ETV Bharat / state

ದರ್ಶನ್‌ಗೆ ವಿಶೇಷ ಸೌಲಭ್ಯ ನೀಡಿದ್ದ ಜೈಲು ಅಧೀಕ್ಷಕ ಮಲ್ಲಿಕಾರ್ಜುನ ಸ್ವಾಮಿ ಅಮಾನತು ಎತ್ತಿಹಿಡಿದ ಕೆಎಟಿ

ನಟ ದರ್ಶನ್​ಗೆ ವಿಶೇಷ ಸೌಲಭ್ಯ ನೀಡಿದ್ದ ಜೈಲು ಅಧೀಕ್ಷಕ ಮಲ್ಲಿಕಾರ್ಜುನ ಸ್ವಾಮಿ ಅವರನ್ನು ಅಮಾನತುಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೆಎಟಿ ಎತ್ತಿಹಿಡಿದಿದೆ.

author img

By ETV Bharat Karnataka Team

Published : 4 hours ago

KAT
ಕೆಎಟಿ (ETV BHARAT)

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ವಿಶೇಷ ಸೌಲಭ್ಯ ಕಲ್ಪಿಸಿದ ಆರೋಪದ ಮೇಲೆ ಜೈಲು ಅಧೀಕ್ಷಕ ಹುದ್ದೆಯಿಂದ ಮಲ್ಲಿಕಾರ್ಜುನ ಬಿ.ಸ್ವಾಮಿ ಅವರನ್ನು ಅಮಾನತುಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ (ಕೆಎಟಿ) ಇಂದು ಎತ್ತಿ ಹಿಡಿದಿದೆ.

ಸರ್ಕಾರದ ಆದೇಶ ರದ್ದುಕೋರಿ ಮಲ್ಲಿಕಾರ್ಜುನ ಬಿ.ಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೆಎಟಿ ಅಧ್ಯಕ್ಷ ನ್ಯಾ.ಆರ್.ಬಿ.ಬೂದಿಹಾಳ್ ಮತ್ತು ಆಡಳಿತಾತ್ಮಕ ಸದಸ್ಯ ರಾಘವೇಂದ್ರ ಔರಾದ್ಕರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿತು.

ಪ್ರಕರಣದ ಹಿನ್ನೆಲೆ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ 2024ರ ಜೂನ್‌ನಲ್ಲಿ ದರ್ಶನ್, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದರು. ಕಾರಾಗೃಹದ ಆವರಣದಲ್ಲಿ ದರ್ಶನ್ ಒಂದು ಕೈಯಲ್ಲಿ ಸಿಗರೇಟ್ ಹಿಡಿದು, ಮತ್ತೊಂದು ಕೈಯಲ್ಲಿ ಟಿ ಕಪ್ ಹಿಡಿದುಕೊಂಡು, ಚೇರ್ ಮೇಲೆ ಆರಾಮಾಗಿ ಕುಳಿತು ಕುಖ್ಯಾತ ರೌಡಿ ವಿಲ್ಸನ್ ಗಾರ್ಡನ್ ನಾಗ, ಕುಳ್ಳಸೀನ ಹಾಗೂ ಸಹ ಆರೋಪಿಯಾದ ಆಪ್ತ ನಾಗರಾಜ್ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೋ 2024ರ ಆ.25ರಂದು ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಕಾರಾಗೃಹ ಇಲಾಖೆ ಮಹಾನಿರ್ದೇಶಕರು ಘಟನೆ ಆಂತರಿಕ ತನಿಖೆಗೆ ಆದೇಶಿಸಿದ್ದರು.

ಕಾರಾಗೃಹ ಇಲಾಖೆ ಹೆಚ್ಚುವರಿ ಮಹಾ ನಿರ್ದೇಶಕರ ನೇತೃತ್ವದ ತಂಡವು ಕಾರಾಗೃಹಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿತ್ತು. ಪ್ರಾಥಮಿಕ ತನಿಖೆಯಲ್ಲಿ ದರ್ಶನ್‌ಗೆ ವಿಶೇಷ ಸೌಲಭ್ಯ ಕಲ್ಪಿಸಿರುವುದು ಸಾಬೀತಾದ ಹಿನ್ನೆಲೆ ಅರ್ಜಿದಾರರಾಗಿರುವ ಕಾರಾಗೃಹದ ಅಧೀಕ್ಷಕ ಮಲ್ಲಿಕಾರ್ಜುನ ಬಿ.ಸ್ವಾಮಿ ಸೇರಿ 9 ಮಂದಿಯನ್ನು ಸೇವೆಯಿಂದ ಅಮಾತುಪಡಿಸಿ ಸರ್ಕಾರ ಆ.26ರಂದು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ ಸ್ವಾಮಿ ಕೆಎಟಿ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ್ದ ಅಪರ ಸರ್ಕಾರಿ ವಕೀಲ ಜಿ. ರಮೇಶ್ ನಾಯ್ಕ್, ನಟ ದರ್ಶನ್‌ಗೆ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ನೀಡಿದ ಆರೋಪದ ಮೇಲೆ ಅರ್ಜಿದಾರರನ್ನು ಸೇವೆಯಿಂದ ಅಮಾನತುಪಡಿಸಲಾಗಿದೆ. ದರ್ಶನ್ ಅವರ ಸೆಲ್‌ಗೆ ಉನ್ನತ ಭದ್ರತೆ ಕಲ್ಪಿಸಲಾಗಿತ್ತು. ಅದರ ಮೇಲುಸ್ತುವಾರಿಯನ್ನು ಅರ್ಜಿದಾರರಿಗೆ ನೀಡಲಾಗಿತ್ತು. ಆದರೆ, ದರ್ಶನ್‌ ಇತರೆ ಕೈದಿಗಳೊಂದಿಗೆ ಕಾರಾಗೃಹ ಆವರಣದಲ್ಲಿ ಕುಳಿತು ಕಾಫಿ ಕುಡಿಯುತ್ತಾ ಸಿಗರೇಟ್ ಸೇದುತ್ತಿದ್ದ ಚಿತ್ರಗಳು ಮಾಧ್ಯಮದಲ್ಲಿ ಪ್ರಸಾರವಾಗಿದ್ದವು. ಈ ಕುರಿತು ರಾಜ್ಯ ಕಾರಾಗೃಹಗಳ ಮಹಾ ನಿರ್ದೇಶಕರು ಪ್ರಾಥಮಿಕ ತನಿಖೆ ನಡೆಸಿದ್ದರು ಎಂದು ನ್ಯಾಯಪೀಠದ ಗಮನಕ್ಕೆ ತಂದಿದ್ದರು.

ಅಲ್ಲದೆ, ಕಾರಾಗೃಹದಲ್ಲಿ ದರ್ಶನ್‌ಗೆ ವಿವಿಧ ಸೌಲಭ್ಯ ಕಲ್ಪಿಸಿರುವುದು ಸಾಬೀತಾಯಿತು. ಇದರಿಂದ ಕರ್ನಾಟಕ ಕಾರಾಗೃಹ ಸುದಾರಣಾ ಕೈಪಿಡಿ-2021ರ ಅಧ್ಯಾಯ- 4 ಖಂಡಿಕೆ 11ರಲ್ಲಿ ನೀಡಲಾಗಿರುವ ಜೈಲು ಅಧಿಕಾರಿಗಳಿಗೆ ನೀಡಲಾಗಿದ್ದ ಕರ್ತವ್ಯಗಳನ್ನು ಅರ್ಜಿದಾರರು ಉಲ್ಲಂಘಿಸಿರುವುದು ಪ್ರಾಥಮಿಕ ತನಿಖಾ ವರದಿಯಲ್ಲಿ ಬಯಲಾಗಿತ್ತು.

ಅರ್ಜಿದಾರರು ಜೈಲಿನ ಮೇಲುಸ್ತುವಾರಿ ಹೊಣೆಯನ್ನು ಸಮರ್ಪಕವಾಗಿ ನಿಭಾಯಿಸಿಲ್ಲ. ಇದರಿಂದ ದುರ್ನಡತೆ ಮತ್ತು ಕರ್ತವ್ಯ ಲೋಪ ಆರೋಪದ ಮೇಲೆ ಅರ್ಜಿದಾರರು ಸೇರಿದಂತೆ ಜೈಲಿನ 9 ಅಧಿಕಾರಿಗಳನ್ನು ಅಮಾನತುಪಡಿಸಲಾಗಿತ್ತು. ಹಾಗಾಗಿ, ಸರ್ಕಾರದ ಆದೇಶ ಸೂಕ್ತವಾಗಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ನಟ ದರ್ಶನ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ವಿಶೇಷ ಸೌಲಭ್ಯ ಕಲ್ಪಿಸಿದ ಆರೋಪದ ಮೇಲೆ ಜೈಲು ಅಧೀಕ್ಷಕ ಹುದ್ದೆಯಿಂದ ಮಲ್ಲಿಕಾರ್ಜುನ ಬಿ.ಸ್ವಾಮಿ ಅವರನ್ನು ಅಮಾನತುಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ (ಕೆಎಟಿ) ಇಂದು ಎತ್ತಿ ಹಿಡಿದಿದೆ.

ಸರ್ಕಾರದ ಆದೇಶ ರದ್ದುಕೋರಿ ಮಲ್ಲಿಕಾರ್ಜುನ ಬಿ.ಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೆಎಟಿ ಅಧ್ಯಕ್ಷ ನ್ಯಾ.ಆರ್.ಬಿ.ಬೂದಿಹಾಳ್ ಮತ್ತು ಆಡಳಿತಾತ್ಮಕ ಸದಸ್ಯ ರಾಘವೇಂದ್ರ ಔರಾದ್ಕರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿತು.

ಪ್ರಕರಣದ ಹಿನ್ನೆಲೆ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ 2024ರ ಜೂನ್‌ನಲ್ಲಿ ದರ್ಶನ್, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದರು. ಕಾರಾಗೃಹದ ಆವರಣದಲ್ಲಿ ದರ್ಶನ್ ಒಂದು ಕೈಯಲ್ಲಿ ಸಿಗರೇಟ್ ಹಿಡಿದು, ಮತ್ತೊಂದು ಕೈಯಲ್ಲಿ ಟಿ ಕಪ್ ಹಿಡಿದುಕೊಂಡು, ಚೇರ್ ಮೇಲೆ ಆರಾಮಾಗಿ ಕುಳಿತು ಕುಖ್ಯಾತ ರೌಡಿ ವಿಲ್ಸನ್ ಗಾರ್ಡನ್ ನಾಗ, ಕುಳ್ಳಸೀನ ಹಾಗೂ ಸಹ ಆರೋಪಿಯಾದ ಆಪ್ತ ನಾಗರಾಜ್ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೋ 2024ರ ಆ.25ರಂದು ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಕಾರಾಗೃಹ ಇಲಾಖೆ ಮಹಾನಿರ್ದೇಶಕರು ಘಟನೆ ಆಂತರಿಕ ತನಿಖೆಗೆ ಆದೇಶಿಸಿದ್ದರು.

ಕಾರಾಗೃಹ ಇಲಾಖೆ ಹೆಚ್ಚುವರಿ ಮಹಾ ನಿರ್ದೇಶಕರ ನೇತೃತ್ವದ ತಂಡವು ಕಾರಾಗೃಹಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿತ್ತು. ಪ್ರಾಥಮಿಕ ತನಿಖೆಯಲ್ಲಿ ದರ್ಶನ್‌ಗೆ ವಿಶೇಷ ಸೌಲಭ್ಯ ಕಲ್ಪಿಸಿರುವುದು ಸಾಬೀತಾದ ಹಿನ್ನೆಲೆ ಅರ್ಜಿದಾರರಾಗಿರುವ ಕಾರಾಗೃಹದ ಅಧೀಕ್ಷಕ ಮಲ್ಲಿಕಾರ್ಜುನ ಬಿ.ಸ್ವಾಮಿ ಸೇರಿ 9 ಮಂದಿಯನ್ನು ಸೇವೆಯಿಂದ ಅಮಾತುಪಡಿಸಿ ಸರ್ಕಾರ ಆ.26ರಂದು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ ಸ್ವಾಮಿ ಕೆಎಟಿ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ್ದ ಅಪರ ಸರ್ಕಾರಿ ವಕೀಲ ಜಿ. ರಮೇಶ್ ನಾಯ್ಕ್, ನಟ ದರ್ಶನ್‌ಗೆ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ನೀಡಿದ ಆರೋಪದ ಮೇಲೆ ಅರ್ಜಿದಾರರನ್ನು ಸೇವೆಯಿಂದ ಅಮಾನತುಪಡಿಸಲಾಗಿದೆ. ದರ್ಶನ್ ಅವರ ಸೆಲ್‌ಗೆ ಉನ್ನತ ಭದ್ರತೆ ಕಲ್ಪಿಸಲಾಗಿತ್ತು. ಅದರ ಮೇಲುಸ್ತುವಾರಿಯನ್ನು ಅರ್ಜಿದಾರರಿಗೆ ನೀಡಲಾಗಿತ್ತು. ಆದರೆ, ದರ್ಶನ್‌ ಇತರೆ ಕೈದಿಗಳೊಂದಿಗೆ ಕಾರಾಗೃಹ ಆವರಣದಲ್ಲಿ ಕುಳಿತು ಕಾಫಿ ಕುಡಿಯುತ್ತಾ ಸಿಗರೇಟ್ ಸೇದುತ್ತಿದ್ದ ಚಿತ್ರಗಳು ಮಾಧ್ಯಮದಲ್ಲಿ ಪ್ರಸಾರವಾಗಿದ್ದವು. ಈ ಕುರಿತು ರಾಜ್ಯ ಕಾರಾಗೃಹಗಳ ಮಹಾ ನಿರ್ದೇಶಕರು ಪ್ರಾಥಮಿಕ ತನಿಖೆ ನಡೆಸಿದ್ದರು ಎಂದು ನ್ಯಾಯಪೀಠದ ಗಮನಕ್ಕೆ ತಂದಿದ್ದರು.

ಅಲ್ಲದೆ, ಕಾರಾಗೃಹದಲ್ಲಿ ದರ್ಶನ್‌ಗೆ ವಿವಿಧ ಸೌಲಭ್ಯ ಕಲ್ಪಿಸಿರುವುದು ಸಾಬೀತಾಯಿತು. ಇದರಿಂದ ಕರ್ನಾಟಕ ಕಾರಾಗೃಹ ಸುದಾರಣಾ ಕೈಪಿಡಿ-2021ರ ಅಧ್ಯಾಯ- 4 ಖಂಡಿಕೆ 11ರಲ್ಲಿ ನೀಡಲಾಗಿರುವ ಜೈಲು ಅಧಿಕಾರಿಗಳಿಗೆ ನೀಡಲಾಗಿದ್ದ ಕರ್ತವ್ಯಗಳನ್ನು ಅರ್ಜಿದಾರರು ಉಲ್ಲಂಘಿಸಿರುವುದು ಪ್ರಾಥಮಿಕ ತನಿಖಾ ವರದಿಯಲ್ಲಿ ಬಯಲಾಗಿತ್ತು.

ಅರ್ಜಿದಾರರು ಜೈಲಿನ ಮೇಲುಸ್ತುವಾರಿ ಹೊಣೆಯನ್ನು ಸಮರ್ಪಕವಾಗಿ ನಿಭಾಯಿಸಿಲ್ಲ. ಇದರಿಂದ ದುರ್ನಡತೆ ಮತ್ತು ಕರ್ತವ್ಯ ಲೋಪ ಆರೋಪದ ಮೇಲೆ ಅರ್ಜಿದಾರರು ಸೇರಿದಂತೆ ಜೈಲಿನ 9 ಅಧಿಕಾರಿಗಳನ್ನು ಅಮಾನತುಪಡಿಸಲಾಗಿತ್ತು. ಹಾಗಾಗಿ, ಸರ್ಕಾರದ ಆದೇಶ ಸೂಕ್ತವಾಗಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ನಟ ದರ್ಶನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.