ETV Bharat / state

ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಪರ ಮತ ಪ್ರಚಾರ ಮಾಡುವೆ: ಎಚ್​.ವಿಶ್ವನಾಥ್ - H Vishwanath

ರಾಜಕಾರಣ ನಿಂತ ನೀರಲ್ಲ, ಹರಿಯುವ ಗಂಗೆಯಂತೆ. ರಾಜಕಾರಣ ಧ್ರುವೀಕರಣ ಆಗುತ್ತಿದೆ. ನನ್ನ ವೋಟ್​​ ಯದುವೀರ್​​ಗೆ. ಈ ಮೂಲಕ ಮಹಾರಾಜರ ಋಣ ತೀರಿಸುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದ್ದಾರೆ.

author img

By ETV Bharat Karnataka Team

Published : Apr 10, 2024, 5:52 PM IST

Updated : Apr 10, 2024, 10:25 PM IST

H Vishwanath spoke at the press conference.
ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಎಚ್.ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈಸೂರು: ಯದುವೀರ್​​​ಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಸಂದರ್ಭದಲ್ಲಿ ನನಗೆ ಕಾಂಗ್ರೆಸ್‌ನಿಂದ ಟಿಕೆಟ್ ಕೊಟ್ಟಿದ್ದರೂ ನಾನು ಚುನಾವಣೆಗೆ ನಿಲ್ಲುತ್ತಿರಲಿಲ್ಲ. ನಾನು ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಪರ ಮತ ಪ್ರಚಾರ ಮಾಡುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದರು.

ಇಲ್ಲಿನ ಖಾಸಗಿ ಹೋಟೆಲ್​​ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಎಂಎಲ್‌ಸಿಯಾಗಿದ್ದರೂ ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಕೇಳಿದ್ದು ನಿಜ. ಈಗ ಪಕ್ಷ ರಾಜಕಾರಣ ಸತ್ತು ಬಹಳ ವರ್ಷವಾಗಿದೆ. ಈಗೇನಿದ್ದರೂ ವ್ಯಕ್ತಿ ರಾಜಕಾರಣದ ವೈಭವೀಕರಣ ಎಂದರು.

ರಾಜಕಾರಣ ನಿಂತ ನೀರಲ್ಲ, ಹರಿಯುವ ಗಂಗೆಯ ರೀತಿ. ಧ್ರುವೀಕರಣ ಆಗುತ್ತಿದೆ. ನನ್ನ ಒಂದು ವೋಟನ್ನು ಯದುವೀರ್​​ಗೆ ಹಾಕುವ ಮೂಲಕ ಮಹಾರಾಜರ ಋಣ ತೀರಿಸುತ್ತೇನೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್​ನಲ್ಲಿ ಛೀಮಾರಿ ವಿಚಾರ: ರಾಜ್ಯದಲ್ಲಿ 5,8,9 ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವುದು ಕಾನೂನುಬಾಹಿರ. ಇದು ಶಿಕ್ಷಣ ಹಕ್ಕು ಕಾಯ್ದೆಯ ಸ್ಪಷ್ಟ ಉಲ್ಲಂಘನೆ. ಎರಡನೇ ಬಾರಿಗೆ ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಛೀಮಾರಿ ಹಾಕಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕೂಡ ಇದನ್ನೇ ಮಾಡಿತು. ಈಗ ಕಾಂಗ್ರೆಸ್ ಸರ್ಕಾರವೂ ಕೂಡ ಇದೇ ನೀತಿಯನ್ನು ಮುಂದುವರಿಸುತ್ತಿದೆ. ಪ್ರಶ್ನೆ ಪತ್ರಿಕೆಯ ವಿಚಾರದಲ್ಲಿ ಕಿಕ್ ಬ್ಯಾಕ್ ಪಡೆಯಲು ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ದೂರಿದರು.

'ಶಿಕ್ಷಣ ಸಚಿವರನ್ನು ಬದಲಿಸಲಿ': ಪ್ರಶ್ನೆ ಪತ್ರಿಕೆ ಟೆಂಡರ್​​ ಒಬ್ಬನೇ ವ್ಯಕ್ತಿಗೆ ನೀಡಲಾಗಿದೆ. ಈ ಮೂಲಕ ಪರೀಕ್ಷೆಯ ಪ್ರಾವಿತ್ರ್ಯತೆಯನ್ನು ಸರ್ಕಾರ ಹಾಳು ಮಾಡುತ್ತಿದೆ. ಕರ್ನಾಟಕ ಶಿಕ್ಷಣಕ್ಕೆ ಮಾದರಿಯಾಗಿತ್ತು. ಈಗ ಕೆಳಹಂತಕ್ಕೆ ಹೋಗಿದೆ. ಶಿಕ್ಷಣ ಇಲಾಖೆಯನ್ನು ನಿಭಾಯಿಸುವುದರಲ್ಲಿ ಸಚಿವ ಮಧು ಬಂಗಾರಪ್ಪ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತಿಷ್ಠೆಗೆ ಬಿದ್ದು ಸರ್ಕಾರ ಪರೀಕ್ಷೆಯ ಪ್ರಾವಿತ್ರ್ಯತೆಯನ್ನು ಹಾಳು ಮಾಡಿದೆ. ಕೂಡಲೇ ಮುಖ್ಯಮಂತ್ರಿಗಳು ಶಿಕ್ಷಣ ಸಚಿವರನ್ನು ಬದಲಿಸಬೇಕು. ರಾಜ್ಯ ಸರ್ಕಾರ ಗ್ಯಾರಂಟಿ ಜತೆಗೆ, ಶಿಕ್ಷಣ ಗ್ಯಾರಂಟಿ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂಓದಿ: ಪಿಯುಸಿ ಫಲಿತಾಂಶ; ಎಂದಿನಂತೆ ದಕ್ಷಿಣ ಕನ್ನಡವೇ ಫಸ್ಟ್​ - ಈ ಬಾರಿ ಗದಗ ಲಾಸ್ಟ್​​​: ಶೇ. 81.15ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ - 2nd Puc Results

ಎಚ್.ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈಸೂರು: ಯದುವೀರ್​​​ಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಸಂದರ್ಭದಲ್ಲಿ ನನಗೆ ಕಾಂಗ್ರೆಸ್‌ನಿಂದ ಟಿಕೆಟ್ ಕೊಟ್ಟಿದ್ದರೂ ನಾನು ಚುನಾವಣೆಗೆ ನಿಲ್ಲುತ್ತಿರಲಿಲ್ಲ. ನಾನು ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಪರ ಮತ ಪ್ರಚಾರ ಮಾಡುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದರು.

ಇಲ್ಲಿನ ಖಾಸಗಿ ಹೋಟೆಲ್​​ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಎಂಎಲ್‌ಸಿಯಾಗಿದ್ದರೂ ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಕೇಳಿದ್ದು ನಿಜ. ಈಗ ಪಕ್ಷ ರಾಜಕಾರಣ ಸತ್ತು ಬಹಳ ವರ್ಷವಾಗಿದೆ. ಈಗೇನಿದ್ದರೂ ವ್ಯಕ್ತಿ ರಾಜಕಾರಣದ ವೈಭವೀಕರಣ ಎಂದರು.

ರಾಜಕಾರಣ ನಿಂತ ನೀರಲ್ಲ, ಹರಿಯುವ ಗಂಗೆಯ ರೀತಿ. ಧ್ರುವೀಕರಣ ಆಗುತ್ತಿದೆ. ನನ್ನ ಒಂದು ವೋಟನ್ನು ಯದುವೀರ್​​ಗೆ ಹಾಕುವ ಮೂಲಕ ಮಹಾರಾಜರ ಋಣ ತೀರಿಸುತ್ತೇನೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್​ನಲ್ಲಿ ಛೀಮಾರಿ ವಿಚಾರ: ರಾಜ್ಯದಲ್ಲಿ 5,8,9 ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವುದು ಕಾನೂನುಬಾಹಿರ. ಇದು ಶಿಕ್ಷಣ ಹಕ್ಕು ಕಾಯ್ದೆಯ ಸ್ಪಷ್ಟ ಉಲ್ಲಂಘನೆ. ಎರಡನೇ ಬಾರಿಗೆ ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಛೀಮಾರಿ ಹಾಕಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕೂಡ ಇದನ್ನೇ ಮಾಡಿತು. ಈಗ ಕಾಂಗ್ರೆಸ್ ಸರ್ಕಾರವೂ ಕೂಡ ಇದೇ ನೀತಿಯನ್ನು ಮುಂದುವರಿಸುತ್ತಿದೆ. ಪ್ರಶ್ನೆ ಪತ್ರಿಕೆಯ ವಿಚಾರದಲ್ಲಿ ಕಿಕ್ ಬ್ಯಾಕ್ ಪಡೆಯಲು ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ದೂರಿದರು.

'ಶಿಕ್ಷಣ ಸಚಿವರನ್ನು ಬದಲಿಸಲಿ': ಪ್ರಶ್ನೆ ಪತ್ರಿಕೆ ಟೆಂಡರ್​​ ಒಬ್ಬನೇ ವ್ಯಕ್ತಿಗೆ ನೀಡಲಾಗಿದೆ. ಈ ಮೂಲಕ ಪರೀಕ್ಷೆಯ ಪ್ರಾವಿತ್ರ್ಯತೆಯನ್ನು ಸರ್ಕಾರ ಹಾಳು ಮಾಡುತ್ತಿದೆ. ಕರ್ನಾಟಕ ಶಿಕ್ಷಣಕ್ಕೆ ಮಾದರಿಯಾಗಿತ್ತು. ಈಗ ಕೆಳಹಂತಕ್ಕೆ ಹೋಗಿದೆ. ಶಿಕ್ಷಣ ಇಲಾಖೆಯನ್ನು ನಿಭಾಯಿಸುವುದರಲ್ಲಿ ಸಚಿವ ಮಧು ಬಂಗಾರಪ್ಪ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತಿಷ್ಠೆಗೆ ಬಿದ್ದು ಸರ್ಕಾರ ಪರೀಕ್ಷೆಯ ಪ್ರಾವಿತ್ರ್ಯತೆಯನ್ನು ಹಾಳು ಮಾಡಿದೆ. ಕೂಡಲೇ ಮುಖ್ಯಮಂತ್ರಿಗಳು ಶಿಕ್ಷಣ ಸಚಿವರನ್ನು ಬದಲಿಸಬೇಕು. ರಾಜ್ಯ ಸರ್ಕಾರ ಗ್ಯಾರಂಟಿ ಜತೆಗೆ, ಶಿಕ್ಷಣ ಗ್ಯಾರಂಟಿ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂಓದಿ: ಪಿಯುಸಿ ಫಲಿತಾಂಶ; ಎಂದಿನಂತೆ ದಕ್ಷಿಣ ಕನ್ನಡವೇ ಫಸ್ಟ್​ - ಈ ಬಾರಿ ಗದಗ ಲಾಸ್ಟ್​​​: ಶೇ. 81.15ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ - 2nd Puc Results

Last Updated : Apr 10, 2024, 10:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.