ETV Bharat / state

ರಾಮನಗರ: ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ - DIARRHEA

author img

By ETV Bharat Karnataka Team

Published : May 11, 2024, 1:33 PM IST

ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

Illness to people
25ಕ್ಕೂ ಹೆಚ್ಚು ಮಂದಿ ಅಸ್ವಸ್ಥ (ETV Bharat)

ರಾಮನಗರ: ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಇದೇ ಮೇ 10ರಂದು (ನಿನ್ನೆ, ಶುಕ್ರವಾರ) ನಡೆದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ಮಧ್ಯಾಹ್ನ ಊಟ ಮಾಡಿದ ಕೆಲವರ ಆರೋಗ್ಯದಲ್ಲಿ ಏರುಪೇರಾಗಿದೆ. 8 ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಜನರಿಗೆ ಹೊಟ್ಟೆ ನೋವು, ವಾಂತಿ, ಭೇದಿಯಾಗಿದೆ. ಎಲ್ಲರನ್ನೂ ರಾಮನಗರ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ನಿನ್ನೆ ರಾತ್ರಿ ಸುಮಾರು 8 ಗಂಟೆಗೆ 25ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಬೇಸಿಗೆ ಕಾರಣ ಆಹಾರ ಸೇವಿಸಿದ ನಂತರ ವ್ಯತ್ಯಾಸವಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದ್ದು, ಅಸ್ವಸ್ಥರಾಗಿರುವ ಮಕ್ಕಳಿಗೂ ಯಾವುದೇ ತೊಂದರೆ ಇಲ್ಲ ಎಂದು ಎಂದು ಜಿಲ್ಲಾ ಆರ್.ಎಂ.ಒ. ಡಾ. ನಾರಾಯಣಸ್ವಾಮಿ ತಿಳಿಸಿದರು.

ರಾಮನಗರ: ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಇದೇ ಮೇ 10ರಂದು (ನಿನ್ನೆ, ಶುಕ್ರವಾರ) ನಡೆದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ಮಧ್ಯಾಹ್ನ ಊಟ ಮಾಡಿದ ಕೆಲವರ ಆರೋಗ್ಯದಲ್ಲಿ ಏರುಪೇರಾಗಿದೆ. 8 ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಜನರಿಗೆ ಹೊಟ್ಟೆ ನೋವು, ವಾಂತಿ, ಭೇದಿಯಾಗಿದೆ. ಎಲ್ಲರನ್ನೂ ರಾಮನಗರ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ನಿನ್ನೆ ರಾತ್ರಿ ಸುಮಾರು 8 ಗಂಟೆಗೆ 25ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಬೇಸಿಗೆ ಕಾರಣ ಆಹಾರ ಸೇವಿಸಿದ ನಂತರ ವ್ಯತ್ಯಾಸವಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದ್ದು, ಅಸ್ವಸ್ಥರಾಗಿರುವ ಮಕ್ಕಳಿಗೂ ಯಾವುದೇ ತೊಂದರೆ ಇಲ್ಲ ಎಂದು ಎಂದು ಜಿಲ್ಲಾ ಆರ್.ಎಂ.ಒ. ಡಾ. ನಾರಾಯಣಸ್ವಾಮಿ ತಿಳಿಸಿದರು.

ಇದನ್ನೂ ಓದಿ: ಹಾಸನ; ಕೋಳಿ ತಿನ್ನಲು ಬಂದು ಉರುಳಿಗೆ ಸಿಲುಕಿ ಪರದಾಡಿದ ಚಿರತೆ - Leopard spotted

ETV Bharat Logo

Copyright © 2024 Ushodaya Enterprises Pvt. Ltd., All Rights Reserved.