ETV Bharat / state

ಮೂರು ತಿಂಗಳಿಂದ ಅಬ್ಬರಿಸಿದ್ದ ಮುಂಗಾರು ತಗ್ಗುವ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಕೇವಲ ಯೆಲ್ಲೋ ಅಲರ್ಟ್​ ಘೋಷಣೆ - Yellow alert

author img

By ETV Bharat Karnataka Team

Published : Sep 2, 2024, 5:32 PM IST

ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ಗಳನ್ನ ನೀಡಿದೆ. ಕರಾವಳಿ ಭಾಗದ ಉತ್ತರ ಕನ್ನಡ ಜಿಲ್ಲೆಗೆ ಇಂದಿನಿಂದ ಐದು ದಿನಗಳವರೆಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

meteorological-department
ಹವಾಮಾನ ಇಲಾಖೆ (Meteorological department)

ಬೆಂಗಳೂರು : ಸುಮಾರು ಮೂರು ತಿಂಗಳ ಕಾಲ ಅಬ್ಬರಿಸಿದ್ದ ಮುಂಗಾರು ಮಳೆ ರಾಜ್ಯದಲ್ಲಿ ತಗ್ಗುವ ಸೂಚನೆ ಕಂಡು ಬರುತ್ತಿದೆ. ಈ ಹಿನ್ನೆಲೆ ಕೇವಲ ಯೆಲ್ಲೋ ಅಲರ್ಟ್​ಗಳನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಭಾಗದ ಉತ್ತರ ಕನ್ನಡ ಜಿಲ್ಲೆಗೆ ಇಂದಿನಿಂದ ಐದು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಅಲ್ಲಿನ ದಕ್ಷಿಣ ಕನ್ನಡ ಜಿಲ್ಲೆಗೆ ನಾಳೆಯಿಂದ ನಾಲ್ಕು ದಿನ, ಉಡುಪಿ ಜಿಲ್ಲೆಗೆ ಸೆಪ್ಟೆಂಬರ್ 4 ರಿಂದ 6 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗೆ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ : ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ ಎಂದಿದೆ.

ಬೀದರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ : ನಿನ್ನೆಯಿಂದ ಅತಿ ಹೆಚ್ಚು ಮಳೆ 10 ಸೆ ಮೀ ಬೀದರ್ ಜಿಲ್ಲೆಯ ಔರಾದ್​ನಲ್ಲಿ ದಾಖಲಾಗಿದೆ. ಅದೇ ಜಿಲ್ಲೆಯ ಭಾಲ್ಕಿಯಲ್ಲಿ 8 ಮತ್ತು ಬೀದರ್ ನಗರದಲ್ಲಿ 7 ಸೆ ಮೀ ಮಳೆ ಸುರಿದಿದೆ ಎಂದು ಮಾಹಿತಿ ನೀಡಿದೆ.

'ಸರಾಸರಿ ಸಮುದ್ರ ಮಟ್ಟದಲ್ಲಿ ತೀರದ ಟ್ರಫ್ ದಕ್ಷಿಣ ಗುಜರಾತ್‌ನ ಉದ್ದಕ್ಕೂ ಮತ್ತು ಅಲ್ಲಿಂದ ಉತ್ತರ ಕೇರಳದ ಕರಾವಳಿಯವರೆಗೆ ಸಾಗುತ್ತಿದೆ. ಈ ಹಿನ್ನೆಲೆ ನೈಋತ್ಯ ಮಾನ್ಸೂನ್ ಉತ್ತರ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಇಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ' ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ. ಎನ್ ಪುವಿಯರಸನ್ ಹೇಳಿದ್ದಾರೆ.

ಇದನ್ನೂ ಓದಿ : ಮುಂಗಾರು ಆರ್ಭಟ: ಮೂರು ದಿನ ಭಾರೀ ಮಳೆ ಸಾಧ್ಯತೆ, ನಿಮ್ಮ ಜಿಲ್ಲೆಯ ಹವಾಮಾನ ವರದಿ ಹೀಗಿದೆ - Karnataka Rain Forecast

ಬೆಂಗಳೂರು : ಸುಮಾರು ಮೂರು ತಿಂಗಳ ಕಾಲ ಅಬ್ಬರಿಸಿದ್ದ ಮುಂಗಾರು ಮಳೆ ರಾಜ್ಯದಲ್ಲಿ ತಗ್ಗುವ ಸೂಚನೆ ಕಂಡು ಬರುತ್ತಿದೆ. ಈ ಹಿನ್ನೆಲೆ ಕೇವಲ ಯೆಲ್ಲೋ ಅಲರ್ಟ್​ಗಳನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಭಾಗದ ಉತ್ತರ ಕನ್ನಡ ಜಿಲ್ಲೆಗೆ ಇಂದಿನಿಂದ ಐದು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಅಲ್ಲಿನ ದಕ್ಷಿಣ ಕನ್ನಡ ಜಿಲ್ಲೆಗೆ ನಾಳೆಯಿಂದ ನಾಲ್ಕು ದಿನ, ಉಡುಪಿ ಜಿಲ್ಲೆಗೆ ಸೆಪ್ಟೆಂಬರ್ 4 ರಿಂದ 6 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗೆ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ : ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ ಎಂದಿದೆ.

ಬೀದರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ : ನಿನ್ನೆಯಿಂದ ಅತಿ ಹೆಚ್ಚು ಮಳೆ 10 ಸೆ ಮೀ ಬೀದರ್ ಜಿಲ್ಲೆಯ ಔರಾದ್​ನಲ್ಲಿ ದಾಖಲಾಗಿದೆ. ಅದೇ ಜಿಲ್ಲೆಯ ಭಾಲ್ಕಿಯಲ್ಲಿ 8 ಮತ್ತು ಬೀದರ್ ನಗರದಲ್ಲಿ 7 ಸೆ ಮೀ ಮಳೆ ಸುರಿದಿದೆ ಎಂದು ಮಾಹಿತಿ ನೀಡಿದೆ.

'ಸರಾಸರಿ ಸಮುದ್ರ ಮಟ್ಟದಲ್ಲಿ ತೀರದ ಟ್ರಫ್ ದಕ್ಷಿಣ ಗುಜರಾತ್‌ನ ಉದ್ದಕ್ಕೂ ಮತ್ತು ಅಲ್ಲಿಂದ ಉತ್ತರ ಕೇರಳದ ಕರಾವಳಿಯವರೆಗೆ ಸಾಗುತ್ತಿದೆ. ಈ ಹಿನ್ನೆಲೆ ನೈಋತ್ಯ ಮಾನ್ಸೂನ್ ಉತ್ತರ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಇಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ' ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ. ಎನ್ ಪುವಿಯರಸನ್ ಹೇಳಿದ್ದಾರೆ.

ಇದನ್ನೂ ಓದಿ : ಮುಂಗಾರು ಆರ್ಭಟ: ಮೂರು ದಿನ ಭಾರೀ ಮಳೆ ಸಾಧ್ಯತೆ, ನಿಮ್ಮ ಜಿಲ್ಲೆಯ ಹವಾಮಾನ ವರದಿ ಹೀಗಿದೆ - Karnataka Rain Forecast

ETV Bharat Logo

Copyright © 2024 Ushodaya Enterprises Pvt. Ltd., All Rights Reserved.