ETV Bharat / state

ಬೆಳಗಾವಿ: ಗೋವಾ ಬಸ್ ತಡೆದು ಮಹದಾಯಿ ಹೋರಾಟಗಾರರ ಪ್ರತಿಭಟನೆ - Mahadayi Protest

ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ ತಂಡದ ಅಧಿಕಾರಿಗಳು ಭೇಟಿ ನೀಡಿದ್ದನ್ನು ಖಂಡಿಸಿ ಬೆಳಗಾವಿಯಲ್ಲಿ ರೈತ ಮುಖಂಡರು, ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಗೋವಾ ಬಸ್ ತಡೆದು ಆಕ್ರೋಶ ಹೊರ ಹಾಕಿದ್ದಾರೆ.

author img

By ETV Bharat Karnataka Team

Published : Jul 8, 2024, 3:15 PM IST

mahadayi protest
ಗೋವಾ ಬಸ್ ತಡೆದು ಮಹದಾಯಿ ಹೋರಾಟಗಾರರ ಪ್ರತಿಭಟನೆ (ETV Bharat)
ಗೋವಾ ಬಸ್ ತಡೆದು ಮಹದಾಯಿ ಹೋರಾಟಗಾರರ ಪ್ರತಿಭಟನೆ (ETV Bharat)

ಬೆಳಗಾವಿ: ಗೋವಾ ಬಸ್​ ತಡೆದು ಮಹದಾಯಿ, ಕಳಸಾ - ಬಂಡೂರಿ ಹೋರಾಟಗಾರರು ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ.

ಕೇಂದ್ರದ ಪ್ರವಾಹ ತಂಡದ ಅಧಿಕಾರಿಗಳು ನಿನ್ನೆ ಮಹದಾಯಿ ಜಲಾನಯನ ಪ್ರದೇಶಕ್ಕೆ ಭೇಟಿ ನೀಡಿದ್ದನ್ನು ಖಂಡಿಸಿ ಸುರಿಯುವ ಮಳೆಯನ್ನೂ ಲೆಕ್ಕಿಸದೇ ಕೈಯಲ್ಲಿ ಬುಟ್ಟಿ, ಪಿಕಾಸಿ ಹಿಡಿದಿದ್ದ ರೈತ ಮುಖಂಡರು, ಕರವೇ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮತ್ತು ಗೋವಾ ಸಿಎಂ ಪ್ರಮೋದ್​ ಸಾವಂತ ಅವರ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಆಗಮಿಸಿದ ಗೋವಾ ಬಸ್ ತಡೆದ ಹೋರಾಟಗಾರರು ಆಕ್ರೋಶ ಹೊರ ಹಾಕಿದರು. ಇದೇ ವೇಳೆ ಓರ್ವ ಮಹಿಳೆ ಗೋವಾ ಬಸ್ ಏರಿದ ಘಟನೆಯೂ ನಡೆಯಿತು. ಬಳಿಕ ಆ ಮಹಿಳೆಯನ್ನು ಬಸ್​ನಿಂದ ಕೆಳಗಿಳಿಸಲಾಯಿತು.

ಇದಕ್ಕೂ ಮೊದಲು ಮಾತನಾಡಿದ ಕರವೇ ಮುಖಂಡ ವಾಜೀದ್ ಹಿರೇಕೊಡಿ, ''ಸುಪ್ರೀಂಕೋರ್ಟ್ ಆದೇಶ ನೀಡಿದರೂ ನೀರು ಬಿಡುತ್ತಿಲ್ಲ. ಜುಲೈ 21ರೊಳಗೆ ಕೆಲಸ ಪ್ರಾರಂಭವಾಗಬೇಕು. ಇಲ್ಲದಿದ್ದರೆ ನಾವೇ ಕಣಕುಂಬಿಗೆ ಹೋಗಿ ಗೋವಾ ಸರ್ಕಾರ ನಿರ್ಮಿಸಿರುವ ತಡೆಗೋಡೆ ಒಡೆಯುತ್ತೇವೆ. ಕಾಮಗಾರಿಗೆ ಇದೇ ರೀತಿ ವಿರೋಧ ವ್ಯಕ್ತಪಡಿಸಿದರೆ ಗೋವಾಗೆ ಹಾಲು, ತರಕಾರಿ ಸೇರಿ ಮತ್ತಿತರ ಸಾಮಗ್ರಿಗಳು ಹೋಗದಂತೆ ತಡೆಯಬೇಕಾಗುತ್ತದೆ'' ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು, ರೈತ ಹೋರಾಟಗಾರರು ಭಾಗವಹಿಸಿದ್ದರು.

ಬಳಿಕ ರೈತ ಮುಖಂಡ ಸೋಮು ರೈನಾಪುರೆ ಮಾತನಾಡಿ, "ಮಹದಾಯಿ ಯೋಜನೆಗೆ ಮತ್ತೆ ಕ್ಯಾತೆ ತೆಗೆದಿರುವ ಗೋವಾ ಸಿಎಂಗೆ ನಾಚಿಕೆ ಆಗಬೇಕು. ಕಣಕುಂಬಿ ಹುಲಿ ಸಂರಕ್ಷಣಾ ಪ್ರದೇಶ ಎನ್ನುತ್ತಿದ್ದಾರೆ. ಆದರೆ, ಅಲ್ಲಿ ಯಾವುದೇ ಹುಲಿಯೂ ಇಲ್ಲ‌, ಇಲಿಯೂ ಇಲ್ಲ. ಜುಲೈ 21ರಂದು ನರಗುಂದ ಬಂಡಾಯ ನಡೆದಿತ್ತು. ಈಗ ಮತ್ತೆ ಮಹದಾಯಿಗಾಗಿ ಮತ್ತೊಂದು ಬಂಡಾಯ ಏಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವಕಾಶ ಮಾಡಿಕೊಡಬಾರದು" ಎಂದು ಎಚ್ಚರಿಸಿದರು.

ಇದನ್ನೂ ಓದಿ: ಪಂಚ ಗ್ಯಾರಂಟಿ ಆರ್ಥಿಕ ಹೊರೆ; ಸರ್ಕಾರ ಈವರೆಗೆ ಮಾಡಿದ ಸಾಲದ ಸ್ಥಿತಿಗತಿ ಏನಿದೆ? - Karnataka Government

ಗೋವಾ ಬಸ್ ತಡೆದು ಮಹದಾಯಿ ಹೋರಾಟಗಾರರ ಪ್ರತಿಭಟನೆ (ETV Bharat)

ಬೆಳಗಾವಿ: ಗೋವಾ ಬಸ್​ ತಡೆದು ಮಹದಾಯಿ, ಕಳಸಾ - ಬಂಡೂರಿ ಹೋರಾಟಗಾರರು ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ.

ಕೇಂದ್ರದ ಪ್ರವಾಹ ತಂಡದ ಅಧಿಕಾರಿಗಳು ನಿನ್ನೆ ಮಹದಾಯಿ ಜಲಾನಯನ ಪ್ರದೇಶಕ್ಕೆ ಭೇಟಿ ನೀಡಿದ್ದನ್ನು ಖಂಡಿಸಿ ಸುರಿಯುವ ಮಳೆಯನ್ನೂ ಲೆಕ್ಕಿಸದೇ ಕೈಯಲ್ಲಿ ಬುಟ್ಟಿ, ಪಿಕಾಸಿ ಹಿಡಿದಿದ್ದ ರೈತ ಮುಖಂಡರು, ಕರವೇ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮತ್ತು ಗೋವಾ ಸಿಎಂ ಪ್ರಮೋದ್​ ಸಾವಂತ ಅವರ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಆಗಮಿಸಿದ ಗೋವಾ ಬಸ್ ತಡೆದ ಹೋರಾಟಗಾರರು ಆಕ್ರೋಶ ಹೊರ ಹಾಕಿದರು. ಇದೇ ವೇಳೆ ಓರ್ವ ಮಹಿಳೆ ಗೋವಾ ಬಸ್ ಏರಿದ ಘಟನೆಯೂ ನಡೆಯಿತು. ಬಳಿಕ ಆ ಮಹಿಳೆಯನ್ನು ಬಸ್​ನಿಂದ ಕೆಳಗಿಳಿಸಲಾಯಿತು.

ಇದಕ್ಕೂ ಮೊದಲು ಮಾತನಾಡಿದ ಕರವೇ ಮುಖಂಡ ವಾಜೀದ್ ಹಿರೇಕೊಡಿ, ''ಸುಪ್ರೀಂಕೋರ್ಟ್ ಆದೇಶ ನೀಡಿದರೂ ನೀರು ಬಿಡುತ್ತಿಲ್ಲ. ಜುಲೈ 21ರೊಳಗೆ ಕೆಲಸ ಪ್ರಾರಂಭವಾಗಬೇಕು. ಇಲ್ಲದಿದ್ದರೆ ನಾವೇ ಕಣಕುಂಬಿಗೆ ಹೋಗಿ ಗೋವಾ ಸರ್ಕಾರ ನಿರ್ಮಿಸಿರುವ ತಡೆಗೋಡೆ ಒಡೆಯುತ್ತೇವೆ. ಕಾಮಗಾರಿಗೆ ಇದೇ ರೀತಿ ವಿರೋಧ ವ್ಯಕ್ತಪಡಿಸಿದರೆ ಗೋವಾಗೆ ಹಾಲು, ತರಕಾರಿ ಸೇರಿ ಮತ್ತಿತರ ಸಾಮಗ್ರಿಗಳು ಹೋಗದಂತೆ ತಡೆಯಬೇಕಾಗುತ್ತದೆ'' ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು, ರೈತ ಹೋರಾಟಗಾರರು ಭಾಗವಹಿಸಿದ್ದರು.

ಬಳಿಕ ರೈತ ಮುಖಂಡ ಸೋಮು ರೈನಾಪುರೆ ಮಾತನಾಡಿ, "ಮಹದಾಯಿ ಯೋಜನೆಗೆ ಮತ್ತೆ ಕ್ಯಾತೆ ತೆಗೆದಿರುವ ಗೋವಾ ಸಿಎಂಗೆ ನಾಚಿಕೆ ಆಗಬೇಕು. ಕಣಕುಂಬಿ ಹುಲಿ ಸಂರಕ್ಷಣಾ ಪ್ರದೇಶ ಎನ್ನುತ್ತಿದ್ದಾರೆ. ಆದರೆ, ಅಲ್ಲಿ ಯಾವುದೇ ಹುಲಿಯೂ ಇಲ್ಲ‌, ಇಲಿಯೂ ಇಲ್ಲ. ಜುಲೈ 21ರಂದು ನರಗುಂದ ಬಂಡಾಯ ನಡೆದಿತ್ತು. ಈಗ ಮತ್ತೆ ಮಹದಾಯಿಗಾಗಿ ಮತ್ತೊಂದು ಬಂಡಾಯ ಏಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವಕಾಶ ಮಾಡಿಕೊಡಬಾರದು" ಎಂದು ಎಚ್ಚರಿಸಿದರು.

ಇದನ್ನೂ ಓದಿ: ಪಂಚ ಗ್ಯಾರಂಟಿ ಆರ್ಥಿಕ ಹೊರೆ; ಸರ್ಕಾರ ಈವರೆಗೆ ಮಾಡಿದ ಸಾಲದ ಸ್ಥಿತಿಗತಿ ಏನಿದೆ? - Karnataka Government

ETV Bharat Logo

Copyright © 2024 Ushodaya Enterprises Pvt. Ltd., All Rights Reserved.