ETV Bharat / state

ಕಸ್ತೂರಿ ರಂಗನ್ ವರದಿ: ಸಿಎಂ, ಸಚಿವ ಸಂಪುಟ, ಸರ್ವಪಕ್ಷ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ- ಸಚಿವ ಖಂಡ್ರೆ - Kasturi Rangan Report

author img

By ETV Bharat Karnataka Team

Published : Aug 5, 2024, 4:39 PM IST

ಕಸ್ತೂರಿ ರಂಗನ್ ವರದಿ ಕುರಿತು ಸಿಎಂ, ಸಚಿವ ಸಂಪುಟ ಮತ್ತು ಸರ್ವಪಕ್ಷ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.

MINISTER ISHWAR KHANDRE  DECISION AFTER DISCUSSION  ALL PARTY LEADERS  BENGALURU
ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಕೈಪಿಡಿ ಬಿಡುಗಡೆ (ETV Bharat)
ಸಚಿವ ಈಶ್ವರ್ ಖಂಡ್ರೆ ಹೇಳಿಕೆ (ETV Bharat)

ಬೆಂಗಳೂರು: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತೊಂದು ಅಧಿಸೂಚನೆ ಹೊರಡಿಸಿದೆ. ರಾಜ್ಯದ 20,668 ಚದರ ಕಿಲೋ ಮೀಟರ್​ಗೂ ಹೆಚ್ಚು ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಹೇಳಿದೆ. ರಾಜ್ಯದ 10 ಜಿಲ್ಲೆಗಳ ಅಂದರೆ ಚಾಮರಾಜನಗರ, ಕೊಡಗು, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಬೆಳಗಾವಿಯ 33 (ತಾಲ್ಲೂಕು ಪುನರ್‌ ವಿಂಗಡಣೆಯ ನಂತರ 39) ತಾಲ್ಲೂಕುಗಳ 1533 ಗ್ರಾಮಗಳನ್ನು ಗುರುತಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಈ ವರದಿ ತಿರಸ್ಕರಿಸುವ ತೀರ್ಮಾನ ಕೈಗೊಂಡಿದ್ದು, ಈಗ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಹಾಗೂ ಸಚಿವ ಸಂಪುಟದಲ್ಲಿ ಸಮಾಲೋಚಿಸಲಾಗುವುದು. ಬಳಿಕ ಸರ್ವ ಪಕ್ಷಗಳ ನಾಯಕರ ಅಭಿಪ್ರಾಯ ಪಡೆದು ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಕುರಿತಂತೆ ಎಲ್ಲ ಬಾಧ್ಯಸ್ಥರೊಂದಿಗೆ ಅಂದರೆ 1533 ಗ್ರಾಮಗಳ ವ್ಯಾಪ್ತಿಯ ಜನಪ್ರತಿನಿಧಿಗಳು, ನಿವಾಸಿಗಳೊಂದಿಗೆ ಚರ್ಚಿಸಿ, ಸಾಧಕ ಬಾಧಕ ಅರಿತು ವರದಿ ನೀಡಲು ನಿವೃತ್ತ ಐ.ಎಫ್.ಎಸ್. ಅಧಿಕಾರಿ ಸಂಜಯ್ ಕುಮಾರ್ ಸಮಿತಿ ರಚಿಸಿತ್ತು. ಆ ಸಮಿತಿ ಸದಸ್ಯರು ತಮ್ಮನ್ನು ಔಪಚಾರಿಕವಾಗಿ ಭೇಟಿ ಮಾಡಿದರು. ಆದರೆ ಯಾವುದೇ ಗ್ರಾಮಕ್ಕೆ ಭೇಟಿ ನೀಡಲಿಲ್ಲ. ಜನರೊಂದಿಗೆ ಮಾತುಕತೆ ನಡೆಸಲಿಲ್ಲ ಎಂದು ಹೇಳಿದರು.

2015ರ ನಂತರದ ಒತ್ತುವರಿ ಮಾತ್ರ ತೆರವು: ರಾಜ್ಯ ಸರ್ಕಾರ 2015ರಲ್ಲಿ ಒಂದು ಆದೇಶ ಮಾಡಿದ್ದು, ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿರುವವರ ಪಟ್ಟಾಭೂಮಿ ಮತ್ತು ಒತ್ತುವರಿ ಭೂಮಿ ಎರಡೂ ಸೇರಿ 3 ಎಕರೆ ಮೀರದಿದ್ದರೆ ಅಂತಹ ಒತ್ತುವರಿ ತೆರವು ಮಾಡುವುದಿಲ್ಲ ಎಂದು ಹೇಳಿದೆ. ಸರ್ಕಾರ ಈಗಲೂ ಅದಕ್ಕೆ ಬದ್ಧವಾಗಿದೆ. ಅದೇ ರೀತಿ ಅರಣ್ಯ ಹಕ್ಕು ಕಾಯಿದೆ ಅಡಿ ಈಗಾಗಲೇ ಅರ್ಜಿ ಸಲ್ಲಿಸಿರುವರ ಯಾವುದೇ ಮನೆ, ಜಮೀನು ತೆರವು ಮಾಡುವುದಿಲ್ಲ. ಆದರೆ 2015ರ ನಂತರದ ಹೊಸ ಒತ್ತುವರಿ ವಿಚಾರದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಅರಣ್ಯ ಸಮೃದ್ಧ ರಾಜ್ಯ ಕರ್ನಾಟಕ: ರಾಜ್ಯದಲ್ಲಿ ಒಟ್ಟು 43,382.76 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶ ಇದ್ದು, ಈ ಪೈಕಿ 11,318.358 ಚದರ ಕಿಲೋ ಮೀಟರ್ ಸಂರಕ್ಷಿತ ಅರಣ್ಯ ಪ್ರದೇಶವಿದೆ. ರಾಜ್ಯದಲ್ಲಿ 5 ರಾಷ್ಟ್ರೀಯ ಉದ್ಯಾನಗಳು, 36 ವನ್ಯಜೀವಿ ಅಭಯಾರಣ್ಯಗಳು, 19 ಸಂರಕ್ಷಿತ ಮೀಸಲು ಹಾಗೂ 1 ಸಮುದಾಯ ಮೀಸಲು ಅರಣ್ಯವಿದೆ. 5 ಹುಲಿ ಸಂರಕ್ಷಿತ ತಾಣಗಳಿವೆ ಎಂದು ಮಾಹಿತಿ ನೀಡಿದರು.

1972ರಲ್ಲಿ ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಮತ್ತು 1980ರಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿಗೆ ತಂದ ಪರಿಣಾಮವಾಗಿ ಇಂದು ದೇಶದಾದ್ಯಂತ ಸಾಕಷ್ಟು ಅರಣ್ಯ ಮತ್ತು ವನ್ಯಜೀವಿ ಉಳಿದಿದೆ ಎಂದರೆ ತಪ್ಪಾಗಲಾರದು ಎಂದರು. ಜನಸಂಖ್ಯೆ ಹೆಚ್ಚಾದಂತೆಲ್ಲಾ, ನಗರ, ಪಟ್ಟಣ ವಿಸ್ತರಣೆ ಆದಂತೆಲ್ಲಾ.. ಕಾಡಿನ ಅಂಚಿನಲ್ಲೂ ಜನವಸತಿ ಪ್ರದೇಶಗಳು ತಲೆ ಎತ್ತಿವೆ. ಇದರ ಪರಿಣಾಮವಾಗಿ ಮಾನವ ಮತ್ತು ವನ್ಯ ಜೀವಿ ಸಂಘರ್ಷದ ಪ್ರಕರಣಗಳೂ ಹೆಚ್ಚಾಗುತ್ತಿವೆ ಎಂದು ಹೇಳಿದರು.

ಮಾನವ ಮತ್ತು ವನ್ಯ ಜೀವಿ ಸಂಘರ್ಷ ಇಂದು ನಿನ್ನೆಯ ಸಮಸ್ಯೆ ಅಲ್ಲ. ಅನಾದಿಕಾಲದಿಂದಲೂ ಕಾಡಿನ ಪ್ರಾಣಿಗಳು ನಾಡಿಗೆ ಬಂದು ಉಪಟಳ ನೀಡುತ್ತಿದ್ದ ಬಗ್ಗೆ ರಾಮಾಯಣ, ಮಹಾಭಾರತದಲ್ಲೂ ಉಲ್ಲೇಖವಿದೆ. ಸತ್ಯ ಹರಿಶ್ಚಂದ್ರ ತಮಗೆ ಕಾಡು ಪ್ರಾಣಿಗಳಿಂದ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಪುರಜನರು ಮಾಡಿಕೊಂಡ ಮನವಿಯ ಹಿನ್ನೆಲೆಯಲ್ಲಿ ಬೇಟೆಗೆ ಹೋದ ಎಂದು ನಾವು ಓದಿದ್ದೇವೆ. ಆದರೆ ಈಗ ಯಾವುದೇ ವನ್ಯ ಜೀವಿ ಭೇಟಿಗೆ ಅವಕಾಶವಿಲ್ಲ. ಹೀಗಾಗಿ ಅವುಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಚಿವರು ವಿವರಿಸಿದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದೀರಾ ಎಂಬ ಮಾತುಗಳು ಕೇಳಿಬರುತ್ತಿವೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನನಗೆ ಈಗಾಗಲೇ ಸಚಿವ ಸ್ಥಾನ ಇದೆಯಲ್ಲಾ, ನಾನು ಖಾಲಿಯಾಗಿಲ್ಲ. ನನಗೆ ಮಾಹಿತಿ ಇಲ್ಲ ಎಂದರು.

ಇದೇ ಸಂದರ್ಭದಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಕೈಪಿಡಿ ಬಿಡುಗಡೆ ಮಾಡಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬ್ರಿಜೇಶ್ ದೀಕ್ಷಿತ್, ಸುಭಾಷ್ ಮಾಲ್ಖಡೆ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕುಮಾರ್ ಪುಷ್ಕರ್, ಮನೋಜ್ ರಾಜನ್ ಸೇರಿದಂತೆ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಮೊದಲು ನಿಮ್ಮ ಸಹೋದರನ ಲೆಕ್ಕ ಕೊಡಿ: ಹೆಚ್​ಡಿಕೆಗೆ ಡಿಸಿಎಂ ಡಿಕೆಶಿ ಟಾಂಗ್​ - DCM DK SHIVAKUMAR PRESS MEET

ಸಚಿವ ಈಶ್ವರ್ ಖಂಡ್ರೆ ಹೇಳಿಕೆ (ETV Bharat)

ಬೆಂಗಳೂರು: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತೊಂದು ಅಧಿಸೂಚನೆ ಹೊರಡಿಸಿದೆ. ರಾಜ್ಯದ 20,668 ಚದರ ಕಿಲೋ ಮೀಟರ್​ಗೂ ಹೆಚ್ಚು ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಹೇಳಿದೆ. ರಾಜ್ಯದ 10 ಜಿಲ್ಲೆಗಳ ಅಂದರೆ ಚಾಮರಾಜನಗರ, ಕೊಡಗು, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಬೆಳಗಾವಿಯ 33 (ತಾಲ್ಲೂಕು ಪುನರ್‌ ವಿಂಗಡಣೆಯ ನಂತರ 39) ತಾಲ್ಲೂಕುಗಳ 1533 ಗ್ರಾಮಗಳನ್ನು ಗುರುತಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಈ ವರದಿ ತಿರಸ್ಕರಿಸುವ ತೀರ್ಮಾನ ಕೈಗೊಂಡಿದ್ದು, ಈಗ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಹಾಗೂ ಸಚಿವ ಸಂಪುಟದಲ್ಲಿ ಸಮಾಲೋಚಿಸಲಾಗುವುದು. ಬಳಿಕ ಸರ್ವ ಪಕ್ಷಗಳ ನಾಯಕರ ಅಭಿಪ್ರಾಯ ಪಡೆದು ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಕುರಿತಂತೆ ಎಲ್ಲ ಬಾಧ್ಯಸ್ಥರೊಂದಿಗೆ ಅಂದರೆ 1533 ಗ್ರಾಮಗಳ ವ್ಯಾಪ್ತಿಯ ಜನಪ್ರತಿನಿಧಿಗಳು, ನಿವಾಸಿಗಳೊಂದಿಗೆ ಚರ್ಚಿಸಿ, ಸಾಧಕ ಬಾಧಕ ಅರಿತು ವರದಿ ನೀಡಲು ನಿವೃತ್ತ ಐ.ಎಫ್.ಎಸ್. ಅಧಿಕಾರಿ ಸಂಜಯ್ ಕುಮಾರ್ ಸಮಿತಿ ರಚಿಸಿತ್ತು. ಆ ಸಮಿತಿ ಸದಸ್ಯರು ತಮ್ಮನ್ನು ಔಪಚಾರಿಕವಾಗಿ ಭೇಟಿ ಮಾಡಿದರು. ಆದರೆ ಯಾವುದೇ ಗ್ರಾಮಕ್ಕೆ ಭೇಟಿ ನೀಡಲಿಲ್ಲ. ಜನರೊಂದಿಗೆ ಮಾತುಕತೆ ನಡೆಸಲಿಲ್ಲ ಎಂದು ಹೇಳಿದರು.

2015ರ ನಂತರದ ಒತ್ತುವರಿ ಮಾತ್ರ ತೆರವು: ರಾಜ್ಯ ಸರ್ಕಾರ 2015ರಲ್ಲಿ ಒಂದು ಆದೇಶ ಮಾಡಿದ್ದು, ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿರುವವರ ಪಟ್ಟಾಭೂಮಿ ಮತ್ತು ಒತ್ತುವರಿ ಭೂಮಿ ಎರಡೂ ಸೇರಿ 3 ಎಕರೆ ಮೀರದಿದ್ದರೆ ಅಂತಹ ಒತ್ತುವರಿ ತೆರವು ಮಾಡುವುದಿಲ್ಲ ಎಂದು ಹೇಳಿದೆ. ಸರ್ಕಾರ ಈಗಲೂ ಅದಕ್ಕೆ ಬದ್ಧವಾಗಿದೆ. ಅದೇ ರೀತಿ ಅರಣ್ಯ ಹಕ್ಕು ಕಾಯಿದೆ ಅಡಿ ಈಗಾಗಲೇ ಅರ್ಜಿ ಸಲ್ಲಿಸಿರುವರ ಯಾವುದೇ ಮನೆ, ಜಮೀನು ತೆರವು ಮಾಡುವುದಿಲ್ಲ. ಆದರೆ 2015ರ ನಂತರದ ಹೊಸ ಒತ್ತುವರಿ ವಿಚಾರದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಅರಣ್ಯ ಸಮೃದ್ಧ ರಾಜ್ಯ ಕರ್ನಾಟಕ: ರಾಜ್ಯದಲ್ಲಿ ಒಟ್ಟು 43,382.76 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶ ಇದ್ದು, ಈ ಪೈಕಿ 11,318.358 ಚದರ ಕಿಲೋ ಮೀಟರ್ ಸಂರಕ್ಷಿತ ಅರಣ್ಯ ಪ್ರದೇಶವಿದೆ. ರಾಜ್ಯದಲ್ಲಿ 5 ರಾಷ್ಟ್ರೀಯ ಉದ್ಯಾನಗಳು, 36 ವನ್ಯಜೀವಿ ಅಭಯಾರಣ್ಯಗಳು, 19 ಸಂರಕ್ಷಿತ ಮೀಸಲು ಹಾಗೂ 1 ಸಮುದಾಯ ಮೀಸಲು ಅರಣ್ಯವಿದೆ. 5 ಹುಲಿ ಸಂರಕ್ಷಿತ ತಾಣಗಳಿವೆ ಎಂದು ಮಾಹಿತಿ ನೀಡಿದರು.

1972ರಲ್ಲಿ ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಮತ್ತು 1980ರಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿಗೆ ತಂದ ಪರಿಣಾಮವಾಗಿ ಇಂದು ದೇಶದಾದ್ಯಂತ ಸಾಕಷ್ಟು ಅರಣ್ಯ ಮತ್ತು ವನ್ಯಜೀವಿ ಉಳಿದಿದೆ ಎಂದರೆ ತಪ್ಪಾಗಲಾರದು ಎಂದರು. ಜನಸಂಖ್ಯೆ ಹೆಚ್ಚಾದಂತೆಲ್ಲಾ, ನಗರ, ಪಟ್ಟಣ ವಿಸ್ತರಣೆ ಆದಂತೆಲ್ಲಾ.. ಕಾಡಿನ ಅಂಚಿನಲ್ಲೂ ಜನವಸತಿ ಪ್ರದೇಶಗಳು ತಲೆ ಎತ್ತಿವೆ. ಇದರ ಪರಿಣಾಮವಾಗಿ ಮಾನವ ಮತ್ತು ವನ್ಯ ಜೀವಿ ಸಂಘರ್ಷದ ಪ್ರಕರಣಗಳೂ ಹೆಚ್ಚಾಗುತ್ತಿವೆ ಎಂದು ಹೇಳಿದರು.

ಮಾನವ ಮತ್ತು ವನ್ಯ ಜೀವಿ ಸಂಘರ್ಷ ಇಂದು ನಿನ್ನೆಯ ಸಮಸ್ಯೆ ಅಲ್ಲ. ಅನಾದಿಕಾಲದಿಂದಲೂ ಕಾಡಿನ ಪ್ರಾಣಿಗಳು ನಾಡಿಗೆ ಬಂದು ಉಪಟಳ ನೀಡುತ್ತಿದ್ದ ಬಗ್ಗೆ ರಾಮಾಯಣ, ಮಹಾಭಾರತದಲ್ಲೂ ಉಲ್ಲೇಖವಿದೆ. ಸತ್ಯ ಹರಿಶ್ಚಂದ್ರ ತಮಗೆ ಕಾಡು ಪ್ರಾಣಿಗಳಿಂದ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಪುರಜನರು ಮಾಡಿಕೊಂಡ ಮನವಿಯ ಹಿನ್ನೆಲೆಯಲ್ಲಿ ಬೇಟೆಗೆ ಹೋದ ಎಂದು ನಾವು ಓದಿದ್ದೇವೆ. ಆದರೆ ಈಗ ಯಾವುದೇ ವನ್ಯ ಜೀವಿ ಭೇಟಿಗೆ ಅವಕಾಶವಿಲ್ಲ. ಹೀಗಾಗಿ ಅವುಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಚಿವರು ವಿವರಿಸಿದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದೀರಾ ಎಂಬ ಮಾತುಗಳು ಕೇಳಿಬರುತ್ತಿವೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನನಗೆ ಈಗಾಗಲೇ ಸಚಿವ ಸ್ಥಾನ ಇದೆಯಲ್ಲಾ, ನಾನು ಖಾಲಿಯಾಗಿಲ್ಲ. ನನಗೆ ಮಾಹಿತಿ ಇಲ್ಲ ಎಂದರು.

ಇದೇ ಸಂದರ್ಭದಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಕೈಪಿಡಿ ಬಿಡುಗಡೆ ಮಾಡಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬ್ರಿಜೇಶ್ ದೀಕ್ಷಿತ್, ಸುಭಾಷ್ ಮಾಲ್ಖಡೆ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕುಮಾರ್ ಪುಷ್ಕರ್, ಮನೋಜ್ ರಾಜನ್ ಸೇರಿದಂತೆ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಮೊದಲು ನಿಮ್ಮ ಸಹೋದರನ ಲೆಕ್ಕ ಕೊಡಿ: ಹೆಚ್​ಡಿಕೆಗೆ ಡಿಸಿಎಂ ಡಿಕೆಶಿ ಟಾಂಗ್​ - DCM DK SHIVAKUMAR PRESS MEET

ETV Bharat Logo

Copyright © 2024 Ushodaya Enterprises Pvt. Ltd., All Rights Reserved.