ETV Bharat / state

ಚುನಾವಣೋತ್ತರ ಸಮೀಕ್ಷೆಗಳ ಮೇಲೆ ವಿಶ್ವಾಸವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ದಾಟಲಿದೆ: ಡಿಸಿಎಂ ಶಿವಕುಮಾರ್ - State Wise Exit Poll

author img

By ETV Bharat Karnataka Team

Published : Jun 1, 2024, 10:05 PM IST

ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

STATE WISE EXIT POLL
ಡಿಸಿಎಂ ಡಿ.ಕೆ. ಶಿವಕುಮಾರ್ (IANS)

ಬೆಂಗಳೂರು: ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿ, ಎಕ್ಸಿಟ್ ಪೋಲ್ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸುತ್ತಾ, ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಈ ಎಕ್ಸಿಟ್ ಪೋಲ್ ಮೇಲೆ ನನಗೆ ವಿಶ್ವಾಸವಿಲ್ಲ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಜ್ಯಗಳಲ್ಲಿ ಪಕ್ಷವಾರು ಸಾಧನೆ ಏನು?: ಪ್ರಮುಖ ರಾಜ್ಯಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ, ಸಂಪೂರ್ಣ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್​ ಮಾಡಿ! - State Wise Exit Poll

ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಇಂದು ಸಮೀಕ್ಷೆ ನಡೆಸಿದ್ದು, ಮತದಾನೋತ್ತರ ಸಮೀಕ್ಷೆಯಲ್ಲಿ ರಾಜ್ಯವಾರು ಸಮೀಕ್ಷೆಗಳ ಪೈಕಿ ಬಿಜೆಪಿ ನೇತೃತ್ವದ ಎನ್​ಡಿಎ ಹಲವು ಕಡೆ ಹೆಚ್ಚಿನ ಸೀಟುಗಳನ್ನು ಸಂಪಾದಿಸಲಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಬಗ್ಗೆಯೂ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಕಳೆದ ಬಾರಿಗೆ ಹೋಲಿಸಿದರೆ, ಕಾಂಗ್ರೆಸ್​ ಕನಿಷ್ಠ 5ರಿಂದ 6 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಬಿಜೆಪಿಗೆ ಇದೇ 5 ರಿಂದ 6 ಸ್ಥಾನಗಳು ನಷ್ಟವಾಗುವ ನಿರೀಕ್ಷೆ ಇದೆ ಎಂದು ಸಮೀಕ್ಷೆಗಳು ಅಂದಾಜಿಸಿವೆ.

ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿ ಈ ಬಾರಿ ಖಾತೆ ಆರಂಭಿಸಲಿದ್ದರೆ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ತನ್ನ ಸ್ಥಾನಗಳನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಲಾಗಿದೆ. ಉತ್ತರ, ಪೂರ್ವ ಭಾರತದಲ್ಲಿ ಪಶ್ಚಿಮಬಂಗಾಳ, ಒಡಿಶಾ, ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ತನ್ನ ಹಿಂದಿನ ಸೀಟುಗಳಿಂತಿಲೂ ಹೆಚ್ಚಿನ ಸಾಧನೆ ಮಾಡಲಿದೆ ಎಂದು ಎಲ್ಲ ಸಮೀಕ್ಷೆಗಳಲ್ಲಿ ಊಹಿಸಲಾಗಿದೆ. 18ನೇ ಲೋಕಸಭೆ ಚುನಾವಣೆಯ 7 ಹಂತದ ಮತದಾನಗಳು ಮುಗಿದಿದ್ದು, ಜೂನ್​ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು: ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿ, ಎಕ್ಸಿಟ್ ಪೋಲ್ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸುತ್ತಾ, ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಈ ಎಕ್ಸಿಟ್ ಪೋಲ್ ಮೇಲೆ ನನಗೆ ವಿಶ್ವಾಸವಿಲ್ಲ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಜ್ಯಗಳಲ್ಲಿ ಪಕ್ಷವಾರು ಸಾಧನೆ ಏನು?: ಪ್ರಮುಖ ರಾಜ್ಯಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ, ಸಂಪೂರ್ಣ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್​ ಮಾಡಿ! - State Wise Exit Poll

ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಇಂದು ಸಮೀಕ್ಷೆ ನಡೆಸಿದ್ದು, ಮತದಾನೋತ್ತರ ಸಮೀಕ್ಷೆಯಲ್ಲಿ ರಾಜ್ಯವಾರು ಸಮೀಕ್ಷೆಗಳ ಪೈಕಿ ಬಿಜೆಪಿ ನೇತೃತ್ವದ ಎನ್​ಡಿಎ ಹಲವು ಕಡೆ ಹೆಚ್ಚಿನ ಸೀಟುಗಳನ್ನು ಸಂಪಾದಿಸಲಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಬಗ್ಗೆಯೂ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಕಳೆದ ಬಾರಿಗೆ ಹೋಲಿಸಿದರೆ, ಕಾಂಗ್ರೆಸ್​ ಕನಿಷ್ಠ 5ರಿಂದ 6 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಬಿಜೆಪಿಗೆ ಇದೇ 5 ರಿಂದ 6 ಸ್ಥಾನಗಳು ನಷ್ಟವಾಗುವ ನಿರೀಕ್ಷೆ ಇದೆ ಎಂದು ಸಮೀಕ್ಷೆಗಳು ಅಂದಾಜಿಸಿವೆ.

ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿ ಈ ಬಾರಿ ಖಾತೆ ಆರಂಭಿಸಲಿದ್ದರೆ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ತನ್ನ ಸ್ಥಾನಗಳನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಲಾಗಿದೆ. ಉತ್ತರ, ಪೂರ್ವ ಭಾರತದಲ್ಲಿ ಪಶ್ಚಿಮಬಂಗಾಳ, ಒಡಿಶಾ, ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ತನ್ನ ಹಿಂದಿನ ಸೀಟುಗಳಿಂತಿಲೂ ಹೆಚ್ಚಿನ ಸಾಧನೆ ಮಾಡಲಿದೆ ಎಂದು ಎಲ್ಲ ಸಮೀಕ್ಷೆಗಳಲ್ಲಿ ಊಹಿಸಲಾಗಿದೆ. 18ನೇ ಲೋಕಸಭೆ ಚುನಾವಣೆಯ 7 ಹಂತದ ಮತದಾನಗಳು ಮುಗಿದಿದ್ದು, ಜೂನ್​ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.