ETV Bharat / state

ಶಾಲಾ ಮಕ್ಕಳಿಗೆ ಬಂಪರ್: ವಾರದ ಮೂರು ದಿನ ರಾಗಿ ಮಾಲ್ಟ್ ವಿತರಣೆ, ಕಾರ್ಯಕ್ರಮಕ್ಕೆ ನಾಡಿದ್ದು ಸಿಎಂ ಚಾಲನೆ - Madhu Bangarappa

ರಾಜ್ಯದ 60 ಲಕ್ಷ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಾರದ ಮೂರು ದಿನ ರಾಗಿ ಮಾಲ್ಟ್ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ‌ ಹೇಳಿದರು.

ಸಚಿವ ಮಧು ಬಂಗಾರಪ್ಪ‌
ಸಚಿವ ಮಧು ಬಂಗಾರಪ್ಪ‌
author img

By ETV Bharat Karnataka Team

Published : Feb 20, 2024, 7:34 PM IST

ರಾಜ್ಯದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ

ಬೆಂಗಳೂರು : ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ತಿಳಿಸಿದ್ದಾರೆ.

ಅಪೌಷ್ಠಿಕತೆ ಹೋಗಲಾಡಿಸಲು ಹಾಗೂ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡಲಾಗುತ್ತಿದೆ. ಕ್ಷೀರಭಾಗ್ಯ ಯೋಜನೆಯಡಿ ಪ್ರತಿದಿನ ಹಾಲು ನೀಡಲಾಗುತ್ತಿದ್ದು, ಇದೀಗ ಹಾಲಿನ ಜೊತೆ ರಾಗಿ ಮಾಲ್ಟ್ ಪೌಡರ್ ಮಿಕ್ಸ್ ಮಾಡಿ ನೀಡಲಾಗುವುದು.‌ ವಾರದ ಮೂರು ದಿನ ರಾಗಿ ಮಾಲ್ಟ್ ವಿತರಿಸಲಾಗುವುದು‌. ಇದೇ ತಿಂಗಳು 22ರಂದು ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ಸಿದ್ದರಾಮಯ್ಯ ನೀಡಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ದುಸ್ಥಿತಿಯಲ್ಲಿರುವ ಸರ್ಕಾರಿ ಶಾಲಾ ಕಟ್ಟಡಗಳ ನವೀಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ನನ್ನ ಶಾಲೆ, ನನ್ನ ಜವಾಬ್ದಾರಿ ಹೊಸ ಕಾರ್ಯಕ್ರಮದಡಿ ತರಲಾಗುತ್ತಿದೆ. ಈ ಹಿಂದೆ ನನ್ನ ಶಾಲೆ-ನನ್ನ‌ ಕೊಡುಗೆ ಕಾರ್ಯಕ್ರಮ ಚಾಲ್ತಿಯಲ್ಲಿತ್ತು. ಕೊಡುಗೆ ಬದಲಿಗೆ ಜವಾಬ್ದಾರಿ ಸೇರಿಸಲಾಗಿದೆ. ಸಿಎಸ್​ಆರ್ ಫಂಡ್ ನಡಿ ಶಾಲೆಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ಅಂಶಗಳ‌‌ ಒಳಗೊಂಡ ಹೊಸ ಯೋಜನೆಯನ್ನು ಮುಂದಿನ ದಿನಗಳಲ್ಲಿ‌ ಪರಿಚಯಲಾಗುವುದು.‌ ಸರ್ಕಾರಿ ಶಾಲೆಯಲ್ಲಿ ಓದಿದ ಪ್ರತಿಯೊಬ್ಬರೂ ದೇಣಿಗೆ ಅಥವಾ ಅವರೇ ಆಭಿವೃದ್ಧಿ ಪಡಿಸಬಹುದಾಗಿದೆ. ಸಮಾಜಕ್ಕೆ ಕೊಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಲಿದೆ. ಈ ಬಗ್ಗೆ ವಿಸ್ತೃತವಾಗಿ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ : ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ರಾಜ್ಯದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ

ಬೆಂಗಳೂರು : ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ತಿಳಿಸಿದ್ದಾರೆ.

ಅಪೌಷ್ಠಿಕತೆ ಹೋಗಲಾಡಿಸಲು ಹಾಗೂ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡಲಾಗುತ್ತಿದೆ. ಕ್ಷೀರಭಾಗ್ಯ ಯೋಜನೆಯಡಿ ಪ್ರತಿದಿನ ಹಾಲು ನೀಡಲಾಗುತ್ತಿದ್ದು, ಇದೀಗ ಹಾಲಿನ ಜೊತೆ ರಾಗಿ ಮಾಲ್ಟ್ ಪೌಡರ್ ಮಿಕ್ಸ್ ಮಾಡಿ ನೀಡಲಾಗುವುದು.‌ ವಾರದ ಮೂರು ದಿನ ರಾಗಿ ಮಾಲ್ಟ್ ವಿತರಿಸಲಾಗುವುದು‌. ಇದೇ ತಿಂಗಳು 22ರಂದು ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ಸಿದ್ದರಾಮಯ್ಯ ನೀಡಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ದುಸ್ಥಿತಿಯಲ್ಲಿರುವ ಸರ್ಕಾರಿ ಶಾಲಾ ಕಟ್ಟಡಗಳ ನವೀಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ನನ್ನ ಶಾಲೆ, ನನ್ನ ಜವಾಬ್ದಾರಿ ಹೊಸ ಕಾರ್ಯಕ್ರಮದಡಿ ತರಲಾಗುತ್ತಿದೆ. ಈ ಹಿಂದೆ ನನ್ನ ಶಾಲೆ-ನನ್ನ‌ ಕೊಡುಗೆ ಕಾರ್ಯಕ್ರಮ ಚಾಲ್ತಿಯಲ್ಲಿತ್ತು. ಕೊಡುಗೆ ಬದಲಿಗೆ ಜವಾಬ್ದಾರಿ ಸೇರಿಸಲಾಗಿದೆ. ಸಿಎಸ್​ಆರ್ ಫಂಡ್ ನಡಿ ಶಾಲೆಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ಅಂಶಗಳ‌‌ ಒಳಗೊಂಡ ಹೊಸ ಯೋಜನೆಯನ್ನು ಮುಂದಿನ ದಿನಗಳಲ್ಲಿ‌ ಪರಿಚಯಲಾಗುವುದು.‌ ಸರ್ಕಾರಿ ಶಾಲೆಯಲ್ಲಿ ಓದಿದ ಪ್ರತಿಯೊಬ್ಬರೂ ದೇಣಿಗೆ ಅಥವಾ ಅವರೇ ಆಭಿವೃದ್ಧಿ ಪಡಿಸಬಹುದಾಗಿದೆ. ಸಮಾಜಕ್ಕೆ ಕೊಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಲಿದೆ. ಈ ಬಗ್ಗೆ ವಿಸ್ತೃತವಾಗಿ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ : ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.