ETV Bharat / state

ಬೆಳಗಾವಿ:ಲೋಕಾಯುಕ್ತ ಬಲೆಗೆ ಬಿದ್ದ ಬೆಳಗಾವಿ ತಾ.ಪಂ ಇಒ, ಕಾರ್ಯದರ್ಶಿ - Lokayukta raid

ಭೂ ಪರಿವರ್ತನೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದ ಬೆಳಗಾವಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಗ್ರೇಡ್‌–2 ಕಾರ್ಯದರ್ಶಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

author img

By ETV Bharat Karnataka Team

Published : Jun 29, 2024, 6:55 AM IST

ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು
ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು (ETV Bharat)

ಬೆಳಗಾವಿ: ಬೆಳಗಾವಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಗ್ರೇಡ್‌–2 ಕಾರ್ಯದರ್ಶಿ ಭೂ ಪರಿವರ್ತನೆ ಮಾಡಿಕೊಡಲು 40 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಮರೆಡ್ಡಿ ಪಾಟೀಲ ಹಾಗೂ ಗ್ರೇಡ್‌–2 ಕಾರ್ಯದರ್ಶಿ ವೈಜನಾಥ ಸನದಿಯನ್ನು ವಶಕ್ಕೆ ಪಡೆಯಲಾಗಿದೆ.

ಬೆಳಗಾವಿ ನಗರದ ಕಾಕತಿವೇಸ್‌ ಪ್ರದೇಶದ ನಿವಾಸಿ ಶಾನವಾಜ್‌ಖಾನ್‌ ಪಠಾಣ (52) ಅವರು ತಮ್ಮ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ರಾಮರೆಡ್ಡಿ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶಾನವಾಜ್‌ಖಾನ್ ಅವರನ್ನು ಹಲವು ದಿನಗಳಿಂದ ಪದೇ ಪದೆ ಕಚೇರಿಗೆ ಅಲೆದಾಡಿಸಿದ್ದರು. ಇದರಿಂದ ಬೇಸತ್ತಿದ್ದ ಶಾನವಾಜ್‌ಖಾನ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಆ ಬಳಿಕ ಶಾನವಾಜ್‌ಖಾನ್ ಅವರು ತಾಲೂಕು ಪಂಚಾಯಿತಿ ಕಚೇರಿಗೆ ಬಂದು ಅಧಿಕಾರಿಗಳ ಕೈಗೆ ಲಂಚದ ಹಣ ಕೊಡುವ ವೇಳೆ ದಾಳಿ ಮಾಡಿದ ಇನ್ಸ್​ಪೆಕ್ಟರ್ ಅನ್ನಪೂರ್ಣ ಹುಲಗೂರು ಅವರ ನೇತೃತ್ವದ ತಂಡ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ಕಂದಾಯ ಅಧಿಕಾರಿ, ಎಸ್​ಡಿಎ ಲೋಕಾಯುಕ್ತ ಬಲೆಗೆ

ಬೆಳಗಾವಿ: ಬೆಳಗಾವಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಗ್ರೇಡ್‌–2 ಕಾರ್ಯದರ್ಶಿ ಭೂ ಪರಿವರ್ತನೆ ಮಾಡಿಕೊಡಲು 40 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಮರೆಡ್ಡಿ ಪಾಟೀಲ ಹಾಗೂ ಗ್ರೇಡ್‌–2 ಕಾರ್ಯದರ್ಶಿ ವೈಜನಾಥ ಸನದಿಯನ್ನು ವಶಕ್ಕೆ ಪಡೆಯಲಾಗಿದೆ.

ಬೆಳಗಾವಿ ನಗರದ ಕಾಕತಿವೇಸ್‌ ಪ್ರದೇಶದ ನಿವಾಸಿ ಶಾನವಾಜ್‌ಖಾನ್‌ ಪಠಾಣ (52) ಅವರು ತಮ್ಮ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ರಾಮರೆಡ್ಡಿ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶಾನವಾಜ್‌ಖಾನ್ ಅವರನ್ನು ಹಲವು ದಿನಗಳಿಂದ ಪದೇ ಪದೆ ಕಚೇರಿಗೆ ಅಲೆದಾಡಿಸಿದ್ದರು. ಇದರಿಂದ ಬೇಸತ್ತಿದ್ದ ಶಾನವಾಜ್‌ಖಾನ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಆ ಬಳಿಕ ಶಾನವಾಜ್‌ಖಾನ್ ಅವರು ತಾಲೂಕು ಪಂಚಾಯಿತಿ ಕಚೇರಿಗೆ ಬಂದು ಅಧಿಕಾರಿಗಳ ಕೈಗೆ ಲಂಚದ ಹಣ ಕೊಡುವ ವೇಳೆ ದಾಳಿ ಮಾಡಿದ ಇನ್ಸ್​ಪೆಕ್ಟರ್ ಅನ್ನಪೂರ್ಣ ಹುಲಗೂರು ಅವರ ನೇತೃತ್ವದ ತಂಡ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ಕಂದಾಯ ಅಧಿಕಾರಿ, ಎಸ್​ಡಿಎ ಲೋಕಾಯುಕ್ತ ಬಲೆಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.