ETV Bharat / state

ಕಪಿಲಾ ನದಿ ಪ್ರವಾಹ: ದೇವಾಲಯ, ಮನೆಗಳು ಮುಳುಗಡೆ, ಕೇರಳ - ತಮಿಳುನಾಡು ರಸ್ತೆ ಬಂದ್ - Kapila River Flood

author img

By ETV Bharat Karnataka Team

Published : Jul 19, 2024, 5:49 PM IST

ಕಪಿಲಾ ನದಿ ಪ್ರವಾಹ ಹಿನ್ನೆಲೆ ದೇವಾಲಯ ಮತ್ತು ಮನೆಗಳು ಮುಳುಗಡೆಯಾಗಿದ್ದು, ಕೇರಳ-ತಮಿಳುನಾಡು ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್​ ಮಾಡಿಲಾಗಿದೆ.

KERALA TAMIL NADU ROAD CLOSED  TEMPLE AND HOUSES SUBMERGED  HEAVY RAIN IN MYSURU  MYSURU
ಕಪಿಲಾ ನದಿ ಪ್ರವಾಹ (ETV Bharat)
ತುಂಬಿ ಹರಿಯುತ್ತಿರುವ ಕಪಿಲೆ (ETV Bharat)

ಮೈಸೂರು: ಕೇರಳದ ವೈಯನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯದಿಂದ ಹೊರಹರಿವು ಹೆಚ್ಚಳವಾಗಿದೆ. ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ನದಿ ಸಮೀಪದ ಮನೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಹಂಪಾಪುರ, ಹರದನಹಳ್ಳಿ ಮಧ್ಯೆ ಇರುವ ಕಪಿಲಾ ನದಿ ಸೇತುವೆ ಮುಳುಗಡೆಯಾಗಿದ್ದು, ನದಿ ಪಾತ್ರದಲ್ಲಿರುವ 124 ಗ್ರಾಮಗಳಿಗೆ ಕುಡಿಯುವ ನೀರಿನ ಪಂಪ್ ಹೌಸ್ ಕೂಡ ಮುಳುಗಡೆಯಾಗಿದೆ. ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಬಿನಿ ಬಲದಂಡೆ ನಾಲೆಯೂ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಕಣೇನೂರು ಮತ್ತು ಹುಲ್ಲಹಳ್ಳಿ ಸಂಪರ್ಕ ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ ತಾತ್ಕಾಲಿಕವಾಗಿ ಆ ಮಾರ್ಗವನ್ನು ಬಂದ್ ಮಾಡಲಾಗಿದೆ. ಇನ್ನು ಸುಣ್ಣದಕೇರಿ ಮತ್ತು ನದಿ ಪಾತ್ರದಲ್ಲಿರುವ ನಾಲ್ಕಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದ್ದು, ಮಗ್ಗದ ಬೀದಿಯಲ್ಲಿ ವಾಸಿಸುವ ನಿವಾಸಿಗಳನ್ನು ಸ್ಥಳಾಂತರ ಮಾಡಿ ಗಂಜಿ ಕೇಂದ್ರ ತೆರೆಯಲು ತಾಲೂಕು ಆಡಳಿತ ಸಿದ್ಧತೆ ನಡೆಸಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಧರ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮಲ್ಲಿಕಾರ್ಜುನ, ಅನ್ಸರ್ ಅಹಮದ್ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂಜುಂಡೇಶ್ವರನಿಗೂ ಕಪಿಲೆಯ ದಿಗ್ಬಂಧನ: ಕಪಿಲಾ ನದಿ ಪ್ರವಾಹದಿಂದಾಗಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರನಿಗೂ ಕಪಿಲೆಯ ದಿಗ್ಬಂಧನವಾಗಿದೆ. ಕಬಿನಿ ಹಾಗೂ ನುಗು ಜಲಾಶಯದಿಂದ ಒಟ್ಟಾರೆ 70 ಸಾವಿರ ಕ್ಯೂಸೆಕ್‌ ಪ್ರಮಾಣದ ನೀರನ್ನು ಹೊರಬಿಡಲಾಗಿತ್ತು. ಇದರಿಂದಾಗಿ ಮಲ್ಲನ ಮೂಲೆ ಸಮೀಪ ಮೈಸೂರು-ನಂಜನಗೂಡು ಮುಖ್ಯರಸ್ತೆಗೆ ಜಲಾವೃತವಾಗಿದೆ. ಪ್ರವಾಹದ ಹೆಚ್ಚಳದಿಂದಾಗಿ ನಂಜನಗೂಡು ನಗರದ ತೋಪಿನ ಬೀದಿ, ಸರಸ್ವತಿ ಕಾಲೋನಿ ಹಾಗೂ ಹಳ್ಳದ ಕೇರಿ ಬಡಾವಣೆಯಲ್ಲಿ ಮನೆಗಳು ಜಲಾವೃತ ಗೊಂಡಿವೆ. ತಾಲೂಕು ಆಡಳಿತದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲು ನೆರವಾದರು.

ನಂಜನಗೂಡು ಶ್ರೀ ನಂಜುಂಡೇಶ್ವರನಿಗೂ ಕಪಿಲೆಯ ದಿಗ್ಬಂಧನವಾಗಿದ್ದು, ದೇವಾಲಯದ ಸಮೀಪಕ್ಕೆ ಈಗಾಗಲೇ ಸಾಕಷ್ಟು ನೀರು ಹರಿದು ಬಂದು ಜಲಾವೃತವಾಗಿದೆ. ಕಪಿಲಾ ನದಿಯ ಸ್ನಾನ ಘಟ್ಟಗಳು, ಅಯ್ಯಪ್ಪ ಸ್ವಾಮಿ ದೇವಾಲಯ, ಪರಶುರಾಮ ದೇವಾಲಯ, ಶ್ರೀಕಂಠೇಶ್ವರ ಕಲ್ಯಾಣ ಮಂಟಪ, ಹಳ್ಳದ ಕೇರಿ, ದೇವಾಲಯದಲ್ಲಿರುವ ಅಂಗಡಿ ಮುಗ್ಗಟ್ಟುಗಳಿಗೂ ಕೂಡ ಪ್ರವಾಹದ ನೀರು ಹರಿದು ಸಂಪೂರ್ಣವಾಗಿ ಮುಳುಗಡೆಯಾಗಿದೆ. ಇನ್ನು ಸಾರ್ವಜನಿಕರಿಗೆ ಮತ್ತು ಭಕ್ತಾದಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಈಗಾಗಲೇ ಕಪಿಲಾ ನದಿಯನ್ನು ವೀಕ್ಷಿಸಲು ತಾಲೂಕಿನ ಜನರು ತಂಡೋಪತಂಡವಾಗಿ ಆಗಮಿಸಿ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿರುವುದು ಕಂಡು ಬಂದಿದೆ.

ತಮಿಳುನಾಡು, ಕೇರಳಕ್ಕೆ ಸಂಪರ್ಕ ಕಡಿತ : ಕಬಿನಿ ಡ್ಯಾಂನಿಂದ 70 ಸಾವಿರ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ಮೈಸೂರು ಜಿಲ್ಲೆಯ ನಂಜನಗೂಡು ಬಳಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಸಂಚಾರ ಬಂದ್ ಮಾಡಲಾಗಿದೆ. ನಂಜನಗೂಡು ಮೈಸೂರು ರಸ್ತೆಯನ್ನು ಬಂದ್ ಮಾಡಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಊಟಿ, ತಮಿಳುನಾಡು, ಕೇರಳಕ್ಕೆ ಸಂಪರ್ಕ ಭಾಗಶಃ ಕಡಿತಗೊಂಡಿದೆ. ನಂಜನಗೂಡಿನ ಮಲ್ಲನ ಮೂಲೆ ಮಠದ ಬಳಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ನಂಜನಗೂಡಿನಿಂದ ಮೈಸೂರಿಗೆ ತೆರಳುವವರು ಹೆಜ್ಜಿಗೆ ಸೇತುವೆ ಮೂಲಕ ಸಾಗಿ ತಾಂಡವಪುರದ ಮೂಲಕ ತೆರಳಬೇಕಾಗಿದೆ. ಮೈಸೂರಿನಿಂದ ನಂಜನಗೂಡಿಗೆ ಬರಬೇಕಾದ ವಾಹನಗಳು ಹೆದ್ದಾರಿಯ ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ತಿರುವು ಪಡೆದು ಹೆಜ್ಜಿಗೆ ಸೇತುವೆ ಹಾದು ನಂಜನಗೂಡು ತಲುಪಬೇಕಿದೆ ಎಂದು ನಂಜನಗೂಡು ತಾಲೂಕು ಆಡಳಿತ ಸಾರ್ವಜನಿಕರಿಗೆ ಸಂದೇಶ ರವಾನಿಸಿದೆ.

ಓದಿ: ನಂಜನಗೂಡು ಪರಶುರಾಮ ದೇಗುಲಕ್ಕೆ ಜಲ ದಿಗ್ಬಂಧನ: ವಿಡಿಯೋ - Nanjangudu Parashurama Temple

ತುಂಬಿ ಹರಿಯುತ್ತಿರುವ ಕಪಿಲೆ (ETV Bharat)

ಮೈಸೂರು: ಕೇರಳದ ವೈಯನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯದಿಂದ ಹೊರಹರಿವು ಹೆಚ್ಚಳವಾಗಿದೆ. ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ನದಿ ಸಮೀಪದ ಮನೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಹಂಪಾಪುರ, ಹರದನಹಳ್ಳಿ ಮಧ್ಯೆ ಇರುವ ಕಪಿಲಾ ನದಿ ಸೇತುವೆ ಮುಳುಗಡೆಯಾಗಿದ್ದು, ನದಿ ಪಾತ್ರದಲ್ಲಿರುವ 124 ಗ್ರಾಮಗಳಿಗೆ ಕುಡಿಯುವ ನೀರಿನ ಪಂಪ್ ಹೌಸ್ ಕೂಡ ಮುಳುಗಡೆಯಾಗಿದೆ. ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಬಿನಿ ಬಲದಂಡೆ ನಾಲೆಯೂ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಕಣೇನೂರು ಮತ್ತು ಹುಲ್ಲಹಳ್ಳಿ ಸಂಪರ್ಕ ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ ತಾತ್ಕಾಲಿಕವಾಗಿ ಆ ಮಾರ್ಗವನ್ನು ಬಂದ್ ಮಾಡಲಾಗಿದೆ. ಇನ್ನು ಸುಣ್ಣದಕೇರಿ ಮತ್ತು ನದಿ ಪಾತ್ರದಲ್ಲಿರುವ ನಾಲ್ಕಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದ್ದು, ಮಗ್ಗದ ಬೀದಿಯಲ್ಲಿ ವಾಸಿಸುವ ನಿವಾಸಿಗಳನ್ನು ಸ್ಥಳಾಂತರ ಮಾಡಿ ಗಂಜಿ ಕೇಂದ್ರ ತೆರೆಯಲು ತಾಲೂಕು ಆಡಳಿತ ಸಿದ್ಧತೆ ನಡೆಸಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಧರ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮಲ್ಲಿಕಾರ್ಜುನ, ಅನ್ಸರ್ ಅಹಮದ್ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂಜುಂಡೇಶ್ವರನಿಗೂ ಕಪಿಲೆಯ ದಿಗ್ಬಂಧನ: ಕಪಿಲಾ ನದಿ ಪ್ರವಾಹದಿಂದಾಗಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರನಿಗೂ ಕಪಿಲೆಯ ದಿಗ್ಬಂಧನವಾಗಿದೆ. ಕಬಿನಿ ಹಾಗೂ ನುಗು ಜಲಾಶಯದಿಂದ ಒಟ್ಟಾರೆ 70 ಸಾವಿರ ಕ್ಯೂಸೆಕ್‌ ಪ್ರಮಾಣದ ನೀರನ್ನು ಹೊರಬಿಡಲಾಗಿತ್ತು. ಇದರಿಂದಾಗಿ ಮಲ್ಲನ ಮೂಲೆ ಸಮೀಪ ಮೈಸೂರು-ನಂಜನಗೂಡು ಮುಖ್ಯರಸ್ತೆಗೆ ಜಲಾವೃತವಾಗಿದೆ. ಪ್ರವಾಹದ ಹೆಚ್ಚಳದಿಂದಾಗಿ ನಂಜನಗೂಡು ನಗರದ ತೋಪಿನ ಬೀದಿ, ಸರಸ್ವತಿ ಕಾಲೋನಿ ಹಾಗೂ ಹಳ್ಳದ ಕೇರಿ ಬಡಾವಣೆಯಲ್ಲಿ ಮನೆಗಳು ಜಲಾವೃತ ಗೊಂಡಿವೆ. ತಾಲೂಕು ಆಡಳಿತದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲು ನೆರವಾದರು.

ನಂಜನಗೂಡು ಶ್ರೀ ನಂಜುಂಡೇಶ್ವರನಿಗೂ ಕಪಿಲೆಯ ದಿಗ್ಬಂಧನವಾಗಿದ್ದು, ದೇವಾಲಯದ ಸಮೀಪಕ್ಕೆ ಈಗಾಗಲೇ ಸಾಕಷ್ಟು ನೀರು ಹರಿದು ಬಂದು ಜಲಾವೃತವಾಗಿದೆ. ಕಪಿಲಾ ನದಿಯ ಸ್ನಾನ ಘಟ್ಟಗಳು, ಅಯ್ಯಪ್ಪ ಸ್ವಾಮಿ ದೇವಾಲಯ, ಪರಶುರಾಮ ದೇವಾಲಯ, ಶ್ರೀಕಂಠೇಶ್ವರ ಕಲ್ಯಾಣ ಮಂಟಪ, ಹಳ್ಳದ ಕೇರಿ, ದೇವಾಲಯದಲ್ಲಿರುವ ಅಂಗಡಿ ಮುಗ್ಗಟ್ಟುಗಳಿಗೂ ಕೂಡ ಪ್ರವಾಹದ ನೀರು ಹರಿದು ಸಂಪೂರ್ಣವಾಗಿ ಮುಳುಗಡೆಯಾಗಿದೆ. ಇನ್ನು ಸಾರ್ವಜನಿಕರಿಗೆ ಮತ್ತು ಭಕ್ತಾದಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಈಗಾಗಲೇ ಕಪಿಲಾ ನದಿಯನ್ನು ವೀಕ್ಷಿಸಲು ತಾಲೂಕಿನ ಜನರು ತಂಡೋಪತಂಡವಾಗಿ ಆಗಮಿಸಿ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿರುವುದು ಕಂಡು ಬಂದಿದೆ.

ತಮಿಳುನಾಡು, ಕೇರಳಕ್ಕೆ ಸಂಪರ್ಕ ಕಡಿತ : ಕಬಿನಿ ಡ್ಯಾಂನಿಂದ 70 ಸಾವಿರ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ಮೈಸೂರು ಜಿಲ್ಲೆಯ ನಂಜನಗೂಡು ಬಳಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಸಂಚಾರ ಬಂದ್ ಮಾಡಲಾಗಿದೆ. ನಂಜನಗೂಡು ಮೈಸೂರು ರಸ್ತೆಯನ್ನು ಬಂದ್ ಮಾಡಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಊಟಿ, ತಮಿಳುನಾಡು, ಕೇರಳಕ್ಕೆ ಸಂಪರ್ಕ ಭಾಗಶಃ ಕಡಿತಗೊಂಡಿದೆ. ನಂಜನಗೂಡಿನ ಮಲ್ಲನ ಮೂಲೆ ಮಠದ ಬಳಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ನಂಜನಗೂಡಿನಿಂದ ಮೈಸೂರಿಗೆ ತೆರಳುವವರು ಹೆಜ್ಜಿಗೆ ಸೇತುವೆ ಮೂಲಕ ಸಾಗಿ ತಾಂಡವಪುರದ ಮೂಲಕ ತೆರಳಬೇಕಾಗಿದೆ. ಮೈಸೂರಿನಿಂದ ನಂಜನಗೂಡಿಗೆ ಬರಬೇಕಾದ ವಾಹನಗಳು ಹೆದ್ದಾರಿಯ ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ತಿರುವು ಪಡೆದು ಹೆಜ್ಜಿಗೆ ಸೇತುವೆ ಹಾದು ನಂಜನಗೂಡು ತಲುಪಬೇಕಿದೆ ಎಂದು ನಂಜನಗೂಡು ತಾಲೂಕು ಆಡಳಿತ ಸಾರ್ವಜನಿಕರಿಗೆ ಸಂದೇಶ ರವಾನಿಸಿದೆ.

ಓದಿ: ನಂಜನಗೂಡು ಪರಶುರಾಮ ದೇಗುಲಕ್ಕೆ ಜಲ ದಿಗ್ಬಂಧನ: ವಿಡಿಯೋ - Nanjangudu Parashurama Temple

ETV Bharat Logo

Copyright © 2024 Ushodaya Enterprises Pvt. Ltd., All Rights Reserved.