ETV Bharat / state

ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಆರೋಪಿ ಸೆರೆ; ಸೈನ್ ಇನ್ ಸೆಕ್ಯೂರಿಟಿ ಮಾಹಿತಿಯಿಂದ ತಪ್ಪಿದ ದುಷ್ಕೃತ್ಯ - Thief Caught Live

author img

By ETV Bharat Karnataka Team

Published : Jun 24, 2024, 3:11 PM IST

ಉಡುಪಿ ಜಿಲ್ಲೆಯ ಸೊಸೈಟಿಯೊಂದರಲ್ಲಿ ನಡೆಯುತ್ತಿದ್ದ ಕಳ್ಳತನವನ್ನು ಗಮನಿಸಿದ ಸಿಸಿಟಿವಿ ಮಾನಿಟರಿಂಗ್​ ತಂಡ ನೀಡಿದ ಮಾಹಿತಿಯಿಂದ ಕೆಲವೇ ನಿಮಿಷಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಳ್ಳತನಕ್ಕೆ ಯತ್ನಿಸುತ್ತಿರುವಾಗಲೇ ಆರೋಪಿ ಲಾಕ್
ಸಿಸಿಟಿವಿ ದೃಶ್ಯ (ETV Bharat)
ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಆರೋಪಿ ಸೆರೆ (ETV Bharat)

ಉಡುಪಿ: ಸಿಸಿಟಿವಿ ಮಾನಿಟರಿಂಗ್​ ತಂಡದ ಸಮಯಪ್ರಜ್ಞೆಯಿಂದ ಸೊಸೈಟಿಯೊಂದರ ಕಿಟಕಿಯ ಸರಳು ಮುರಿದು ಒಳನುಗ್ಗಿದ ಕಳ್ಳನನ್ನು ಸೆರೆಹಿಡಿಯುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ಪ್ರಕಾಶ್ ಬಾಬು (44) ಸಿಕ್ಕಿಬಿದ್ದಿದ್ದಾನೆ.

ಶುಕ್ರವಾರ ತಡರಾತ್ರಿ 1:44ರ ಸುಮಾರಿಗೆ ಮುಳ್ಳಿಕಟ್ಟೆಯ ಪಂಚಗಂಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಹೊಸಾಡು ಶಾಖಾ ಕಟ್ಟಡದ ಕಿಟಕಿಯ ಸರಳು ಮುರಿದು ಒಳಪ್ರವೇಶಿಸಿದ ಆರೋಪಿ, ಸಿಬ್ಬಂದಿ ಕುಳಿತುಕೊಳ್ಳುವ ಮೇಜಿನ ಸುತ್ತಮುತ್ತ ತಡಕಾಡಿದ್ದಾನೆ.

ಈತ ಒಳನುಗ್ಗಿದ ಕೂಡಲೇ ಎಚ್ಚೆತ್ತುಕೊಂಡ ಸೈನ್ ಇನ್ ಸೆಕ್ಯೂರಿಟಿಯ ಲೈವ್ ಮಾನಿಟರಿಂಗ್ ಸಿಬ್ಬಂದಿ, ಬೀಟ್ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಗಂಗೊಳ್ಳಿ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಬಸವರಾಜ್ ಹಾಗೂ ಸಿಬ್ಬಂದಿ ಹತ್ತೇ ನಿಮಿಷದೊಳಗೆ ಸ್ಥಳಕ್ಕಾಗಮಿಸಿ ಕಳ್ಳನನ್ನು ಬಂಧಿಸಿದ್ದಾರೆ.

ಈ ಸಂದರ್ಭದಲ್ಲಿ ಆರೋಪಿ, "ಹೊಡೀಬೇಡಿ ಸರ್, ನಾನೇ ಹೊರಬರುತ್ತೇನೆ" ಎಂದು ಹೇಳುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಂಧಿತ ಆರೋಪಿ ಪ್ರಕಾಶ್​ ಬಾಬು ಕೇರಳದಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ. ಈ ಬಗ್ಗೆ ಗಂಗೊಳ್ಳಿ ಪೊಲೀಸರು ಇನ್ನಷ್ಟು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿಗೆ, ಕಮಲಶಿಲೆ ಗೋಶಾಲೆಯಲ್ಲಿ ದುಷ್ಕರ್ಮಿಗಳು ಗೋ ಕಳವಿಗೆ ಯತ್ನಿಸಿದ ಕೂಡಲೇ ದೇವಸ್ಥಾನದ ಭದ್ರತಾ ಸಿಬ್ಬಂದಿ ಹಾಗು ಪೊಲೀಸರಿಗೆ ಮಾಹಿತಿ ನೀಡಿದ ಸೈನ್ ಇನ್ ಸೆಕ್ಯೂರಿಟಿ ತಂಡ ಸಂಭಾವ್ಯ ಕಳ್ಳತನವನ್ನು ವಿಫಲಗೊಳಿಸಿತ್ತು.

ಏನಿದು ಸೈನ್ ಇನ್ ಸೆಕ್ಯೂರಿಟಿ?: ದೇವಸ್ಥಾನ, ಜ್ಯುವೆಲ್ಲರಿ, ಅಂಗಡಿ, ಮನೆ, ಫ್ಲ್ಯಾಟ್ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸುವುದು ಒಂದೆಡೆಯಾದರೆ, ಹೀಗೆ ಅಳವಡಿಸಿದ ಸಿಸಿಟಿವಿ ದೃಶ್ಯಾವಳಿಗಳ ಮೇಲೆ ದಿನದ 24 ಗಂಟೆಯೂ ಸತತವಾಗಿ ಹದ್ದಿನ ಕಣ್ಣಿಟ್ಟು ಕಾಯುವುದು ಕಾರ್ಯಾಚರಣೆಯ ಇನ್ನೊಂದು ಭಾಗ. ಟಿವಿ, ಲ್ಯಾಪ್‌ಟಾಪ್ ಮೂಲಕ ನಿತ್ಯದ ಮಾನಿಟರಿಂಗ್ ವ್ಯವಸ್ಥೆಯನ್ನು ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆ ಕುಂದಾಪುರದ ಅಂಕದಕಟ್ಟೆಯಲ್ಲಿ ಮಾಡುತ್ತಿದೆ.

ಇದರ ವ್ಯವಸ್ಥಾಪಕ ಕೃಷ್ಣ ಪೂಜಾರಿ ಅವರ ತಂಡ ಪೊಲೀಸರ ಮಾರ್ಗದರ್ಶನದಲ್ಲಿ ರಾತ್ರಿ-ಹಗಲು ಸಿಸಿ ಟಿವಿ ಕಣ್ಗಾವಲು ಮಾಡುತ್ತದೆ. ಕ್ಯಾಮೆರಾಗಳ ಮಾನಿಟರಿಂಗ್ ಮಾಡುವ ಮೂಲಕ ಆರಂಭಗೊಂಡ ಈ ಸಂಸ್ಥೆ ಇದೀಗ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅಳವಡಿಸಿರುವ 450 ಕ್ಯಾಮೆರಾಗಳನ್ನು ಮಾನಿಟರಿಂಗ್ ಮಾಡುತ್ತಿದೆ. ಕುಂದಾಪುರ ಹಾಗೂ ಬೈಂದೂರು ತಾಲ್ಲೂಕಿನ ಹೆಚ್ಚಿನ ಧಾರ್ಮಿಕ ಸಂಸ್ಥೆಗಳು, ಕಾರ್ಖಾನೆಗಳು, ಉದ್ಯಮಗಳು ಹಾಗೂ ಸಾರ್ವಜನಿಕರು ಈಗಾಗಲೇ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಗ್ರಾಹಕರಲ್ಲದೆ ತಮ್ಮ ವ್ಯಾಪ್ತಿಯೊಳಗೆ ಬರುವ ಸಾರ್ವಜನಿಕ ಸ್ಥಳಗಳಲ್ಲಿಯೂ ಈ ರೀತಿಯ ಪ್ರಯತ್ನ ಹಾಗೂ ಘಟನೆಗಳು ಕಂಡುಬಂದಲ್ಲಿ ಸೆಕ್ಯುರಿಟಿ ಸಂಸ್ಥೆ ಸಂಬಂಧಿಸಿದವರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: ಬೆಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಹತ್ಯೆ, ಪೊಲೀಸರಿಂದ ತನಿಖೆ - Double Murder in Bengaluru

ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಆರೋಪಿ ಸೆರೆ (ETV Bharat)

ಉಡುಪಿ: ಸಿಸಿಟಿವಿ ಮಾನಿಟರಿಂಗ್​ ತಂಡದ ಸಮಯಪ್ರಜ್ಞೆಯಿಂದ ಸೊಸೈಟಿಯೊಂದರ ಕಿಟಕಿಯ ಸರಳು ಮುರಿದು ಒಳನುಗ್ಗಿದ ಕಳ್ಳನನ್ನು ಸೆರೆಹಿಡಿಯುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ಪ್ರಕಾಶ್ ಬಾಬು (44) ಸಿಕ್ಕಿಬಿದ್ದಿದ್ದಾನೆ.

ಶುಕ್ರವಾರ ತಡರಾತ್ರಿ 1:44ರ ಸುಮಾರಿಗೆ ಮುಳ್ಳಿಕಟ್ಟೆಯ ಪಂಚಗಂಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಹೊಸಾಡು ಶಾಖಾ ಕಟ್ಟಡದ ಕಿಟಕಿಯ ಸರಳು ಮುರಿದು ಒಳಪ್ರವೇಶಿಸಿದ ಆರೋಪಿ, ಸಿಬ್ಬಂದಿ ಕುಳಿತುಕೊಳ್ಳುವ ಮೇಜಿನ ಸುತ್ತಮುತ್ತ ತಡಕಾಡಿದ್ದಾನೆ.

ಈತ ಒಳನುಗ್ಗಿದ ಕೂಡಲೇ ಎಚ್ಚೆತ್ತುಕೊಂಡ ಸೈನ್ ಇನ್ ಸೆಕ್ಯೂರಿಟಿಯ ಲೈವ್ ಮಾನಿಟರಿಂಗ್ ಸಿಬ್ಬಂದಿ, ಬೀಟ್ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಗಂಗೊಳ್ಳಿ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಬಸವರಾಜ್ ಹಾಗೂ ಸಿಬ್ಬಂದಿ ಹತ್ತೇ ನಿಮಿಷದೊಳಗೆ ಸ್ಥಳಕ್ಕಾಗಮಿಸಿ ಕಳ್ಳನನ್ನು ಬಂಧಿಸಿದ್ದಾರೆ.

ಈ ಸಂದರ್ಭದಲ್ಲಿ ಆರೋಪಿ, "ಹೊಡೀಬೇಡಿ ಸರ್, ನಾನೇ ಹೊರಬರುತ್ತೇನೆ" ಎಂದು ಹೇಳುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಂಧಿತ ಆರೋಪಿ ಪ್ರಕಾಶ್​ ಬಾಬು ಕೇರಳದಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ. ಈ ಬಗ್ಗೆ ಗಂಗೊಳ್ಳಿ ಪೊಲೀಸರು ಇನ್ನಷ್ಟು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿಗೆ, ಕಮಲಶಿಲೆ ಗೋಶಾಲೆಯಲ್ಲಿ ದುಷ್ಕರ್ಮಿಗಳು ಗೋ ಕಳವಿಗೆ ಯತ್ನಿಸಿದ ಕೂಡಲೇ ದೇವಸ್ಥಾನದ ಭದ್ರತಾ ಸಿಬ್ಬಂದಿ ಹಾಗು ಪೊಲೀಸರಿಗೆ ಮಾಹಿತಿ ನೀಡಿದ ಸೈನ್ ಇನ್ ಸೆಕ್ಯೂರಿಟಿ ತಂಡ ಸಂಭಾವ್ಯ ಕಳ್ಳತನವನ್ನು ವಿಫಲಗೊಳಿಸಿತ್ತು.

ಏನಿದು ಸೈನ್ ಇನ್ ಸೆಕ್ಯೂರಿಟಿ?: ದೇವಸ್ಥಾನ, ಜ್ಯುವೆಲ್ಲರಿ, ಅಂಗಡಿ, ಮನೆ, ಫ್ಲ್ಯಾಟ್ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸುವುದು ಒಂದೆಡೆಯಾದರೆ, ಹೀಗೆ ಅಳವಡಿಸಿದ ಸಿಸಿಟಿವಿ ದೃಶ್ಯಾವಳಿಗಳ ಮೇಲೆ ದಿನದ 24 ಗಂಟೆಯೂ ಸತತವಾಗಿ ಹದ್ದಿನ ಕಣ್ಣಿಟ್ಟು ಕಾಯುವುದು ಕಾರ್ಯಾಚರಣೆಯ ಇನ್ನೊಂದು ಭಾಗ. ಟಿವಿ, ಲ್ಯಾಪ್‌ಟಾಪ್ ಮೂಲಕ ನಿತ್ಯದ ಮಾನಿಟರಿಂಗ್ ವ್ಯವಸ್ಥೆಯನ್ನು ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆ ಕುಂದಾಪುರದ ಅಂಕದಕಟ್ಟೆಯಲ್ಲಿ ಮಾಡುತ್ತಿದೆ.

ಇದರ ವ್ಯವಸ್ಥಾಪಕ ಕೃಷ್ಣ ಪೂಜಾರಿ ಅವರ ತಂಡ ಪೊಲೀಸರ ಮಾರ್ಗದರ್ಶನದಲ್ಲಿ ರಾತ್ರಿ-ಹಗಲು ಸಿಸಿ ಟಿವಿ ಕಣ್ಗಾವಲು ಮಾಡುತ್ತದೆ. ಕ್ಯಾಮೆರಾಗಳ ಮಾನಿಟರಿಂಗ್ ಮಾಡುವ ಮೂಲಕ ಆರಂಭಗೊಂಡ ಈ ಸಂಸ್ಥೆ ಇದೀಗ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅಳವಡಿಸಿರುವ 450 ಕ್ಯಾಮೆರಾಗಳನ್ನು ಮಾನಿಟರಿಂಗ್ ಮಾಡುತ್ತಿದೆ. ಕುಂದಾಪುರ ಹಾಗೂ ಬೈಂದೂರು ತಾಲ್ಲೂಕಿನ ಹೆಚ್ಚಿನ ಧಾರ್ಮಿಕ ಸಂಸ್ಥೆಗಳು, ಕಾರ್ಖಾನೆಗಳು, ಉದ್ಯಮಗಳು ಹಾಗೂ ಸಾರ್ವಜನಿಕರು ಈಗಾಗಲೇ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಗ್ರಾಹಕರಲ್ಲದೆ ತಮ್ಮ ವ್ಯಾಪ್ತಿಯೊಳಗೆ ಬರುವ ಸಾರ್ವಜನಿಕ ಸ್ಥಳಗಳಲ್ಲಿಯೂ ಈ ರೀತಿಯ ಪ್ರಯತ್ನ ಹಾಗೂ ಘಟನೆಗಳು ಕಂಡುಬಂದಲ್ಲಿ ಸೆಕ್ಯುರಿಟಿ ಸಂಸ್ಥೆ ಸಂಬಂಧಿಸಿದವರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: ಬೆಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಹತ್ಯೆ, ಪೊಲೀಸರಿಂದ ತನಿಖೆ - Double Murder in Bengaluru

ETV Bharat Logo

Copyright © 2024 Ushodaya Enterprises Pvt. Ltd., All Rights Reserved.