ETV Bharat / state

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ - Karnataka Rain Forecast

author img

By ETV Bharat Karnataka Team

Published : Jun 9, 2024, 6:13 PM IST

ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಧಾರಾಕಾರ ಮಳೆ ಆಗುವ ಸಾಧ್ಯತೆ ಹಿನ್ನೆಲೆ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಮುಂಗಾರು ಮಳೆ
ಕರ್ನಾಟಕದಲ್ಲಿ ಮುಂಗಾರು ಮಳೆ (ಸಂಗ್ರಹ ಚಿತ್ರ IANS)

ಬೆಂಗಳೂರು: ಮುಂಗಾರು ಮಾರುತಗಳು ರಾಜ್ಯಾದ್ಯಂತ ಆವರಿಸಿಕೊಂಡಿದ್ದು, ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಇಂದೂ ಕೂಡ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿದೆ.

ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗದಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಇರಲಿದೆ. ಉಳಿದಂತೆ ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು, ಕಲಬುರಗಿ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಬೆಳಗಾವಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ ಚದುರಿದ ಗಾಳಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದ್ದು, ಧಾರಾಕಾರ ಮಳೆಯ ಸಾಧ್ಯತೆ ಇದೆ. ಬಾಗಲಕೋಟೆ, ಕೊಪ್ಪಳ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಯಚೂರು, ಯಾದಗಿರಿ, ಕಲಬುರಗಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಬೀದರ್ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: ಬಾದಾಮಿಯಲ್ಲಿ ಧುಮ್ಮುಕ್ಕುತ್ತಿದೆ ಅಕ್ಕ ತಂಗಿಯರ ಫಾಲ್ಸ್ - WATCH VIDEO - Akka Thangi Falls

ರಾಜಧಾನಿಯಲ್ಲಿ ಗುಡುಗು ಸಹಿತ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ ದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದೆ.

ಮೀನುಗಾರರಿಗೆ ಎಚ್ಚರಿಕೆ: ಚಂಡಮಾರುತದಿಂದ ಗಂಟೆಗೆ 55 ಕಿ.ಮೀ ವರೆಗೆ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಕರ್ನಾಟಕ ಕರಾವಳಿಯ ಉದ್ದಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.

'ಸೈಕ್ಲೋನಿಕ್ ಪರಿಚಲನೆಯು ಮರಾಠವಾಡ ಮತ್ತು ನೆರೆಹೊರೆಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀ ಎತ್ತರದಲ್ಲಿದೆ. ಮಹಾರಾಷ್ಟ್ರದಿಂದ ಉತ್ತರ ಕೇರಳದವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿಮೀವರೆಗೆ ವ್ಯಾಪಿಸಿದೆ. ಈ ಕಾರಣಕ್ಕೆ ಕರ್ನಾಟಕ ರಾಜ್ಯಾದ್ಯಂತ ಮುಂಗಾರು ಮಳೆಯಾಗುತ್ತಿದೆ' ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎನ್.ಪುವಿಯರಸನ್ ಹೇಳಿದ್ದಾರೆ.

ಇದನ್ನೂ ಓದಿ: ಗೋಕರ್ಣದಲ್ಲಿ ಮಳೆ ಅವಾಂತರ: ಪರಶಿವನ ಗರ್ಭಗುಡಿಗೆ ನುಗ್ಗಿದ ನೀರು - Heavy Rain in Uttara Kannada

ಬೆಂಗಳೂರು: ಮುಂಗಾರು ಮಾರುತಗಳು ರಾಜ್ಯಾದ್ಯಂತ ಆವರಿಸಿಕೊಂಡಿದ್ದು, ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಇಂದೂ ಕೂಡ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿದೆ.

ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗದಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಇರಲಿದೆ. ಉಳಿದಂತೆ ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು, ಕಲಬುರಗಿ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಬೆಳಗಾವಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ ಚದುರಿದ ಗಾಳಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದ್ದು, ಧಾರಾಕಾರ ಮಳೆಯ ಸಾಧ್ಯತೆ ಇದೆ. ಬಾಗಲಕೋಟೆ, ಕೊಪ್ಪಳ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಯಚೂರು, ಯಾದಗಿರಿ, ಕಲಬುರಗಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಬೀದರ್ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: ಬಾದಾಮಿಯಲ್ಲಿ ಧುಮ್ಮುಕ್ಕುತ್ತಿದೆ ಅಕ್ಕ ತಂಗಿಯರ ಫಾಲ್ಸ್ - WATCH VIDEO - Akka Thangi Falls

ರಾಜಧಾನಿಯಲ್ಲಿ ಗುಡುಗು ಸಹಿತ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ ದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದೆ.

ಮೀನುಗಾರರಿಗೆ ಎಚ್ಚರಿಕೆ: ಚಂಡಮಾರುತದಿಂದ ಗಂಟೆಗೆ 55 ಕಿ.ಮೀ ವರೆಗೆ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಕರ್ನಾಟಕ ಕರಾವಳಿಯ ಉದ್ದಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.

'ಸೈಕ್ಲೋನಿಕ್ ಪರಿಚಲನೆಯು ಮರಾಠವಾಡ ಮತ್ತು ನೆರೆಹೊರೆಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀ ಎತ್ತರದಲ್ಲಿದೆ. ಮಹಾರಾಷ್ಟ್ರದಿಂದ ಉತ್ತರ ಕೇರಳದವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿಮೀವರೆಗೆ ವ್ಯಾಪಿಸಿದೆ. ಈ ಕಾರಣಕ್ಕೆ ಕರ್ನಾಟಕ ರಾಜ್ಯಾದ್ಯಂತ ಮುಂಗಾರು ಮಳೆಯಾಗುತ್ತಿದೆ' ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎನ್.ಪುವಿಯರಸನ್ ಹೇಳಿದ್ದಾರೆ.

ಇದನ್ನೂ ಓದಿ: ಗೋಕರ್ಣದಲ್ಲಿ ಮಳೆ ಅವಾಂತರ: ಪರಶಿವನ ಗರ್ಭಗುಡಿಗೆ ನುಗ್ಗಿದ ನೀರು - Heavy Rain in Uttara Kannada

ETV Bharat Logo

Copyright © 2024 Ushodaya Enterprises Pvt. Ltd., All Rights Reserved.