ETV Bharat / state

ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದನ್ನು ಕಾಂಗ್ರೆಸ್ ಫೇಕ್ ಫ್ಯಾಕ್ಟರಿ ತಿರುಚಿ ಮೈಪರಚಿಕೊಳ್ಳುತ್ತಿದೆ : ಜೆಡಿಎಸ್ ಕಿಡಿ - JDS TWEET ABOUT CONGRESS - JDS TWEET ABOUT CONGRESS

ಕಾಂಗ್ರೆಸ್​ ಫೇಕ್ ಫ್ಯಾಕ್ಟರಿ ಕುರಿತು ಜೆಡಿಎಸ್ ಟ್ವೀಟ್ ಮೂಲಕ​ ಕಿಡಿಕಾರಿದೆ.

jds
ಜೆಡಿಎಸ್
author img

By ETV Bharat Karnataka Team

Published : Apr 14, 2024, 3:44 PM IST

ಬೆಂಗಳೂರು : ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು ರಾಜ್ಯ ಕಾಂಗ್ರೆಸ್ ಪಕ್ಷದ ಪುರಾತನ-ಪರಂಪರಾಗತ ಚಾಳಿ. 75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ ಎಂದು ಜೆಡಿಎಸ್ ಟೀಕಾ ಪ್ರಹಾರ ನಡೆಸಿದೆ.

''ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ ರಕ್ಕಸಭೋಜನ ಮುಂದುವರೆದಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಜೆಡಿಎಸ್ ಕಿಡಿಕಾರಿದೆ.
ತುರುವೇಕೆರೆಯಲ್ಲಿ ಹೆಚ್. ಡಿ ಕುಮಾರಸ್ವಾಮಿ ಅವರು ಹೇಳಿದ್ದನ್ನು ಕಾಂಗ್ರೆಸ್ ಫೇಕ್ ಫ್ಯಾಕ್ಟರಿ ತಿರುಚಿ ಮೈ ಪರಚಿಕೊಳ್ಳುತ್ತಿದೆ'' ಎಂದಿದೆ.

"ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ" ಎಂದು ಹಸಿಸುಳ್ಳು ಹಬ್ಬಿಸುತ್ತಿದೆ. ನೆನಪಿರಲಿ; ಇದೇ ಹಳ್ಳಿ ತಾಯಂದಿರ ಬದುಕಿಗೆ ನರಕವಾಗಿದ್ದ ಸಾರಾಯಿ, ಲಾಟರಿ ನಿಷೇಧ ಮಾಡಿ ಅವರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ. ನಿತ್ಯನರಕವಾಗಿದ್ದ ಅವರ ಬದುಕಿಗೆ ಸಾಂತ್ವನ ಹೇಳಿದ್ದೂ ಇವರೇ. ವಿಧವಾ ಪಿಂಚಣಿಯನ್ನು ₹200 ರಿಂದ ₹400ಕ್ಕೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ?'' ಎಂದು ತಿರುಗೇಟು ನೀಡಿದೆ.

''2018-19ರಲ್ಲಿ ರಾಜ್ಯ ಕಾಂಗ್ರೆಸ್ ವಿರೋಧ ಲೆಕ್ಕಿಸದೆ ರೈತರ ₹25,000 ಕೋಟಿ ಸಾಲ ಮಾಡಿದ್ದು ಹಳ್ಳಿ ತಾಯಂದಿರ ಅಣ್ಣ ಇದೇ ಕುಮಾರಣ್ಣ. ಸಾಲ ಮನ್ನಾ ನಮ್ಮ ಕಾರ್ಯಕ್ರಮವೇ ಅಲ್ಲ; ನಮ್ಮ ಭಾಗ್ಯಗಳಿಗೆ ನಯಾಪೈಸೆ ಕಮ್ಮಿ ಆಗಂಗಿಲ್ಲ ಎಂದು ಟವೆಲ್ ಕೊಡವಿದ್ದು ಯಾರು ಕಾಂಗ್ರೆಸ್ಸಿಗರೇ? ನಿಮಗೆ ನೆನಪಿಲ್ಲವೇ? ಇಂಥ ಕುಮಾರಣ್ಣ ತಾಯಂದಿರನ್ನು ಅಪಮಾನಿಸುತ್ತಾರೆಯೇ? ಸುಳ್ಳು ಹೇಳಿದರೆ ಜನ ನಂಬುತ್ತಾರೆಯೇ?'' ಎಂದು ಕೇಳಿದೆ.

''ಕಾಂಗ್ರೆಸ್ ಮಾಡಿದ್ದೇನು? ಲಾಟರಿ ಕಿಂಗ್​ಗಳಿಗೆ ರತ್ನಗಂಬಳಿ ಹಾಸಿ ಲೂಟಿ ಮಾಡಿದ್ದು, ಮನೆಮನೆಗೂ ಹಳ್ಳಿಹಳ್ಳಿಗೂ ಸಾರಾಯಿ ಸಮಾರಾಧನೆ ಮಾಡಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ. ಅಷ್ಟೇ ಏಕೆ ? ಒಂದು ಕೈಯಲ್ಲಿ ₹2000 ಕೊಟ್ಟು ಇನ್ನೊಂದು ಕೈಯಲ್ಲಿ ತಾಯಂದಿರ ಮನೆಗಳ ಪಕ್ಕದ ಕಿರಾಣಿ ಅಂಗಡಿಗಳಲ್ಲಿಯೇ ಮದ್ಯದ ಬಾಟಲಿ ಮಾರಾಟ ಮಾಡುತ್ತಿರುವುದು ಇದೇ ಡೋಂಗಿ ಗ್ಯಾರಂಟಿ ಕಾಂಗ್ರೆಸ್ ಸರ್ಕಾರ. ಇಲ್ಲಾ ಎನ್ನಲು ಅವರಿಗೆ ಧೈರ್ಯ, ನೈತಿಕತೆ ಇದೆಯೇ?'' ಎಂದು ಜೆಡಿಎಸ್ ಪ್ರಶ್ನಿಸಿದೆ.

''ಸ್ವಚ್ಛ ಮನಸ್ಸಿನ ಹಳ್ಳಿಗಳಲ್ಲಿ ಸುಪ್ರಭಾತದ ವೇಳೆಗೆ ದೇವಾಲಯದ ಘಂಟೆನಾದ ಮೊಳಗುತ್ತಿತ್ತು. ಉಷೋದಯಕ್ಕೆ ಮೊದಲೇ ಹಳ್ಳಿಗೆ ಹಳ್ಳಿಯೇ ಮಂಗಳಕರವಾಗಿ ಕಂಗೊಳಿಸುತ್ತಿತ್ತು. ತಾಯಂದಿರು ಮನೆಗಳ ಮುಂದೆ ರಂಗೋಲಿ ಬಿಡಿಸುತ್ತಿದ್ದರೆ, ಪುರುಷರು ಹೊಲ-ತೋಟದ ಕೆಲಸಗಳಿಗೆ ಹೋಗುತ್ತಿದ್ದರು. ಗ್ಯಾರಂಟಿಗಳು ಬಂದ ಮೇಲೆ ಏನಾಗಿದೆ? ತಾಯಂದಿರು ರಂಗೋಲಿ ಬಿಡಿಸುವ ಮುನ್ನವೇ ಕಿರಾಣಿ ಅಂಗಡಿಗಳಲ್ಲಿ, ಹಾದಿ ಬೀದಿಗಳ ಬಾರ್​ಗಳಲ್ಲಿ ಮದ್ಯದ ಘಾಟು ಹೊಡೆಯುತ್ತಿದೆ''.

''ತಾಯಂದಿರ ಸಬಲೀಕರಣ, ಆರ್ಥಿಕ ಸ್ವಾತಂತ್ರ್ಯ, ಸ್ವಾಭಿಮಾನ ಎಂದರೆ ಸೂರ್ಯೋದಯಕ್ಕೆ ಮೊದಲೇ ಮದ್ಯ ಮಾರಾಟ ಮಾಡುವುದೇ?. ಕಾಂಗ್ರೆಸ್ ದಾರಿದ್ರ್ಯ ಎಲ್ಲಿಗೆ ಬಂದು ನಿಂತಿದೆ ನೋಡಿ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಮದ್ಯಪಾನಕ್ಕೆ ಭಾರೀ ಪ್ರೋತ್ಸಾಹ ಕೊಡುವುದು 'ಕಾಂಗ್ರೆಸ್ ಪಕ್ಷದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ' ಆಗಿದೆ. ಶ್ರೀಗಂಧ, ಸುಗಂಧದ ನಾಡಾಗಿರುವ ಕರ್ನಾಟಕವನ್ನು ಮದ್ಯದ ಬೀಡನ್ನಾಗಿಸುತ್ತಿದೆ. ಇದನ್ನು ಪ್ರಶ್ನಿಸಿದರೆ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಹಾಗೆಯೇ?'' ಎಂದಿದೆ.

''ಕುಮಾರಸ್ವಾಮಿ ಅವರು ಹೇಳಿದ್ದು, ಗ್ಯಾರಂಟಿಗಳಿಂದ ತಾಯಂದಿರನ್ನು ದಿಕ್ಕು ತಪ್ಪಿಸುತ್ತಿದೆ ಎಂದು. ಉಚಿತ ಆರೋಗ್ಯ, ಉಚಿತ ಶಿಕ್ಷಣ ನೀಡುವ ಬದಲು ಅಗ್ಗದ ರಾಜಕೀಯ ಲಾಭ ಮಾಡಿಕೊಳ್ಳುತ್ತಿದೆ ಎಂದು. ಕಾಂಗ್ರೆಸ್ ತನ್ನ ಪಾಪಗಳನ್ನು ಮುಚ್ಚಿಟ್ಟುಕೊಳ್ಳಲು ಸತ್ಯಕ್ಕೆ ಸುಳ್ಳಿನ ಮುಖವಾಡ ಹಾಕುತ್ತಿದೆ. ನಿಜಕ್ಕಾದರೆ, ದಾರಿ ತಪ್ಪುತ್ತಿರುವುದು ರಾಜ್ಯದ ಆರ್ಥಿಕತೆ, ಕರ್ನಾಟಕದ ಹೆಗ್ಗಳಿಕೆ, ಕರ್ನಾಟಕ ಪ್ರತಿಷ್ಠೆ'' ಎಂದು ತಿಳಿಸಿದೆ.

''ಹೆಚ್ಚುತ್ತಿರುವುದು ತಾಯಂದಿರ ಮೇಲಿನ ಸಾಲ. ಈ ವರ್ಷ ₹1 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡುವ ಗುರಿ ಇಟ್ಟುಕೊಂಡಿದೆ ಈ ಸರ್ಕಾರ. ಆ ಸಾಲ ತೀರಿಸೋರು ಯಾರು? ಕಾಂಗ್ರೆಸ್ ತನ್ನ ಖಜಾನೆಯಿಂದ ತೀರಿಸುತ್ತದೆಯೇ?'' ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ : ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ - HD Kumaraswamy

ಬೆಂಗಳೂರು : ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು ರಾಜ್ಯ ಕಾಂಗ್ರೆಸ್ ಪಕ್ಷದ ಪುರಾತನ-ಪರಂಪರಾಗತ ಚಾಳಿ. 75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ ಎಂದು ಜೆಡಿಎಸ್ ಟೀಕಾ ಪ್ರಹಾರ ನಡೆಸಿದೆ.

''ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ ರಕ್ಕಸಭೋಜನ ಮುಂದುವರೆದಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಜೆಡಿಎಸ್ ಕಿಡಿಕಾರಿದೆ.
ತುರುವೇಕೆರೆಯಲ್ಲಿ ಹೆಚ್. ಡಿ ಕುಮಾರಸ್ವಾಮಿ ಅವರು ಹೇಳಿದ್ದನ್ನು ಕಾಂಗ್ರೆಸ್ ಫೇಕ್ ಫ್ಯಾಕ್ಟರಿ ತಿರುಚಿ ಮೈ ಪರಚಿಕೊಳ್ಳುತ್ತಿದೆ'' ಎಂದಿದೆ.

"ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ" ಎಂದು ಹಸಿಸುಳ್ಳು ಹಬ್ಬಿಸುತ್ತಿದೆ. ನೆನಪಿರಲಿ; ಇದೇ ಹಳ್ಳಿ ತಾಯಂದಿರ ಬದುಕಿಗೆ ನರಕವಾಗಿದ್ದ ಸಾರಾಯಿ, ಲಾಟರಿ ನಿಷೇಧ ಮಾಡಿ ಅವರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ. ನಿತ್ಯನರಕವಾಗಿದ್ದ ಅವರ ಬದುಕಿಗೆ ಸಾಂತ್ವನ ಹೇಳಿದ್ದೂ ಇವರೇ. ವಿಧವಾ ಪಿಂಚಣಿಯನ್ನು ₹200 ರಿಂದ ₹400ಕ್ಕೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ?'' ಎಂದು ತಿರುಗೇಟು ನೀಡಿದೆ.

''2018-19ರಲ್ಲಿ ರಾಜ್ಯ ಕಾಂಗ್ರೆಸ್ ವಿರೋಧ ಲೆಕ್ಕಿಸದೆ ರೈತರ ₹25,000 ಕೋಟಿ ಸಾಲ ಮಾಡಿದ್ದು ಹಳ್ಳಿ ತಾಯಂದಿರ ಅಣ್ಣ ಇದೇ ಕುಮಾರಣ್ಣ. ಸಾಲ ಮನ್ನಾ ನಮ್ಮ ಕಾರ್ಯಕ್ರಮವೇ ಅಲ್ಲ; ನಮ್ಮ ಭಾಗ್ಯಗಳಿಗೆ ನಯಾಪೈಸೆ ಕಮ್ಮಿ ಆಗಂಗಿಲ್ಲ ಎಂದು ಟವೆಲ್ ಕೊಡವಿದ್ದು ಯಾರು ಕಾಂಗ್ರೆಸ್ಸಿಗರೇ? ನಿಮಗೆ ನೆನಪಿಲ್ಲವೇ? ಇಂಥ ಕುಮಾರಣ್ಣ ತಾಯಂದಿರನ್ನು ಅಪಮಾನಿಸುತ್ತಾರೆಯೇ? ಸುಳ್ಳು ಹೇಳಿದರೆ ಜನ ನಂಬುತ್ತಾರೆಯೇ?'' ಎಂದು ಕೇಳಿದೆ.

''ಕಾಂಗ್ರೆಸ್ ಮಾಡಿದ್ದೇನು? ಲಾಟರಿ ಕಿಂಗ್​ಗಳಿಗೆ ರತ್ನಗಂಬಳಿ ಹಾಸಿ ಲೂಟಿ ಮಾಡಿದ್ದು, ಮನೆಮನೆಗೂ ಹಳ್ಳಿಹಳ್ಳಿಗೂ ಸಾರಾಯಿ ಸಮಾರಾಧನೆ ಮಾಡಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ. ಅಷ್ಟೇ ಏಕೆ ? ಒಂದು ಕೈಯಲ್ಲಿ ₹2000 ಕೊಟ್ಟು ಇನ್ನೊಂದು ಕೈಯಲ್ಲಿ ತಾಯಂದಿರ ಮನೆಗಳ ಪಕ್ಕದ ಕಿರಾಣಿ ಅಂಗಡಿಗಳಲ್ಲಿಯೇ ಮದ್ಯದ ಬಾಟಲಿ ಮಾರಾಟ ಮಾಡುತ್ತಿರುವುದು ಇದೇ ಡೋಂಗಿ ಗ್ಯಾರಂಟಿ ಕಾಂಗ್ರೆಸ್ ಸರ್ಕಾರ. ಇಲ್ಲಾ ಎನ್ನಲು ಅವರಿಗೆ ಧೈರ್ಯ, ನೈತಿಕತೆ ಇದೆಯೇ?'' ಎಂದು ಜೆಡಿಎಸ್ ಪ್ರಶ್ನಿಸಿದೆ.

''ಸ್ವಚ್ಛ ಮನಸ್ಸಿನ ಹಳ್ಳಿಗಳಲ್ಲಿ ಸುಪ್ರಭಾತದ ವೇಳೆಗೆ ದೇವಾಲಯದ ಘಂಟೆನಾದ ಮೊಳಗುತ್ತಿತ್ತು. ಉಷೋದಯಕ್ಕೆ ಮೊದಲೇ ಹಳ್ಳಿಗೆ ಹಳ್ಳಿಯೇ ಮಂಗಳಕರವಾಗಿ ಕಂಗೊಳಿಸುತ್ತಿತ್ತು. ತಾಯಂದಿರು ಮನೆಗಳ ಮುಂದೆ ರಂಗೋಲಿ ಬಿಡಿಸುತ್ತಿದ್ದರೆ, ಪುರುಷರು ಹೊಲ-ತೋಟದ ಕೆಲಸಗಳಿಗೆ ಹೋಗುತ್ತಿದ್ದರು. ಗ್ಯಾರಂಟಿಗಳು ಬಂದ ಮೇಲೆ ಏನಾಗಿದೆ? ತಾಯಂದಿರು ರಂಗೋಲಿ ಬಿಡಿಸುವ ಮುನ್ನವೇ ಕಿರಾಣಿ ಅಂಗಡಿಗಳಲ್ಲಿ, ಹಾದಿ ಬೀದಿಗಳ ಬಾರ್​ಗಳಲ್ಲಿ ಮದ್ಯದ ಘಾಟು ಹೊಡೆಯುತ್ತಿದೆ''.

''ತಾಯಂದಿರ ಸಬಲೀಕರಣ, ಆರ್ಥಿಕ ಸ್ವಾತಂತ್ರ್ಯ, ಸ್ವಾಭಿಮಾನ ಎಂದರೆ ಸೂರ್ಯೋದಯಕ್ಕೆ ಮೊದಲೇ ಮದ್ಯ ಮಾರಾಟ ಮಾಡುವುದೇ?. ಕಾಂಗ್ರೆಸ್ ದಾರಿದ್ರ್ಯ ಎಲ್ಲಿಗೆ ಬಂದು ನಿಂತಿದೆ ನೋಡಿ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಮದ್ಯಪಾನಕ್ಕೆ ಭಾರೀ ಪ್ರೋತ್ಸಾಹ ಕೊಡುವುದು 'ಕಾಂಗ್ರೆಸ್ ಪಕ್ಷದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ' ಆಗಿದೆ. ಶ್ರೀಗಂಧ, ಸುಗಂಧದ ನಾಡಾಗಿರುವ ಕರ್ನಾಟಕವನ್ನು ಮದ್ಯದ ಬೀಡನ್ನಾಗಿಸುತ್ತಿದೆ. ಇದನ್ನು ಪ್ರಶ್ನಿಸಿದರೆ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಹಾಗೆಯೇ?'' ಎಂದಿದೆ.

''ಕುಮಾರಸ್ವಾಮಿ ಅವರು ಹೇಳಿದ್ದು, ಗ್ಯಾರಂಟಿಗಳಿಂದ ತಾಯಂದಿರನ್ನು ದಿಕ್ಕು ತಪ್ಪಿಸುತ್ತಿದೆ ಎಂದು. ಉಚಿತ ಆರೋಗ್ಯ, ಉಚಿತ ಶಿಕ್ಷಣ ನೀಡುವ ಬದಲು ಅಗ್ಗದ ರಾಜಕೀಯ ಲಾಭ ಮಾಡಿಕೊಳ್ಳುತ್ತಿದೆ ಎಂದು. ಕಾಂಗ್ರೆಸ್ ತನ್ನ ಪಾಪಗಳನ್ನು ಮುಚ್ಚಿಟ್ಟುಕೊಳ್ಳಲು ಸತ್ಯಕ್ಕೆ ಸುಳ್ಳಿನ ಮುಖವಾಡ ಹಾಕುತ್ತಿದೆ. ನಿಜಕ್ಕಾದರೆ, ದಾರಿ ತಪ್ಪುತ್ತಿರುವುದು ರಾಜ್ಯದ ಆರ್ಥಿಕತೆ, ಕರ್ನಾಟಕದ ಹೆಗ್ಗಳಿಕೆ, ಕರ್ನಾಟಕ ಪ್ರತಿಷ್ಠೆ'' ಎಂದು ತಿಳಿಸಿದೆ.

''ಹೆಚ್ಚುತ್ತಿರುವುದು ತಾಯಂದಿರ ಮೇಲಿನ ಸಾಲ. ಈ ವರ್ಷ ₹1 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡುವ ಗುರಿ ಇಟ್ಟುಕೊಂಡಿದೆ ಈ ಸರ್ಕಾರ. ಆ ಸಾಲ ತೀರಿಸೋರು ಯಾರು? ಕಾಂಗ್ರೆಸ್ ತನ್ನ ಖಜಾನೆಯಿಂದ ತೀರಿಸುತ್ತದೆಯೇ?'' ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ : ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ - HD Kumaraswamy

ETV Bharat Logo

Copyright © 2025 Ushodaya Enterprises Pvt. Ltd., All Rights Reserved.