ETV Bharat / state

ಎನ್‌ಒಸಿ ನೀಡಲು ವಿದ್ಯುತ್ ಗುತ್ತಿಗೆದಾರನಿಂದ ಲಂಚ: ಕುಂದಾಣ ಪಿಡಿಒ ಲೋಕಾಯುಕ್ತ ಬಲೆಗೆ - Lokayukta Traps PDO

author img

By ETV Bharat Karnataka Team

Published : Sep 4, 2024, 1:15 PM IST

ಲೇಔಟ್​ಗೆ ನೆಲದಡಿ ಕೇಬಲ್​ ಅಳವಡಿಸಲು ಎನ್​ಒಸಿ ನೀಡಲು ಲಂಚ ಪಡೆಯುತ್ತಿದ್ದಾಗ ಪಿಡಿಒ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಕುಂದಾಣ ಪಿಡಿಓ ಲೋಕಾಯುಕ್ತ ಬಲೆಗೆ
ಕುಂದಾಣ ಪಿಡಿಒ ಪದ್ಮನಾಭ ಲೋಕಾಯುಕ್ತ ಬಲೆಗೆ (ETV Bharat)

ದೇವನಹಳ್ಳಿ: ಲೇಔಟ್​ಗೆ ಕೇಬಲ್ ಹಾಕುವ ವಿಚಾರಕ್ಕೆ ವಿದ್ಯುತ್​ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ಕುಂದಾಣ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯಕ್ತರ ಬಲೆಗೆ ಬಿದ್ದಿದ್ದಾರೆ.

₹5 ಲಕ್ಷ ಬೇಡಿಕೆ: ದೇವನಹಳ್ಳಿ ತಾಲೂಕು ಕುಂದಾಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪದ್ಮನಾಭ, ಲೇಔಟ್​ಗೆ ನೆಲದಡಿ ಕೇಬಲ್​ ಅಳವಡಿಸಲು ಎನ್‌ಒಸಿಗೆ 5 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ವಿದ್ಯುತ್​​ ಗುತ್ತಿಗೆದಾರ ಮಲ್ಲಿಕಾರ್ಜುನ್ ಈ ಕುರಿತು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.

ಇತ್ತ 3 ಲಕ್ಷ ರೂ. ಲಂಚದ ಹಣವನ್ನು ಮುಂಗಡವಾಗಿ ಪಡೆದಿದ್ದ ಪಿಡಿಒ, ಸೆಪ್ಟೆಂಬರ್​ 3ರಂದು ಬಾಕಿ 2 ಲಕ್ಷ ರೂಪಾಯಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸ್​​ ಇನ್ಸ್​​ಪೆಕ್ಟರ್​ ರಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೋರ್ಟ್​ಗೆ 231 ಸಾಕ್ಷ್ಯಗಳನ್ನೊಳಗೊಂಡ 3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ - Renukaswamy Murder Case

ದೇವನಹಳ್ಳಿ: ಲೇಔಟ್​ಗೆ ಕೇಬಲ್ ಹಾಕುವ ವಿಚಾರಕ್ಕೆ ವಿದ್ಯುತ್​ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ಕುಂದಾಣ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯಕ್ತರ ಬಲೆಗೆ ಬಿದ್ದಿದ್ದಾರೆ.

₹5 ಲಕ್ಷ ಬೇಡಿಕೆ: ದೇವನಹಳ್ಳಿ ತಾಲೂಕು ಕುಂದಾಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪದ್ಮನಾಭ, ಲೇಔಟ್​ಗೆ ನೆಲದಡಿ ಕೇಬಲ್​ ಅಳವಡಿಸಲು ಎನ್‌ಒಸಿಗೆ 5 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ವಿದ್ಯುತ್​​ ಗುತ್ತಿಗೆದಾರ ಮಲ್ಲಿಕಾರ್ಜುನ್ ಈ ಕುರಿತು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.

ಇತ್ತ 3 ಲಕ್ಷ ರೂ. ಲಂಚದ ಹಣವನ್ನು ಮುಂಗಡವಾಗಿ ಪಡೆದಿದ್ದ ಪಿಡಿಒ, ಸೆಪ್ಟೆಂಬರ್​ 3ರಂದು ಬಾಕಿ 2 ಲಕ್ಷ ರೂಪಾಯಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸ್​​ ಇನ್ಸ್​​ಪೆಕ್ಟರ್​ ರಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೋರ್ಟ್​ಗೆ 231 ಸಾಕ್ಷ್ಯಗಳನ್ನೊಳಗೊಂಡ 3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ - Renukaswamy Murder Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.