ETV Bharat / state

ಭದ್ರಾ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸಲು ನಿರ್ಧಾರ - Bhadra Dam

author img

By ETV Bharat Karnataka Team

Published : Jul 30, 2024, 7:16 AM IST

ಭದ್ರಾ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.

ಸಚಿವ ಮಧು ಬಂಗಾರಪ್ಪ
ಸಚಿವ ಮಧು ಬಂಗಾರಪ್ಪ (ETV Bharat)
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ (ETV Bharat)

ಶಿವಮೊಗ್ಗ: ಭದ್ರಾ ಅಣೆಕಟ್ಟೆಯಿಂದ ನಾಲೆಗಳಿಗೆ ಇಂದಿನಿಂದ (ಸೋಮವಾರ) ನೀರು ಹರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ಹೊರವಲಯದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

"ಈ ಬಾರಿ ಭದ್ರಾ ಹಿನ್ನೀರು ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಅಣೆಕಟ್ಟು ತುಂಬುವ ಸನಿಹ ಬಂದಿದೆ. ಹೀಗಾಗಿ ಸೋಮವಾರದಿಂದಲೇ ನಾಲೆಗಳಿಗೆ ನೀರು ಹರಿಸಲಾಗುವುದು. ಎಷ್ಟು ಪ್ರಮಾಣದಲ್ಲಿ ನೀರು ಹರಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಲಾಗಿದೆ" ಎಂದರು.

"ನಾಲೆಯ ಕೊನೆಯ ಭಾಗದವರಿಗೆ ನೀರು ತಲುಪಿಸಬೇಕೆಂದು ತಿಳಿಸಲಾಗಿದೆ. ಈ ಭಾಗದಲ್ಲಿ ಅಣೆಕಟ್ಟು ಸೇರಿದಂತೆ ನಾಲೆಗಳು ಅಭಿವೃದ್ಧಿ ಆಗಬೇಕು ಎಂದು ಶಾಸಕರು ಹಾಗೂ ರೈತ ಮುಖಂಡರು ತಿಳಿಸಿದ್ದಾರೆ. ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್​ ಅವರನ್ನು ನಮ್ಮ ಜಿಲ್ಲೆಗೆ ಕರೆದು, ಜಿಲ್ಲೆಯ ಅಣೆಕಟ್ಟುಗಳ ಅಭಿವೃದ್ದಿ, ವಿಸ್ತರಣೆ ಹಾಗೂ ನೂತನ ಯೋಜನೆಗಳಿದ್ದರೆ ತಿಳಿಸುವ ಉದ್ದೇಶವಿದೆ. ಮುಂದಿನ ಹದಿನೈದು ದಿನದ ಒಳಗಾಗಿ ಸಚಿವರನ್ನು ಕರೆದು ಅಣೆಕಟ್ಟುಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಯ ಕಡೆ ಗಮನ ಸೆಳೆಯುವ ಉದ್ದೇಶವಿದೆ" ಎಂದು ತಿಳಿಸಿದರು.

ಮುಂದುವರೆದು, "ಹಿಂದೆ ಭತ್ತದ ಬೆಳೆಗಾಗಿ ನೀರು ಬಳಕೆ ಆಗುತ್ತಿತ್ತು‌. ಈಗ ಅಡಿಕೆಗೆ ಹೆಚ್ಚಿನ ನೀರು ಅವಶ್ಯಕತೆ ಇರುವುದಿಲ್ಲ. ಈಗ ಬೇಸಿಗೆಯಲ್ಲೂ ಅಡಿಕೆ ಬೆಳೆಗೆ ನೀರು ಬೇಕಾಗಿರುವುದರಿಂದ ನೀರಿನ ಬಳಕೆಯ ಕುರಿತು ರೈತರನ್ನು ಕೂರಿಸಿಕೊಂಡು ಅಧಿಕಾರಿಗಗಳು ತೀರ್ಮಾನ ಮಾಡಬೇಕಿದೆ. ನಾಲೆಗಳಿಗೆ ಅಕ್ರಮವಾಗಿ ಪಂಪ್‌ಸೆಟ್ ಹಾಕಿದ್ದರೆ ತೆರವು ಮಾಡಬೇಕು" ಎಂದರು.

ತುಂಗಾ ನದಿಯಿಂದ ಭದ್ರಾ ಮೇಲ್ಡಂಡೆ ಯೋಜನೆಗೆ ನೀರು ಹರಿಸುವ ಕುರಿತು ಪ್ರತಿಕ್ರಿಯಿಸಿದ ಸಚಿವರು, "ತುಂಗಾ ನದಿಯಿಂದ ಕಾಲುವೆ ಮೂಲಕ ಭದ್ರಾ ಅಣೆಕಟ್ಟೆಗೆ ಕಳುಹಿಸುವ ಕಾಲುವೆ ಕಾಮಗಾರಿ ಇನ್ನೂ ನಡೆಯಬೇಕಿದೆ. ಕರ್ನಾಟಕ ನೀರಾವರಿ ನಿಗಮದಿಂದ ರಸ್ತೆ, ಸಮುದಾಯ ಭವನಗಳಿಗೆ ಅನುದಾನ ನೀಡಲಾಗುತ್ತಿತ್ತು. ಇದರಿಂದ ಮುಂದೆ ಅನುದಾನ ನೀಡುವುದನ್ನು ಕಡಿಮೆ ಮಾಡಿ ಜಲಾಶಯಗಳ ಅಭಿವೃದ್ದಿಗೆ ಆದ್ಯತೆ ನೀಡಬೇಕೆಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ" ಎಂದು ಹೇಳಿದರು.

ಸಭೆಯಲ್ಲಿ ಶಾಸಕರುಗಳು ಹಾಗೂ ರೈತ ಮುಖಂಡರುಗಳು ಹಾಜರಿದ್ದರು.

ಇದನ್ನೂ ಓದಿ: ಮಂಡ್ಯ: ಕೆಆರ್​ಎಸ್​ ಭರ್ತಿ, ಕಾವೇರಿಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ - bagina to krs dam

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ (ETV Bharat)

ಶಿವಮೊಗ್ಗ: ಭದ್ರಾ ಅಣೆಕಟ್ಟೆಯಿಂದ ನಾಲೆಗಳಿಗೆ ಇಂದಿನಿಂದ (ಸೋಮವಾರ) ನೀರು ಹರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ಹೊರವಲಯದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

"ಈ ಬಾರಿ ಭದ್ರಾ ಹಿನ್ನೀರು ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಅಣೆಕಟ್ಟು ತುಂಬುವ ಸನಿಹ ಬಂದಿದೆ. ಹೀಗಾಗಿ ಸೋಮವಾರದಿಂದಲೇ ನಾಲೆಗಳಿಗೆ ನೀರು ಹರಿಸಲಾಗುವುದು. ಎಷ್ಟು ಪ್ರಮಾಣದಲ್ಲಿ ನೀರು ಹರಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಲಾಗಿದೆ" ಎಂದರು.

"ನಾಲೆಯ ಕೊನೆಯ ಭಾಗದವರಿಗೆ ನೀರು ತಲುಪಿಸಬೇಕೆಂದು ತಿಳಿಸಲಾಗಿದೆ. ಈ ಭಾಗದಲ್ಲಿ ಅಣೆಕಟ್ಟು ಸೇರಿದಂತೆ ನಾಲೆಗಳು ಅಭಿವೃದ್ಧಿ ಆಗಬೇಕು ಎಂದು ಶಾಸಕರು ಹಾಗೂ ರೈತ ಮುಖಂಡರು ತಿಳಿಸಿದ್ದಾರೆ. ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್​ ಅವರನ್ನು ನಮ್ಮ ಜಿಲ್ಲೆಗೆ ಕರೆದು, ಜಿಲ್ಲೆಯ ಅಣೆಕಟ್ಟುಗಳ ಅಭಿವೃದ್ದಿ, ವಿಸ್ತರಣೆ ಹಾಗೂ ನೂತನ ಯೋಜನೆಗಳಿದ್ದರೆ ತಿಳಿಸುವ ಉದ್ದೇಶವಿದೆ. ಮುಂದಿನ ಹದಿನೈದು ದಿನದ ಒಳಗಾಗಿ ಸಚಿವರನ್ನು ಕರೆದು ಅಣೆಕಟ್ಟುಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಯ ಕಡೆ ಗಮನ ಸೆಳೆಯುವ ಉದ್ದೇಶವಿದೆ" ಎಂದು ತಿಳಿಸಿದರು.

ಮುಂದುವರೆದು, "ಹಿಂದೆ ಭತ್ತದ ಬೆಳೆಗಾಗಿ ನೀರು ಬಳಕೆ ಆಗುತ್ತಿತ್ತು‌. ಈಗ ಅಡಿಕೆಗೆ ಹೆಚ್ಚಿನ ನೀರು ಅವಶ್ಯಕತೆ ಇರುವುದಿಲ್ಲ. ಈಗ ಬೇಸಿಗೆಯಲ್ಲೂ ಅಡಿಕೆ ಬೆಳೆಗೆ ನೀರು ಬೇಕಾಗಿರುವುದರಿಂದ ನೀರಿನ ಬಳಕೆಯ ಕುರಿತು ರೈತರನ್ನು ಕೂರಿಸಿಕೊಂಡು ಅಧಿಕಾರಿಗಗಳು ತೀರ್ಮಾನ ಮಾಡಬೇಕಿದೆ. ನಾಲೆಗಳಿಗೆ ಅಕ್ರಮವಾಗಿ ಪಂಪ್‌ಸೆಟ್ ಹಾಕಿದ್ದರೆ ತೆರವು ಮಾಡಬೇಕು" ಎಂದರು.

ತುಂಗಾ ನದಿಯಿಂದ ಭದ್ರಾ ಮೇಲ್ಡಂಡೆ ಯೋಜನೆಗೆ ನೀರು ಹರಿಸುವ ಕುರಿತು ಪ್ರತಿಕ್ರಿಯಿಸಿದ ಸಚಿವರು, "ತುಂಗಾ ನದಿಯಿಂದ ಕಾಲುವೆ ಮೂಲಕ ಭದ್ರಾ ಅಣೆಕಟ್ಟೆಗೆ ಕಳುಹಿಸುವ ಕಾಲುವೆ ಕಾಮಗಾರಿ ಇನ್ನೂ ನಡೆಯಬೇಕಿದೆ. ಕರ್ನಾಟಕ ನೀರಾವರಿ ನಿಗಮದಿಂದ ರಸ್ತೆ, ಸಮುದಾಯ ಭವನಗಳಿಗೆ ಅನುದಾನ ನೀಡಲಾಗುತ್ತಿತ್ತು. ಇದರಿಂದ ಮುಂದೆ ಅನುದಾನ ನೀಡುವುದನ್ನು ಕಡಿಮೆ ಮಾಡಿ ಜಲಾಶಯಗಳ ಅಭಿವೃದ್ದಿಗೆ ಆದ್ಯತೆ ನೀಡಬೇಕೆಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ" ಎಂದು ಹೇಳಿದರು.

ಸಭೆಯಲ್ಲಿ ಶಾಸಕರುಗಳು ಹಾಗೂ ರೈತ ಮುಖಂಡರುಗಳು ಹಾಜರಿದ್ದರು.

ಇದನ್ನೂ ಓದಿ: ಮಂಡ್ಯ: ಕೆಆರ್​ಎಸ್​ ಭರ್ತಿ, ಕಾವೇರಿಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ - bagina to krs dam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.