ETV Bharat / state

ಕ್ಷೀಣಿಸುತ್ತಿರುವ ಮುಂಗಾರು: ಅಕ್ಟೋಬರ್ 1ರಿಂದ ಹಿಂಗಾರು ಮಳೆ ಆರಂಭ - Karnataka Rain Forecast

author img

By ETV Bharat Karnataka Team

Published : Sep 10, 2024, 12:03 PM IST

ಈ ಬಾರಿಯ ಮುಂಗಾರು ಮುಗಿಯಲು 20 ದಿನಗಳಿವೆ. ರಾಜ್ಯದಲ್ಲಿ ಮಳೆ ಸ್ವಲ್ಪಮಟ್ಟಿಗೆ ಕ್ಷೀಣಿಸಿದೆ. ಅಕ್ಟೋಬರ್ 1ರಿಂದ ಹಿಂಗಾರು ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 1 ರಿಂದ ಹಿಂಗಾರು ಮಳೆ ಆರಂಭ
ಅಕ್ಟೋಬರ್ 1ರಿಂದ ಹಿಂಗಾರು ಮಳೆ ಆರಂಭ (ANI)

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕರಾವಳಿ, ಮಲೆನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಅಕ್ಟೋಬರ್ 1ರಿಂದ ಹಿಂಗಾರು ಮಳೆ: ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಸುರಿಯಲಿದೆ. ಈ ಬಾರಿ ಮುಂಗಾರು ಮುಗಿಯಲು 20 ದಿನಗಳಿವೆ. ಹಂತ ಹಂತವಾಗಿ ಈಗಾಗಲೇ ಮಳೆ ಸ್ವಲ್ಪಮಟ್ಟಿಗೆ ಕ್ಷೀಣಿಸುತ್ತಿದೆ. ಅಕ್ಟೋಬರ್ 1ರಿಂದ ರಾಜ್ಯದಲ್ಲಿ ಹಿಂಗಾರು (ಈಶಾನ್ಯ ಮಾನ್ಸೂನ್) ಆರಂಭವಾಗಲಿವೆ.

ಉತ್ತರ ಒಳನಾಡು ಪ್ರದೇಶದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ರೀತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಸೆ.17ರವರೆಗೆ ಇದೇ ರೀತಿಯ ವಾತಾವರಣ ಮುಂದುವರೆಯುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.

ರಾಜಧಾನಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಇದ್ದು, ಹೆಚ್​​ಎಎಲ್​​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: ಆಟೋದಡಿ ಸಿಲುಕಿದ್ದ ತಾಯಿಯ ರಕ್ಷಣೆ: ಧೈರ್ಯ, ಸಮಯ ಪ್ರಜ್ಞೆ ಮೆರೆದ ಬಾಲಕಿಗೆ ಸಿಎಂ ಶ್ಲಾಘನೆ - Siddaramaiah Appreciates Brave Girl

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕರಾವಳಿ, ಮಲೆನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಅಕ್ಟೋಬರ್ 1ರಿಂದ ಹಿಂಗಾರು ಮಳೆ: ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಸುರಿಯಲಿದೆ. ಈ ಬಾರಿ ಮುಂಗಾರು ಮುಗಿಯಲು 20 ದಿನಗಳಿವೆ. ಹಂತ ಹಂತವಾಗಿ ಈಗಾಗಲೇ ಮಳೆ ಸ್ವಲ್ಪಮಟ್ಟಿಗೆ ಕ್ಷೀಣಿಸುತ್ತಿದೆ. ಅಕ್ಟೋಬರ್ 1ರಿಂದ ರಾಜ್ಯದಲ್ಲಿ ಹಿಂಗಾರು (ಈಶಾನ್ಯ ಮಾನ್ಸೂನ್) ಆರಂಭವಾಗಲಿವೆ.

ಉತ್ತರ ಒಳನಾಡು ಪ್ರದೇಶದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ರೀತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಸೆ.17ರವರೆಗೆ ಇದೇ ರೀತಿಯ ವಾತಾವರಣ ಮುಂದುವರೆಯುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.

ರಾಜಧಾನಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಇದ್ದು, ಹೆಚ್​​ಎಎಲ್​​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: ಆಟೋದಡಿ ಸಿಲುಕಿದ್ದ ತಾಯಿಯ ರಕ್ಷಣೆ: ಧೈರ್ಯ, ಸಮಯ ಪ್ರಜ್ಞೆ ಮೆರೆದ ಬಾಲಕಿಗೆ ಸಿಎಂ ಶ್ಲಾಘನೆ - Siddaramaiah Appreciates Brave Girl

ETV Bharat Logo

Copyright © 2024 Ushodaya Enterprises Pvt. Ltd., All Rights Reserved.