ETV Bharat / state

ಸಿಇಟಿ: ವಿಶೇಷಚೇತನರಿಗೆ ಇಂದಿನಿಂದ ವೈದ್ಯಕೀಯ ತಪಾಸಣೆ, ಯಾವೆಲ್ಲ ದಾಖಲೆಗಳು ಇರಬೇಕು? - medical examination

ವೃತ್ತಿಪರ ಕೋರ್ಸ್‌ಗಳಿಗೆ ವಿಶೇಷಚೇತನ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಇಂದಿನಿಂದ ಆರಂಭವಾಗಿದೆ.

author img

By ETV Bharat Karnataka Team

Published : Jun 10, 2024, 3:28 PM IST

ವಿಶೇಷಚೇತನರಿಗೆ ವೈದ್ಯಕೀಯ ತಪಾಸಣೆ
ವಿಶೇಷಚೇತನರಿಗೆ ವೈದ್ಯಕೀಯ ತಪಾಸಣೆ (ETV Bharat)

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳಿಗೆ ವಿಶೇಷಚೇತನ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಇಂದಿನಿಂದ ಆರಂಭವಾಗಿದೆ. ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ನಡೆಯುತ್ತಿರುವ ವೈದ್ಯಕೀಯ ತಪಾಸಣೆಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಚಾಲನೆ ನೀಡಿದರು.

ಬೌರಿಂಗ್ ಮತ್ತು ವಿಕ್ಟೋರಿಯಾ ಆಸ್ಪತ್ರೆಯಿಂದ ಬಂದಿದ್ದ ಆರು ಮಂದಿ ಮೂಳೆ ರೋಗ ಮತ್ತು ಕಣ್ಣು, ಮೂಗು, ಕಿವಿ (ಇಎನ್​ಟಿ) ತಜ್ಞ ವೈದ್ಯರು, ಅಭ್ಯರ್ಥಿಗಳನ್ನು ತಪಾಸಣೆ ಮಾಡಿ, ದಾಖಲೆಗಳನ್ನು ಪರಿಶೀಲಿಸಿದರು. ಇದನ್ನು ಖುದ್ದು ಪ್ರಸನ್ನ ಅವರು ಮೇಲ್ವಿಚಾರಣೆ ನಡೆಸಿದರು.

ಬಳಿಕ ಈ ಕುರಿತು ಪ್ರತಿಕ್ರಿಯಿಸಿದ ಅವರು, "ಸಿಇಟಿಗೆ ಅರ್ಜಿ ಸಲ್ಲಿಸುವಾಗ ಒಟ್ಟು 783 ಮಂದಿ ವಿಶೇಷಚೇತನರ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿದ್ದು, ಅಷ್ಟೂ ಮಂದಿಗೆ ಜೂ.12ರ ವರೆಗೆ ತಪಾಸಣೆ ನಡೆಸಲಾಗುತ್ತದೆ. ಮೊದಲ ದಿನ 250 ಮಂದಿಗೆ ಬರಲು ಸೂಚಿಸಲಾಗಿದೆ" ಎಂದು ತಿಳಿಸಿದರು.

"ಕಣ್ಣಿನ ಸಮಸ್ಯೆ ಇರುವವರ ತಪಾಸಣೆ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಅಲ್ಲಿಗೆ ಅವರನ್ನು ಕೆಇಎ ಸಿಬ್ಬಂದಿಯೇ ವಾಹನದಲ್ಲಿ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ. ವಿಶೇಷಚೇತನರ ಅರ್ಹತೆ ವಿಷಯದಲ್ಲಿ ವೈದ್ಯಕೀಯ ಸಮಿತಿಯ ನಿರ್ಧಾರವೇ ಅಂತಿಮ" ಎಂದು ಹೇಳಿದರು.

ಯಾವ ದಾಖಲೆ ತರಬೇಕು?: "ಯುಜಿಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ, ವೈದ್ಯಕೀಯ ಪ್ರಮಾಣಪತ್ರ, ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತಪಾಸಣೆ ಸಂದರ್ಭದಲ್ಲಿ ತಂದಿರಬೇಕು" ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಳಗಾವಿಯ ಕುವರಿಗೆ ಸಿಇಟಿಯಲ್ಲಿ 379ನೇ ರ‍್ಯಾಂಕ್: ವೈದ್ಯ ದಂಪತಿಯ ಮಗಳಿಗೆ ಎಂಜಿನಿಯರ್ ಆಗುವ ಬಯಕೆ - CET Topper

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳಿಗೆ ವಿಶೇಷಚೇತನ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಇಂದಿನಿಂದ ಆರಂಭವಾಗಿದೆ. ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ನಡೆಯುತ್ತಿರುವ ವೈದ್ಯಕೀಯ ತಪಾಸಣೆಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಚಾಲನೆ ನೀಡಿದರು.

ಬೌರಿಂಗ್ ಮತ್ತು ವಿಕ್ಟೋರಿಯಾ ಆಸ್ಪತ್ರೆಯಿಂದ ಬಂದಿದ್ದ ಆರು ಮಂದಿ ಮೂಳೆ ರೋಗ ಮತ್ತು ಕಣ್ಣು, ಮೂಗು, ಕಿವಿ (ಇಎನ್​ಟಿ) ತಜ್ಞ ವೈದ್ಯರು, ಅಭ್ಯರ್ಥಿಗಳನ್ನು ತಪಾಸಣೆ ಮಾಡಿ, ದಾಖಲೆಗಳನ್ನು ಪರಿಶೀಲಿಸಿದರು. ಇದನ್ನು ಖುದ್ದು ಪ್ರಸನ್ನ ಅವರು ಮೇಲ್ವಿಚಾರಣೆ ನಡೆಸಿದರು.

ಬಳಿಕ ಈ ಕುರಿತು ಪ್ರತಿಕ್ರಿಯಿಸಿದ ಅವರು, "ಸಿಇಟಿಗೆ ಅರ್ಜಿ ಸಲ್ಲಿಸುವಾಗ ಒಟ್ಟು 783 ಮಂದಿ ವಿಶೇಷಚೇತನರ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿದ್ದು, ಅಷ್ಟೂ ಮಂದಿಗೆ ಜೂ.12ರ ವರೆಗೆ ತಪಾಸಣೆ ನಡೆಸಲಾಗುತ್ತದೆ. ಮೊದಲ ದಿನ 250 ಮಂದಿಗೆ ಬರಲು ಸೂಚಿಸಲಾಗಿದೆ" ಎಂದು ತಿಳಿಸಿದರು.

"ಕಣ್ಣಿನ ಸಮಸ್ಯೆ ಇರುವವರ ತಪಾಸಣೆ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಅಲ್ಲಿಗೆ ಅವರನ್ನು ಕೆಇಎ ಸಿಬ್ಬಂದಿಯೇ ವಾಹನದಲ್ಲಿ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ. ವಿಶೇಷಚೇತನರ ಅರ್ಹತೆ ವಿಷಯದಲ್ಲಿ ವೈದ್ಯಕೀಯ ಸಮಿತಿಯ ನಿರ್ಧಾರವೇ ಅಂತಿಮ" ಎಂದು ಹೇಳಿದರು.

ಯಾವ ದಾಖಲೆ ತರಬೇಕು?: "ಯುಜಿಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ, ವೈದ್ಯಕೀಯ ಪ್ರಮಾಣಪತ್ರ, ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತಪಾಸಣೆ ಸಂದರ್ಭದಲ್ಲಿ ತಂದಿರಬೇಕು" ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಳಗಾವಿಯ ಕುವರಿಗೆ ಸಿಇಟಿಯಲ್ಲಿ 379ನೇ ರ‍್ಯಾಂಕ್: ವೈದ್ಯ ದಂಪತಿಯ ಮಗಳಿಗೆ ಎಂಜಿನಿಯರ್ ಆಗುವ ಬಯಕೆ - CET Topper

ETV Bharat Logo

Copyright © 2024 Ushodaya Enterprises Pvt. Ltd., All Rights Reserved.