ETV Bharat / state

ದೇವಸ್ಥಾನಗಳಿಂದ ನಿಧಿ ಸಂಗ್ರಹಿಸುವ ತಿದ್ದುಪಡಿ ಮಸೂದೆ ಹಿಂತಿರುಗಿಸಿದ ರಾಜ್ಯಪಾಲರು - karnataka temple bill

author img

By ETV Bharat Karnataka Team

Published : Mar 21, 2024, 1:27 PM IST

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕವನ್ನು ರಾಜ್ಯಪಾಲರು ಮಾಹಿತಿ ಕೋರಿ ವಾಪಸ್ ಕಳುಹಿಸಿದ್ದಾರೆ.

ರಾಜ್ಯಪಾಲರು
ರಾಜ್ಯಪಾಲರು

ಬೆಂಗಳೂರು: ದೇವಸ್ಥಾನಗಳ ಹುಂಡಿಗೆ ಬರುವ ಹಣದಲ್ಲಿ ಸಾಮಾನ್ಯ ಸಂಗ್ರಹಣ ನಿಧಿಗೆ ವಂತಿಗೆ ಸಂಗ್ರಹಿಸುವ ತಿದ್ದುಪಡಿ ವಿಧೇಯಕವನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಪ್ರತಿಪಕ್ಷಗಳ ಪ್ರಬಲ ವಿರೋಧದ ಮಧ್ಯೆ ಕಳೆದ ತಿಂಗಳ ಬಜೆಟ್ ಅಧಿವೇಶನದಲ್ಲಿ 2024ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕವನ್ನು ಸರ್ಕಾರ ಮಂಡಿಸಿ ಅಂಗೀಕಾರ ಪಡೆದಿತ್ತು. ಬಳಿಕ ರಾಜ್ಯಪಾಲರ ಅಂಕಿತಕ್ಕಾಗಿ ವಿಧೇಯಕವನ್ನು ರಾಜಭವನಕ್ಕೆ ಕಳುಹಿಸಿಕೊಡಲಾಗಿತ್ತು. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹೆಚ್ಚಿನ ಸ್ಪಷ್ಟೀಕರಣ ಕೋರಿ ಮಾ.14ರಂದು ವಿಧೇಯಕ ವಾಪಸ್ ಕಳಹಿಸಿದ್ದಾರೆ. ಹೆಚ್ಚಿನ ಮಾಹಿತಿ, ಸ್ಪಷ್ಟನೆಯೊಂದಿಗೆ ಮಸೂದೆಯನ್ನು ರಾಜ್ಯಪಾಲರ ಕಚೇರಿಗೆ ಮರುಸಲ್ಲಿಕೆ ಮಾಡುವಂತೆ ರಾಜಭವನ ಕಚೇರಿ ತಿಳಿಸಿದೆ.

ರಾಜ್ಯಪಾಲರು ವಿಧೇಯಕ ವಾಪಸ್​ ಕಳುಹಿಸಲು ಕಾರಣ ಏನು?: ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆ 1997 ಮತ್ತು 2011 ಹಾಗೂ 2012ರಲ್ಲಿ ಮಾಡಲಾದ ತಿದ್ದುಪಡಿಗಳನ್ನು ಹೈಕೋರ್ಟ್ ಧಾರವಾಡ ಪೀಠ ಈಗಾಗಲೇ ವಜಾ ಮಾಡಿದೆ. ಧಾರವಾಡ ಹೈಕೋರ್ಟ್ ಪೀಠದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಧಾರವಾಡ ಹೈಕೋರ್ಟ್ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿದೆ ಎಂದು ರಾಜ್ಯಪಾಲರು ಉಲ್ಲೇಖಿಸಿ ರಾಜ್ಯ ಸರ್ಕಾರದಿಂದ ಹೆಚ್ಚಿನ ಮಾಹಿತಿ ಕೋರಿದ್ದಾರೆ.

ಪ್ರಕರಣ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆಯಲ್ಲಿರುವಾಗ ಈ ಸಂಬಂಧ ತಿದ್ದುಪಡಿ ವಿಧೇಯಕ ತರಬಹುದೇ ಎಂಬ ಬಗ್ಗೆ ಹೆಚ್ಚಿನ ಸ್ಪಷ್ಟನೆಯ ಅಗತ್ಯವಿದೆ. ಈಗಾಗಲೇ ಈ ಹಿಂದಿನ ಕಾಯ್ದೆಯನ್ನೇ ಹೈಕೋರ್ಟ್ ವಜಾ ಮಾಡಿ, ಈಗ ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ವಿಚಾರಣೆ ಅಂತಿಮ ಹಂತದಲ್ಲಿರುವಾಗ ತಿದ್ದುಪಡಿ ಮಾಡಬಹುದೇ ಎಂದು ಪ್ರಶ್ನಿಸಿ ಹೆಚ್ಚಿನ ಮಾಹಿತಿ, ಸ್ಪಷ್ಟನೆ ಕೋರಿದ್ದಾರೆ.

ಇತರ ಧಾರ್ಮಿಕ ಸಂಸ್ಥೆಗಳನ್ನೂ ಸೇರಿಸುತ್ತೀರಾ?: ರಾಜ್ಯಪಾಲರು ತಿದ್ದುಪಡಿ ವಿಧೇಯಕ ಸಂಬಂಧ ಕೇಳಿದ ಸ್ಪಷ್ಟನೆಯಲ್ಲಿ ಇದೇ ಮಾದರಿ ಇತರ ಧಾರ್ಮಿಕ ಸಂಸ್ಥೆಗಳನ್ನು ಸೇರಿಸಿ ವಿಧೇಯಕವನ್ನು ಮಾಡುವ ಚಿಂತನೆ ಇದೆಯೇ ಎಂಬ ಬಗ್ಗೆಯೂ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ವಾಪಸ್​ ಕಳುಹಿಸಲಾದ ತಿದ್ದುಪಡಿ ವಿಧೇಯಕವನ್ನು ಹೆಚ್ಚಿನ ಮಾಹಿತಿ, ಸ್ಪಷ್ಟನೆಯೊಂದಿಗೆ ರಾಜ್ಯಪಾಲರಿಗೆ ಮರುಸಲ್ಲಿಕೆ ಮಾಡುವಂತೆ ಸರ್ಕಾರಕ್ಕೆ ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ಧಾರ್ಮಿಕ ತಿದ್ದುಪಡಿ ವಿಧೇಯಕ?: ಸಾಮಾನ್ಯ ಸಂಗ್ರಹಣಾ ನಿಧಿಯ ಮೊತ್ತವನ್ನು ಹೆಚ್ಚಿಸಲು, ಅಧಿಸೂಚಿತ ಸಂಸ್ಥೆಯ ವ್ಯವಸ್ಥಾಪನಾ ಸಮಿತಿಯಲ್ಲಿ ವಿಶ್ವಕರ್ಮ ಹಿಂದೂ ದೇವಾಲಯದ ವಾಸ್ತುಶಿಲ್ಪ ಮತ್ತು ಶಿಲ್ಪಶಾಸ್ತ್ರದಲ್ಲಿ ಕೌಶಲ್ಯವುಳ್ಳ ವ್ಯಕ್ತಿಯನ್ನು ಸೇರಿಸಲು, ಗ್ರೂಪ್-ಎ ದೇವಾಲಯಗಳ ಅಧಿಕಾರ ಕ್ಷೇತ್ರ ವ್ಯಾಪ್ತಿಯೊಳಗೆ ಯಾತ್ರಾರ್ಥಿಗಳಿಗೆ ಸುರಕ್ಷತೆಯನ್ನು ಕಲ್ಪಿಸಲು ನಿರ್ಮಾಣ ಮತ್ತು ನಿರ್ವಹಣೆ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು, ಪುನ‌ರ್ ಪರಿಶೀಲಿಸಲು ಮತ್ತು ಪ್ರಸ್ತಾವನೆಗಳನ್ನು ಸಲ್ಲಿಸಲು ಜಿಲ್ಲಾ ಮಟ್ಟದ ಮತ್ತು ರಾಜ್ಯ ಉನ್ನತ ಮಟ್ಟದ ಸಮಿತಿಗಳನ್ನು ರಚಿಸುವ ತಿದ್ದುಪಡಿ ವಿಧೇಯಕ ತರಲಾಗಿದೆ.

ದೇವಸ್ಥಾನಗಳ ಹುಂಡಿಗೆ ಬರುವ ಹಣದಲ್ಲಿ ಸಾಮಾನ್ಯ ಸಂಗ್ರಹಣ ನಿಧಿಗೆ ವಂತಿಗೆ ಸಂಗ್ರಹಿಸಲಾಗುತ್ತದೆ. ತಿದ್ದುಪಡಿ ಮಸೂದೆಯಂತೆ 10 ಲಕ್ಷ ರೂ. ವರೆಗೆ ಆದಾಯ ಇರುವ ದೇವಸ್ಥಾನಗಳು ವಂತಿಕೆ ಕೊಡುವುದರಿಂದ ವಿನಾಯಿತಿ ನೀಡಲಾಗಿದೆ. 10 ಲಕ್ಷ ರೂ.ನಿಂದ ಒಂದು ಕೋಟಿ ರೂ.ವರೆಗೆ ಆದಾಯ ಇರುವ ದೇವಸ್ಥಾನಗಳಿಂದ ಶೇ.5ರಷ್ಟು ವಂತಿಗೆ ಹಾಗೂ ಒಂದು ಕೋಟಿ ರೂ. ಮೇಲ್ಪಟ್ಟು ಆದಾಯ ಹೊಂದಿರುವ ದೇವಸ್ಥಾನಗಳಿಂದ ಶೇ10 ದರದಲ್ಲಿ ವಂತಿಗೆ ಪಡೆದು, ಅವುಗಳನ್ನು ಸಿ ವರ್ಗದ ದೇವಸ್ಥಾನಗಳ ಅಭಿವೃದ್ಧಿಗೆ ಬಳಸಲು ಈ ತಿದ್ದುಪಡಿ ವಿಧೇಯಕ ತರಲಾಗಿತ್ತು.

ಇದನ್ನೂ ಓದಿ: ಹಿಂದೂ ಧಾರ್ಮಿಕ ದತ್ತಿ ಮಸೂದೆಗೆ ಮತ್ತೆ ವಿಧಾನಸಭೆ ಒಪ್ಪಿಗೆ, ಎಲ್ಲರ ಚಿತ್ತ ರಾಜ್ಯಪಾಲರತ್ತ

ಈ ಮಸೂದೆ ವಿರುದ್ಧ ಪ್ರತಿಪಕ್ಷ ಬಿಜೆಪಿ ಉಭಯ ಸದನಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಪರಿಷತ್​​ನಲ್ಲಿ ಈ ವಿಧೇಯಕ ಧ್ವನಿಮತದಲ್ಲಿ ತಿರಸ್ಕೃತವಾಗಿತ್ತು. ಬಳಿಕ ಕಾಂಗ್ರೆಸ್ ಸರ್ಕಾರ ಪ್ರತಿಪಕ್ಷಗಳ ವಿರೋಧದ ಮಧ್ಯೆಯೂ ಎರಡನೇ ಬಾರಿ ವಿಧಾನಸಭೆ ಹಾಗೂ ವಿಧಾನಪರಿಷತ್​ನಲ್ಲಿ ಮಂಡಿಸಿ ಅಂಗೀಕಾರ ಪಡೆದಿತ್ತು. ಈ ಮಸೂದೆಯನ್ನು ತಿರಸ್ಕರಿಸುವಂತೆ ಕರ್ನಾಟಕ ದೇವಸ್ಥಾನಗಳ ಮಹಾಸಂಘ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿತ್ತು.

ಇದನ್ನೂ ಓದಿ: 'ದೇಗುಲಗಳ ಆರ್ಥಿಕತೆ ಕುಸಿಯಬಾರದೆಂದು ಹಿಂದೂ ಧಾರ್ಮಿಕ ದತ್ತಿ ಮಸೂದೆ ಬೀಳಿಸಿದ್ದೇವೆ'

ಬೆಂಗಳೂರು: ದೇವಸ್ಥಾನಗಳ ಹುಂಡಿಗೆ ಬರುವ ಹಣದಲ್ಲಿ ಸಾಮಾನ್ಯ ಸಂಗ್ರಹಣ ನಿಧಿಗೆ ವಂತಿಗೆ ಸಂಗ್ರಹಿಸುವ ತಿದ್ದುಪಡಿ ವಿಧೇಯಕವನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಪ್ರತಿಪಕ್ಷಗಳ ಪ್ರಬಲ ವಿರೋಧದ ಮಧ್ಯೆ ಕಳೆದ ತಿಂಗಳ ಬಜೆಟ್ ಅಧಿವೇಶನದಲ್ಲಿ 2024ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕವನ್ನು ಸರ್ಕಾರ ಮಂಡಿಸಿ ಅಂಗೀಕಾರ ಪಡೆದಿತ್ತು. ಬಳಿಕ ರಾಜ್ಯಪಾಲರ ಅಂಕಿತಕ್ಕಾಗಿ ವಿಧೇಯಕವನ್ನು ರಾಜಭವನಕ್ಕೆ ಕಳುಹಿಸಿಕೊಡಲಾಗಿತ್ತು. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹೆಚ್ಚಿನ ಸ್ಪಷ್ಟೀಕರಣ ಕೋರಿ ಮಾ.14ರಂದು ವಿಧೇಯಕ ವಾಪಸ್ ಕಳಹಿಸಿದ್ದಾರೆ. ಹೆಚ್ಚಿನ ಮಾಹಿತಿ, ಸ್ಪಷ್ಟನೆಯೊಂದಿಗೆ ಮಸೂದೆಯನ್ನು ರಾಜ್ಯಪಾಲರ ಕಚೇರಿಗೆ ಮರುಸಲ್ಲಿಕೆ ಮಾಡುವಂತೆ ರಾಜಭವನ ಕಚೇರಿ ತಿಳಿಸಿದೆ.

ರಾಜ್ಯಪಾಲರು ವಿಧೇಯಕ ವಾಪಸ್​ ಕಳುಹಿಸಲು ಕಾರಣ ಏನು?: ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆ 1997 ಮತ್ತು 2011 ಹಾಗೂ 2012ರಲ್ಲಿ ಮಾಡಲಾದ ತಿದ್ದುಪಡಿಗಳನ್ನು ಹೈಕೋರ್ಟ್ ಧಾರವಾಡ ಪೀಠ ಈಗಾಗಲೇ ವಜಾ ಮಾಡಿದೆ. ಧಾರವಾಡ ಹೈಕೋರ್ಟ್ ಪೀಠದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಧಾರವಾಡ ಹೈಕೋರ್ಟ್ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿದೆ ಎಂದು ರಾಜ್ಯಪಾಲರು ಉಲ್ಲೇಖಿಸಿ ರಾಜ್ಯ ಸರ್ಕಾರದಿಂದ ಹೆಚ್ಚಿನ ಮಾಹಿತಿ ಕೋರಿದ್ದಾರೆ.

ಪ್ರಕರಣ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆಯಲ್ಲಿರುವಾಗ ಈ ಸಂಬಂಧ ತಿದ್ದುಪಡಿ ವಿಧೇಯಕ ತರಬಹುದೇ ಎಂಬ ಬಗ್ಗೆ ಹೆಚ್ಚಿನ ಸ್ಪಷ್ಟನೆಯ ಅಗತ್ಯವಿದೆ. ಈಗಾಗಲೇ ಈ ಹಿಂದಿನ ಕಾಯ್ದೆಯನ್ನೇ ಹೈಕೋರ್ಟ್ ವಜಾ ಮಾಡಿ, ಈಗ ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ವಿಚಾರಣೆ ಅಂತಿಮ ಹಂತದಲ್ಲಿರುವಾಗ ತಿದ್ದುಪಡಿ ಮಾಡಬಹುದೇ ಎಂದು ಪ್ರಶ್ನಿಸಿ ಹೆಚ್ಚಿನ ಮಾಹಿತಿ, ಸ್ಪಷ್ಟನೆ ಕೋರಿದ್ದಾರೆ.

ಇತರ ಧಾರ್ಮಿಕ ಸಂಸ್ಥೆಗಳನ್ನೂ ಸೇರಿಸುತ್ತೀರಾ?: ರಾಜ್ಯಪಾಲರು ತಿದ್ದುಪಡಿ ವಿಧೇಯಕ ಸಂಬಂಧ ಕೇಳಿದ ಸ್ಪಷ್ಟನೆಯಲ್ಲಿ ಇದೇ ಮಾದರಿ ಇತರ ಧಾರ್ಮಿಕ ಸಂಸ್ಥೆಗಳನ್ನು ಸೇರಿಸಿ ವಿಧೇಯಕವನ್ನು ಮಾಡುವ ಚಿಂತನೆ ಇದೆಯೇ ಎಂಬ ಬಗ್ಗೆಯೂ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ವಾಪಸ್​ ಕಳುಹಿಸಲಾದ ತಿದ್ದುಪಡಿ ವಿಧೇಯಕವನ್ನು ಹೆಚ್ಚಿನ ಮಾಹಿತಿ, ಸ್ಪಷ್ಟನೆಯೊಂದಿಗೆ ರಾಜ್ಯಪಾಲರಿಗೆ ಮರುಸಲ್ಲಿಕೆ ಮಾಡುವಂತೆ ಸರ್ಕಾರಕ್ಕೆ ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ಧಾರ್ಮಿಕ ತಿದ್ದುಪಡಿ ವಿಧೇಯಕ?: ಸಾಮಾನ್ಯ ಸಂಗ್ರಹಣಾ ನಿಧಿಯ ಮೊತ್ತವನ್ನು ಹೆಚ್ಚಿಸಲು, ಅಧಿಸೂಚಿತ ಸಂಸ್ಥೆಯ ವ್ಯವಸ್ಥಾಪನಾ ಸಮಿತಿಯಲ್ಲಿ ವಿಶ್ವಕರ್ಮ ಹಿಂದೂ ದೇವಾಲಯದ ವಾಸ್ತುಶಿಲ್ಪ ಮತ್ತು ಶಿಲ್ಪಶಾಸ್ತ್ರದಲ್ಲಿ ಕೌಶಲ್ಯವುಳ್ಳ ವ್ಯಕ್ತಿಯನ್ನು ಸೇರಿಸಲು, ಗ್ರೂಪ್-ಎ ದೇವಾಲಯಗಳ ಅಧಿಕಾರ ಕ್ಷೇತ್ರ ವ್ಯಾಪ್ತಿಯೊಳಗೆ ಯಾತ್ರಾರ್ಥಿಗಳಿಗೆ ಸುರಕ್ಷತೆಯನ್ನು ಕಲ್ಪಿಸಲು ನಿರ್ಮಾಣ ಮತ್ತು ನಿರ್ವಹಣೆ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು, ಪುನ‌ರ್ ಪರಿಶೀಲಿಸಲು ಮತ್ತು ಪ್ರಸ್ತಾವನೆಗಳನ್ನು ಸಲ್ಲಿಸಲು ಜಿಲ್ಲಾ ಮಟ್ಟದ ಮತ್ತು ರಾಜ್ಯ ಉನ್ನತ ಮಟ್ಟದ ಸಮಿತಿಗಳನ್ನು ರಚಿಸುವ ತಿದ್ದುಪಡಿ ವಿಧೇಯಕ ತರಲಾಗಿದೆ.

ದೇವಸ್ಥಾನಗಳ ಹುಂಡಿಗೆ ಬರುವ ಹಣದಲ್ಲಿ ಸಾಮಾನ್ಯ ಸಂಗ್ರಹಣ ನಿಧಿಗೆ ವಂತಿಗೆ ಸಂಗ್ರಹಿಸಲಾಗುತ್ತದೆ. ತಿದ್ದುಪಡಿ ಮಸೂದೆಯಂತೆ 10 ಲಕ್ಷ ರೂ. ವರೆಗೆ ಆದಾಯ ಇರುವ ದೇವಸ್ಥಾನಗಳು ವಂತಿಕೆ ಕೊಡುವುದರಿಂದ ವಿನಾಯಿತಿ ನೀಡಲಾಗಿದೆ. 10 ಲಕ್ಷ ರೂ.ನಿಂದ ಒಂದು ಕೋಟಿ ರೂ.ವರೆಗೆ ಆದಾಯ ಇರುವ ದೇವಸ್ಥಾನಗಳಿಂದ ಶೇ.5ರಷ್ಟು ವಂತಿಗೆ ಹಾಗೂ ಒಂದು ಕೋಟಿ ರೂ. ಮೇಲ್ಪಟ್ಟು ಆದಾಯ ಹೊಂದಿರುವ ದೇವಸ್ಥಾನಗಳಿಂದ ಶೇ10 ದರದಲ್ಲಿ ವಂತಿಗೆ ಪಡೆದು, ಅವುಗಳನ್ನು ಸಿ ವರ್ಗದ ದೇವಸ್ಥಾನಗಳ ಅಭಿವೃದ್ಧಿಗೆ ಬಳಸಲು ಈ ತಿದ್ದುಪಡಿ ವಿಧೇಯಕ ತರಲಾಗಿತ್ತು.

ಇದನ್ನೂ ಓದಿ: ಹಿಂದೂ ಧಾರ್ಮಿಕ ದತ್ತಿ ಮಸೂದೆಗೆ ಮತ್ತೆ ವಿಧಾನಸಭೆ ಒಪ್ಪಿಗೆ, ಎಲ್ಲರ ಚಿತ್ತ ರಾಜ್ಯಪಾಲರತ್ತ

ಈ ಮಸೂದೆ ವಿರುದ್ಧ ಪ್ರತಿಪಕ್ಷ ಬಿಜೆಪಿ ಉಭಯ ಸದನಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಪರಿಷತ್​​ನಲ್ಲಿ ಈ ವಿಧೇಯಕ ಧ್ವನಿಮತದಲ್ಲಿ ತಿರಸ್ಕೃತವಾಗಿತ್ತು. ಬಳಿಕ ಕಾಂಗ್ರೆಸ್ ಸರ್ಕಾರ ಪ್ರತಿಪಕ್ಷಗಳ ವಿರೋಧದ ಮಧ್ಯೆಯೂ ಎರಡನೇ ಬಾರಿ ವಿಧಾನಸಭೆ ಹಾಗೂ ವಿಧಾನಪರಿಷತ್​ನಲ್ಲಿ ಮಂಡಿಸಿ ಅಂಗೀಕಾರ ಪಡೆದಿತ್ತು. ಈ ಮಸೂದೆಯನ್ನು ತಿರಸ್ಕರಿಸುವಂತೆ ಕರ್ನಾಟಕ ದೇವಸ್ಥಾನಗಳ ಮಹಾಸಂಘ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿತ್ತು.

ಇದನ್ನೂ ಓದಿ: 'ದೇಗುಲಗಳ ಆರ್ಥಿಕತೆ ಕುಸಿಯಬಾರದೆಂದು ಹಿಂದೂ ಧಾರ್ಮಿಕ ದತ್ತಿ ಮಸೂದೆ ಬೀಳಿಸಿದ್ದೇವೆ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.