ETV Bharat / state

ಹೆಚ್​ಎಂಟಿ ವಶದಲ್ಲಿರುವ 10 ಸಾವಿರ ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ವಶಪಡಿಸಿಕೊಳ್ಳಿ: ಸಚಿವ ಈಶ್ವರ ಖಂಡ್ರೆ ಸೂಚನೆ - Forest Land Reclaim

author img

By ETV Bharat Karnataka Team

Published : Aug 11, 2024, 5:46 PM IST

ಹೆಚ್​ಎಂಟಿ ವಶದಲ್ಲಿರುವ ಸಾವಿರಾರು ಕೋಟಿ ಮೌಲ್ಯದ ಅರಣ್ಯ ಪ್ರದೇಶವನ್ನು ಮರಳಿ ವಶಕ್ಕೆ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಸಚಿವ ಈಶ್ವರ ಖಂಡ್ರೆ
ಸಚಿವ ಈಶ್ವರ ಖಂಡ್ರೆ (ETV Bharat)

ಬೆಂಗಳೂರು: ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗೂ ಹೆಚ್ಚು ಬೆಲೆ ಬಾಳುವ 599 ಎಕರೆ ಅಧಿಸೂಚಿತ ಅರಣ್ಯ ಪ್ರದೇಶವನ್ನು ಮರಳಿ ಇಲಾಖೆಯ ವಶಕ್ಕೆ ಪಡೆಯಲು ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳುಹಿಸಿರುವ ಸಚಿವರು, ಅರಣ್ಯ ನಿಯಮಾವಳಿ 1878ರ ಸೆಕ್ಷನ್ 9ರಡಿಯಲ್ಲಿ ಅರಣ್ಯ ಎಂದು ಘೋಷಣೆಯಾಗಿ, ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಅಂದರೆ 1896 ಜೂನ್ 11ರಲ್ಲೇ ಗೆಜೆಟ್ ಅಧಿಸೂಚನೆ ಆಗಿರುವ ಸಾವಿರಾರು ಕೋಟಿ ರೂ. ಬೆಲೆ ಬಾಳುವ ಭೂಮಿಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಹೆಚ್​​ಎಂಟಿ ಸಂಸ್ಥೆಯು ಅಕ್ರಮವಾಗಿ ಸರ್ಕಾರಿ ಇಲಾಖೆಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ಒಟ್ಟು 599 ಎಕರೆ ಅರಣ್ಯ ಭೂಮಿಯ ಪೈಕಿ ಹೆಚ್​ಎಂಟಿಗೆ ನೀಡಲಾಗಿದೆ ಎನ್ನಲಾದ 469ಎಕರೆ 32 ಗುಂಟೆಯಲ್ಲಿ ಖಾಲಿ ಇರುವ 281 ಎಕರೆ ಜಮೀನನ್ನು ಮೊದಲಿಗೆ ವಶಕ್ಕೆ ಪಡೆದು ನಂತರ ಉಳಿದ ಭೂಮಿ ವಶ ಪಡಿಸಿಕೊಳ್ಳಲು ಕಾನೂನು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

ಅರಣ್ಯ ಸಂರಕ್ಷಣಾ ಕಾಯಿದೆ ಸೆಕ್ಷನ್ 64ಎ ಅಡಿಯಲ್ಲಿ ಈ ಹಿಂದೆ ಪ್ರಕ್ರಿಯೆ ನಡೆದಿದ್ದು ಭೂಮಿ ತೆರವಿಗೆ ಆದೇಶ ಆಗಿದ್ದರೂ, ಈವರೆಗೆ ಕ್ರಮ ವಹಿಸದ ಅರಣ್ಯಾಧಿಕಾರಿಗಳ ನಡೆಯ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ತನಿಖೆ ನಡೆಸಲು ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ. ಅರಣ್ಯ ನಿಯಂತ್ರಣ ಕಾಯಿದೆ 1900ರ ಸೆಕ್ಷನ್ 30ರ ಸಬ್ ಸೆಕ್ಷನ್ (1)ರ ಅಡಿಯಲ್ಲಿ ಯಾವುದೇ ಅರಣ್ಯ ಭೂಮಿಯನ್ನು ದಾನವಾಗಿ ನೀಡಲು ಕಾನೂನಿನಲ್ಲಿ ಅವಕಾಶ ಇರುವುದಿಲ್ಲ. ಯಾವುದೇ ಅರಣ್ಯ ಭೂಮಿಯನ್ನು ಮಂಜೂರಾತಿ ಮಾಡುವ ಮುನ್ನ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಮಾಡಲು ಮೊದಲಿಗೆ ಡಿ ನೋಟಿಫೈ ಮಾಡಿ, ಗೆಜೆಟ್ ಅಧಿಸೂಚನೆ ಮಾಡಬೇಕಾಗಿರುತ್ತದೆ. ಆದರೆ ಈ ಜಮೀನನ್ನು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿ ಹನುಮಾನ್ ಅವರು 1963ರಲ್ಲಿ ಹೆಚ್​ಎಂಟಿಗೆ ದಾನಪತ್ರದ ಮೂಲಕ ವರ್ಗಾವಣೆ ಮಾಡಿರುತ್ತಾರೆ ಎನ್ನಲಾಗಿದೆ. ಈ ದಾನಪತ್ರದ ಕುರಿತಂತೆ ಯಾವುದೇ ಗೆಜೆಟ್ ಅಧಿಸೂಚನೆಯೂ ಆಗಿರುವುದಿಲ್ಲ. ಈ ಭೂಮಿ ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಕೂಡ ಆಗಿರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಡಾನೆ ಹಾವಳಿ ತಪ್ಪಿಸಲು ಕರ್ನಾಟಕ-ಆಂಧ್ರ ಮಾಡಿಕೊಂಡ ಒಪ್ಪಂದದಲ್ಲಿ ಏನಿದೆ? - Human Animal Conflict

ಶರಾವತಿ ಸಂತ್ರಸ್ತರಿಗೆ ಅರಣ್ಯ ಭೂಮಿ ನೀಡಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಹಾಗೂ ಗೋದಾವರ್ಮನ್ ಮತ್ತು ಭಾರತ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶಗಳು ಇದನ್ನು ಸ್ಪಷ್ಟಪಡಿಸುತ್ತವೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಹೆಚ್​ಎಂಟಿ ವಶದಲ್ಲಿರುವ ಮತ್ತು ಹೆಚ್​ಎಂಟಿ ಸಂಸ್ಥೆಯು ವಿವಿಧ ಸಂಸ್ಥೆ, ಇಲಾಖೆ, ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿರುವ ಭೂಮಿ ಅರಣ್ಯವೇ ಆಗಿದೆ. ಇತ್ತೀಚೆಗೆ ಸರ್ವೋಚ್ಛ ನ್ಯಾಯಾಲಯ 'Once a Forest is Always a Forest – Environment is more important than civil rights' ಎಂದು ಅಭಿಪ್ರಾಯಪಟ್ಟಿದೆ. ಮಿಗಿಲಾಗಿ ಸದರಿ ಜಮೀನಿನ ಪೈಕಿ ಹೆಚ್​ಎಂಟಿ ಮಾರಾಟ ಮಾಡಿರುವ 201 ಎಕರೆಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆಯೂ ಆಗಿದ್ದು, ಆ ಆದೇಶದ ವಿರುದ್ಧ ಹೆಚ್​​ಎಂಟಿ ಈವರೆಗೆ ಮೇಲ್ಮನವಿಯನ್ನೂ ಸಲ್ಲಿಸಿರುವುದಿಲ್ಲ. ಈ ನಿಟ್ಟಿನಲ್ಲಿ ಹೆಚ್​ಎಂಟಿ ವಶದಲ್ಲಿರುವ ಭೂಮಿ, ಮಾರಾಟ ಮಾಡಿರುವ ಭೂಮಿ ಇಂದಿಗೂ ಅರಣ್ಯವೇ ಆಗಿರುತ್ತದೆ ಎಂದು ಅಭಿಪ್ರಾಯಪಟ್ಟಿರುತ್ತಾರೆ.

ಮಧ್ಯಂತರ ಅರ್ಜಿ (IA) ಹಿಂಪಡೆಯಲೂ ಸೂಚನೆ: ಈ ಭೂಮಿಯನ್ನು ಹೆಚ್​ಎಂಟಿ ಸಂಸ್ಥೆಯು ಸರ್ಕಾರಿ ಇಲಾಖೆ/ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿರುವುದು ಅಕ್ರಮವಾಗಿರುತ್ತದೆ. ಈ ಸಂಬಂಧ ಸಚಿವ ಸಂಪುಟದ ಗಮನಕ್ಕೂ ತಾರದೆ 2020ರಲ್ಲಿ ಡಿನೋಟಿಫೈ ಮಾಡಲು ಅನುಮತಿ ಕೋರಿ ಸುಪ್ರೀಂಕೋರ್ಟ್​ಗೆ ಅರಣ್ಯ ಇಲಾಖೆ ಮಧ್ಯಂತ ಅರ್ಜಿ ಸಲ್ಲಿಸಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಅರ್ಜಿಯನ್ನು ಹಿಂಪಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ತನಿಖೆ ನಡೆಸುವಂತೆ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಅಧಿಕ ಇಳುವರಿ, ಪೌಷ್ಠಿಕಾಂಶ ನೀಡುವ 109 ಪ್ರಭೇದಗಳ ಬೀಜ ಬಿಡುಗಡೆ ಮಾಡಿದ ಪ್ರಧಾನಿ ಮೋದಿ - seeds unveiled by PM Modi

ಬೆಂಗಳೂರು: ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗೂ ಹೆಚ್ಚು ಬೆಲೆ ಬಾಳುವ 599 ಎಕರೆ ಅಧಿಸೂಚಿತ ಅರಣ್ಯ ಪ್ರದೇಶವನ್ನು ಮರಳಿ ಇಲಾಖೆಯ ವಶಕ್ಕೆ ಪಡೆಯಲು ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳುಹಿಸಿರುವ ಸಚಿವರು, ಅರಣ್ಯ ನಿಯಮಾವಳಿ 1878ರ ಸೆಕ್ಷನ್ 9ರಡಿಯಲ್ಲಿ ಅರಣ್ಯ ಎಂದು ಘೋಷಣೆಯಾಗಿ, ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಅಂದರೆ 1896 ಜೂನ್ 11ರಲ್ಲೇ ಗೆಜೆಟ್ ಅಧಿಸೂಚನೆ ಆಗಿರುವ ಸಾವಿರಾರು ಕೋಟಿ ರೂ. ಬೆಲೆ ಬಾಳುವ ಭೂಮಿಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಹೆಚ್​​ಎಂಟಿ ಸಂಸ್ಥೆಯು ಅಕ್ರಮವಾಗಿ ಸರ್ಕಾರಿ ಇಲಾಖೆಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ಒಟ್ಟು 599 ಎಕರೆ ಅರಣ್ಯ ಭೂಮಿಯ ಪೈಕಿ ಹೆಚ್​ಎಂಟಿಗೆ ನೀಡಲಾಗಿದೆ ಎನ್ನಲಾದ 469ಎಕರೆ 32 ಗುಂಟೆಯಲ್ಲಿ ಖಾಲಿ ಇರುವ 281 ಎಕರೆ ಜಮೀನನ್ನು ಮೊದಲಿಗೆ ವಶಕ್ಕೆ ಪಡೆದು ನಂತರ ಉಳಿದ ಭೂಮಿ ವಶ ಪಡಿಸಿಕೊಳ್ಳಲು ಕಾನೂನು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

ಅರಣ್ಯ ಸಂರಕ್ಷಣಾ ಕಾಯಿದೆ ಸೆಕ್ಷನ್ 64ಎ ಅಡಿಯಲ್ಲಿ ಈ ಹಿಂದೆ ಪ್ರಕ್ರಿಯೆ ನಡೆದಿದ್ದು ಭೂಮಿ ತೆರವಿಗೆ ಆದೇಶ ಆಗಿದ್ದರೂ, ಈವರೆಗೆ ಕ್ರಮ ವಹಿಸದ ಅರಣ್ಯಾಧಿಕಾರಿಗಳ ನಡೆಯ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ತನಿಖೆ ನಡೆಸಲು ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ. ಅರಣ್ಯ ನಿಯಂತ್ರಣ ಕಾಯಿದೆ 1900ರ ಸೆಕ್ಷನ್ 30ರ ಸಬ್ ಸೆಕ್ಷನ್ (1)ರ ಅಡಿಯಲ್ಲಿ ಯಾವುದೇ ಅರಣ್ಯ ಭೂಮಿಯನ್ನು ದಾನವಾಗಿ ನೀಡಲು ಕಾನೂನಿನಲ್ಲಿ ಅವಕಾಶ ಇರುವುದಿಲ್ಲ. ಯಾವುದೇ ಅರಣ್ಯ ಭೂಮಿಯನ್ನು ಮಂಜೂರಾತಿ ಮಾಡುವ ಮುನ್ನ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಮಾಡಲು ಮೊದಲಿಗೆ ಡಿ ನೋಟಿಫೈ ಮಾಡಿ, ಗೆಜೆಟ್ ಅಧಿಸೂಚನೆ ಮಾಡಬೇಕಾಗಿರುತ್ತದೆ. ಆದರೆ ಈ ಜಮೀನನ್ನು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿ ಹನುಮಾನ್ ಅವರು 1963ರಲ್ಲಿ ಹೆಚ್​ಎಂಟಿಗೆ ದಾನಪತ್ರದ ಮೂಲಕ ವರ್ಗಾವಣೆ ಮಾಡಿರುತ್ತಾರೆ ಎನ್ನಲಾಗಿದೆ. ಈ ದಾನಪತ್ರದ ಕುರಿತಂತೆ ಯಾವುದೇ ಗೆಜೆಟ್ ಅಧಿಸೂಚನೆಯೂ ಆಗಿರುವುದಿಲ್ಲ. ಈ ಭೂಮಿ ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಕೂಡ ಆಗಿರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಡಾನೆ ಹಾವಳಿ ತಪ್ಪಿಸಲು ಕರ್ನಾಟಕ-ಆಂಧ್ರ ಮಾಡಿಕೊಂಡ ಒಪ್ಪಂದದಲ್ಲಿ ಏನಿದೆ? - Human Animal Conflict

ಶರಾವತಿ ಸಂತ್ರಸ್ತರಿಗೆ ಅರಣ್ಯ ಭೂಮಿ ನೀಡಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಹಾಗೂ ಗೋದಾವರ್ಮನ್ ಮತ್ತು ಭಾರತ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶಗಳು ಇದನ್ನು ಸ್ಪಷ್ಟಪಡಿಸುತ್ತವೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಹೆಚ್​ಎಂಟಿ ವಶದಲ್ಲಿರುವ ಮತ್ತು ಹೆಚ್​ಎಂಟಿ ಸಂಸ್ಥೆಯು ವಿವಿಧ ಸಂಸ್ಥೆ, ಇಲಾಖೆ, ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿರುವ ಭೂಮಿ ಅರಣ್ಯವೇ ಆಗಿದೆ. ಇತ್ತೀಚೆಗೆ ಸರ್ವೋಚ್ಛ ನ್ಯಾಯಾಲಯ 'Once a Forest is Always a Forest – Environment is more important than civil rights' ಎಂದು ಅಭಿಪ್ರಾಯಪಟ್ಟಿದೆ. ಮಿಗಿಲಾಗಿ ಸದರಿ ಜಮೀನಿನ ಪೈಕಿ ಹೆಚ್​ಎಂಟಿ ಮಾರಾಟ ಮಾಡಿರುವ 201 ಎಕರೆಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆಯೂ ಆಗಿದ್ದು, ಆ ಆದೇಶದ ವಿರುದ್ಧ ಹೆಚ್​​ಎಂಟಿ ಈವರೆಗೆ ಮೇಲ್ಮನವಿಯನ್ನೂ ಸಲ್ಲಿಸಿರುವುದಿಲ್ಲ. ಈ ನಿಟ್ಟಿನಲ್ಲಿ ಹೆಚ್​ಎಂಟಿ ವಶದಲ್ಲಿರುವ ಭೂಮಿ, ಮಾರಾಟ ಮಾಡಿರುವ ಭೂಮಿ ಇಂದಿಗೂ ಅರಣ್ಯವೇ ಆಗಿರುತ್ತದೆ ಎಂದು ಅಭಿಪ್ರಾಯಪಟ್ಟಿರುತ್ತಾರೆ.

ಮಧ್ಯಂತರ ಅರ್ಜಿ (IA) ಹಿಂಪಡೆಯಲೂ ಸೂಚನೆ: ಈ ಭೂಮಿಯನ್ನು ಹೆಚ್​ಎಂಟಿ ಸಂಸ್ಥೆಯು ಸರ್ಕಾರಿ ಇಲಾಖೆ/ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿರುವುದು ಅಕ್ರಮವಾಗಿರುತ್ತದೆ. ಈ ಸಂಬಂಧ ಸಚಿವ ಸಂಪುಟದ ಗಮನಕ್ಕೂ ತಾರದೆ 2020ರಲ್ಲಿ ಡಿನೋಟಿಫೈ ಮಾಡಲು ಅನುಮತಿ ಕೋರಿ ಸುಪ್ರೀಂಕೋರ್ಟ್​ಗೆ ಅರಣ್ಯ ಇಲಾಖೆ ಮಧ್ಯಂತ ಅರ್ಜಿ ಸಲ್ಲಿಸಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಅರ್ಜಿಯನ್ನು ಹಿಂಪಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ತನಿಖೆ ನಡೆಸುವಂತೆ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಅಧಿಕ ಇಳುವರಿ, ಪೌಷ್ಠಿಕಾಂಶ ನೀಡುವ 109 ಪ್ರಭೇದಗಳ ಬೀಜ ಬಿಡುಗಡೆ ಮಾಡಿದ ಪ್ರಧಾನಿ ಮೋದಿ - seeds unveiled by PM Modi

ETV Bharat Logo

Copyright © 2024 Ushodaya Enterprises Pvt. Ltd., All Rights Reserved.