ETV Bharat / state

ತುಮಕೂರಿನಲ್ಲಿ ಐದು ಮಂದಿ ಮೇಲೆ ಹುಚ್ಚುನಾಯಿ ದಾಳಿ: ಓರ್ವ ಬಾಲಕಿಗೆ ಗಂಭೀರ ಗಾಯ - MAD DOG BITES

author img

By ETV Bharat Karnataka Team

Published : Jun 20, 2024, 12:51 PM IST

ತುಮಕೂರಲ್ಲಿ ಹುಚ್ಚುನಾಯಿ ದಾಳಿಯಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

ತುಮಕೂರು: ತುಮಕೂರಿನಲ್ಲಿ ಹುಚ್ಚುನಾಯಿ ಹಾವಳಿ ಹೆಚ್ಚಾಗಿದ್ದು, 5ಕ್ಕೂ ಹೆಚ್ಚು ಮಂದಿ ಮೇಲೆ ನಾಯಿ ದಾಳಿ ಮಾಡಿದೆ. ಓರ್ವ ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ನಗರದ ಗೋಕುಲ ಬಡಾವಣೆಯಲ್ಲಿ ಗುರುವಾರ ನಡೆದಿದೆ.

ಸಂಜೆ 5 ಗಂಟೆ ಸುಮಾರಿಗೆ ಗೋಕುಲ ಬಡಾವಣೆಯಲ್ಲಿ ಕಾಣಿಸಿಕೊಂಡ ಹುಚ್ಚುನಾಯಿ, ಮನೆ ಮುಂದೆ ಆಟವಾಡುತ್ತಿದ್ದ 9 ವರ್ಷ ಬಾಲಕಿ ಮೇಲೆ ದಾಳಿ ಮಾಡಿದೆ. ಬಾಲಕಿಯ ಕೈ, ಕಾಲಿಗೆ ಕಚ್ಚಿರುವ ಹುಚ್ಚುನಾಯಿ, ಮನೆಯಲ್ಲಿ ಸಾಕಿದ್ದ ಎರಡು ನಾಯಿಗಳ ಮೇಲೆಯೂ ದಾಳಿ ಮಾಡಿದೆ. ಹೊರಗಡೆಯಿಂದ ಬರುತ್ತಿರುವ ನಾಯಿಗಳ ಹಾವಳಿಯಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

ರಿಂಗ್ ರಸ್ತೆ ಸಮೀಪ ಇರುವ ಹಿನ್ನೆಲೆ, ಬೇರೆ ಕಡೆಯಿಂದ ರಿಂಗ್ ರಸ್ತೆ ಬಳಿ ನಾಯಿಗಳನ್ನ ತಂದು ಬಿಟ್ಟು ಹೋಗುತ್ತಿರುವ ಆರೋಪ ಕೇಳಿ ಬಂದಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಬಿ‌.ವಿ. ಅಶ್ವಿಜಾ, ಗಾಯಗೊಂಡಿದ್ದ ಬಾಲಕಿಯ ಆರೋಗ್ಯ ವಿಚಾರಿಸಿದರು. ಪಾಲಿಕೆ ವತಿಯಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. ದಾಳಿ ನಡೆಸಿದ್ದ ಹುಚ್ಚುನಾಯಿಯನ್ನು ಸ್ಥಳೀಯರು ಹೊಡೆದು ಸಾಯಿಸಿದರು. ಬಳಿಕ ಅದನ್ನು ಪ್ರಯೋಗಾಲಯಕ್ಕೆ ಕೊಂಡೊಯ್ದ ಪಶುವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಯಚೂರು: ಬೀದಿ ನಾಯಿ ಕಡಿತಕ್ಕೆ ಒಳಗಾಗಿದ್ದ ಬಾಲಕಿ ಸಾವು

ತುಮಕೂರು: ತುಮಕೂರಿನಲ್ಲಿ ಹುಚ್ಚುನಾಯಿ ಹಾವಳಿ ಹೆಚ್ಚಾಗಿದ್ದು, 5ಕ್ಕೂ ಹೆಚ್ಚು ಮಂದಿ ಮೇಲೆ ನಾಯಿ ದಾಳಿ ಮಾಡಿದೆ. ಓರ್ವ ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ನಗರದ ಗೋಕುಲ ಬಡಾವಣೆಯಲ್ಲಿ ಗುರುವಾರ ನಡೆದಿದೆ.

ಸಂಜೆ 5 ಗಂಟೆ ಸುಮಾರಿಗೆ ಗೋಕುಲ ಬಡಾವಣೆಯಲ್ಲಿ ಕಾಣಿಸಿಕೊಂಡ ಹುಚ್ಚುನಾಯಿ, ಮನೆ ಮುಂದೆ ಆಟವಾಡುತ್ತಿದ್ದ 9 ವರ್ಷ ಬಾಲಕಿ ಮೇಲೆ ದಾಳಿ ಮಾಡಿದೆ. ಬಾಲಕಿಯ ಕೈ, ಕಾಲಿಗೆ ಕಚ್ಚಿರುವ ಹುಚ್ಚುನಾಯಿ, ಮನೆಯಲ್ಲಿ ಸಾಕಿದ್ದ ಎರಡು ನಾಯಿಗಳ ಮೇಲೆಯೂ ದಾಳಿ ಮಾಡಿದೆ. ಹೊರಗಡೆಯಿಂದ ಬರುತ್ತಿರುವ ನಾಯಿಗಳ ಹಾವಳಿಯಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

ರಿಂಗ್ ರಸ್ತೆ ಸಮೀಪ ಇರುವ ಹಿನ್ನೆಲೆ, ಬೇರೆ ಕಡೆಯಿಂದ ರಿಂಗ್ ರಸ್ತೆ ಬಳಿ ನಾಯಿಗಳನ್ನ ತಂದು ಬಿಟ್ಟು ಹೋಗುತ್ತಿರುವ ಆರೋಪ ಕೇಳಿ ಬಂದಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಬಿ‌.ವಿ. ಅಶ್ವಿಜಾ, ಗಾಯಗೊಂಡಿದ್ದ ಬಾಲಕಿಯ ಆರೋಗ್ಯ ವಿಚಾರಿಸಿದರು. ಪಾಲಿಕೆ ವತಿಯಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. ದಾಳಿ ನಡೆಸಿದ್ದ ಹುಚ್ಚುನಾಯಿಯನ್ನು ಸ್ಥಳೀಯರು ಹೊಡೆದು ಸಾಯಿಸಿದರು. ಬಳಿಕ ಅದನ್ನು ಪ್ರಯೋಗಾಲಯಕ್ಕೆ ಕೊಂಡೊಯ್ದ ಪಶುವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಯಚೂರು: ಬೀದಿ ನಾಯಿ ಕಡಿತಕ್ಕೆ ಒಳಗಾಗಿದ್ದ ಬಾಲಕಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.