ETV Bharat / state

ರೇಣುಕಾಚಾರ್ಯ ಸಹೋದರನಿಗೆ ಬೇಡ ಜಂಗಮ ಜಾತಿ ಪ್ರಮಾಣಪತ್ರ ಬಳಸದಂತೆ ನಿರ್ಬಂಧ‌ ವಿಸ್ತರಣೆ - High Court

author img

By ETV Bharat Karnataka Team

Published : Apr 10, 2024, 9:39 PM IST

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಬಳಸಿಕೊಂಡು ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದ ಎಂ.ಪಿ.ದಾರಕೇಶ್ವರಯ್ಯ ಪ್ರಯತ್ನಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಿಸಿದೆ.

karnataka-high-court-extends-ban-using-beda-jangam-caste-certificate-to-mp-darakeswaraiah
ರೇಣುಕಾಚಾರ್ಯ ಸಹೋದರನಿಗೆ ಬೇಡ ಜಂಗಮ ಜಾತಿ ಪ್ರಮಾಣಪತ್ರ ಬಳಸದಂತೆ ನಿರ್ಬಂಧ‌ ವಿಸ್ತರಣೆ

ಬೆಂಗಳೂರು: ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆದು, ಪರಿಶಿಷ್ಟ ಜಾತಿಗೆ ಮೀಸಲಾದ ಚಿತ್ರದುರ್ಗ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ.ದಾರಕೇಶ್ವರಯ್ಯ ಪ್ರಯತ್ನಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ. ದಾಸರಹಳ್ಳಿಯ ಎಂ.ಚಂದ್ರ ಬಿನ್ ಮುನಿಯಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅವಧಿ ವಿಸ್ತರಿಸಿತು.

ವಿಚಾರಣೆ ವೇಳೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗಳ ಪರ ವಕೀಲರು ವಾದ ಮಂಡಿಸಿ, ಪ್ರಕರಣದ ಪ್ರತಿವಾದಿಗಳು ಮೊದಲು ಬೆಂಗಳೂರು ಉತ್ತರ ತಹಶೀಲ್ದಾರ್​ರಿಂದ ಪಡೆದ ಬೇಡ ಜಂಗಮ ಪ್ರಮಾಣಪತ್ರ ರದ್ದಾಗಿತ್ತು. ಇದೀಗ ಬೆಂಗಳೂರು ದಕ್ಷಿಣ ತಹಶೀಲ್ದಾರ್​ರಿಂದ ಇದೇ ಜಾತಿ ಪ್ರಮಾಣ ಪತ್ರ ಪಡೆದಿದ್ದರು. ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಪರಿಶಿಷ್ಟ ಜಾತಿಯವರಿಗೆ ಅನ್ಯಾಯ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಈ ಹಿಂದೆ ಅರ್ಜಿದಾರರ ಪರ ವಕೀಲರು, ದಾರಕೇಶ್ವರಯ್ಯ ಈ ಮೊದಲು ಬೆಂಗಳೂರು ಉತ್ತರ ತಹಶೀಲ್ದಾರ್ ಅವರಿಂದ ಪಡೆದ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ರದ್ದಾಗಿತ್ತು. ಈಗ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಅವರಿಂದ ಇದೇ ರೀತಿಯ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಇದು ಸಂಪೂರ್ಣ ಕಾನೂನು ಬಾಹಿರ ಮತ್ತು ದುರ್ಬಳಕೆ ಎಂದು ಪೀಠಕ್ಕೆ ವಿವರಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯ ಪೀಠ, ಮುಂದಿನ‌ ವಿಚಾರಣೆವರೆಗೂ ಬೇಡ ಜಂಗಮ ಜಾತಿ ಪ್ರಮಾಣ ಪತ್ರವನ್ನು ಬಳಸದಂತೆ ದಾರಕೇಶ್ವರಯ್ಯ ಅವರಿಗೆ ನಿರ್ಬಂಧ ವಿಧಿಸಿ ಆದೇಶಿಸಿತು. ಅಲ್ಲದೆ, ಪ್ರತಿವಾದಿಗಳಾದ ಬೆಂಗಳೂರು ನಗರ ಜಿಲ್ಲಾಧಿಕಾರಿ, ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಮತ್ತು ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್​ಗೆ ನೋಟಿಸ್​ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತ್ತು.

ಇದನ್ನೂ ಓದಿ: ಅಪಾಯಕಾರಿ ಶ್ವಾನ ತಳಿಗಳ ಸಂತಾನೋತ್ಪತ್ತಿ ನಿಷೇಧಿಸಿದ್ದ ಕೇಂದ್ರದ ಸುತ್ತೋಲೆ ರದ್ದುಗೊಳಿಸಿದ ಹೈಕೋರ್ಟ್ - Dangerous Dog Breeds

ಬೆಂಗಳೂರು: ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆದು, ಪರಿಶಿಷ್ಟ ಜಾತಿಗೆ ಮೀಸಲಾದ ಚಿತ್ರದುರ್ಗ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ.ದಾರಕೇಶ್ವರಯ್ಯ ಪ್ರಯತ್ನಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ. ದಾಸರಹಳ್ಳಿಯ ಎಂ.ಚಂದ್ರ ಬಿನ್ ಮುನಿಯಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅವಧಿ ವಿಸ್ತರಿಸಿತು.

ವಿಚಾರಣೆ ವೇಳೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗಳ ಪರ ವಕೀಲರು ವಾದ ಮಂಡಿಸಿ, ಪ್ರಕರಣದ ಪ್ರತಿವಾದಿಗಳು ಮೊದಲು ಬೆಂಗಳೂರು ಉತ್ತರ ತಹಶೀಲ್ದಾರ್​ರಿಂದ ಪಡೆದ ಬೇಡ ಜಂಗಮ ಪ್ರಮಾಣಪತ್ರ ರದ್ದಾಗಿತ್ತು. ಇದೀಗ ಬೆಂಗಳೂರು ದಕ್ಷಿಣ ತಹಶೀಲ್ದಾರ್​ರಿಂದ ಇದೇ ಜಾತಿ ಪ್ರಮಾಣ ಪತ್ರ ಪಡೆದಿದ್ದರು. ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಪರಿಶಿಷ್ಟ ಜಾತಿಯವರಿಗೆ ಅನ್ಯಾಯ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಈ ಹಿಂದೆ ಅರ್ಜಿದಾರರ ಪರ ವಕೀಲರು, ದಾರಕೇಶ್ವರಯ್ಯ ಈ ಮೊದಲು ಬೆಂಗಳೂರು ಉತ್ತರ ತಹಶೀಲ್ದಾರ್ ಅವರಿಂದ ಪಡೆದ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ರದ್ದಾಗಿತ್ತು. ಈಗ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಅವರಿಂದ ಇದೇ ರೀತಿಯ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಇದು ಸಂಪೂರ್ಣ ಕಾನೂನು ಬಾಹಿರ ಮತ್ತು ದುರ್ಬಳಕೆ ಎಂದು ಪೀಠಕ್ಕೆ ವಿವರಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯ ಪೀಠ, ಮುಂದಿನ‌ ವಿಚಾರಣೆವರೆಗೂ ಬೇಡ ಜಂಗಮ ಜಾತಿ ಪ್ರಮಾಣ ಪತ್ರವನ್ನು ಬಳಸದಂತೆ ದಾರಕೇಶ್ವರಯ್ಯ ಅವರಿಗೆ ನಿರ್ಬಂಧ ವಿಧಿಸಿ ಆದೇಶಿಸಿತು. ಅಲ್ಲದೆ, ಪ್ರತಿವಾದಿಗಳಾದ ಬೆಂಗಳೂರು ನಗರ ಜಿಲ್ಲಾಧಿಕಾರಿ, ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಮತ್ತು ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್​ಗೆ ನೋಟಿಸ್​ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತ್ತು.

ಇದನ್ನೂ ಓದಿ: ಅಪಾಯಕಾರಿ ಶ್ವಾನ ತಳಿಗಳ ಸಂತಾನೋತ್ಪತ್ತಿ ನಿಷೇಧಿಸಿದ್ದ ಕೇಂದ್ರದ ಸುತ್ತೋಲೆ ರದ್ದುಗೊಳಿಸಿದ ಹೈಕೋರ್ಟ್ - Dangerous Dog Breeds

ETV Bharat Logo

Copyright © 2024 Ushodaya Enterprises Pvt. Ltd., All Rights Reserved.