ETV Bharat / state

ಬೆಳಗಾವಿಯ ಅಭಿವೃದ್ಧಿಗೆ ಹುಮ್ಮಸ್ಸು ಬಂದಿದೆ, ಎಲ್ಲರ ಜೊತೆಗೂಡಿ ಚುನಾವಣೆ ಎದುರಿಸುವೆ: ಜಗದೀಶ್‌ ‌ಶೆಟ್ಟರ್ - Jagadeesh Shettar

author img

By ETV Bharat Karnataka Team

Published : Mar 25, 2024, 9:58 AM IST

Updated : Mar 25, 2024, 3:14 PM IST

ಸ್ಥಳೀಯ ನಾಯಕರ ಜೊತೆ ಸೇರಿ ಪಕ್ಷ ಕಟ್ಟುವ ಜೊತೆಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆಯಾದ ಬಳಿಕ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.

Jagadeesh shettar
ಜಗದೀಶ ‌ಶೆಟ್ಟರ
ಜಗದೀಶ್‌ ‌ಶೆಟ್ಟರ್

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಸಿಗುವ ವಿಶ್ವಾಸವಿತ್ತು. ನಿರೀಕ್ಷೆಯಂತೆ ಟಿಕೆಟ್ ನೀಡುವ ಮೂಲಕ ಹೆಚ್ಚಿನ ಸೇವೆ ಮಾಡಲು ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಬೆಳಗಾವಿ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಭಾನುವಾರ ಅಭಿಮಾನಿಗಳೊಂದಿಗೆ ಸಂಭ್ರಮಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಬೆಳಗಾವಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರಾದ ಜೆ.ಪಿ.ನಡ್ಡಾ, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಮತ್ತು ಸ್ಥಳೀಯ ನಾಯಕರಿಗೆ ಧನ್ಯವಾದ ತಿಳಿಸುವೆ ಎಂದು ಹರ್ಷ ವ್ಯಕ್ತಪಡಿಸಿದರು.

ಸ್ಥಳೀಯ ನಾಯಕರ ನಂಬಿಕೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ. ಮಾಜಿ ಕೇಂದ್ರ ಸಚಿವರಾದ ದಿ. ಸುರೇಶ್ ಅಂಗಡಿ ಅವರು ರೈಲ್ವೆ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದು‌ ಭರವಸೆ ನೀಡಿದರು.

ಬೆಳಗಾವಿ ಅಭಿವೃದ್ಧಿ ಮಾಡಬೇಕು ಎಂಬ ಹುಮ್ಮಸ್ಸು ಬಂದಿದೆ. ಎಲ್ಲರ ಜೊತೆಗೂಡಿ ಚುನಾವಣೆ ಎದುರಿಸುತ್ತೇನೆ. ನಾನು ಬೆಳಗಾವಿ ಸ್ಥಳೀಯ ಮಟ್ಟದಲ್ಲಿ ಸಂಘಟನೆ ಮಾಡಿದ್ದೇನೆ. ಹೀಗಾಗಿ ಹಣದ ಮೇಲೆ ಚುನಾವಣೆ ನಡೆಯುವುದಿಲ್ಲ. ಇದು ರಾಷ್ಟ್ರೀಯ ಚುನಾವಣೆ. ಮೋದಿಯವರು ಮತ್ತೊಮ್ಮೆ ‌ಪ್ರಧಾನಿ ಮಾಡುವ ನಿಟ್ಟಿನಲ್ಲಿ ಚುನಾವಣೆ ನಡೆಯುತ್ತಿದೆ. ಬೆಳಗಾವಿಯಲ್ಲಿ ಯಾವುದೇ ವಿರುದ್ಧ ವಾತಾವರಣ ಇದ್ದರೂ ಕೂಡಾ ಅದನ್ನು ಶಮನ ಮಾಡುವೆ. ‌ಲೋಕಸಭಾ ಚುನಾವಣೆ ಹೊಸದಿರಬಹುದು. ಆದರೆ ಅಪಾರ ರಾಜಕೀಯ ಅನುಭವವಿದೆ. ಯಾವುದೇ ಪದವಿ, ಸಚಿವ ಸ್ಥಾನಕ್ಕೆ ಆಸೆ ಪಡುವುದಿಲ್ಲ. ಅವೆಲ್ಲಾ ತಾನಾಗಿಯೇ ಒಲಿದು ಬರಬೇಕೆಂದು ಹೇಳಿದರು.

ಇದನ್ನೂ ಓದಿ: ಕೊನೆಗೂ ಜಗದೀಶ್​ ಶೆಟ್ಟರ್​​ಗೆ ಬೆಳಗಾವಿ ಟಿಕೆಟ್ : ಜಿಲ್ಲೆಯ ನಾಯಕರಿಗೆ ಸೊಪ್ಪು ಹಾಕದ ಬಿಜೆಪಿ ಹೈಕಮಾಂಡ್ - Lok Sabha Election

ಬೆಳಗಾವಿಯಲ್ಲಿ ಯಾವುದೇ ಅಸಮಾಧಾನ ಇಲ್ಲ. ಕಳೆದ ಒಂದು ವಾರದಿಂದ ಎಲ್ಲ ನಾಯಕರ ಜೊತೆ ಸಂಪರ್ಕದಲ್ಲಿದ್ದೇನೆ. ಟಿಕೆಟ್ ಘೋಷಣೆಯಾದ ಬಳಿಕ ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಸ್ಥಳೀಯ ನಾಯಕರು ಭರವಸೆ ನೀಡಿದ್ದಾರೆ. 2004ರಲ್ಲಿ ವಿರೋಧ ಪಕ್ಷದ ನಾಯಕನಾಗಿದ್ದ ವೇಳೆ ಬೆಳಗಾವಿಯಲ್ಲಿ ಕೆಳ ಹಂತದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಜಿಲ್ಲೆಯ ಎಲ್ಲ ತಾಲೂಕುಗಳನ್ನೂ ಸಂಪರ್ಕ ಮಾಡಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವನಾಗಿಯೂ ಕೆಲಸ ಮಾಡಿದ್ದರಿಂದ, ಅಲ್ಲಿನ ಜನರು ಸಂಪರ್ಕದಲ್ಲಿದ್ದಾರೆ. ಇದರಿಂದಾಗಿ ಬೆಳಗಾವಿ ಚುನಾವಣೆಯನ್ನು ಸುಲಭವಾಗಿ ಜಯಿಸಬಹುದು ಎಂದು ಶೆಟ್ಟರ್ ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಬಿಜೆಪಿ ಐದನೇ ಪಟ್ಟಿ ಬಿಡುಗಡೆ; ಶೆಟ್ಟರ್​, ಕಾಗೇರಿ, ಸುಧಾಕರ್​ ಸೇರಿ ನಾಲ್ವರಿಗೆ ಟಿಕೆಟ್​ - BJP FIFTH LIST

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಜೆಪಿ ಭಾನುವಾರವಷ್ಟೇ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಉತ್ತರ ಕನ್ನಡದಿಂದ ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರದಿಂದ ಡಾ.ಕೆ.ಸುಧಾಕರ್, ರಾಯಚೂರು ಕ್ಷೇತ್ರದಿಂದ ಹಾಲಿ ಸಂಸದ ಅಮರೇಶ್ವರ ನಾಯಕ್​ಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ಲೋಕಸಮರ : ರಾಜ್ಯದ ನಾಲ್ಕು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಅನಂತ ಕುಮಾರ್ ಹೆಗಡೆಗೆ‌ ಟಿಕೆಟ್ ಮಿಸ್ - BJP FIFTH LIST

ಜಗದೀಶ್‌ ‌ಶೆಟ್ಟರ್

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಸಿಗುವ ವಿಶ್ವಾಸವಿತ್ತು. ನಿರೀಕ್ಷೆಯಂತೆ ಟಿಕೆಟ್ ನೀಡುವ ಮೂಲಕ ಹೆಚ್ಚಿನ ಸೇವೆ ಮಾಡಲು ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಬೆಳಗಾವಿ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಭಾನುವಾರ ಅಭಿಮಾನಿಗಳೊಂದಿಗೆ ಸಂಭ್ರಮಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಬೆಳಗಾವಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರಾದ ಜೆ.ಪಿ.ನಡ್ಡಾ, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಮತ್ತು ಸ್ಥಳೀಯ ನಾಯಕರಿಗೆ ಧನ್ಯವಾದ ತಿಳಿಸುವೆ ಎಂದು ಹರ್ಷ ವ್ಯಕ್ತಪಡಿಸಿದರು.

ಸ್ಥಳೀಯ ನಾಯಕರ ನಂಬಿಕೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ. ಮಾಜಿ ಕೇಂದ್ರ ಸಚಿವರಾದ ದಿ. ಸುರೇಶ್ ಅಂಗಡಿ ಅವರು ರೈಲ್ವೆ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದು‌ ಭರವಸೆ ನೀಡಿದರು.

ಬೆಳಗಾವಿ ಅಭಿವೃದ್ಧಿ ಮಾಡಬೇಕು ಎಂಬ ಹುಮ್ಮಸ್ಸು ಬಂದಿದೆ. ಎಲ್ಲರ ಜೊತೆಗೂಡಿ ಚುನಾವಣೆ ಎದುರಿಸುತ್ತೇನೆ. ನಾನು ಬೆಳಗಾವಿ ಸ್ಥಳೀಯ ಮಟ್ಟದಲ್ಲಿ ಸಂಘಟನೆ ಮಾಡಿದ್ದೇನೆ. ಹೀಗಾಗಿ ಹಣದ ಮೇಲೆ ಚುನಾವಣೆ ನಡೆಯುವುದಿಲ್ಲ. ಇದು ರಾಷ್ಟ್ರೀಯ ಚುನಾವಣೆ. ಮೋದಿಯವರು ಮತ್ತೊಮ್ಮೆ ‌ಪ್ರಧಾನಿ ಮಾಡುವ ನಿಟ್ಟಿನಲ್ಲಿ ಚುನಾವಣೆ ನಡೆಯುತ್ತಿದೆ. ಬೆಳಗಾವಿಯಲ್ಲಿ ಯಾವುದೇ ವಿರುದ್ಧ ವಾತಾವರಣ ಇದ್ದರೂ ಕೂಡಾ ಅದನ್ನು ಶಮನ ಮಾಡುವೆ. ‌ಲೋಕಸಭಾ ಚುನಾವಣೆ ಹೊಸದಿರಬಹುದು. ಆದರೆ ಅಪಾರ ರಾಜಕೀಯ ಅನುಭವವಿದೆ. ಯಾವುದೇ ಪದವಿ, ಸಚಿವ ಸ್ಥಾನಕ್ಕೆ ಆಸೆ ಪಡುವುದಿಲ್ಲ. ಅವೆಲ್ಲಾ ತಾನಾಗಿಯೇ ಒಲಿದು ಬರಬೇಕೆಂದು ಹೇಳಿದರು.

ಇದನ್ನೂ ಓದಿ: ಕೊನೆಗೂ ಜಗದೀಶ್​ ಶೆಟ್ಟರ್​​ಗೆ ಬೆಳಗಾವಿ ಟಿಕೆಟ್ : ಜಿಲ್ಲೆಯ ನಾಯಕರಿಗೆ ಸೊಪ್ಪು ಹಾಕದ ಬಿಜೆಪಿ ಹೈಕಮಾಂಡ್ - Lok Sabha Election

ಬೆಳಗಾವಿಯಲ್ಲಿ ಯಾವುದೇ ಅಸಮಾಧಾನ ಇಲ್ಲ. ಕಳೆದ ಒಂದು ವಾರದಿಂದ ಎಲ್ಲ ನಾಯಕರ ಜೊತೆ ಸಂಪರ್ಕದಲ್ಲಿದ್ದೇನೆ. ಟಿಕೆಟ್ ಘೋಷಣೆಯಾದ ಬಳಿಕ ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಸ್ಥಳೀಯ ನಾಯಕರು ಭರವಸೆ ನೀಡಿದ್ದಾರೆ. 2004ರಲ್ಲಿ ವಿರೋಧ ಪಕ್ಷದ ನಾಯಕನಾಗಿದ್ದ ವೇಳೆ ಬೆಳಗಾವಿಯಲ್ಲಿ ಕೆಳ ಹಂತದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಜಿಲ್ಲೆಯ ಎಲ್ಲ ತಾಲೂಕುಗಳನ್ನೂ ಸಂಪರ್ಕ ಮಾಡಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವನಾಗಿಯೂ ಕೆಲಸ ಮಾಡಿದ್ದರಿಂದ, ಅಲ್ಲಿನ ಜನರು ಸಂಪರ್ಕದಲ್ಲಿದ್ದಾರೆ. ಇದರಿಂದಾಗಿ ಬೆಳಗಾವಿ ಚುನಾವಣೆಯನ್ನು ಸುಲಭವಾಗಿ ಜಯಿಸಬಹುದು ಎಂದು ಶೆಟ್ಟರ್ ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಬಿಜೆಪಿ ಐದನೇ ಪಟ್ಟಿ ಬಿಡುಗಡೆ; ಶೆಟ್ಟರ್​, ಕಾಗೇರಿ, ಸುಧಾಕರ್​ ಸೇರಿ ನಾಲ್ವರಿಗೆ ಟಿಕೆಟ್​ - BJP FIFTH LIST

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಜೆಪಿ ಭಾನುವಾರವಷ್ಟೇ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಉತ್ತರ ಕನ್ನಡದಿಂದ ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರದಿಂದ ಡಾ.ಕೆ.ಸುಧಾಕರ್, ರಾಯಚೂರು ಕ್ಷೇತ್ರದಿಂದ ಹಾಲಿ ಸಂಸದ ಅಮರೇಶ್ವರ ನಾಯಕ್​ಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ಲೋಕಸಮರ : ರಾಜ್ಯದ ನಾಲ್ಕು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಅನಂತ ಕುಮಾರ್ ಹೆಗಡೆಗೆ‌ ಟಿಕೆಟ್ ಮಿಸ್ - BJP FIFTH LIST

Last Updated : Mar 25, 2024, 3:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.