ETV Bharat / state

ವೈಭವದಿಂದ ಜರುಗಿದ ಕೊಪ್ಪಳದ ಗವಿಸಿದ್ಧೇಶ್ವರರ ರಥೋತ್ಸವ: ದಕ್ಷಿಣ ಭಾರತದ ಕುಂಭಮೇಳಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿ

author img

By ETV Bharat Karnataka Team

Published : Jan 27, 2024, 9:50 PM IST

Updated : Feb 1, 2024, 6:01 PM IST

ಕೊಪ್ಪಳದ ಶ್ರೀ ಗವಿಸಿದ್ದೇಶ್ವರರ ಮಹಾರಥೋತ್ಸವ ಭಕ್ತ ಸಾಗರದ ಮಧ್ಯೆ ವೈಭವದಿಂದ ಜರುಗಿತು. ಡಿಸಿಎಂ ಶಿವಕುಮಾರ್​ ಅವರು ಗವಿಸಿದ್ದೇಶ್ವರ ಉತ್ಸವ ಮೂರ್ತಿ ಇದ್ದ ಪಲ್ಲಕ್ಕಿ ಹೊತ್ತು ತಮ್ಮ ಭಕ್ತಿ ಅರ್ಪಿಸಿದರು.

lakhs-of-devotees-attended-sri-gavisiddeshwara-maharathotsava-in-koppal
ವೈಭವದಿಂದ ಜರುಗಿದ ಕೊಪ್ಪಳದ ಗವಿಸಿದ್ಧೇಶ್ವರರ ರಥೋತ್ಸವ
ಕೊಪ್ಪಳದ ಗವಿಸಿದ್ಧೇಶ್ವರರ ರಥೋತ್ಸವ

ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರರ ಮಹಾರಥೋತ್ಸವ ಶನಿವಾರ ಅದ್ಧೂರಿಯಾಗಿ ಜರುಗಿತು. ಗವಿಮಠದ ಅಂಗಳದಲ್ಲಿ ಸಂಜೆ 6 ಗಂಟೆಗೆ ಭಕ್ತ ಸಾಗರದ ಮಧ್ಯೆ ವೈಭವದಿಂದ ರಥೋತ್ಸವ ನೆರವೇರಿತು.

ಪ್ರಸಿದ್ಧ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಧ್ವಜಾರೋಹಣದ ಮೂಲಕ ಚಾಲನೆ ನೀಡಿದರು. ಗವಿಮಠದ ಆವರಣದಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತರು ರಥಕ್ಕೆ ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು. ಜೊತೆಗೆ ಜೈ ಗವಿಸಿದ್ದೇಶ ಎಂಬ ನಾಮಸ್ಮರಣೆ ಮುಗಿಲು ಮುಟ್ಟಿತು. ಮಹಾ ರಥೋತ್ಸವವನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡು ಪುನೀತರಾದ ಭಾವ ವ್ಯಕ್ತಪಡಿಸಿದರು.

ಮಹಾರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸ್ವಾಮೀಜಿ, ನೀವು ಜಾತ್ರೆ ನೋಡಲೇಬೇಕು ಎಂದಾದರೆ, ಅದು ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ನೋಡಬೇಕು. ಇಲ್ಲಿ ಎಲ್ಲಿ ನೋಡಿದರೂ ಗವಿಸಿದ್ದೇಶ್ವರನ ಭಕ್ತಸಾಗರವೇ ಕಾಣುತ್ತದೆ. ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ಜನರು ಆಕರ್ಷಿತರಾಗುತ್ತಾರೆ. ಜಾತ್ರೆಗೆ ಬಂದಿರುವ ಭಕ್ತರಿಗೆ ಮೂಲ ಸೌಲಭ್ಯ ಕಲ್ಪಿಸಿದ್ದಾರೆ. ಇದು ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.

ಪಲ್ಲಕ್ಕಿ ಹೊತ್ತ ಡಿಸಿಎಂ ಶಿವಕುಮಾರ್: ರಥೋತ್ಸವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವ ಶಿವರಾಜ ತಂಗಡಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಜನಾರ್ದನ ರೆಡ್ಡಿ, ಶರಣಗೌಡ ಕಂದಕೂರು ಸೇರಿದಂತೆ ಹಲವು ಗಣ್ಯರು ಸಹ ಪಾಲ್ಗೊಂಡಿದ್ದರು. ಶ್ರೀ ಗವಿಸಿದ್ದೇಶ್ವರ ಉತ್ಸವ ಮೂರ್ತಿ ಇದ್ದ ಪಲ್ಲಕ್ಕಿ ಹೊತ್ತು ಡಿಸಿಎಂ ಶಿವಕುಮಾರ್​ ತಮ್ಮ ಭಕ್ತಿ ಅರ್ಪಿಸಿದರು. ಶ್ರೀಮಠದ ಆವರಣದಿಂದ ರಥದವರೆಗೂ ಉತ್ಸವ ಮೂರ್ತಿಯ ಪಲ್ಲಕ್ಕಿ ಹೊತ್ತು ಅವರು ಸಾಗಿದರು.

ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್​, ಕೊಪ್ಪಳ ಗವಿಮಠ ಭಕ್ತರ ದೊಡ್ಡ ಶಕ್ತಿ ಕೇಂದ್ರ. ಇಂತಹ ಜನಸಾಗರವನ್ನು ಈ ಮುಂಚೆ ನಾನೆಂದು ನೋಡಿಲ್ಲ. ನಾನು ಇಲ್ಲಿಗೆ ಉಪ ಮುಖ್ಯಮಂತ್ರಿಯಾಗಿ ಬಂದಿಲ್ಲ. ಗವಿಮಠದ ಭಕ್ತನಾಗಿ, ಈ ಗವಿಸಿದ್ದೇಶ್ವರನಲ್ಲಿ ಭಕ್ತಿ ಸಮರ್ಪಿಸಲು ಬಂದಿದ್ದೇನೆ. ಆ ದೇವರು ನನಗೆ ಆಶೀರ್ವದಿಸುತ್ತಾನೆ ಎಂಬ ನಂಬಿಕೆ ಹೊಂದಿದ್ದೇನೆ. ಇಲ್ಲಿ ಪಲ್ಲಕ್ಕಿ ಹೊತ್ತಿರುವುದು ದೇವರು ಮತ್ತು ನನಗೆ ಮಾತ್ರ ಗೊತ್ತು ಎಂದು ಹೇಳಿದರು.

ಮಹಾರಥೋತ್ಸವ ನಿಮಿತ್ತ ಬೆಳಗಿನ ಜಾವವೇ ಗವಿಮಠದ ಗುಹೆಯಲ್ಲಿರುವ 11ನೇ ಪೀಠಾಧಿಪತಿ ಲಿಂಗೈಕ್ಯ ಗವಿಸಿದ್ಧೇಶ್ವರ ಸ್ವಾಮೀಜಿಯ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಳಗಿನ ಜಾವದಿಂದಲೇ ಭಕ್ತರು ಮಠದತ್ತ ಆಗಮಿಸಿ ಅಂಗಳದಲ್ಲಿ ಸೇರಿದ್ದರು. ಸುತ್ತಮುತ್ತಲ ಗ್ರಾಮದ ಭಕ್ತರು ಪಾದಯಾತ್ರೆ ಮೂಲಕ ಬಂದು ಮಹಾರಥೋತ್ಸವದಲ್ಲಿ ಭಾಗಿಯಾದರು.

ಕಳೆದ ನಾಲ್ಕು ದಿನದಿಂದಲೇ ಜಾತ್ರಾ ಮಹಾ ದಾಸೋಹ ಆರಂಭವಾಗಿದೆ. ಜಾತ್ರೆಯ ಅಂಗವಾಗಿ 6 ಎಕರೆ ಪ್ರದೇಶದಲ್ಲಿ ಸಾವಿರಾರು ಭಕ್ತಾದಿಗಳು ಏಕಕಾಲದಲ್ಲಿ ಪ್ರಸಾದ ಸೇವಿಸಲು ವ್ಯವಸ್ಥೆ ಮಾಡಲಾಗಿದೆ. ಸತತ ಒಂದು ತಿಂಗಳ ಕಾಲ ಪ್ರಸಾದ ವ್ಯವಸ್ಥೆ ಇರಲಿದೆ.

ಇದನ್ನೂ ಓದಿ: ಭೂಮಿ ಮೇಲೆ ಇರುವವರೆಗೆ ಪ್ರತಿಯೊಬ್ಬರು ದುಡಿದು ತಿನ್ನಬೇಕು: ಗವಿಸಿದ್ಧೇಶ್ವರ ಶ್ರೀ ಸಲಹೆ

ಕೊಪ್ಪಳದ ಗವಿಸಿದ್ಧೇಶ್ವರರ ರಥೋತ್ಸವ

ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರರ ಮಹಾರಥೋತ್ಸವ ಶನಿವಾರ ಅದ್ಧೂರಿಯಾಗಿ ಜರುಗಿತು. ಗವಿಮಠದ ಅಂಗಳದಲ್ಲಿ ಸಂಜೆ 6 ಗಂಟೆಗೆ ಭಕ್ತ ಸಾಗರದ ಮಧ್ಯೆ ವೈಭವದಿಂದ ರಥೋತ್ಸವ ನೆರವೇರಿತು.

ಪ್ರಸಿದ್ಧ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಧ್ವಜಾರೋಹಣದ ಮೂಲಕ ಚಾಲನೆ ನೀಡಿದರು. ಗವಿಮಠದ ಆವರಣದಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತರು ರಥಕ್ಕೆ ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು. ಜೊತೆಗೆ ಜೈ ಗವಿಸಿದ್ದೇಶ ಎಂಬ ನಾಮಸ್ಮರಣೆ ಮುಗಿಲು ಮುಟ್ಟಿತು. ಮಹಾ ರಥೋತ್ಸವವನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡು ಪುನೀತರಾದ ಭಾವ ವ್ಯಕ್ತಪಡಿಸಿದರು.

ಮಹಾರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸ್ವಾಮೀಜಿ, ನೀವು ಜಾತ್ರೆ ನೋಡಲೇಬೇಕು ಎಂದಾದರೆ, ಅದು ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ನೋಡಬೇಕು. ಇಲ್ಲಿ ಎಲ್ಲಿ ನೋಡಿದರೂ ಗವಿಸಿದ್ದೇಶ್ವರನ ಭಕ್ತಸಾಗರವೇ ಕಾಣುತ್ತದೆ. ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ಜನರು ಆಕರ್ಷಿತರಾಗುತ್ತಾರೆ. ಜಾತ್ರೆಗೆ ಬಂದಿರುವ ಭಕ್ತರಿಗೆ ಮೂಲ ಸೌಲಭ್ಯ ಕಲ್ಪಿಸಿದ್ದಾರೆ. ಇದು ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.

ಪಲ್ಲಕ್ಕಿ ಹೊತ್ತ ಡಿಸಿಎಂ ಶಿವಕುಮಾರ್: ರಥೋತ್ಸವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವ ಶಿವರಾಜ ತಂಗಡಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಜನಾರ್ದನ ರೆಡ್ಡಿ, ಶರಣಗೌಡ ಕಂದಕೂರು ಸೇರಿದಂತೆ ಹಲವು ಗಣ್ಯರು ಸಹ ಪಾಲ್ಗೊಂಡಿದ್ದರು. ಶ್ರೀ ಗವಿಸಿದ್ದೇಶ್ವರ ಉತ್ಸವ ಮೂರ್ತಿ ಇದ್ದ ಪಲ್ಲಕ್ಕಿ ಹೊತ್ತು ಡಿಸಿಎಂ ಶಿವಕುಮಾರ್​ ತಮ್ಮ ಭಕ್ತಿ ಅರ್ಪಿಸಿದರು. ಶ್ರೀಮಠದ ಆವರಣದಿಂದ ರಥದವರೆಗೂ ಉತ್ಸವ ಮೂರ್ತಿಯ ಪಲ್ಲಕ್ಕಿ ಹೊತ್ತು ಅವರು ಸಾಗಿದರು.

ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್​, ಕೊಪ್ಪಳ ಗವಿಮಠ ಭಕ್ತರ ದೊಡ್ಡ ಶಕ್ತಿ ಕೇಂದ್ರ. ಇಂತಹ ಜನಸಾಗರವನ್ನು ಈ ಮುಂಚೆ ನಾನೆಂದು ನೋಡಿಲ್ಲ. ನಾನು ಇಲ್ಲಿಗೆ ಉಪ ಮುಖ್ಯಮಂತ್ರಿಯಾಗಿ ಬಂದಿಲ್ಲ. ಗವಿಮಠದ ಭಕ್ತನಾಗಿ, ಈ ಗವಿಸಿದ್ದೇಶ್ವರನಲ್ಲಿ ಭಕ್ತಿ ಸಮರ್ಪಿಸಲು ಬಂದಿದ್ದೇನೆ. ಆ ದೇವರು ನನಗೆ ಆಶೀರ್ವದಿಸುತ್ತಾನೆ ಎಂಬ ನಂಬಿಕೆ ಹೊಂದಿದ್ದೇನೆ. ಇಲ್ಲಿ ಪಲ್ಲಕ್ಕಿ ಹೊತ್ತಿರುವುದು ದೇವರು ಮತ್ತು ನನಗೆ ಮಾತ್ರ ಗೊತ್ತು ಎಂದು ಹೇಳಿದರು.

ಮಹಾರಥೋತ್ಸವ ನಿಮಿತ್ತ ಬೆಳಗಿನ ಜಾವವೇ ಗವಿಮಠದ ಗುಹೆಯಲ್ಲಿರುವ 11ನೇ ಪೀಠಾಧಿಪತಿ ಲಿಂಗೈಕ್ಯ ಗವಿಸಿದ್ಧೇಶ್ವರ ಸ್ವಾಮೀಜಿಯ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಳಗಿನ ಜಾವದಿಂದಲೇ ಭಕ್ತರು ಮಠದತ್ತ ಆಗಮಿಸಿ ಅಂಗಳದಲ್ಲಿ ಸೇರಿದ್ದರು. ಸುತ್ತಮುತ್ತಲ ಗ್ರಾಮದ ಭಕ್ತರು ಪಾದಯಾತ್ರೆ ಮೂಲಕ ಬಂದು ಮಹಾರಥೋತ್ಸವದಲ್ಲಿ ಭಾಗಿಯಾದರು.

ಕಳೆದ ನಾಲ್ಕು ದಿನದಿಂದಲೇ ಜಾತ್ರಾ ಮಹಾ ದಾಸೋಹ ಆರಂಭವಾಗಿದೆ. ಜಾತ್ರೆಯ ಅಂಗವಾಗಿ 6 ಎಕರೆ ಪ್ರದೇಶದಲ್ಲಿ ಸಾವಿರಾರು ಭಕ್ತಾದಿಗಳು ಏಕಕಾಲದಲ್ಲಿ ಪ್ರಸಾದ ಸೇವಿಸಲು ವ್ಯವಸ್ಥೆ ಮಾಡಲಾಗಿದೆ. ಸತತ ಒಂದು ತಿಂಗಳ ಕಾಲ ಪ್ರಸಾದ ವ್ಯವಸ್ಥೆ ಇರಲಿದೆ.

ಇದನ್ನೂ ಓದಿ: ಭೂಮಿ ಮೇಲೆ ಇರುವವರೆಗೆ ಪ್ರತಿಯೊಬ್ಬರು ದುಡಿದು ತಿನ್ನಬೇಕು: ಗವಿಸಿದ್ಧೇಶ್ವರ ಶ್ರೀ ಸಲಹೆ

Last Updated : Feb 1, 2024, 6:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.