ETV Bharat / state

ಕರಾವಳಿ, ಮಲೆನಾಡಿನಲ್ಲಿ ಮುಂಗಾರು ತಗ್ಗುವ ಲಕ್ಷಣ: ಕೆಲ ಜಿಲ್ಲೆಗಳಿಗೆ ಮಾತ್ರ ಅಲರ್ಟ್ ಘೋಷಣೆ - Karnataka Weather Forecast

author img

By ETV Bharat Karnataka Team

Published : Jul 22, 2024, 5:32 PM IST

ರಾಜ್ಯದಲ್ಲಿ ಇನ್ನೂ 5 ದಿನ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

rain forecast
ಮಳೆ (ETV Bharat)

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಅವಾಂತರ ಸೃಷ್ಟಿಸಿದ್ದ ಮುಂಗಾರು ಮಳೆ ಕೊಂಚ ತಗ್ಗುವ ಲಕ್ಷಣಗಳು ಕಂಡು ಬರುತ್ತಿದೆ. ಮುಂದಿನ ಕೆಲ ದಿನಗಳ ಕಾಲ ವರ್ಷಧಾರೆ ಪ್ರಮಾಣ ಇಳಿಮುಖವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೂ ಕೆಲ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 5 ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡಿನ ಚಿಕ್ಕಮಗಳೂರು, ಕೊಡಗು ಶಿವಮೊಗ್ಗ ಜಿಲ್ಲೆಗಳಿಗೆ ಅಲರ್ಟ್​​ ಮುಂದುವರೆಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಸೋಮವಾರ ಆರೆಂಜ್ ಅಲರ್ಟ್ ನೀಡಲಾಗಿದ್ದು, ಮುಂದಿನ 4 ದಿನವೂ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಿಗೆ 5 ದಿನಗಳೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು ಮತ್ತು ಜುಲೈ 25 ಮತ್ತು 26ರಂದು, ಕಲಬುರಗಿ ಜಿಲ್ಲೆಗೆ ಇಂದು ಮತ್ತು ಜುಲೈ 26ಕ್ಕೆ, ಬೀದರ್ ಜಿಲ್ಲೆಗೆ ಜುಲೈ 25ರಂದು ಮತ್ತು ಯಾದಗಿರಿ ಜಿಲ್ಲೆಗೆ ಜುಲೈ 26ರಂದು ಯೆಲ್ಲೋ ಅಲರ್ಟ್ ಇದೆ.

ಇನ್ನೂ 5 ದಿನ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ತಲುಪಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ನಿರಂತರ ಗಾಳಿಯೂ ಬೀಸಲಿದೆ. ಒಳನಾಡಿನ ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಗಾಳಿಯೂ ವೇಗವಾಗಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಮತ್ತು 20 ಡಿಗ್ರಿ ಆಗಿರಲಿದೆ.

''ಸರಾಸರಿ ಸಮುದ್ರ ಮಟ್ಟದಲ್ಲಿ ಆಫ್ - ಶೋರ್ ಟ್ರಫ್ ಈಗ ದಕ್ಷಿಣ ಗುಜರಾತ್ - ಕೇರಳ ಕರಾವಳಿಯ ಉದ್ದಕ್ಕೂ ಹಾದು ಹೋಗುತ್ತಿದೆ. ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಆದ್ದರಿಂದ ನೈಋತ್ಯ ಮಾನ್ಸೂನ್ ಉತ್ತರ ಒಳ ಕರ್ನಾಟಕದ ಮೇಲೆ ಸಕ್ರಿಯವಾಗಿದೆ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದ ಮೇಲೆ ಸಾಧಾರಣವಾಗಿದೆ. ನಿನ್ನೆಯಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್​ನಲ್ಲಿ ಅತಿ ಹೆಚ್ಚು 20 ಸೆ.ಮೀ. ಮಳೆ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗೆರುಸೊಪ್ಪದಲ್ಲಿ 13 ಸೆ.ಮೀ. ಮಳೆ ಸುರಿದಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ, ಖಾನಾಪುರದ ಶಾಲೆಗಳಿಗೆ 2 ದಿನ ರಜೆ‌: ಕುಸಮಳ್ಳಿ ಸೇತುವೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್ - holiday for schools

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಅವಾಂತರ ಸೃಷ್ಟಿಸಿದ್ದ ಮುಂಗಾರು ಮಳೆ ಕೊಂಚ ತಗ್ಗುವ ಲಕ್ಷಣಗಳು ಕಂಡು ಬರುತ್ತಿದೆ. ಮುಂದಿನ ಕೆಲ ದಿನಗಳ ಕಾಲ ವರ್ಷಧಾರೆ ಪ್ರಮಾಣ ಇಳಿಮುಖವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೂ ಕೆಲ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 5 ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡಿನ ಚಿಕ್ಕಮಗಳೂರು, ಕೊಡಗು ಶಿವಮೊಗ್ಗ ಜಿಲ್ಲೆಗಳಿಗೆ ಅಲರ್ಟ್​​ ಮುಂದುವರೆಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಸೋಮವಾರ ಆರೆಂಜ್ ಅಲರ್ಟ್ ನೀಡಲಾಗಿದ್ದು, ಮುಂದಿನ 4 ದಿನವೂ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಿಗೆ 5 ದಿನಗಳೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು ಮತ್ತು ಜುಲೈ 25 ಮತ್ತು 26ರಂದು, ಕಲಬುರಗಿ ಜಿಲ್ಲೆಗೆ ಇಂದು ಮತ್ತು ಜುಲೈ 26ಕ್ಕೆ, ಬೀದರ್ ಜಿಲ್ಲೆಗೆ ಜುಲೈ 25ರಂದು ಮತ್ತು ಯಾದಗಿರಿ ಜಿಲ್ಲೆಗೆ ಜುಲೈ 26ರಂದು ಯೆಲ್ಲೋ ಅಲರ್ಟ್ ಇದೆ.

ಇನ್ನೂ 5 ದಿನ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ತಲುಪಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ನಿರಂತರ ಗಾಳಿಯೂ ಬೀಸಲಿದೆ. ಒಳನಾಡಿನ ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಗಾಳಿಯೂ ವೇಗವಾಗಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಮತ್ತು 20 ಡಿಗ್ರಿ ಆಗಿರಲಿದೆ.

''ಸರಾಸರಿ ಸಮುದ್ರ ಮಟ್ಟದಲ್ಲಿ ಆಫ್ - ಶೋರ್ ಟ್ರಫ್ ಈಗ ದಕ್ಷಿಣ ಗುಜರಾತ್ - ಕೇರಳ ಕರಾವಳಿಯ ಉದ್ದಕ್ಕೂ ಹಾದು ಹೋಗುತ್ತಿದೆ. ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಆದ್ದರಿಂದ ನೈಋತ್ಯ ಮಾನ್ಸೂನ್ ಉತ್ತರ ಒಳ ಕರ್ನಾಟಕದ ಮೇಲೆ ಸಕ್ರಿಯವಾಗಿದೆ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದ ಮೇಲೆ ಸಾಧಾರಣವಾಗಿದೆ. ನಿನ್ನೆಯಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್​ನಲ್ಲಿ ಅತಿ ಹೆಚ್ಚು 20 ಸೆ.ಮೀ. ಮಳೆ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗೆರುಸೊಪ್ಪದಲ್ಲಿ 13 ಸೆ.ಮೀ. ಮಳೆ ಸುರಿದಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ, ಖಾನಾಪುರದ ಶಾಲೆಗಳಿಗೆ 2 ದಿನ ರಜೆ‌: ಕುಸಮಳ್ಳಿ ಸೇತುವೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್ - holiday for schools

ETV Bharat Logo

Copyright © 2024 Ushodaya Enterprises Pvt. Ltd., All Rights Reserved.