ETV Bharat / state

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಭೆಯಲ್ಲಿ ಭಕ್ತರ ನಿರ್ಣಯ: ದಿಂಗಾಲೇಶ್ವರ ಸ್ವಾಮೀಜಿ - Dingaleshwar Swamiji - DINGALESHWAR SWAMIJI

ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಲು ಭಕ್ತರ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

DINGALESHWAR SWAMIJI  CONTEST AGAINST JOSHI  DHARWAD
ದಿಂಗಾಲೇಶ್ವರ ಸ್ವಾಮೀಜಿ
author img

By ETV Bharat Karnataka Team

Published : Apr 2, 2024, 4:55 PM IST

Updated : Apr 2, 2024, 7:32 PM IST

ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ

ಧಾರವಾಡ: ಪ್ರಹ್ಲಾದ್ ಜೋಶಿಯವರನ್ನು ಧಾರವಾಡ ಕ್ಷೇತ್ರದಿಂದ ಬದಲಾಯಿಸಬೇಕು ಎಂದು ಎಲ್ಲ ಮುಖಂಡರು ಭಾಗಿಯಾಗಿ ಸಭೆ ಕರೆದಾಗ ಕೆಲವರು ಬದಲಾವಣೆ ಬೇಡ ಎಂದರು. ಆದರೆ, ನಾವು ಯಾವುದೇ ಒತ್ತಡ, ಆಮಿಷಕ್ಕೆ ಮಣಿಯುವುದಿಲ್ಲ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

ಇಂದು ಭಕ್ತರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡದಲ್ಲಿ ಭಕ್ತರ ಸಭೆ ಕರೆದು ಚರ್ಚೆ ಮಾಡಿದ್ದೇವೆ. ಅವರೆಲ್ಲರೂ ಸೇರಿ ಒಂದು ತೀರ್ಮಾನ ಮಾಡಿದ್ದಾರೆ. ನಾನು ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ. ಉತ್ತರ ಭಾರತದ ರೀತಿಯಲ್ಲಿ ಇಲ್ಲಿಯೂ ಬದಲಾವಣೆ ಆಗಬೇಕು ಎಂದಿದ್ದಾರೆ. ಮಠಗಳು ಬದಲಾಗಿವೆ. ಎಲ್ಲರೂ ಸಹ ನನಗೆ ಕರೆ ಮಾಡಿ ಮುಂದಿಟ್ಟ ಹೆಜ್ಜೆ ಹಿಂದಿಡದಂತೆ ಹೇಳಿದ್ದಾರೆ. ಯಾವುದೇ ಪಕ್ಷದ ವಿಚಾರ, ಜಾತಿ ವಿಚಾರ ನಮ್ಮಲ್ಲಿಲ್ಲ ಎಂದರು.

ನನ್ನ ಹಿಂದೆ ಪ್ರಮುಖರು ಇದ್ದಾರೆ. ಅತೀ ಶೀಘ್ರದಲ್ಲೇ ಬೆಂಗಳೂರಿನಲ್ಲಿ‌ ನನ್ನ ತೀರ್ಮಾನ ಹೇಳುತ್ತೇನೆ. ನಮ್ಮ ಗುರುಗಳ ಮತ್ತು ಭಕ್ತರ ನಿರ್ಣಯ ಪಡೆದು ವಿಚಾರ ತಿಳಿಸುತ್ತೇನೆ. ಜೋಶಿಯವರನ್ನು ಪರಾಭವಗೊಳಿಸುವುರದಲ್ಲಿ ಎರಡು ಮಾತಿಲ್ಲ. ಧಾರವಾಡದ ಲೋಕಸಭೆ ಚುನಾವಣೆಯ ಸಲುವಾಗಿ ಸಮಿತಿ ರಚಿಸಲಾಗಿದೆ. ಮುರುಘಾ ಶ್ರೀಗಳು ಎಲ್ಲ ಸಭೆ, ಚರ್ಚೆಗಳಿಗೆ ನಮ್ಮ ಜತೆ ಇದ್ರು. ಆದರೆ ಕೆಲವರು ಮಠಕ್ಕೆ ಹೋಗಿ ಹೆದರಿಸಿ ಅವರಿಗೆ ಪತ್ರ ಓದಿಸಿದ್ದಾರೆ. ಕೇವಲ ಚುನಾವಣೆಗೆ ಮಾತ್ರ ಕರೆ ಮಾಡಿ ಆಶೀರ್ವಾದ ಮಾಡಿ ಅಂತ ಜೋಶಿ ಹೇಳುತ್ತಾರೆ‌‌. ನಾನು ಆಗ ಕೇವಲ ನಮ್ಮನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತೀರಿ ಅಂತ ಪ್ರಶ್ನೆ ಮಾಡಿದ್ದೆ. ಆಗ ಈ ಬಾರಿ ಮಾತ್ರ ಕ್ಷಮಿಸಿ ಮುಂದೆ ಹೀಗಾಗಲ್ಲ ಅಂತ ಹೇಳಿದ್ರು. ಆದರೆ ಮಠಗಳಿಗೆ ಅನುದಾನ ಸಿಕ್ಕಿಲ್ಲ. ಉತ್ತರ ಭಾರತದಲ್ಲಿ 50 ಜನ ಸನ್ಯಾಸಿಗಳು ಸಂಸದರಾಗಿದ್ದಾರೆ. ನಮ್ಮ ಹೋರಾಟ ಜೋಶಿ ವಿರುದ್ಧ ಅಲ್ಲ, ಅವರ ವ್ಯಕ್ತಿತ್ವ, ನುಡಿಯ ಬಗ್ಗೆ ಮಾತ್ರ ಎಂದು ತಿಳಿಸಿದರು.

ಇದನ್ನೂ ಓದಿ: ಅಮಿತ್​ ಶಾ ಕರೆ ಮಾಡಿದ್ದರು, ಕೆಲ ಕಂಡಿಷನ್​ ಮೇಲೆ ನಾಳೆ ದೆಹಲಿಗೆ ಹೊರಟಿದ್ದೇನೆ: ಕೆ ಎಸ್​ ಈಶ್ವರಪ್ಪ - KS ESHWARAPPA

'ಜೋಶಿ ಅವರಿಗೆ ಸ್ವಾಮೀಜಿ ಆಶೀರ್ವಾದ ಮಾಡಲಿ': ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲಿಂಗಾಯತ ವಿರೋಧಿಯಲ್ಲ. ಜನಪರ ಕಾರ್ಯದ ಮೂಲಕ ಜನನಾಯಕರಾಗಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿಗಳು ಅವರಿಗೆ ಆಶೀರ್ವಾದ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಚೈತ್ರಾ ಶಿರೂರ್ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲ ಕ್ಷೇತ್ರದಲ್ಲಿಯೂ ಲಿಂಗಾಯತರು ಇದ್ದಾರೆ. ಅವರಿಗೆಲ್ಲಾ ಒಳ್ಳೆಯ ಸ್ಥಾನಮಾನ ಸಿಗುವಲ್ಲಿ ಕೇಂದ್ರ ಸಚಿವರು ಶ್ರಮಿಸಿದ್ದಾರೆ. ಈ ನಿಟ್ಟಿನಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಈ ಬಾರಿ ಜೋಶಿ ಗೆಲುವಿಗೆ ಆಶೀರ್ವಾದ ಮಾಡಬೇಕು ಎಂದರು.

ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ

ಧಾರವಾಡ: ಪ್ರಹ್ಲಾದ್ ಜೋಶಿಯವರನ್ನು ಧಾರವಾಡ ಕ್ಷೇತ್ರದಿಂದ ಬದಲಾಯಿಸಬೇಕು ಎಂದು ಎಲ್ಲ ಮುಖಂಡರು ಭಾಗಿಯಾಗಿ ಸಭೆ ಕರೆದಾಗ ಕೆಲವರು ಬದಲಾವಣೆ ಬೇಡ ಎಂದರು. ಆದರೆ, ನಾವು ಯಾವುದೇ ಒತ್ತಡ, ಆಮಿಷಕ್ಕೆ ಮಣಿಯುವುದಿಲ್ಲ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

ಇಂದು ಭಕ್ತರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡದಲ್ಲಿ ಭಕ್ತರ ಸಭೆ ಕರೆದು ಚರ್ಚೆ ಮಾಡಿದ್ದೇವೆ. ಅವರೆಲ್ಲರೂ ಸೇರಿ ಒಂದು ತೀರ್ಮಾನ ಮಾಡಿದ್ದಾರೆ. ನಾನು ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ. ಉತ್ತರ ಭಾರತದ ರೀತಿಯಲ್ಲಿ ಇಲ್ಲಿಯೂ ಬದಲಾವಣೆ ಆಗಬೇಕು ಎಂದಿದ್ದಾರೆ. ಮಠಗಳು ಬದಲಾಗಿವೆ. ಎಲ್ಲರೂ ಸಹ ನನಗೆ ಕರೆ ಮಾಡಿ ಮುಂದಿಟ್ಟ ಹೆಜ್ಜೆ ಹಿಂದಿಡದಂತೆ ಹೇಳಿದ್ದಾರೆ. ಯಾವುದೇ ಪಕ್ಷದ ವಿಚಾರ, ಜಾತಿ ವಿಚಾರ ನಮ್ಮಲ್ಲಿಲ್ಲ ಎಂದರು.

ನನ್ನ ಹಿಂದೆ ಪ್ರಮುಖರು ಇದ್ದಾರೆ. ಅತೀ ಶೀಘ್ರದಲ್ಲೇ ಬೆಂಗಳೂರಿನಲ್ಲಿ‌ ನನ್ನ ತೀರ್ಮಾನ ಹೇಳುತ್ತೇನೆ. ನಮ್ಮ ಗುರುಗಳ ಮತ್ತು ಭಕ್ತರ ನಿರ್ಣಯ ಪಡೆದು ವಿಚಾರ ತಿಳಿಸುತ್ತೇನೆ. ಜೋಶಿಯವರನ್ನು ಪರಾಭವಗೊಳಿಸುವುರದಲ್ಲಿ ಎರಡು ಮಾತಿಲ್ಲ. ಧಾರವಾಡದ ಲೋಕಸಭೆ ಚುನಾವಣೆಯ ಸಲುವಾಗಿ ಸಮಿತಿ ರಚಿಸಲಾಗಿದೆ. ಮುರುಘಾ ಶ್ರೀಗಳು ಎಲ್ಲ ಸಭೆ, ಚರ್ಚೆಗಳಿಗೆ ನಮ್ಮ ಜತೆ ಇದ್ರು. ಆದರೆ ಕೆಲವರು ಮಠಕ್ಕೆ ಹೋಗಿ ಹೆದರಿಸಿ ಅವರಿಗೆ ಪತ್ರ ಓದಿಸಿದ್ದಾರೆ. ಕೇವಲ ಚುನಾವಣೆಗೆ ಮಾತ್ರ ಕರೆ ಮಾಡಿ ಆಶೀರ್ವಾದ ಮಾಡಿ ಅಂತ ಜೋಶಿ ಹೇಳುತ್ತಾರೆ‌‌. ನಾನು ಆಗ ಕೇವಲ ನಮ್ಮನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತೀರಿ ಅಂತ ಪ್ರಶ್ನೆ ಮಾಡಿದ್ದೆ. ಆಗ ಈ ಬಾರಿ ಮಾತ್ರ ಕ್ಷಮಿಸಿ ಮುಂದೆ ಹೀಗಾಗಲ್ಲ ಅಂತ ಹೇಳಿದ್ರು. ಆದರೆ ಮಠಗಳಿಗೆ ಅನುದಾನ ಸಿಕ್ಕಿಲ್ಲ. ಉತ್ತರ ಭಾರತದಲ್ಲಿ 50 ಜನ ಸನ್ಯಾಸಿಗಳು ಸಂಸದರಾಗಿದ್ದಾರೆ. ನಮ್ಮ ಹೋರಾಟ ಜೋಶಿ ವಿರುದ್ಧ ಅಲ್ಲ, ಅವರ ವ್ಯಕ್ತಿತ್ವ, ನುಡಿಯ ಬಗ್ಗೆ ಮಾತ್ರ ಎಂದು ತಿಳಿಸಿದರು.

ಇದನ್ನೂ ಓದಿ: ಅಮಿತ್​ ಶಾ ಕರೆ ಮಾಡಿದ್ದರು, ಕೆಲ ಕಂಡಿಷನ್​ ಮೇಲೆ ನಾಳೆ ದೆಹಲಿಗೆ ಹೊರಟಿದ್ದೇನೆ: ಕೆ ಎಸ್​ ಈಶ್ವರಪ್ಪ - KS ESHWARAPPA

'ಜೋಶಿ ಅವರಿಗೆ ಸ್ವಾಮೀಜಿ ಆಶೀರ್ವಾದ ಮಾಡಲಿ': ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲಿಂಗಾಯತ ವಿರೋಧಿಯಲ್ಲ. ಜನಪರ ಕಾರ್ಯದ ಮೂಲಕ ಜನನಾಯಕರಾಗಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿಗಳು ಅವರಿಗೆ ಆಶೀರ್ವಾದ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಚೈತ್ರಾ ಶಿರೂರ್ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲ ಕ್ಷೇತ್ರದಲ್ಲಿಯೂ ಲಿಂಗಾಯತರು ಇದ್ದಾರೆ. ಅವರಿಗೆಲ್ಲಾ ಒಳ್ಳೆಯ ಸ್ಥಾನಮಾನ ಸಿಗುವಲ್ಲಿ ಕೇಂದ್ರ ಸಚಿವರು ಶ್ರಮಿಸಿದ್ದಾರೆ. ಈ ನಿಟ್ಟಿನಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಈ ಬಾರಿ ಜೋಶಿ ಗೆಲುವಿಗೆ ಆಶೀರ್ವಾದ ಮಾಡಬೇಕು ಎಂದರು.

Last Updated : Apr 2, 2024, 7:32 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.