ETV Bharat / state

ಪ್ರಯಾಣಿಕರ ಗಮನಕ್ಕೆ: ಮಂಗಳೂರು-ಯಶವಂತಪುರ ರೈಲು ಸಂಚಾರದ ವೇಳಾಪಟ್ಟಿ ಬದಲು - Train Schedule Revised

author img

By ETV Bharat Karnataka Team

Published : Aug 2, 2024, 4:01 PM IST

ಮಂಗಳೂರು ಮತ್ತು ಯಶವಂತಪುರ ನಡುವೆ ಸಂಚರಿಸುವ ರೈಲಿನ ವೇಳಾಪಟ್ಟಿ ಪರಿಷ್ಕರಿಸಲಾಗಿದೆ.

MANGALURU TO YESHWANTPUR TRAIN  NEW TRAIN SCHEDULE  MANGALURU
ಸಂಗ್ರಹ ಚಿತ್ರ (ETV Bharat)

ಮಂಗಳೂರು: ವಾರದಲ್ಲಿ ಮೂರು ದಿನ ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ (ರೈಲು ಸಂಖ್ಯೆ 16576) ವೇಳಾಪಟ್ಟಿ ಬದಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ, ಈ ರೈಲು ಬೆಳಿಗ್ಗೆ 7 ಗಂಟೆಗೆ ಮಂಗಳೂರು ಜಂಕ್ಷನ್​ನಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣ ತಲುಪಲಿದೆ. ಈ ರೈಲು ಈ ಹಿಂದೆ ಮಂಗಳೂರಿನಿಂದ ಬೆಳಗ್ಗೆ 11.30ಕ್ಕೆ ಹೊರಟು ರಾತ್ರಿ 8.45ಕ್ಕೆ ಯಶವಂತಪುರ ತಲುಪುತ್ತಿತ್ತು.

Mangaluru to Yeshwantpur train  New Train Schedule  Mangaluru
ಹೊಸ ವೇಳಾಪಟ್ಟಿ ಹೀಗಿದೆ (ETV Bharat)

ಹೊಸ ವೇಳಾಪಟ್ಟಿ ಪ್ರಕಾರ, ಮಂಗಳೂರು ಜಂಕ್ಷನ್​ನಿಂದ 7 ಗಂಟೆಗೆ, ಬಂಟ್ವಾಳದಿಂದ 7.35ಕ್ಕೆ, ಕಬಕ ಪುತ್ತೂರಿನಿಂದ 8.22, ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ 9.10, ಸಕಲೇಶಪುರದಿಂದ 11.40ಕ್ಕೆ, ಆಲೂರಿನಿಂದ ಮಧ್ಯಾಹ್ನ 12.15ಕ್ಕೆ, ಹಾಸನದಿಂದ 1.10ಕ್ಕೆ ಚನ್ನರಾಯಪಟ್ಟಣದಿಂದ 1.22ಕ್ಕೆ, ಶ್ರವಣಬೆಳಗೊಳದಿಂದ 1.32ಕ್ಕೆ, ಬಾಲಗಂಗಾಧರನಾಥ ನಗರ ನಿಲ್ದಾಣದಿಂದ 1.59ಕ್ಕೆ, ಯಡಿಯೂರಿನಿಂದ 2.12ಕ್ಕೆ, ಕುಣಿಗಲ್​ನಿಂದ 2.25ಕ್ಕೆ, ನೆಲಮಂಗಲದಿಂದ 3ಕ್ಕೆ, ಚಿಕ್ಕಬಾಣಾವರದಿಂದ 3.45ಕ್ಕೆ ಹೊರಡಲಿದೆ.

ಸೋಮವಾರ, ಬುಧವಾರ ಹಾಗೂ ಶುಕ್ರವಾರ ರೈಲು ಮಂಗಳೂರು ಜಂಕ್ಷನ್​ನಿಂದ ಹೊರಡಲಿದೆ. 2024ರ ನವೆಂಬರ್ 1ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ.

ಇದನ್ನೂ ಓದಿ: ಸ್ಲೀಪರ್ ಟಿಕೆಟ್ ತೆಗೆದುಕೊಂಡು ಎಸಿಯಲ್ಲಿ ಪ್ರಯಾಣಿಸಿ: ಈ ಟ್ರಿಕ್ಸ್​​ ಹೇಗೆ ವರ್ಕೌಟ್​​ ಆಗುತ್ತೆ ತಿಳಿಯಿರಿ! - HOW TO IRCTC AUTO CLASS UPGRADATION

ಮಂಗಳೂರು: ವಾರದಲ್ಲಿ ಮೂರು ದಿನ ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ (ರೈಲು ಸಂಖ್ಯೆ 16576) ವೇಳಾಪಟ್ಟಿ ಬದಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ, ಈ ರೈಲು ಬೆಳಿಗ್ಗೆ 7 ಗಂಟೆಗೆ ಮಂಗಳೂರು ಜಂಕ್ಷನ್​ನಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣ ತಲುಪಲಿದೆ. ಈ ರೈಲು ಈ ಹಿಂದೆ ಮಂಗಳೂರಿನಿಂದ ಬೆಳಗ್ಗೆ 11.30ಕ್ಕೆ ಹೊರಟು ರಾತ್ರಿ 8.45ಕ್ಕೆ ಯಶವಂತಪುರ ತಲುಪುತ್ತಿತ್ತು.

Mangaluru to Yeshwantpur train  New Train Schedule  Mangaluru
ಹೊಸ ವೇಳಾಪಟ್ಟಿ ಹೀಗಿದೆ (ETV Bharat)

ಹೊಸ ವೇಳಾಪಟ್ಟಿ ಪ್ರಕಾರ, ಮಂಗಳೂರು ಜಂಕ್ಷನ್​ನಿಂದ 7 ಗಂಟೆಗೆ, ಬಂಟ್ವಾಳದಿಂದ 7.35ಕ್ಕೆ, ಕಬಕ ಪುತ್ತೂರಿನಿಂದ 8.22, ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ 9.10, ಸಕಲೇಶಪುರದಿಂದ 11.40ಕ್ಕೆ, ಆಲೂರಿನಿಂದ ಮಧ್ಯಾಹ್ನ 12.15ಕ್ಕೆ, ಹಾಸನದಿಂದ 1.10ಕ್ಕೆ ಚನ್ನರಾಯಪಟ್ಟಣದಿಂದ 1.22ಕ್ಕೆ, ಶ್ರವಣಬೆಳಗೊಳದಿಂದ 1.32ಕ್ಕೆ, ಬಾಲಗಂಗಾಧರನಾಥ ನಗರ ನಿಲ್ದಾಣದಿಂದ 1.59ಕ್ಕೆ, ಯಡಿಯೂರಿನಿಂದ 2.12ಕ್ಕೆ, ಕುಣಿಗಲ್​ನಿಂದ 2.25ಕ್ಕೆ, ನೆಲಮಂಗಲದಿಂದ 3ಕ್ಕೆ, ಚಿಕ್ಕಬಾಣಾವರದಿಂದ 3.45ಕ್ಕೆ ಹೊರಡಲಿದೆ.

ಸೋಮವಾರ, ಬುಧವಾರ ಹಾಗೂ ಶುಕ್ರವಾರ ರೈಲು ಮಂಗಳೂರು ಜಂಕ್ಷನ್​ನಿಂದ ಹೊರಡಲಿದೆ. 2024ರ ನವೆಂಬರ್ 1ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ.

ಇದನ್ನೂ ಓದಿ: ಸ್ಲೀಪರ್ ಟಿಕೆಟ್ ತೆಗೆದುಕೊಂಡು ಎಸಿಯಲ್ಲಿ ಪ್ರಯಾಣಿಸಿ: ಈ ಟ್ರಿಕ್ಸ್​​ ಹೇಗೆ ವರ್ಕೌಟ್​​ ಆಗುತ್ತೆ ತಿಳಿಯಿರಿ! - HOW TO IRCTC AUTO CLASS UPGRADATION

ETV Bharat Logo

Copyright © 2024 Ushodaya Enterprises Pvt. Ltd., All Rights Reserved.