ETV Bharat / state

ಮಾದಪ್ಪನ ಹುಂಡಿಯಲ್ಲಿ ದಾಖಲೆಯ ಹಣ ಸಂಗ್ರಹ: 25 ದಿನದಲ್ಲಿ ₹3 ಕೋಟಿ ಕಾಣಿಕೆ - Malemahadeshwara Temple

ಮಲೆಮಹದೇಶ್ವರ ದೇಗುಲದ ಹುಂಡಿಗಳ ಹಣ ಎಣಿಕೆ ನಡೆದಿದ್ದು, 25 ದಿನಗಳಲ್ಲಿ 3 ಕೋಟಿ ರೂ.ಗೂ ಅಧಿಕ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.

author img

By ETV Bharat Karnataka Team

Published : Mar 27, 2024, 9:32 AM IST

ಮಾದಪ್ಪನ ಹುಂಡಿಯಲ್ಲಿ ದಾಖಲೆಯ ಹಣ ಸಂಗ್ರಹ
ಮಾದಪ್ಪನ ಹುಂಡಿಯಲ್ಲಿ ದಾಖಲೆಯ ಹಣ ಸಂಗ್ರಹ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಪ್ರಸಿದ್ಧ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ 25 ದಿನಗಳ ಅವಧಿಯಲ್ಲಿ ದಾಖಲೆಯ 3.13 ಕೋಟಿ ರೂ. ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ರಘು ಈ ಕುರಿತು ಮಾಹಿತಿ ನೀಡಿದ್ದಾರೆ.

ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬೆಳಿಗ್ಗೆ 8 ಗಂಟೆಗೆ ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾಗಳ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ರಾತ್ರಿ 10:40ರ ಗಂಟೆಯವರೆಗೂ ನಡೆದಿದೆ.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಹರಕೆ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿಯನ್ನು ಹುಂಡಿಗೆ ಹಾಕಿದ್ದಾರೆ.

ಹುಂಡಿಗಳ ಎಣಿಕೆಯಲ್ಲಿ ಈ ಸಲ 3,13,00,931 ರೂ. ಸಂಗ್ರಹವಾಗಿದೆ. 47 ಗ್ರಾಂ ಚಿನ್ನ ಮತ್ತು 2.3 ಕೆ.ಜಿ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಭಕ್ತರು ಅರ್ಪಿಸಿದ್ದಾರೆ. ಇದರ ಜೊತೆಗೆ ಯುಎಸ್​ಎ, ಬಾಂಗ್ಲಾದೇಶ, ನೇಪಾಳ, ಮಲೇಶಿಯಾದ 7 ವಿದೇಶಿ ನೋಟುಗಳು, ಚಲಾವಣೆಯಲ್ಲಿಲ್ಲದ 2000 ಮುಖಬೆಲೆಯ 26 ನೋಟುಗಳನ್ನು ಹುಂಡಿಯಲ್ಲಿ ಹಾಕಿದ್ದಾರೆ ಎಂದು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದರು.

ಇದನ್ನೂ ಓದಿ: ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದ ಹುಂಡಿ ಕಳ್ಳತನಕ್ಕೆ ಖದೀಮರ ಯತ್ನ: ಪಕ್ಕದ ಗುಡಿಯಲ್ಲಿ ಎರಡು ಬೆಳ್ಳಿ ಕಿರೀಟ, ತಾಳಿ ಕಳವು

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಪ್ರಸಿದ್ಧ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ 25 ದಿನಗಳ ಅವಧಿಯಲ್ಲಿ ದಾಖಲೆಯ 3.13 ಕೋಟಿ ರೂ. ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ರಘು ಈ ಕುರಿತು ಮಾಹಿತಿ ನೀಡಿದ್ದಾರೆ.

ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬೆಳಿಗ್ಗೆ 8 ಗಂಟೆಗೆ ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾಗಳ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ರಾತ್ರಿ 10:40ರ ಗಂಟೆಯವರೆಗೂ ನಡೆದಿದೆ.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಹರಕೆ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿಯನ್ನು ಹುಂಡಿಗೆ ಹಾಕಿದ್ದಾರೆ.

ಹುಂಡಿಗಳ ಎಣಿಕೆಯಲ್ಲಿ ಈ ಸಲ 3,13,00,931 ರೂ. ಸಂಗ್ರಹವಾಗಿದೆ. 47 ಗ್ರಾಂ ಚಿನ್ನ ಮತ್ತು 2.3 ಕೆ.ಜಿ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಭಕ್ತರು ಅರ್ಪಿಸಿದ್ದಾರೆ. ಇದರ ಜೊತೆಗೆ ಯುಎಸ್​ಎ, ಬಾಂಗ್ಲಾದೇಶ, ನೇಪಾಳ, ಮಲೇಶಿಯಾದ 7 ವಿದೇಶಿ ನೋಟುಗಳು, ಚಲಾವಣೆಯಲ್ಲಿಲ್ಲದ 2000 ಮುಖಬೆಲೆಯ 26 ನೋಟುಗಳನ್ನು ಹುಂಡಿಯಲ್ಲಿ ಹಾಕಿದ್ದಾರೆ ಎಂದು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದರು.

ಇದನ್ನೂ ಓದಿ: ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದ ಹುಂಡಿ ಕಳ್ಳತನಕ್ಕೆ ಖದೀಮರ ಯತ್ನ: ಪಕ್ಕದ ಗುಡಿಯಲ್ಲಿ ಎರಡು ಬೆಳ್ಳಿ ಕಿರೀಟ, ತಾಳಿ ಕಳವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.