ETV Bharat / state

ಶಾಸಕರನ್ನು ಕರೆದಿಲ್ಲ ಎನ್ನುವ ಕಾರಣಕ್ಕೆ ಕೆರಗೋಡು ಯುವಕರ ಮೇಲೆ ಲಾಠಿಚಾರ್ಜ್: ಹೆಚ್​ಡಿಕೆ

ಮಂಡ್ಯದ ಕೆರಗೋಡುನಲ್ಲಿ ಹನುಮ ಧ್ವಜದ ವಿಷಯದಲ್ಲಿ ಪೊಲೀಸರು, ರಾಜ್ಯ ಕಾಂಗ್ರೆಸ್ ಸರ್ಕಾರದ ವರ್ತನೆ ಅಕ್ಷಮ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

author img

By ETV Bharat Karnataka Team

Published : Jan 28, 2024, 8:52 PM IST

mandya-hanuma-dwaja-issue-jds-leader-hd-kumaraswamy-condemned-the-incident
ಶಾಸಕರನ್ನು ಕರೆದಿಲ್ಲ ಎನ್ನುವ ಕಾರಣಕ್ಕೆ ಕೆರಗೋಡು ಯುವಕರ ಮೇಲೆ ಲಾಠಿಚಾರ್ಜ್: ಹೆಚ್​ಡಿಕೆ

ಬೆಂಗಳೂರು: ಕಾರ್ಯಕ್ರಮಕ್ಕೆ ಶಾಸಕರನ್ನು ಕರೆಯಲಿಲ್ಲ ಎನ್ನುವ ಒಂದೇ ಕಾರಣಕ್ಕೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಯುವಕರ ಮೇಲೆ ದಬ್ಬಾಳಿಕೆ ನಡೆಸಿ ಲಾಠಿಚಾರ್ಜ್‌ ಮಾಡಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೆರಗೋಡು ಗ್ರಾಮದಲ್ಲಿ ಏನೆಲ್ಲಾ ಧ್ವಂಸ ಮಾಡಲಾಗಿಯೋ ಅದೆಲ್ಲಾ ಯಥಾಸ್ಥಿತಿಗೆ ಬರಬೇಕು. ನಾನು ಕೆರಗೋಡು ಗ್ರಾಮದ ಯುವಕರ ಜತೆ ಇದ್ದೇನೆ ಎಂದು ತಿಳಿಸಿದ್ದಾರೆ.

ಮಂಡ್ಯದ ಕೆರಗೋಡುನಲ್ಲಿ ಹನುಮ ಧ್ವಜದ ವಿಷಯದಲ್ಲಿ ಪೊಲೀಸರು, ರಾಜ್ಯ ಕಾಂಗ್ರೆಸ್ ಸರ್ಕಾರದ ವರ್ತನೆ ಅಕ್ಷಮ್ಯ, ಅನಾಗರೀಕ. ಕಾಂಗ್ರೆಸ್‌ನ ಕಣಕಣದಲ್ಲೂ ಜನದ್ವೇಷವೇ ತುಂಬಿದೆ. ಆ ಮನಃಸ್ಥಿತಿಯನ್ನು ಮತ್ತೆಮತ್ತೆ ರುಜುವಾತು ಮಾಡುತ್ತಿದೆ. ಮುಗ್ಧ ಯುವಕರ ಮೇಲೆ ಲಾಠಿಚಾರ್ಜ್ ಮಾಡುವವರೆಗೂ ಆ ದ್ವೇಷ ಬಂದು ನಿಂತಿದೆ ಎಂದು ಅವರು ಕಿಡಿಕಾರಿದ್ದಾರೆ.

ಕೆರಗೋಡುನಲ್ಲಿ ಯುವಕರು ತಾವೇ ಹಣ ಸಂಗ್ರಹಿಸಿ ಭಕ್ತಿಯಿಂದ ಸ್ಥಾಪಿಸಿದ ಹನುಮ ಧ್ವಜಸ್ತಂಭ ಧ್ವಂಸ ಮಾಡಿ ಧ್ವಜ ಇಳಿಸಿದ್ದು, ಪ್ರಶ್ನಿಸಿದ ಹನುಮಭಕ್ತ ಯುವಕರ ಮೇಲೆ ಲಾಠಿಚಾರ್ಜ್‌ ಮಾಡಿರುವ ಪೊಲೀಸರ ವರ್ತನೆ ಅತಿರೇಕದ್ದು. ಲಾಠಿಚಾರ್ಜ್‌ ಮಾಡಲು ಇವರಿಗೆ ಆದೇಶಿಸಿದ ಆ ಪ್ರಭೃತಿ ಯಾರು?. ಯುವಕರು ಪಂಚಾಯಿತಿ ಅನುಮತಿ ಪಡೆದೇ ದ್ವಜಸ್ತಂಭ ನಿರ್ಮಿಸಿದ್ದಾರೆ. ಧೈರ್ಯ, ಸಾಹಸ, ನಂಬಿಕೆ, ನಿಷ್ಠೆ, ಭಕ್ತಿಯ ಪ್ರತೀಕನಾದ ಹನುಮ ದೇವರು ಯುವಕರ ಆದರ್ಶ. ಹಳ್ಳಿಗರ ಭಾವನೆಗಳನ್ನು ಗೌರವಿಸದಷ್ಟು ಅಸಹಿಷ್ಣುತೆಯ ಉರಿಯಲ್ಲಿ ಸರ್ಕಾರ ಬೇಯುತ್ತಿದೆ. ಶಾಸಕರನ್ನು ಕರೆಯಲಿಲ್ಲ ಎನ್ನುವ ಕಾರಣಕ್ಕೆ ಇಷ್ಟೆಲ್ಲಾ ಮಾಡಬೇಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕರ್ನಾಟಕ ಹನುಮ ಜನ್ಮಸ್ಥಳ. ನನ್ನ ಹೆಸರಿನಲ್ಲೂ ರಾಮನಿದ್ದಾನೆ ಎಂದು ಹುಸಿಭಕ್ತಿಯ ಢೋಂಗಿಗಳಿಗೆ ಹನುಮಭಕ್ತಿ ಅರ್ಥವಾಗುವುದೇ?, ವೋಟಿಗಾಗಿ, ಅಧಿಕಾರಕ್ಕಾಗಿ ಜಾತಿ-ಧರ್ಮಗಳನ್ನು ಒಡೆದು ದೇವರನ್ನೂ ರಾಜಕಾರಣಕ್ಕೆ ಎಳೆದು ತರುತ್ತಿರುವುದು, ಓಲೈಕೆ ರಾಜಕಾರಣದ ವಿಕೃತಿ. ಪೊಲೀಸರು ಹನುಮ ಭಕ್ತರ ಮೇಲೆ ಲಾಠಿಚಾರ್ಜ್‌ ಮಾಡಿದ್ದು, ಏಕಪಕ್ಷೀಯವಾಗಿ ಹನುಮಧ್ವಜ ತೆರವು ಮಾಡಿದ್ದು ತಪ್ಪು. ಕೂಡಲೇ ಅಲ್ಲಿ ಎಲ್ಲವೂ ಯಥಾಸ್ಥಿತಿಗೆ ಬರಲೇಬೇಕೆಂದು ಅವರು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ನಿಷೇಧಾಜ್ಞೆ ವಿಧಿಸಿ ಭಯಭೀತಿ ಉಂಟು ಮಾಡುವ ಅಗತ್ಯ ಇರಲೇ ಇಲ್ಲ. ಕೆರಗೋಡಿನ ಎಲ್ಲ ಸಮುದಾಯದ ಜನರೂ ಹನುಮಧ್ವಜ ಸ್ಥಾಪನೆಗೆ ಬೆಂಬಲ ಸೂಚಿಸಿದ್ದರೂ, ಓಲೈಕೆ ಕಾಂಗ್ರೆಸ್‌ ಸರ್ಕಾರ ಹನುಮ ವಿರೋಧಿ ಕೆಲಸ ಮಾಡಿದೆ. ತನ್ನ ಹಳೆಚಾಳಿಯನ್ನು ಕಾಂಗ್ರೆಸ್ ಬದಲಿಸಿಕೊಳ್ಳದಿದ್ದರೆ, ಈ ಸರ್ಕಾರದ ವಿರುದ್ಧ ಇಡೀ ರಾಜ್ಯವೇ ದಂಗೆ ಏಳಬೇಕಾಗುತ್ತದೆ. ನಾನು ಕೆರಗೋಡಿನ ಯುವಕರ ಜತೆ ಇದ್ದೇನೆ, ಇರುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: 'ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ': ಸಿಎಂ ವಜಾಗೆ ಹೆಚ್​ಡಿಕೆ ಆಗ್ರಹಿಸಿದ್ದೇಕೆ?

ಬೆಂಗಳೂರು: ಕಾರ್ಯಕ್ರಮಕ್ಕೆ ಶಾಸಕರನ್ನು ಕರೆಯಲಿಲ್ಲ ಎನ್ನುವ ಒಂದೇ ಕಾರಣಕ್ಕೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಯುವಕರ ಮೇಲೆ ದಬ್ಬಾಳಿಕೆ ನಡೆಸಿ ಲಾಠಿಚಾರ್ಜ್‌ ಮಾಡಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೆರಗೋಡು ಗ್ರಾಮದಲ್ಲಿ ಏನೆಲ್ಲಾ ಧ್ವಂಸ ಮಾಡಲಾಗಿಯೋ ಅದೆಲ್ಲಾ ಯಥಾಸ್ಥಿತಿಗೆ ಬರಬೇಕು. ನಾನು ಕೆರಗೋಡು ಗ್ರಾಮದ ಯುವಕರ ಜತೆ ಇದ್ದೇನೆ ಎಂದು ತಿಳಿಸಿದ್ದಾರೆ.

ಮಂಡ್ಯದ ಕೆರಗೋಡುನಲ್ಲಿ ಹನುಮ ಧ್ವಜದ ವಿಷಯದಲ್ಲಿ ಪೊಲೀಸರು, ರಾಜ್ಯ ಕಾಂಗ್ರೆಸ್ ಸರ್ಕಾರದ ವರ್ತನೆ ಅಕ್ಷಮ್ಯ, ಅನಾಗರೀಕ. ಕಾಂಗ್ರೆಸ್‌ನ ಕಣಕಣದಲ್ಲೂ ಜನದ್ವೇಷವೇ ತುಂಬಿದೆ. ಆ ಮನಃಸ್ಥಿತಿಯನ್ನು ಮತ್ತೆಮತ್ತೆ ರುಜುವಾತು ಮಾಡುತ್ತಿದೆ. ಮುಗ್ಧ ಯುವಕರ ಮೇಲೆ ಲಾಠಿಚಾರ್ಜ್ ಮಾಡುವವರೆಗೂ ಆ ದ್ವೇಷ ಬಂದು ನಿಂತಿದೆ ಎಂದು ಅವರು ಕಿಡಿಕಾರಿದ್ದಾರೆ.

ಕೆರಗೋಡುನಲ್ಲಿ ಯುವಕರು ತಾವೇ ಹಣ ಸಂಗ್ರಹಿಸಿ ಭಕ್ತಿಯಿಂದ ಸ್ಥಾಪಿಸಿದ ಹನುಮ ಧ್ವಜಸ್ತಂಭ ಧ್ವಂಸ ಮಾಡಿ ಧ್ವಜ ಇಳಿಸಿದ್ದು, ಪ್ರಶ್ನಿಸಿದ ಹನುಮಭಕ್ತ ಯುವಕರ ಮೇಲೆ ಲಾಠಿಚಾರ್ಜ್‌ ಮಾಡಿರುವ ಪೊಲೀಸರ ವರ್ತನೆ ಅತಿರೇಕದ್ದು. ಲಾಠಿಚಾರ್ಜ್‌ ಮಾಡಲು ಇವರಿಗೆ ಆದೇಶಿಸಿದ ಆ ಪ್ರಭೃತಿ ಯಾರು?. ಯುವಕರು ಪಂಚಾಯಿತಿ ಅನುಮತಿ ಪಡೆದೇ ದ್ವಜಸ್ತಂಭ ನಿರ್ಮಿಸಿದ್ದಾರೆ. ಧೈರ್ಯ, ಸಾಹಸ, ನಂಬಿಕೆ, ನಿಷ್ಠೆ, ಭಕ್ತಿಯ ಪ್ರತೀಕನಾದ ಹನುಮ ದೇವರು ಯುವಕರ ಆದರ್ಶ. ಹಳ್ಳಿಗರ ಭಾವನೆಗಳನ್ನು ಗೌರವಿಸದಷ್ಟು ಅಸಹಿಷ್ಣುತೆಯ ಉರಿಯಲ್ಲಿ ಸರ್ಕಾರ ಬೇಯುತ್ತಿದೆ. ಶಾಸಕರನ್ನು ಕರೆಯಲಿಲ್ಲ ಎನ್ನುವ ಕಾರಣಕ್ಕೆ ಇಷ್ಟೆಲ್ಲಾ ಮಾಡಬೇಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕರ್ನಾಟಕ ಹನುಮ ಜನ್ಮಸ್ಥಳ. ನನ್ನ ಹೆಸರಿನಲ್ಲೂ ರಾಮನಿದ್ದಾನೆ ಎಂದು ಹುಸಿಭಕ್ತಿಯ ಢೋಂಗಿಗಳಿಗೆ ಹನುಮಭಕ್ತಿ ಅರ್ಥವಾಗುವುದೇ?, ವೋಟಿಗಾಗಿ, ಅಧಿಕಾರಕ್ಕಾಗಿ ಜಾತಿ-ಧರ್ಮಗಳನ್ನು ಒಡೆದು ದೇವರನ್ನೂ ರಾಜಕಾರಣಕ್ಕೆ ಎಳೆದು ತರುತ್ತಿರುವುದು, ಓಲೈಕೆ ರಾಜಕಾರಣದ ವಿಕೃತಿ. ಪೊಲೀಸರು ಹನುಮ ಭಕ್ತರ ಮೇಲೆ ಲಾಠಿಚಾರ್ಜ್‌ ಮಾಡಿದ್ದು, ಏಕಪಕ್ಷೀಯವಾಗಿ ಹನುಮಧ್ವಜ ತೆರವು ಮಾಡಿದ್ದು ತಪ್ಪು. ಕೂಡಲೇ ಅಲ್ಲಿ ಎಲ್ಲವೂ ಯಥಾಸ್ಥಿತಿಗೆ ಬರಲೇಬೇಕೆಂದು ಅವರು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ನಿಷೇಧಾಜ್ಞೆ ವಿಧಿಸಿ ಭಯಭೀತಿ ಉಂಟು ಮಾಡುವ ಅಗತ್ಯ ಇರಲೇ ಇಲ್ಲ. ಕೆರಗೋಡಿನ ಎಲ್ಲ ಸಮುದಾಯದ ಜನರೂ ಹನುಮಧ್ವಜ ಸ್ಥಾಪನೆಗೆ ಬೆಂಬಲ ಸೂಚಿಸಿದ್ದರೂ, ಓಲೈಕೆ ಕಾಂಗ್ರೆಸ್‌ ಸರ್ಕಾರ ಹನುಮ ವಿರೋಧಿ ಕೆಲಸ ಮಾಡಿದೆ. ತನ್ನ ಹಳೆಚಾಳಿಯನ್ನು ಕಾಂಗ್ರೆಸ್ ಬದಲಿಸಿಕೊಳ್ಳದಿದ್ದರೆ, ಈ ಸರ್ಕಾರದ ವಿರುದ್ಧ ಇಡೀ ರಾಜ್ಯವೇ ದಂಗೆ ಏಳಬೇಕಾಗುತ್ತದೆ. ನಾನು ಕೆರಗೋಡಿನ ಯುವಕರ ಜತೆ ಇದ್ದೇನೆ, ಇರುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: 'ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ': ಸಿಎಂ ವಜಾಗೆ ಹೆಚ್​ಡಿಕೆ ಆಗ್ರಹಿಸಿದ್ದೇಕೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.