಿಂದಲೂ ತಾವಿರುವ ಪಕ್ಷಗಳಿಗೇ ಟಾಂಗ್‌ ಕೊಡುವಲ್ಲಿ ಪರಿಣತರಾಗಿರುವ ಯೋಗೇಶ್ವರ್‌, ಬಿಜೆಪಿ ಬೆಂಬಲಿಗರ ಸಭೆ ಕರೆದು ಈ ಸಲ ಮೈತ್ರಿ ಅಭ್ಯರ್ಥಿ ಟಿಕೆಟ್ ನನಗೆ ಎಂದು ಬಹಿರಂಗವಾಗಿ ಭಾಷಣ ಮಾಡಿದರು.

ಮೈತ್ರಿ ಟಿಕೆಟ್‌ ತಮಗೇ ಎಂದು ಭರವಸೆ ವ್ಯಕ್ತಪಡಿಸುತ್ತಿದ್ದ ಅವರು ಇತ್ತೀಚಿನ ರಾಜಕೀಯ ಬೆಳವಣಿಗೆಯಿಂದಾಗಿ ಅಸಮಾಧಾನಗೊಂಡಿದ್ದಾರೆ. ಬಿಜೆಪಿ ರಾಜ್ಯ ನಾಯಕರು ಉಪಚುನಾವಣೆಯಲ್ಲಿ ಯೋಗೇಶ್ವರ್‌ಗೆ ಟಿಕೆಟ್‌ ಬೇಕು ಎಂದು ಶಿಫಾರಸು ಮಾಡಿದ್ದರೂ, ಕುಮಾರಸ್ವಾಮಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಟಿಕೆಟ್‌ ಬಿಟ್ಟುಕೊಟ್ಟರೆ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಕಷ್ಟ ಎಂದು ಮುಖಂಡರು ಒತ್ತಾಯಿಸಿದರು.

ಬಹಿರಂಗ ಭಾಷಣ ಉದ್ದೇಶಿಸಿ ಮಾತನಾಡಿದ ಅವರು, "ಈ ಭಾರಿ ಕಾರ್ಯಕರ್ತರು ಮುಖಂಡರು ಯಾವುದೇ ಆತಂಕ ಬೇಡ. ಈ ಬಾರಿ ಎಎನ್​ಡಿಎ ಮೈತ್ರಿಯಾಗಿ ನಾನೇ ಕಣಕ್ಕಿಳಿಯುವೆ. ಯಾವುದೇ ಆತಂಕ ಬೇಡ. ನಾನೇ ಮೈತ್ರಿ ಅಭ್ಯರ್ಥಿ ಎಂದು ಮೂರು ಭಾರಿ ಒತ್ತಿ ಒತ್ತಿ ಹೇಳಿದರು.

ಇದನ್ನೂ ಓದಿ: ಚನ್ನಪಟ್ಟಣ ಕದನ: ಯೋಗೇಶ್ವರ್ ಬಳಿ ಚರ್ಚಿಸುತ್ತೇವೆ, ಕುಮಾರಸ್ವಾಮಿಗೆ ಸಂಪೂರ್ಣ ಅಧಿಕಾರ: ಆರ್.ಅಶೋಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.