ETV Bharat / state

ಆರ್‌ಟಿಒ ಚೆಕ್ ಪೋಸ್ಟ್​ಗಳ ಮೇಲೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

ಆರ್‌ಟಿಒ ಚೆಕ್ ಪೋಸ್ಟ್ ಮೇಲೆ ರಾಜ್ಯಾದ್ಯಂತ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳ ತಂಡ, ಪರಿಶೀಲನೆ ನಡೆಸುತ್ತಿದೆ.

author img

By ETV Bharat Karnataka Team

Published : 6 hours ago

Lokayukta Raid on Karnataka Many RTO Check Posts
ಪರಿಶೀಲನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ (ETV Bharat)

ಬಳ್ಳಾರಿ/ಬೆಳಗಾವಿ: ಬಳ್ಳಾರಿ ಮತ್ತು ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಮಧ್ಯರಾತ್ರಿ ಆರ್‌ಟಿಒ ಚೆಕ್ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರೆಸಿದ್ದಾರೆ.

ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್‌ಟಿಒ ಚೆಕ್‌ ಪೋಸ್ಟ್ ಮೇಲೆ ಮಧ್ಯಾರಾತ್ರಿ 2 ಗಂಟೆಗೆ ದಾಳಿ ನಡೆಸಿದ ಎಸ್ಪಿ ಸಿದ್ದರಾಜು ನೇತೃತ್ವದ ಲೋಕಾಯುಕ್ತ ತಂಡ ಪರಿಶೀಲನೆ ನಡೆಸುತ್ತಿದೆ. ಡಿವೈಎಸ್ಪಿ ವಸಂತಕುಮಾರ್, ರಫೀಕ್, ಸಂಗಮೇಶ್ ಸೇರಿದಂತೆ ಇತರ ಅಧಿಕಾರಿಗಳು ಚೆಕ್ ಪೋಸ್ಟ್​ನಲ್ಲಿದ್ದ ಹೆಚ್ಚುವರಿ ಹಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಮತ್ತೊಂದೆಡೆ ಲೋಕಾಯುಕ್ತ ಎಸ್‌ಪಿ ಹನುಮಂತರಾಯ ಅವರ ನೇತೃತ್ವದ ಲೋಕಾಯುಕ್ತ ಸಿಬ್ಬಂದಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ಬಳಿಯ ಚೆಕ್ ಪೋಸ್ಟ್ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಧಿಕಾರಿಗಳು ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಸುಮಾರು ಆರು ಜನ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ.

ಇದನ್ನೂ ಓದಿ: ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ: ಕಚೇರಿಯಲ್ಲಿ ಸಿಕ್ತು ಗಾಂಜಾ, ಮದ್ಯದ ಬಾಟಲಿಗಳು - Lokayukta raid on Excise Department

ಬಳ್ಳಾರಿ/ಬೆಳಗಾವಿ: ಬಳ್ಳಾರಿ ಮತ್ತು ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಮಧ್ಯರಾತ್ರಿ ಆರ್‌ಟಿಒ ಚೆಕ್ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರೆಸಿದ್ದಾರೆ.

ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್‌ಟಿಒ ಚೆಕ್‌ ಪೋಸ್ಟ್ ಮೇಲೆ ಮಧ್ಯಾರಾತ್ರಿ 2 ಗಂಟೆಗೆ ದಾಳಿ ನಡೆಸಿದ ಎಸ್ಪಿ ಸಿದ್ದರಾಜು ನೇತೃತ್ವದ ಲೋಕಾಯುಕ್ತ ತಂಡ ಪರಿಶೀಲನೆ ನಡೆಸುತ್ತಿದೆ. ಡಿವೈಎಸ್ಪಿ ವಸಂತಕುಮಾರ್, ರಫೀಕ್, ಸಂಗಮೇಶ್ ಸೇರಿದಂತೆ ಇತರ ಅಧಿಕಾರಿಗಳು ಚೆಕ್ ಪೋಸ್ಟ್​ನಲ್ಲಿದ್ದ ಹೆಚ್ಚುವರಿ ಹಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಮತ್ತೊಂದೆಡೆ ಲೋಕಾಯುಕ್ತ ಎಸ್‌ಪಿ ಹನುಮಂತರಾಯ ಅವರ ನೇತೃತ್ವದ ಲೋಕಾಯುಕ್ತ ಸಿಬ್ಬಂದಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ಬಳಿಯ ಚೆಕ್ ಪೋಸ್ಟ್ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಧಿಕಾರಿಗಳು ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಸುಮಾರು ಆರು ಜನ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ.

ಇದನ್ನೂ ಓದಿ: ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ: ಕಚೇರಿಯಲ್ಲಿ ಸಿಕ್ತು ಗಾಂಜಾ, ಮದ್ಯದ ಬಾಟಲಿಗಳು - Lokayukta raid on Excise Department

ETV Bharat Logo

Copyright © 2024 Ushodaya Enterprises Pvt. Ltd., All Rights Reserved.