ETV Bharat / state

ದಾವಣಗೆರೆ: ವಿವಾಹಿತೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನ, ವಿರೋಧಿಸಿದ್ದಕ್ಕೆ ಚಾಕು ಇರಿತ - Rape Attempt On Woman

author img

By ETV Bharat Karnataka Team

Published : Jun 23, 2024, 9:51 AM IST

ವ್ಯಕ್ತಿಯೋರ್ವ ವಿವಾಹಿತೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

RAPE ATTEMPT
ಮಹಿಳೆ ಮೇಲೆ ಅತ್ಯಾಚಾರ ಯತ್ನ (ETV Bharat)

ದಾವಣಗೆರೆ: ವ್ಯಕ್ತಿಯೋರ್ವ ವಿವಾಹಿತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಚಾಕು ಇರಿದಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾಟಪ್ಪ (30) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಈತ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ‌ ಮುಂದಾಗಿದ್ದಾನೆ. ಅಷ್ಟರಲ್ಲಿ ಮಹಿಳೆ ಅತ್ಯಾಚಾರಕ್ಕೆ ಪ್ರತಿರೋಧವೊಡ್ಡಿ, ಜೋರಾಗಿ ಕೂಗಿಕೊಂಡಿದ್ದಾರೆ. ಗ್ರಾಮಸ್ಥರಿಗೆ ವಿಚಾರ ಗೊತ್ತಾಗುತ್ತದೆ ಎಂದು ತಿಳಿದ ಆರೋಪಿ, ಮಹಿಳೆಯ ಕುತ್ತಿಗೆ ಸೇರಿದಂತೆ ಮೂರು ಕಡೆ ಚಾಕು ಇರಿದಿದ್ದಾನೆ. ಮಹಿಳೆಯ ಚೀರಾಟ ಕೇಳಿ ಧಾವಿಸಿದ ಗ್ರಾಮಸ್ಥರು, ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಜಗಳೂರು ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಗಾಯಗೊಂಡ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.‌

ಇದನ್ನೂ ಓದಿ: ರಾಯಚೂರು: ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಯತ್ನ

ದಾವಣಗೆರೆ: ವ್ಯಕ್ತಿಯೋರ್ವ ವಿವಾಹಿತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಚಾಕು ಇರಿದಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾಟಪ್ಪ (30) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಈತ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ‌ ಮುಂದಾಗಿದ್ದಾನೆ. ಅಷ್ಟರಲ್ಲಿ ಮಹಿಳೆ ಅತ್ಯಾಚಾರಕ್ಕೆ ಪ್ರತಿರೋಧವೊಡ್ಡಿ, ಜೋರಾಗಿ ಕೂಗಿಕೊಂಡಿದ್ದಾರೆ. ಗ್ರಾಮಸ್ಥರಿಗೆ ವಿಚಾರ ಗೊತ್ತಾಗುತ್ತದೆ ಎಂದು ತಿಳಿದ ಆರೋಪಿ, ಮಹಿಳೆಯ ಕುತ್ತಿಗೆ ಸೇರಿದಂತೆ ಮೂರು ಕಡೆ ಚಾಕು ಇರಿದಿದ್ದಾನೆ. ಮಹಿಳೆಯ ಚೀರಾಟ ಕೇಳಿ ಧಾವಿಸಿದ ಗ್ರಾಮಸ್ಥರು, ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಜಗಳೂರು ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಗಾಯಗೊಂಡ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.‌

ಇದನ್ನೂ ಓದಿ: ರಾಯಚೂರು: ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಯತ್ನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.