ETV Bharat / state

ಜಾತಿಗಣತಿ ಮೇಲ್ನೋಟಕ್ಕೆ ಅವೈಜ್ಞಾನಿಕ, ಮತ್ತೊಮ್ಮೆ ತಯಾರಿಸಿ ಬಿಡುಗಡೆ ಮಾಡಲಿ: ಶಾಸಕ ಶ್ರೀನಿವಾಸ್

ಜಾತಿಗಣತಿ ವರದಿ ಬಿಡುಗಡೆಗೆ ಸ್ವಪಕ್ಷದಲ್ಲೇ ಅಪಸ್ವರ ಕೇಳಿ ಬಂದಿದೆ. ಜಾತಿಗಣತಿ ಮೇಲ್ನೋಟಕ್ಕೆ ಅವೈಜ್ಞಾನಿಕವಾಗಿದೆ ಎಂದು ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.

author img

By ETV Bharat Karnataka Team

Published : 2 hours ago

ಶಾಸಕ ಶ್ರೀನಿವಾಸ್
ಶಾಸಕ ಶ್ರೀನಿವಾಸ್ (ETV Bharat)

ತುಮಕೂರು: ಜಾತಿಗಣತಿ ಮೇಲ್ನೋಟಕ್ಕೆ ಅವೈಜ್ಞಾನಿಕವಾಗಿದೆ. ಎಲ್ಲ ಸಮುದಾಯಕ್ಕೂ ಸಾಮಾಜಿಕ, ಶೈಕ್ಷಣಿಕ ನ್ಯಾಯ ಸಿಗಬೇಕು. ಹೀಗಾಗಿ ವರದಿಯನ್ನು ಮತ್ತೊಮ್ಮೆ ತಯಾರಿಸಿ ಬಿಡುಗಡೆ ಮಾಡಲಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಒಕ್ಕಲಿಗ ಸಮುದಾಯದಲ್ಲಿ ಅನೇಕ ಒಳಪಂಗಡಗಳಿವೆ. ಅದೇ ರೀತಿ ಲಿಂಗಾಯತರಲ್ಲೂ ಒಳಪಂಗಡಗಳಿವೆ. ನಮ್ಮ ಎಲ್ಲ ಉಪ ಪಂಗಡಗಳನ್ನೂ ಸೇರಿಸಿ ಒಕ್ಕಲಿಗ ಅಂತ ಮಾಡಲಿ. ಅದೇ ರೀತಿ ಲಿಂಗಾಯತ ಸಮುದಾಯದಲ್ಲೂ ಮಾಡಲಿ ಎಂದು ಸಲಹೆ ನೀಡಿದರು.

ಶಾಸಕ ಎಸ್.ಆರ್.ಶ್ರೀನಿವಾಸ್ (ETV Bharat)

ಈ ದೃಷ್ಟಿಯಿಂದ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ನನಗನಿಸುತ್ತಿದೆ. ವರದಿ ಯಾವ ರೀತಿ ತಯಾರು ಮಾಡಿದ್ದಾರೆ ಎಂದು ಯಾರಿಗೂ ಗೊತ್ತಿಲ್ಲ. ಜಾತಿಗಣತಿಯ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಜಾರಿಗೆ ತರಬೇಕಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಜಾತಿಗಣತಿ ವರದಿ: ಒಕ್ಕಲಿಗ ಸಮುದಾಯದ ನಿಲುವೇನು?

ತುಮಕೂರು: ಜಾತಿಗಣತಿ ಮೇಲ್ನೋಟಕ್ಕೆ ಅವೈಜ್ಞಾನಿಕವಾಗಿದೆ. ಎಲ್ಲ ಸಮುದಾಯಕ್ಕೂ ಸಾಮಾಜಿಕ, ಶೈಕ್ಷಣಿಕ ನ್ಯಾಯ ಸಿಗಬೇಕು. ಹೀಗಾಗಿ ವರದಿಯನ್ನು ಮತ್ತೊಮ್ಮೆ ತಯಾರಿಸಿ ಬಿಡುಗಡೆ ಮಾಡಲಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಒಕ್ಕಲಿಗ ಸಮುದಾಯದಲ್ಲಿ ಅನೇಕ ಒಳಪಂಗಡಗಳಿವೆ. ಅದೇ ರೀತಿ ಲಿಂಗಾಯತರಲ್ಲೂ ಒಳಪಂಗಡಗಳಿವೆ. ನಮ್ಮ ಎಲ್ಲ ಉಪ ಪಂಗಡಗಳನ್ನೂ ಸೇರಿಸಿ ಒಕ್ಕಲಿಗ ಅಂತ ಮಾಡಲಿ. ಅದೇ ರೀತಿ ಲಿಂಗಾಯತ ಸಮುದಾಯದಲ್ಲೂ ಮಾಡಲಿ ಎಂದು ಸಲಹೆ ನೀಡಿದರು.

ಶಾಸಕ ಎಸ್.ಆರ್.ಶ್ರೀನಿವಾಸ್ (ETV Bharat)

ಈ ದೃಷ್ಟಿಯಿಂದ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ನನಗನಿಸುತ್ತಿದೆ. ವರದಿ ಯಾವ ರೀತಿ ತಯಾರು ಮಾಡಿದ್ದಾರೆ ಎಂದು ಯಾರಿಗೂ ಗೊತ್ತಿಲ್ಲ. ಜಾತಿಗಣತಿಯ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಜಾರಿಗೆ ತರಬೇಕಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಜಾತಿಗಣತಿ ವರದಿ: ಒಕ್ಕಲಿಗ ಸಮುದಾಯದ ನಿಲುವೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.