ETV Bharat / state

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ: ಖಾ‌ನಾಪುರ ತಹಶೀಲ್ದಾರ್ ಅಮಾನತು - TAHSILDAR SUSPENDED

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಖಾನಾಪುರದ ತಹಶೀಲ್ದಾರ್‌ರನ್ನು ಅಮಾನತುಗೊಳಿಸಲಾಗಿದೆ.

TAHSILDAR SUSPENDED
ಖಾ‌ನಾಪುರ ತಹಶೀಲ್ದಾರ್ ಅಮಾನತು (ETV Bharat)
author img

By ETV Bharat Karnataka Team

Published : Feb 10, 2025, 9:27 PM IST

ಬೆಳಗಾವಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಖಾನಾಪುರದ ತಹಶೀಲ್ದಾರ್‌ರನ್ನು ಅಮಾನತುಗೊಳಿಸಲಾಗಿದೆ. ಪ್ರಕಾಶ್​ ಗಾಯಕವಾಡ ಅಮಾನತಾದ ತಹಶೀಲ್ದಾರ್. ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷ್ ಹೆಚ್.​ಜಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಜ.7ರಂದು ಪ್ರಕಾಶ್​ ಗಾಯಕವಾಡ ವಿರುದ್ಧ ಬೆಳಗಾವಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜ.8ರಂದು ಇವರ ಬೆಳಗಾವಿ ಮನೆ, ಖಾನಾಪುರದ ಬಾಡಿಗೆ ಮನೆ ಮತ್ತು ತಹಶೀಲ್ದಾರ್ ಕಚೇರಿ, ನಿಪ್ಪಾಣಿ ಮನೆ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಪ್ರಕಾಶ್, ಬಲ್ಲ ಮೂಲಗಳ ಆದಾಯಕ್ಕಿಂತ 4,09,82,000 ರೂ. ಹೆಚ್ಚಿನ ಆದಾಯ ಹೊಂದಿರುವುದು ದೃಢಪಟ್ಟಿತ್ತು.

Khanapur Tahsildar suspended for allegedly amassing assets beyond his income
ಅಮಾನತಾದ ಪ್ರಕಾಶ್​ ಗಾಯಕವಾಡ (ETV Bharat)

ಪ್ರಕಾಶ್​ ಸ್ಥಾನಕ್ಕೆ ರವೀಂದ್ರ ಹಾದಿಮನಿ ಅವರನ್ನು ನೇಮಿಸಲಾಗಿದ್ದು, ಖಾನಾಪುರದ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಮಾನತು ಆದೇಶ ಹೊರಬೀಳುತ್ತಿದ್ದಂತೆ ಪ್ರಕಾಶ್‌ ತಮ್ಮ ಕಚೇರಿಯಿಂದ ಸರ್ಕಾರಿ ವಾಹನದಲ್ಲಿ ಮನೆಯತ್ತ ತೆರಳಿದರು.

ಇದನ್ನೂ ಓದಿ: ಹಾವೇರಿ : ಬಾಲಕನ ಕೆನ್ನೆಯ ಗಾಯಕ್ಕೆ ಫೆವಿಕ್ವಿಕ್ ಹಚ್ಚಿದ ನರ್ಸ್​ ಅಮಾನತು - NURSE SUSPEND

ಬೆಳಗಾವಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಖಾನಾಪುರದ ತಹಶೀಲ್ದಾರ್‌ರನ್ನು ಅಮಾನತುಗೊಳಿಸಲಾಗಿದೆ. ಪ್ರಕಾಶ್​ ಗಾಯಕವಾಡ ಅಮಾನತಾದ ತಹಶೀಲ್ದಾರ್. ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷ್ ಹೆಚ್.​ಜಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಜ.7ರಂದು ಪ್ರಕಾಶ್​ ಗಾಯಕವಾಡ ವಿರುದ್ಧ ಬೆಳಗಾವಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜ.8ರಂದು ಇವರ ಬೆಳಗಾವಿ ಮನೆ, ಖಾನಾಪುರದ ಬಾಡಿಗೆ ಮನೆ ಮತ್ತು ತಹಶೀಲ್ದಾರ್ ಕಚೇರಿ, ನಿಪ್ಪಾಣಿ ಮನೆ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಪ್ರಕಾಶ್, ಬಲ್ಲ ಮೂಲಗಳ ಆದಾಯಕ್ಕಿಂತ 4,09,82,000 ರೂ. ಹೆಚ್ಚಿನ ಆದಾಯ ಹೊಂದಿರುವುದು ದೃಢಪಟ್ಟಿತ್ತು.

Khanapur Tahsildar suspended for allegedly amassing assets beyond his income
ಅಮಾನತಾದ ಪ್ರಕಾಶ್​ ಗಾಯಕವಾಡ (ETV Bharat)

ಪ್ರಕಾಶ್​ ಸ್ಥಾನಕ್ಕೆ ರವೀಂದ್ರ ಹಾದಿಮನಿ ಅವರನ್ನು ನೇಮಿಸಲಾಗಿದ್ದು, ಖಾನಾಪುರದ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಮಾನತು ಆದೇಶ ಹೊರಬೀಳುತ್ತಿದ್ದಂತೆ ಪ್ರಕಾಶ್‌ ತಮ್ಮ ಕಚೇರಿಯಿಂದ ಸರ್ಕಾರಿ ವಾಹನದಲ್ಲಿ ಮನೆಯತ್ತ ತೆರಳಿದರು.

ಇದನ್ನೂ ಓದಿ: ಹಾವೇರಿ : ಬಾಲಕನ ಕೆನ್ನೆಯ ಗಾಯಕ್ಕೆ ಫೆವಿಕ್ವಿಕ್ ಹಚ್ಚಿದ ನರ್ಸ್​ ಅಮಾನತು - NURSE SUSPEND

ETV Bharat Logo

Copyright © 2025 Ushodaya Enterprises Pvt. Ltd., All Rights Reserved.