ETV Bharat / state

ಇದು ಪ್ರಜಾಪ್ರಭುತ್ವದ ಕೊನೆಯ ಚುನಾವಣೆಯಂತೆ ಕಾಣುತ್ತಿದೆ: ಮಲ್ಲಿಕಾರ್ಜುನ ಖರ್ಗೆ - Mallikarjuna Kharge

ಜನರ ನಡುವೆ ಒಡಕು ಮೂಡಿಸಲು ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

Mallikarjuna Kharge
ಮಲ್ಲಿಕಾರ್ಜುನ ಖರ್ಗೆ
author img

By ETV Bharat Karnataka Team

Published : Mar 17, 2024, 12:34 PM IST

ಬೆಂಗಳೂರು: ಇದು ಪ್ರಜಾಪ್ರಭುತ್ವದ ಕೊನೆ ಚುನಾವಣೆಯಂತೆ ನನಗೆ ಕಾಣುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, "ಮೋದಿ ಪ್ರಜಾಪ್ರಭುತ್ವ ಕೊನೆಗಾಣಿಸಬೇಕು ಅಂತ ಬಯಸುತ್ತಾರೆ. ಇದೇ ಪ್ರಜಾಪ್ರಭುತ್ವದ ಕೊನೆಯ ಚುನಾವಣೆ. ಮಾತು, ವರ್ತನೆಯಿಂದ ಜನರ ನಡುವೆ ಬೇಧ ಮೂಡಿಸಲು ಅವರು ಯತ್ನಿಸುತ್ತಿದ್ದಾರೆ" ಎಂದು ಆರೋಪಿಸಿದರು.

"ಮೋದಿ ಕಲಬುರಗಿಯಿಂದ ಪ್ರಚಾರ ಪ್ರಾರಂಭ ಮಾಡಿದ್ದಾರೆ. ಪ್ರತೀ ರಾಜ್ಯಕ್ಕೆ ಹೋಗಿ ಇದನ್ನೇ ಮಾಡುತ್ತಿದ್ದಾರೆ.‌ ಇದೆಲ್ಲವನ್ನೂ ನೋಡಿದರೆ ಡೆಮಾಕ್ರಸಿಯ ಲಾಸ್ಟ್ ಇಲೆಕ್ಷನ್ ಇದು ಎಂಬಂತೆ ಕಾಣುತ್ತಿದೆ" ಎಂದು ವಾಗ್ದಾಳಿ ನಡೆಸಿದರು.

"ನ್ಯಾಯ ಯಾತ್ರೆಯ ಸಮಾರೋಪದಲ್ಲಿ ಎಲ್ಲ ನಾಯಕರು ಭಾಗಿಯಾಗುತ್ತಿದ್ದಾರೆ. ಎಲ್ಲ ಪಕ್ಷದ ನಾಯಕರಿಗೂ ಆಹ್ವಾನ ನೀಡಿದ್ದೇವೆ. ಇಂಡಿಯಾ ಒಕ್ಕೂಟ ಬಲಿಷ್ಠವಾಗಿದೆ ಎಂದು ಸಂದೇಶ ರವಾನಿಸುತ್ತೇವೆ" ಎಂದರು.

ಇದನ್ನೂ ಓದಿ: ಬಿಜೆಪಿಗೆ ಅನುಕೂಲ ಮಾಡಿಕೊಳ್ಳಲೆಂದೇ ಏಳು ಹಂತದಲ್ಲಿ ಲೋಕಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರಿಗೆ ಅನುಕೂಲ ಮಾಡಿಕೊಳ್ಳುವುದಕ್ಕೆ ಅಂತಾನೆ ಇಷ್ಟೊಂದು ಹಂತದಲ್ಲಿ ಚುನಾವಣೆ ನಡೆಯುತ್ತಿದೆ" ಎಂದು ಶನಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ಹೊರಹಾಕಿದ್ದರು. "ಚುನಾವಣಾ ಆಯೋಗ ಏಳು ಹಂತದಲ್ಲಿ ಚುನಾವಣೆ ಘೋಷಣೆ ಮಾಡಿದ್ದಾರೆ. ಸಾಮಾನ್ಯವಾಗಿ ನಾಲ್ಕೈದು ಹಂತದಲ್ಲಿ ಚುನಾವಣೆ ನಡೆಯುತ್ತಿತ್ತು. ಆದರೆ ಈ ಬಾರಿ ಏಳು ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಇದು ಸರಿಯಾದ ಪ್ರಕ್ರಿಯೆ ಅನ್ನಿಸಲ್ಲ" ಎಂದಿದ್ದರು.

ಇದನ್ನೂ ಓದಿ: ಕಲಬುರಗಿ: ಖರ್ಗೆ ತವರಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಬೆಂಗಳೂರು: ಇದು ಪ್ರಜಾಪ್ರಭುತ್ವದ ಕೊನೆ ಚುನಾವಣೆಯಂತೆ ನನಗೆ ಕಾಣುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, "ಮೋದಿ ಪ್ರಜಾಪ್ರಭುತ್ವ ಕೊನೆಗಾಣಿಸಬೇಕು ಅಂತ ಬಯಸುತ್ತಾರೆ. ಇದೇ ಪ್ರಜಾಪ್ರಭುತ್ವದ ಕೊನೆಯ ಚುನಾವಣೆ. ಮಾತು, ವರ್ತನೆಯಿಂದ ಜನರ ನಡುವೆ ಬೇಧ ಮೂಡಿಸಲು ಅವರು ಯತ್ನಿಸುತ್ತಿದ್ದಾರೆ" ಎಂದು ಆರೋಪಿಸಿದರು.

"ಮೋದಿ ಕಲಬುರಗಿಯಿಂದ ಪ್ರಚಾರ ಪ್ರಾರಂಭ ಮಾಡಿದ್ದಾರೆ. ಪ್ರತೀ ರಾಜ್ಯಕ್ಕೆ ಹೋಗಿ ಇದನ್ನೇ ಮಾಡುತ್ತಿದ್ದಾರೆ.‌ ಇದೆಲ್ಲವನ್ನೂ ನೋಡಿದರೆ ಡೆಮಾಕ್ರಸಿಯ ಲಾಸ್ಟ್ ಇಲೆಕ್ಷನ್ ಇದು ಎಂಬಂತೆ ಕಾಣುತ್ತಿದೆ" ಎಂದು ವಾಗ್ದಾಳಿ ನಡೆಸಿದರು.

"ನ್ಯಾಯ ಯಾತ್ರೆಯ ಸಮಾರೋಪದಲ್ಲಿ ಎಲ್ಲ ನಾಯಕರು ಭಾಗಿಯಾಗುತ್ತಿದ್ದಾರೆ. ಎಲ್ಲ ಪಕ್ಷದ ನಾಯಕರಿಗೂ ಆಹ್ವಾನ ನೀಡಿದ್ದೇವೆ. ಇಂಡಿಯಾ ಒಕ್ಕೂಟ ಬಲಿಷ್ಠವಾಗಿದೆ ಎಂದು ಸಂದೇಶ ರವಾನಿಸುತ್ತೇವೆ" ಎಂದರು.

ಇದನ್ನೂ ಓದಿ: ಬಿಜೆಪಿಗೆ ಅನುಕೂಲ ಮಾಡಿಕೊಳ್ಳಲೆಂದೇ ಏಳು ಹಂತದಲ್ಲಿ ಲೋಕಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರಿಗೆ ಅನುಕೂಲ ಮಾಡಿಕೊಳ್ಳುವುದಕ್ಕೆ ಅಂತಾನೆ ಇಷ್ಟೊಂದು ಹಂತದಲ್ಲಿ ಚುನಾವಣೆ ನಡೆಯುತ್ತಿದೆ" ಎಂದು ಶನಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ಹೊರಹಾಕಿದ್ದರು. "ಚುನಾವಣಾ ಆಯೋಗ ಏಳು ಹಂತದಲ್ಲಿ ಚುನಾವಣೆ ಘೋಷಣೆ ಮಾಡಿದ್ದಾರೆ. ಸಾಮಾನ್ಯವಾಗಿ ನಾಲ್ಕೈದು ಹಂತದಲ್ಲಿ ಚುನಾವಣೆ ನಡೆಯುತ್ತಿತ್ತು. ಆದರೆ ಈ ಬಾರಿ ಏಳು ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಇದು ಸರಿಯಾದ ಪ್ರಕ್ರಿಯೆ ಅನ್ನಿಸಲ್ಲ" ಎಂದಿದ್ದರು.

ಇದನ್ನೂ ಓದಿ: ಕಲಬುರಗಿ: ಖರ್ಗೆ ತವರಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.