ETV Bharat / state

ಅಗತ್ಯವಿದ್ದರೆ ಸುಮಲತಾರನ್ನು ಭೇಟಿ ಮಾಡುತ್ತೇನೆ: ಹೆಚ್. ಡಿ.ಕುಮಾರಸ್ವಾಮಿ - hdk statement - HDK STATEMENT

ಅಗತ್ಯವಿದ್ದರೆ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡುತ್ತೇನೆ ಎಂದು ಹೆಚ್​ಡಿಕೆ ಹೇಳಿದ್ದಾರೆ.

ಅಗತ್ಯವಿದ್ದರೆ ಸುಮಲತಾ ಅವರನ್ನು ಭೇಟಿ ಮಾಡುತ್ತೇನೆ
ಅಗತ್ಯವಿದ್ದರೆ ಸುಮಲತಾ ಅವರನ್ನು ಭೇಟಿ ಮಾಡುತ್ತೇನೆ
author img

By ETV Bharat Karnataka Team

Published : Mar 28, 2024, 1:06 PM IST

Updated : Mar 28, 2024, 2:48 PM IST

ಅಗತ್ಯವಿದ್ದರೆ ಸುಮಲತಾರನ್ನು ಭೇಟಿ ಮಾಡುತ್ತೇನೆ: ಹೆಚ್. ಡಿ.ಕುಮಾರಸ್ವಾಮಿ

ಮೈಸೂರು: ಸಂಸದೆ ಸುಮಲತಾ ಅವರು ನಮಗೆ ದೂರದವರು ಅಲ್ಲ, ಅಂಬರೀಶ್​ ಇದ್ದಾಗಿನಿಂದಲೂ ಪರಿಚಿತರು. ರಾಜಕಾರಣದಲ್ಲಿ ಕೆಲವು ವ್ಯತ್ಯಾಸಗಳು ಇರುತ್ತವೆ, ಅವರು ನಮ್ಮ ಶಾಶ್ವತ ಶತ್ರು ಅಲ್ಲಾ. ಅಗತ್ಯವಿದ್ದರೆ ಅವರನ್ನು ಭೇಟಿ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಶ್ರೀಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಮಂಡ್ಯ ಅಭ್ಯರ್ಥಿ ವಿಚಾರವಾಗಿ ಸಮನ್ವಯ ಸಭೆ ನಡೆಯಲಿದೆ. ಬಳಿಕ ಫೈನಲ್ ನಿರ್ಧಾರಕ್ಕೆ ಬರಲಾಗುತ್ತದೆ. ಸುಮಲತಾ ಅವರು ನಮ್ಮ ಶಾಶ್ವತ ಶತ್ರು ಅಲ್ಲ. ರಾಜಕೀಯದಲ್ಲಿ ಹೋರಾಟ ಜಗಳ ಎಲ್ಲವೂ ಇದ್ದೇ ಇರುತ್ತದೆ. ಅವುಗಳನ್ನೆಲ್ಲ ದಾಟಿ ಮುಂದೆ ಸಾಗಬೇಕು ಎಂದು ಹೇಳುವ ಮೂಲಕ ಸುಮಲತಾ ಅವರೊಂದಿಗೆ ಸ್ನೇಹ ಹಸ್ತ ಚಾಚುವ ಮುನ್ಸೂಚನೆ ನೀಡಿದರು.

ಬಳಿಕ ಕಾರ್ಯಕರ್ತರ ಅಸಮಾಧಾನದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮೈಸೂರಿನಲ್ಲಿ 2014 ರಿಂದಲೂ ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಯಲ್ಲಿದೆ ಇದು ಹೊಸದೇನಲ್ಲ. ಹಾಗಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಇಲ್ಲ. ಹಿಂದಿನಿಂದಲೂ ಎರಡು ಪಕ್ಷದ ಕಾರ್ಯಕರ್ತರಲ್ಲಿ ಸಮನ್ವಯತೆ ಇದೆ ಎಂದು ಹೆಚ್​ಡಿಕೆ ಸ್ಪಷ್ಟನೆ ನೀಡಿದರು.

ಮಂಡ್ಯದಲ್ಲಿ ಹೆಚ್​ಡಿಕೆ ಸೋಲನುಭವಿಸುತ್ತಾರೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಜ್ಯೋತಿಷಿ ಅಲ್ಲ. ಕಳೆದ ಬಾರಿ ನನ್ನ ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬದು ಎಲ್ಲರಿಗೂ ಗೊತ್ತಿದೆ. ಅದರ ಆಧಾರದ ಮೇಲೆ ಈಗ ಮಾತನಾಡುತ್ತಿದ್ದಾರೆ. ಎಲ್ಲದಕ್ಕೂ ಜನ ಉತ್ತರ ಕೊಡುತ್ತಾರೆ. ನಾನು ಸೋಲುತ್ತೇನೆ ಎಂದು ಹೇಳಲು ಸಿದ್ದರಾಮಯ್ಯ ಯಾವಾಗ ಜ್ಯೋತಿಷಿ ಆದರು ಎಂದು ತಿರುಗೇಟು ನೀಡಿದರು.

ನನ್ನನ್ನು ಸಿದ್ದರಾಮಯ್ಯ ವಲಸಿಗ ಎಂದು ಕರೆಯಲು ಅವರು ಯಾರು. ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅವರೇ ವಲಸಿಗರು. ಅವರು ಬಂದ ಮೇಲೆ ಮೂಲ ಕಾಂಗ್ರೆಸಿಗರು ಮೂಲೆ ಗುಂಪು ಆದರು. ಅಲ್ಲಿ ಇವರು ಅಧಿಕಾರ ನಡೆಸುತ್ತಿದ್ದಾರೆ. ನಾನು ಒಬ್ಬ ಕನ್ನಡಿಗ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು ಎಂದರು. ಜೆಡಿಎಸ್ ಈಗ ಕೋಮುವಾದಿ ಎಂದು ಹೇಳುತ್ತಿರುವ ಸಿದ್ದರಾಮಯ್ಯ ಅವರು ನಮಗೆ ಸರ್ಟಿಫಿಕೆಟ್ ಕೊಡಬೇಕಾಗಿಲ್ಲ. ಮೇಕೆದಾಟು ಯೋಜನೆಯಲ್ಲಿ ದೇವೇಗೌಡರವರನ್ನು ಪ್ರಶ್ನೆ ಮಾಡುವ ನೈತಿಕತೆ ಕಾಂಗ್ರೆಸ್​ಗೆ ಇಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ನನ್ನ ಗೆಲುವನ್ನ ಜನ ತೀರ್ಮಾನ ಮಾಡುತ್ತಾರೆ: ಹೆಚ್ ಡಿ ಕುಮಾರಸ್ವಾಮಿ - H D Kumaraswamy

ಅಗತ್ಯವಿದ್ದರೆ ಸುಮಲತಾರನ್ನು ಭೇಟಿ ಮಾಡುತ್ತೇನೆ: ಹೆಚ್. ಡಿ.ಕುಮಾರಸ್ವಾಮಿ

ಮೈಸೂರು: ಸಂಸದೆ ಸುಮಲತಾ ಅವರು ನಮಗೆ ದೂರದವರು ಅಲ್ಲ, ಅಂಬರೀಶ್​ ಇದ್ದಾಗಿನಿಂದಲೂ ಪರಿಚಿತರು. ರಾಜಕಾರಣದಲ್ಲಿ ಕೆಲವು ವ್ಯತ್ಯಾಸಗಳು ಇರುತ್ತವೆ, ಅವರು ನಮ್ಮ ಶಾಶ್ವತ ಶತ್ರು ಅಲ್ಲಾ. ಅಗತ್ಯವಿದ್ದರೆ ಅವರನ್ನು ಭೇಟಿ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಶ್ರೀಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಮಂಡ್ಯ ಅಭ್ಯರ್ಥಿ ವಿಚಾರವಾಗಿ ಸಮನ್ವಯ ಸಭೆ ನಡೆಯಲಿದೆ. ಬಳಿಕ ಫೈನಲ್ ನಿರ್ಧಾರಕ್ಕೆ ಬರಲಾಗುತ್ತದೆ. ಸುಮಲತಾ ಅವರು ನಮ್ಮ ಶಾಶ್ವತ ಶತ್ರು ಅಲ್ಲ. ರಾಜಕೀಯದಲ್ಲಿ ಹೋರಾಟ ಜಗಳ ಎಲ್ಲವೂ ಇದ್ದೇ ಇರುತ್ತದೆ. ಅವುಗಳನ್ನೆಲ್ಲ ದಾಟಿ ಮುಂದೆ ಸಾಗಬೇಕು ಎಂದು ಹೇಳುವ ಮೂಲಕ ಸುಮಲತಾ ಅವರೊಂದಿಗೆ ಸ್ನೇಹ ಹಸ್ತ ಚಾಚುವ ಮುನ್ಸೂಚನೆ ನೀಡಿದರು.

ಬಳಿಕ ಕಾರ್ಯಕರ್ತರ ಅಸಮಾಧಾನದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮೈಸೂರಿನಲ್ಲಿ 2014 ರಿಂದಲೂ ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಯಲ್ಲಿದೆ ಇದು ಹೊಸದೇನಲ್ಲ. ಹಾಗಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಇಲ್ಲ. ಹಿಂದಿನಿಂದಲೂ ಎರಡು ಪಕ್ಷದ ಕಾರ್ಯಕರ್ತರಲ್ಲಿ ಸಮನ್ವಯತೆ ಇದೆ ಎಂದು ಹೆಚ್​ಡಿಕೆ ಸ್ಪಷ್ಟನೆ ನೀಡಿದರು.

ಮಂಡ್ಯದಲ್ಲಿ ಹೆಚ್​ಡಿಕೆ ಸೋಲನುಭವಿಸುತ್ತಾರೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಜ್ಯೋತಿಷಿ ಅಲ್ಲ. ಕಳೆದ ಬಾರಿ ನನ್ನ ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬದು ಎಲ್ಲರಿಗೂ ಗೊತ್ತಿದೆ. ಅದರ ಆಧಾರದ ಮೇಲೆ ಈಗ ಮಾತನಾಡುತ್ತಿದ್ದಾರೆ. ಎಲ್ಲದಕ್ಕೂ ಜನ ಉತ್ತರ ಕೊಡುತ್ತಾರೆ. ನಾನು ಸೋಲುತ್ತೇನೆ ಎಂದು ಹೇಳಲು ಸಿದ್ದರಾಮಯ್ಯ ಯಾವಾಗ ಜ್ಯೋತಿಷಿ ಆದರು ಎಂದು ತಿರುಗೇಟು ನೀಡಿದರು.

ನನ್ನನ್ನು ಸಿದ್ದರಾಮಯ್ಯ ವಲಸಿಗ ಎಂದು ಕರೆಯಲು ಅವರು ಯಾರು. ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅವರೇ ವಲಸಿಗರು. ಅವರು ಬಂದ ಮೇಲೆ ಮೂಲ ಕಾಂಗ್ರೆಸಿಗರು ಮೂಲೆ ಗುಂಪು ಆದರು. ಅಲ್ಲಿ ಇವರು ಅಧಿಕಾರ ನಡೆಸುತ್ತಿದ್ದಾರೆ. ನಾನು ಒಬ್ಬ ಕನ್ನಡಿಗ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು ಎಂದರು. ಜೆಡಿಎಸ್ ಈಗ ಕೋಮುವಾದಿ ಎಂದು ಹೇಳುತ್ತಿರುವ ಸಿದ್ದರಾಮಯ್ಯ ಅವರು ನಮಗೆ ಸರ್ಟಿಫಿಕೆಟ್ ಕೊಡಬೇಕಾಗಿಲ್ಲ. ಮೇಕೆದಾಟು ಯೋಜನೆಯಲ್ಲಿ ದೇವೇಗೌಡರವರನ್ನು ಪ್ರಶ್ನೆ ಮಾಡುವ ನೈತಿಕತೆ ಕಾಂಗ್ರೆಸ್​ಗೆ ಇಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ನನ್ನ ಗೆಲುವನ್ನ ಜನ ತೀರ್ಮಾನ ಮಾಡುತ್ತಾರೆ: ಹೆಚ್ ಡಿ ಕುಮಾರಸ್ವಾಮಿ - H D Kumaraswamy

Last Updated : Mar 28, 2024, 2:48 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.