ETV Bharat / state

ಸಿಎಂ ಆಗಿದ್ದಾಗ ಹೆಚ್​ಡಿಕೆ, ಯಡಿಯೂರಪ್ಪರಿಂದ ಅಕ್ರಮ ಡಿನೋಟಿಫಿಕೇಷನ್ ಆಗಿದೆ: ಸಚಿವ ಕೃಷ್ಣಬೈರೇಗೌಡ, ಗುಂಡೂರಾವ್ ಆರೋಪ - ALLEGATION AGAINST HDK AND BSY

author img

By ETV Bharat Karnataka Team

Published : 7 hours ago

Updated : 7 hours ago

ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರ ವಿರುದ್ಧ ಎಫ್​ಐಆರ್​ ದಾಖಲಾಗಿ 9 ವರ್ಷಗಳು ಕಳೆದಿವೆ. ಹೈಕೋರ್ಟ್​ ತನಿಖೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನೆ ಕುಳಿತಿದೆ? ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದ್ದಾರೆ.

Minister Krishna Byregowda
ಸಚಿವ ಕೃಷ್ಣ ಬೈರೇಗೌಡ (ETV Bharat)

ಬೆಂಗಳೂರು: "ಹೆಚ್.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಅಕ್ರಮ ಡಿನೋಟಿಫಿಕೇಷನ್ ಆಗಿದೆ" ಎಂದು ದಾಖಲೆ ಬಿಡುಗಡೆ ಮಾಡುವ ಮೂಲಕ ಸಚಿವರಾದ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್ ಅವರು ಆರೋಪ ಮಾಡಿದರು.

ಕೃಷ್ಣ ಬೈರೇಗೌಡ ಸುದ್ದಿಗೋಷ್ಠಿ (ETV Bharat)

ಕೆಪಿಸಿಸಿ ಕಚೇರಿಯಲ್ಲಿ ಇಂದು ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, "ರಾಜ್ಯಪಾಲರು ಕೆಲವು ಪ್ರಕರಣಗಳಲ್ಲಿ ವಿಳಂಬ ಮಾಡುತ್ತಿದ್ದಾರೆ. ತಪ್ಪು ಮಾಡಿದವರಿಗೆ ಅವರು ರಕ್ಷಣೆಗೆ ನಿಂತಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಅಕ್ರಮ ಒಂದೆರಡಲ್ಲ, ಹಲವಾರು ಇವೆ. ಈಗ ಮೊತ್ತೊಂದು ದಾಖಲೆ ಇದೆ. ಆಸ್ತಿ ಇರುವುದು ಮಠದಹಳ್ಳಿ ಗಂಗೇನಹಳ್ಳಿ ಬಡಾವಣೆ 7/1ಬಿ, ಸಿ ಹಾಗೂ ಡಿ ಸರ್ವೆ ನಂಬರ್​ನಲ್ಲಿ 1.11 ಎಕರೆ ಜಮೀನು ಬಿಡಿಎಗೆ ಭೂಸ್ವಾಧೀನಗೊಂಡಿದ್ದು, ಇದನ್ನು ಡಿನೋಟಿಫೈ ಮಾಡಬೇಕೆಂದು ದಾರಿಯಲ್ಲಿ ಹೋಗುವ ಯಾರೋ ದಾಸಯ್ಯ ಜಮೀನಿಗೆ ಸಂಬಂಧವೇ ಇಲ್ಲದ ರಾಜಶೇಖರಯ್ಯ ಅನ್ನುವವರು ಅರ್ಜಿ ಕೊಡ್ತಾರೆ. 2007 ರಲ್ಲಿ ಅರ್ಜಿ ಬಂದ ಅದೇ ದಿನ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ಡಿನೋಟಿಫೈ ಮಾಡಲು ಸೂಚಿಸುತ್ತಾರೆ" ಎಂದು ಗಂಭೀರ ಆರೋಪ ಮಾಡಿದರು.

"ಜಮೀನಿನ ಅಸಲಿ ಮಾಲೀಕರು 21 ಜನರಿದ್ದಾರೆ. 30 ವರ್ಷಗಳ ಹಿಂದೆಯೇ ಈ ಜಮೀನು ಭೂಸ್ವಾಧೀನ ಆಗಿತ್ತು. ಯಾವುದು ಭೂಸ್ವಾಧೀನ ಆಗಿತ್ತೋ ಆ ಜಮೀನಿಗೆ ಕುಮಾರಸ್ವಾಮಿ ಅತ್ತೆ ಹೆಸರಿಗೆ ಜಿಪಿಎ ಮಾಡಿಕೊಳ್ಳುತ್ತಾರೆ. ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಡಿನೋಟಿಫೈ ಮಾಡಲು ಬರುವುದಿಲ್ಲ ಎಂದು ಫೈಲ್ ತಿರಸ್ಕಾರ ಮಾಡುತ್ತಾರೆ. ಆದರೂ ಅಂದಿನ ಸಿಎಂ ಕುಮಾರಸ್ವಾಮಿ ಡಿನೋಟಿಫೈ ಮಾಡುವಂತೆ ಸೂಚಿಸುತ್ತಾರೆ. ಬಳಿಕ ಸರ್ಕಾರ ಬದಲಾಗಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ. ಆಗ ಮತ್ತೆ ಅದೇ ಫೈಲ್ ಸಿಎಂ ಯಡಿಯೂರಪ್ಪ ಕೈಗೆ ಬರುತ್ತದೆ. ಕಾನೂನು ಗಾಳಿಗೆ ತೂರಿ ಯಡಿಯೂರಪ್ಪ 2009-10 ರಲ್ಲಿ ಭೂಸ್ವಾಧೀನದಿಂದ ಕೈ ಬಿಡುತ್ತಾರೆ" ಎಂದು ಹೇಳಿದರು.

"ಡಿನೋಟಿಫಿಕೇಷನ್ ಆದ ಒಂದೇ ತಿಂಗಳಿಗೆ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವರಿಗೆ ಶುದ್ಧ ಕ್ರಯಪತ್ರ ಆಗುತ್ತದೆ. ಹೀಗೆ ಅಕ್ರಮವಾಗಿ ಡಿನೋಟಿಫೈ ಆದ ಜಮೀನು ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದೆ. ಇದು ವ್ಯವಸ್ಥಿತ ವಂಚನೆ ಅಲ್ಲವೇ? ಇದು ನೇರವಾಗಿ ಕುಮಾರಸ್ವಾಮಿ ಆದೇಶದಿಂದಲೇ ಆಗಿದೆ. ಕುಮಾರಸ್ವಾಮಿ ಪುಟಪ್​ ಮಾಡಿದ ಫೈಲ್​ಗೆ ಯಡಿಯೂರಪ್ಪ ಸಹಿ ಮಾಡಿದ್ದಾರೆ. ಸಾರ್ವಜನಿಕ ಸ್ವತ್ತನ್ನು ತಂತ್ರಗಾರಿಕೆ ಮಾಡಿ ಲೂಟಿ ಮಾಡಿದ್ದಾರೆ" ಎಂದು ದೂರಿದರು.

"ಲೋಕಾಯುಕ್ತದವರು ಈ ಪ್ರಕರಣ ತನಿಖೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪ್ರಕರಣದ ತನಿಖೆಯನ್ನು ಶೀಘ್ರ ಮಾಡಬೇಕು. ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರ ವಿರುದ್ಧ ಎಫ್​​ಐಆರ್​ ದಾಖಲಾಗಿ 9 ವರ್ಷಗಳಾಗಿವೆ. ಹೈಕೋರ್ಟ್ ತನಿಖೆಗೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನೇ ಇದೆ?" ಎಂದು ಪ್ರಶ್ನಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, "ಇದು ಹಳೆಯ ಕೇಸ್ ಅಲ್ಲ, ಹಾಲಿ ಪ್ರಕರಣ. ನಾವೇನೋ ಸೃಷ್ಟಿ ಮಾಡಿ ಹುಡುಕಾಡಿ ದಾಖಲೆ ಮಾಡಿಲ್ಲ. ಯಡಿಯೂರಪ್ಪಗೆ ಹೈಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ನಿಮ್ಮ ಬಾಮೈದಂಗೆ ಹೇಗೆ ಜಮೀನು ಸಿಕ್ತು? ಅದಕ್ಕೆ ಕುಮಾರಸ್ವಾಮಿ ಉತ್ತರ ನೀಡಬೇಕು. 60 ಲಕ್ಷಕ್ಕೆ ಹೇಗೆ ಕುಮಾರಸ್ವಾಮಿ ಅತ್ತೆ ಜಮೀನು ಖರೀದಿ ಮಾಡಿದ್ರಿ? ಜಮೀನು ನಿಮ್ಮ ಬಾಮೈದನ ಹೆಸರಲ್ಲಿ ಇದೆ, ಹೇಗೆ?" ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಅತ್ಯಾಚಾರ ಆರೋಪ: ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಪ್ರಕರಣ, ಪೊಲೀಸರಿಂದ ಸ್ಥಳ ಮಹಜರು - Case Against Munirathna

ಬೆಂಗಳೂರು: "ಹೆಚ್.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಅಕ್ರಮ ಡಿನೋಟಿಫಿಕೇಷನ್ ಆಗಿದೆ" ಎಂದು ದಾಖಲೆ ಬಿಡುಗಡೆ ಮಾಡುವ ಮೂಲಕ ಸಚಿವರಾದ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್ ಅವರು ಆರೋಪ ಮಾಡಿದರು.

ಕೃಷ್ಣ ಬೈರೇಗೌಡ ಸುದ್ದಿಗೋಷ್ಠಿ (ETV Bharat)

ಕೆಪಿಸಿಸಿ ಕಚೇರಿಯಲ್ಲಿ ಇಂದು ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, "ರಾಜ್ಯಪಾಲರು ಕೆಲವು ಪ್ರಕರಣಗಳಲ್ಲಿ ವಿಳಂಬ ಮಾಡುತ್ತಿದ್ದಾರೆ. ತಪ್ಪು ಮಾಡಿದವರಿಗೆ ಅವರು ರಕ್ಷಣೆಗೆ ನಿಂತಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಅಕ್ರಮ ಒಂದೆರಡಲ್ಲ, ಹಲವಾರು ಇವೆ. ಈಗ ಮೊತ್ತೊಂದು ದಾಖಲೆ ಇದೆ. ಆಸ್ತಿ ಇರುವುದು ಮಠದಹಳ್ಳಿ ಗಂಗೇನಹಳ್ಳಿ ಬಡಾವಣೆ 7/1ಬಿ, ಸಿ ಹಾಗೂ ಡಿ ಸರ್ವೆ ನಂಬರ್​ನಲ್ಲಿ 1.11 ಎಕರೆ ಜಮೀನು ಬಿಡಿಎಗೆ ಭೂಸ್ವಾಧೀನಗೊಂಡಿದ್ದು, ಇದನ್ನು ಡಿನೋಟಿಫೈ ಮಾಡಬೇಕೆಂದು ದಾರಿಯಲ್ಲಿ ಹೋಗುವ ಯಾರೋ ದಾಸಯ್ಯ ಜಮೀನಿಗೆ ಸಂಬಂಧವೇ ಇಲ್ಲದ ರಾಜಶೇಖರಯ್ಯ ಅನ್ನುವವರು ಅರ್ಜಿ ಕೊಡ್ತಾರೆ. 2007 ರಲ್ಲಿ ಅರ್ಜಿ ಬಂದ ಅದೇ ದಿನ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ಡಿನೋಟಿಫೈ ಮಾಡಲು ಸೂಚಿಸುತ್ತಾರೆ" ಎಂದು ಗಂಭೀರ ಆರೋಪ ಮಾಡಿದರು.

"ಜಮೀನಿನ ಅಸಲಿ ಮಾಲೀಕರು 21 ಜನರಿದ್ದಾರೆ. 30 ವರ್ಷಗಳ ಹಿಂದೆಯೇ ಈ ಜಮೀನು ಭೂಸ್ವಾಧೀನ ಆಗಿತ್ತು. ಯಾವುದು ಭೂಸ್ವಾಧೀನ ಆಗಿತ್ತೋ ಆ ಜಮೀನಿಗೆ ಕುಮಾರಸ್ವಾಮಿ ಅತ್ತೆ ಹೆಸರಿಗೆ ಜಿಪಿಎ ಮಾಡಿಕೊಳ್ಳುತ್ತಾರೆ. ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಡಿನೋಟಿಫೈ ಮಾಡಲು ಬರುವುದಿಲ್ಲ ಎಂದು ಫೈಲ್ ತಿರಸ್ಕಾರ ಮಾಡುತ್ತಾರೆ. ಆದರೂ ಅಂದಿನ ಸಿಎಂ ಕುಮಾರಸ್ವಾಮಿ ಡಿನೋಟಿಫೈ ಮಾಡುವಂತೆ ಸೂಚಿಸುತ್ತಾರೆ. ಬಳಿಕ ಸರ್ಕಾರ ಬದಲಾಗಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ. ಆಗ ಮತ್ತೆ ಅದೇ ಫೈಲ್ ಸಿಎಂ ಯಡಿಯೂರಪ್ಪ ಕೈಗೆ ಬರುತ್ತದೆ. ಕಾನೂನು ಗಾಳಿಗೆ ತೂರಿ ಯಡಿಯೂರಪ್ಪ 2009-10 ರಲ್ಲಿ ಭೂಸ್ವಾಧೀನದಿಂದ ಕೈ ಬಿಡುತ್ತಾರೆ" ಎಂದು ಹೇಳಿದರು.

"ಡಿನೋಟಿಫಿಕೇಷನ್ ಆದ ಒಂದೇ ತಿಂಗಳಿಗೆ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವರಿಗೆ ಶುದ್ಧ ಕ್ರಯಪತ್ರ ಆಗುತ್ತದೆ. ಹೀಗೆ ಅಕ್ರಮವಾಗಿ ಡಿನೋಟಿಫೈ ಆದ ಜಮೀನು ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದೆ. ಇದು ವ್ಯವಸ್ಥಿತ ವಂಚನೆ ಅಲ್ಲವೇ? ಇದು ನೇರವಾಗಿ ಕುಮಾರಸ್ವಾಮಿ ಆದೇಶದಿಂದಲೇ ಆಗಿದೆ. ಕುಮಾರಸ್ವಾಮಿ ಪುಟಪ್​ ಮಾಡಿದ ಫೈಲ್​ಗೆ ಯಡಿಯೂರಪ್ಪ ಸಹಿ ಮಾಡಿದ್ದಾರೆ. ಸಾರ್ವಜನಿಕ ಸ್ವತ್ತನ್ನು ತಂತ್ರಗಾರಿಕೆ ಮಾಡಿ ಲೂಟಿ ಮಾಡಿದ್ದಾರೆ" ಎಂದು ದೂರಿದರು.

"ಲೋಕಾಯುಕ್ತದವರು ಈ ಪ್ರಕರಣ ತನಿಖೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪ್ರಕರಣದ ತನಿಖೆಯನ್ನು ಶೀಘ್ರ ಮಾಡಬೇಕು. ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರ ವಿರುದ್ಧ ಎಫ್​​ಐಆರ್​ ದಾಖಲಾಗಿ 9 ವರ್ಷಗಳಾಗಿವೆ. ಹೈಕೋರ್ಟ್ ತನಿಖೆಗೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನೇ ಇದೆ?" ಎಂದು ಪ್ರಶ್ನಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, "ಇದು ಹಳೆಯ ಕೇಸ್ ಅಲ್ಲ, ಹಾಲಿ ಪ್ರಕರಣ. ನಾವೇನೋ ಸೃಷ್ಟಿ ಮಾಡಿ ಹುಡುಕಾಡಿ ದಾಖಲೆ ಮಾಡಿಲ್ಲ. ಯಡಿಯೂರಪ್ಪಗೆ ಹೈಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ನಿಮ್ಮ ಬಾಮೈದಂಗೆ ಹೇಗೆ ಜಮೀನು ಸಿಕ್ತು? ಅದಕ್ಕೆ ಕುಮಾರಸ್ವಾಮಿ ಉತ್ತರ ನೀಡಬೇಕು. 60 ಲಕ್ಷಕ್ಕೆ ಹೇಗೆ ಕುಮಾರಸ್ವಾಮಿ ಅತ್ತೆ ಜಮೀನು ಖರೀದಿ ಮಾಡಿದ್ರಿ? ಜಮೀನು ನಿಮ್ಮ ಬಾಮೈದನ ಹೆಸರಲ್ಲಿ ಇದೆ, ಹೇಗೆ?" ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಅತ್ಯಾಚಾರ ಆರೋಪ: ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಪ್ರಕರಣ, ಪೊಲೀಸರಿಂದ ಸ್ಥಳ ಮಹಜರು - Case Against Munirathna

Last Updated : 7 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.