ETV Bharat / state

ಫುಟ್‌ಪಾತ್ ಮೇಲೆ ತಳ್ಳುವ ಗಾಡಿ ಹೊತ್ತಿ ಉರಿಯುವುದನ್ನು ತಪ್ಪಿಸಲು ಹೋದವನಿಗೆ ಗಾಯ: ಮಾಲೀಕನ ವಿರುದ್ಧ ಪ್ರಕರಣ

ಬೆಂಕಿ ನಂದಿಸುವ ವೇಳೆ ಗಾಡಿ ಬಳಿ ಇದ್ದ ಗ್ಯಾಸ್​ ಸಿಲಿಂಡರ್​ ಸ್ಫೋಟಗೊಂಡು, ಬೆಂಕಿ ನಂದಿಸಲು ಹೋದ ವ್ಯಕ್ತಿ ಹಾಗೂ ಸುತ್ತಮುತ್ತ ಇದ್ದವರಿಗೆ ಸುಟ್ಟ ಗಾಯಗಳಾಗಿವೆ.

author img

By ETV Bharat Karnataka Team

Published : Mar 16, 2024, 12:35 PM IST

Bengaluru
ಬೆಂಗಳೂರು

ಬೆಂಗಳೂರು: ಫುಟ್​ಪಾತ್ ಮೇಲೆ ತಳ್ಳುವ ಗಾಡಿ ಹೊತ್ತಿ ಉರಿಯುವುದನ್ನು ತಪ್ಪಿಸಲು ಹೋದ ವ್ಯಕ್ತಿಯೊಬ್ಬ ಮೈ ಕೈ ಸುಟ್ಟುಕೊಂಡ ಘಟನೆ ಬಾಗಲೂರು ಠಾಣಾ ವ್ಯಾಪ್ತಿಯ ಬೆಳ್ಳಹಳ್ಳಿ ಜಂಕ್ಷನ್ ಬಳಿ ನಡೆದಿದೆ. ಮಾರ್ಚ್ 12 ರಂದು ನಡೆದಿರುವ ಘಟನೆಯಲ್ಲಿ ಶೇಕ್ ನವೀದ್ ಎಂಬಾತನಿಗೆ ಗಾಯಗಳಾಗಿದ್ದು, ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಅವಘಡಕ್ಕೆ ಕಾರಣನಾದ ತಳ್ಳುವ ಗಾಡಿ ಮಾಲೀಕನ ವಿರುದ್ಧ ಬಾಗಲೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಾರ್ಚ್ 12ರಂದು ಬೆಳಗ್ಗೆ 7.30ರ ಸುಮಾರಿಗೆ ಹೆಗಡೆ ನಗರದ ಕಡೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಶೇಕ್ ನವೀದ್, ಬೆಳ್ಳಹಳ್ಳಿ ಜಂಕ್ಷನ್ ಬಳಿ ಫುಟ್​ಪಾತ್ ಮೇಲೆ ತಳ್ಳುವ ಗಾಡಿಯೊಂದು ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವುದನ್ನು ಗಮನಿಸಿದ್ದರು. ಈ ವೇಳೆ ಬೆಂಕಿ ಆರಿಸಲು ಮುಂದಾದಾಗ ತಳ್ಳುವ ಗಾಡಿ ಬಳಿಯಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ನವೀದ್ ಹಾಗೂ ಸುತ್ತಮುತ್ತ ಇದ್ದ ಅನೇಕರಿಗೆ ಸುಟ್ಟ ಗಾಯಗಳಾಗಿವೆ.

ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ತಳ್ಳುವ ಗಾಡಿಯ ಮಾಲೀಕ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ನಿರ್ಲಕ್ಷ್ಯ ವಹಿಸಿದ ಕಾರಣದಿಂದ ಅವಘಡ ಸಂಭವಿಸಿದೆ ಎಂದು ಶೇಕ್ ನವೀದ್ ಬಾಗಲೂರು ಠಾಣೆಗೆ ದೂರು ನೀಡಿದ್ದು, ಅದರನ್ವಯ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ಆಕಸ್ಮಿಕ ಬೆಂಕಿಯಿಂದ ಮೇವಿನ ಬಣವೆಗಳು ಸುಟ್ಟು ಕರಕಲು

ಬೆಂಗಳೂರು: ಫುಟ್​ಪಾತ್ ಮೇಲೆ ತಳ್ಳುವ ಗಾಡಿ ಹೊತ್ತಿ ಉರಿಯುವುದನ್ನು ತಪ್ಪಿಸಲು ಹೋದ ವ್ಯಕ್ತಿಯೊಬ್ಬ ಮೈ ಕೈ ಸುಟ್ಟುಕೊಂಡ ಘಟನೆ ಬಾಗಲೂರು ಠಾಣಾ ವ್ಯಾಪ್ತಿಯ ಬೆಳ್ಳಹಳ್ಳಿ ಜಂಕ್ಷನ್ ಬಳಿ ನಡೆದಿದೆ. ಮಾರ್ಚ್ 12 ರಂದು ನಡೆದಿರುವ ಘಟನೆಯಲ್ಲಿ ಶೇಕ್ ನವೀದ್ ಎಂಬಾತನಿಗೆ ಗಾಯಗಳಾಗಿದ್ದು, ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಅವಘಡಕ್ಕೆ ಕಾರಣನಾದ ತಳ್ಳುವ ಗಾಡಿ ಮಾಲೀಕನ ವಿರುದ್ಧ ಬಾಗಲೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಾರ್ಚ್ 12ರಂದು ಬೆಳಗ್ಗೆ 7.30ರ ಸುಮಾರಿಗೆ ಹೆಗಡೆ ನಗರದ ಕಡೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಶೇಕ್ ನವೀದ್, ಬೆಳ್ಳಹಳ್ಳಿ ಜಂಕ್ಷನ್ ಬಳಿ ಫುಟ್​ಪಾತ್ ಮೇಲೆ ತಳ್ಳುವ ಗಾಡಿಯೊಂದು ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವುದನ್ನು ಗಮನಿಸಿದ್ದರು. ಈ ವೇಳೆ ಬೆಂಕಿ ಆರಿಸಲು ಮುಂದಾದಾಗ ತಳ್ಳುವ ಗಾಡಿ ಬಳಿಯಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ನವೀದ್ ಹಾಗೂ ಸುತ್ತಮುತ್ತ ಇದ್ದ ಅನೇಕರಿಗೆ ಸುಟ್ಟ ಗಾಯಗಳಾಗಿವೆ.

ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ತಳ್ಳುವ ಗಾಡಿಯ ಮಾಲೀಕ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ನಿರ್ಲಕ್ಷ್ಯ ವಹಿಸಿದ ಕಾರಣದಿಂದ ಅವಘಡ ಸಂಭವಿಸಿದೆ ಎಂದು ಶೇಕ್ ನವೀದ್ ಬಾಗಲೂರು ಠಾಣೆಗೆ ದೂರು ನೀಡಿದ್ದು, ಅದರನ್ವಯ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ಆಕಸ್ಮಿಕ ಬೆಂಕಿಯಿಂದ ಮೇವಿನ ಬಣವೆಗಳು ಸುಟ್ಟು ಕರಕಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.