ETV Bharat / state

ಮಣಿಪಾಲ:ತಮ್ಮದೇ ಬಸ್​​ನಡಿಗೆ ಸಿಲುಕಿ ಮಾಲೀಕ ಸಾವು - Manipal Bus Owner

ತನ್ನದೇ ಬಸ್​​ನಡಿ ಸಿಲುಕಿ ಮಾಲೀಕ ಸಾವನ್ನಪ್ಪಿದ ಘಟನೆ ಮಣಿಪಾಲ ಸಮೀಪ ನಡೆದಿದೆ.

manipal-bus-owner-dies-after-being-hit-by-vehicle
ಮಣಿಪಾಲ: ತನ್ನದೇ ಬಸ್​​ನಡಿಗೆ ಸಿಲುಕಿ ಮಾಲೀಕ ಸಾವು
author img

By ETV Bharat Karnataka Team

Published : Mar 14, 2024, 7:21 PM IST

ಉಡುಪಿ: ತಮ್ಮದೇ ಬಸ್​​ನ ಕೆಳಗೆ ಸಿಲುಕಿ ಮಾಲೀಕ ಸಾವನ್ನಪ್ಪಿದ ಘಟನೆ ಇಲ್ಲಿನ ಮಣಿಪಾಲದ 80 ಬಡಗಬೆಟ್ಟುವಿನ ಗ್ಯಾರೇಜ್‌ವೊಂದರಲ್ಲಿ ಬುಧವಾರ ಸಂಭವಿಸಿದೆ.

ಮಾಂಡವಿ ಬಸ್‌ನ ಮಾಲೀಕ ದಯಾನಂದ ಶೆಟ್ಟಿ (65) ಮೃತಪಟ್ಟವರು. ಇವರು ತಮ್ಮ ಬಸ್‌ ಅನ್ನು ಗ್ಯಾರೇಜ್‌ನಲ್ಲಿ ರಿಪೇರಿಗೆ ನೀಡಿದ್ದು, ಅದರ ಪರಿಶೀಲನೆಗೆ ಬಂದಿದ್ದರು. ಈ ವೇಳೆ, ಬಸ್‌ನ ಎದುರು ನಿಂತಿದ್ದಾಗ ಚಾಲಕ ವಾಹನವನ್ನು ಚಲಾಯಿಸಿದ ಪರಿಣಾಮ ಅವರು ಮುಂಭಾಗದ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಪೊಲೀಸ್​ ಮೂಲಗಳಿಂದ ತಿಳಿದು ಬಂದಿದೆ.

ತತಕ್ಷಣ ದಯಾನಂದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಂಡಕ್ಟರ್​ ಬಸ್​ ಓಡಿಸಿದ ಆರೋಪ: ವಾಹನ ಪಲ್ಟಿ, ಶಿಕ್ಷಕರು ಸೇರಿದಂತೆ ಪ್ರಯಾಣಿಕರು ಪಾರು

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.