ETV Bharat / state

ನಾಡಿನ ಸಂಸ್ಕೃತಿ ಬಗ್ಗೆ ಎಲ್ಲೆಡೆ ಚರ್ಚೆಯಾಗಬೇಕು: ಡಾ. ಹೆಚ್​ಸಿ ಮಹದೇವಪ್ಪ

ಮೈಸೂರು ಫೆಸ್ಟ್ ಅನ್ನು ಮುಂದಿನ ದಿನದಲ್ಲಿ ಬ್ರಾಂಡ್ ಮೈಸೂರು ಫೆಸ್ಟ್ ಆಗಿ ಮಾಡುವಂತೆ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಸಲಹೆ ನೀಡಿದ್ದಾರೆ.

author img

By ETV Bharat Karnataka Team

Published : Jan 26, 2024, 5:39 PM IST

ಮೈಸೂರು ಫೆಸ್ಟ್ ಉದ್ಘಾಟಿಸಿದ ಸಚಿವ ಹೆಚ್​ಸಿ ಮಹದೇವಪ್ಪ
ಮೈಸೂರು ಫೆಸ್ಟ್ ಉದ್ಘಾಟಿಸಿದ ಸಚಿವ ಹೆಚ್​ಸಿ ಮಹದೇವಪ್ಪ

ಮೈಸೂರು: ನಮ್ಮ ನಾಡಿದ ಸಂಸ್ಕೃತಿ, ಸಂಪ್ರದಾಯ, ಕಲೆ, ಸಾಹಿತ್ಯದ ಬಗ್ಗೆ ಹೊರಗಿನ ಜನರಿಗೆ ಮತ್ತಷ್ಟು ತಿಳಿಸುವ ಕೆಲಸವಾಗಬೇಕು. ಎಲ್ಲೆಡೆ ಚರ್ಚೆಯಾಗುವಂತೆ ಮಾಡಬೇಕು ಎಂದು ಸಚಿವ ಡಾ. ಹೆಚ್​ಸಿ ಮಹದೇವಪ್ಪ ಹೇಳಿದರು. ಕ್ಲಾಕ್ ಟವರ್ ಬಳಿ ಆಯೋಜಿಸಿದ್ದ 'ಮೈಸೂರು ಫೆಸ್ಟ್' ಚಿತ್ರಸಂತೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

'ಮೈಸೂರು ಫೆಸ್ಟ್' ಚಿತ್ರಸಂತೆ
'ಮೈಸೂರು ಫೆಸ್ಟ್' ಚಿತ್ರಸಂತೆ

ಅಂತಹದ್ದೇ ಗುರಿ ಇಟ್ಟುಕೊಂಡಿರುವ ಪ್ರವಾಸೋದ್ಯಮ ಇಲಾಖೆ, ಈ ಜಾತ್ರೆಯನ್ನು ಪ್ರಾರಂಭಿಸಿದೆ. ನಗರಸಭೆ, ಪುರಸಭೆ, ಪಟ್ಟಣದಲ್ಲಿ ಸಂಚರಿಸಿ ಕಲೆ, ವಿನ್ಯಾಸ, ಚಿತ್ರಸಂತೆ ಮೂಲಕ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸಲಾಗುತ್ತಿದೆ. ಮೈಸೂರು ಫೆಸ್ಟ್ ಅನ್ನು ಮುಂದಿನ ದಿನದಲ್ಲಿ ಬ್ರಾಂಡ್ ಮೈಸೂರು ಫೆಸ್ಟ್ ಆಗಿ ಮಾಡಬೇಕು. ದೇಶ ಸುತ್ತಬೇಕು, ಕೋಶ ಓದಬೇಕು ಎಂಬ ಮಾತಿನಂತೆ ಎಲ್ಲದರ ಬಗ್ಗೆಯೂ ತಿಳಿದುಕೊಳ್ಳಬೇಕು. ಈ ಹಬ್ಬ ನಿರಂತರವಾಗಿ ನಡೆಯಬೇಕು. ಇದರಿಂದ ಕಲಾವಿದರಿಗೆ ಹೆಚ್ಚಿನ ಅವಕಾಶ ಸಿಗುವಂತೆ ಆಗಲಿದೆ ಎಂದರು.

'ಮೈಸೂರು ಫೆಸ್ಟ್' ಚಿತ್ರಸಂತೆ
'ಮೈಸೂರು ಫೆಸ್ಟ್' ಚಿತ್ರಸಂತೆ

ರಾಜ್ಯ ಮತ್ತು ರಾಷ್ಟ್ರದಲ್ಲಿ 75ನೇ ಗಣರಾಜ್ಯೋತ್ಸವ ಮನೆ ಮಾಡಿದೆ. ಜನರ ಅನಿಸಿಕೆಗಳನ್ನು ಹೇಳಿಕೊಳ್ಳುವುದಕ್ಕೆ ನಮಗೆ ನಾವೇ ಸಂವಿಧಾನ ರಚಿಸಿಕೊಂಡ ದಿನವಿದು. ಎಲ್ಲರೂ ಜಾತ್ಯತೀತ, ಸಮಾಜವಾದಿ, ಸಾರ್ವಭೌಮತೆ ಅಳವಡಿಸಿಕೊಳ್ಳಬೇಕು. ಸಂವಿಧಾನದ ಎಲ್ಲ ತತ್ವಗಳು ಯಥಾವತ್ತಾಗಿ ಜಾರಿಯಾದರೆ ಸಮೃದ್ಧ ಭಾರತ ನಿರ್ಮಾಣವಾಗಲಿದೆ. ಮೇಲು - ಕೀಳು, ಭೇದ-ಭಾವವನ್ನು ತೊಡೆದು ಹಾಕಿ ಎಲ್ಲ ಯುವ ಮನಸ್ಸುಗಳನ್ನು ಒಂದೆಡೆ ಸೇರಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಇಂತಹ ಸಂವಿಧಾನ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು. ಭಾರತದಲ್ಲಿ ವಾಸಿಸುತ್ತಿರುವ 140 ಕೋಟಿ ಜನರು ಭಾರತೀಯರೇ. ಅದನ್ನು ಒತ್ತಿ ಹೇಳುವ ಸಂವಿಧಾನವನ್ನು ಅಳವಡಿಸಿಕೊಳ್ಳಬೇಕು. ಸಂವಿಧಾನ ಎಲ್ಲರನ್ನು ರಕ್ಷಿಸಲು ಇದೆ. ಇದು ಯಾವುದೇ ಜಾತಿ, ಸಮುದಾಯದ ರಕ್ಷಣೆಗೆ ಸೀಮಿತವಾಗಿಲ್ಲ ಎಂದು ಅವರು ಹೇಳಿದರು.

'ಮೈಸೂರು ಫೆಸ್ಟ್' ಚಿತ್ರಸಂತೆ
'ಮೈಸೂರು ಫೆಸ್ಟ್' ಚಿತ್ರಸಂತೆ

ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಮಾತನಾಡಿ, ಮೈಸೂರು ದಸರಾ ಸಂದರ್ಭದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಕಾರಣಾಂತರಗಳಿಂದ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಈ ಸಮಯದಲ್ಲಿ ಪ್ರವಾಸೋದ್ಯಮ ಇಲಾಖೆಯೊಂದಿಗೆ ಕೈಜೋಡಿಸಿ ಟೂರಿಸಂ ಕ್ಯಾಲೆಂಡರ್ ಅನ್ನು ಹೊರತರುತ್ತಿದ್ದೇವೆ. ಈ ಉತ್ಸವವು ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಕಲಾವಿದರ ಮಾರುಕಟ್ಟೆಗೆ ಅವಕಾಶ ಕಲ್ಪಿಸಿಕೊಟ್ಟಿದೆ. ಇಂದಿನ ಯುವಜನರಿಗೆ ನಮ್ಮ ಕಲೆಯ ಹಾಗೂ ಸಂಸ್ಕೃತಿಯ ಬಗ್ಗೆ ತಿಳಿಸಿಕೊಡಲು ಮೈಸೂರು ಫೆಸ್ಟ್ ಒಂದು ಬ್ರಿಡ್ಜ್ ಆಗಿದೆ. ದಸರಾ ಸಂದರ್ಭದಲ್ಲಿ ಪ್ರವಾಸಿ ಚಟುವಟಿಕೆಗಳಿಗಾಗಿ ಬಿಡುಗಡೆಯಾಗಿದ್ದ ಹಣವನ್ನು ಈ ಸಂದರ್ಭದಲ್ಲಿ ಬಳಸಿಕೊಂಡು ಚಿತ್ರಸಂತೆ, ಸ್ಥಳೀಯ ಕಲೆಗಳ ಪ್ರದರ್ಶನ, ಆಹಾರಮೇಳ ಹಾಗೂ ಮೂರು ದಿನಗಳು ವಿಶ್ವ ಪ್ರಸಿದ್ಧ ಅಂತಾರಾಷ್ಟ್ರೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಯಕ್ರಮಗಳು ನಡೆಯುತ್ತಿದ್ದು, ಮೈಸೂರು ದಸರಾ ಮರುಕಳುಹಿಸುತ್ತದೆ ಎಂದರು.

'ಮೈಸೂರು ಫೆಸ್ಟ್' ಚಿತ್ರಸಂತೆ
'ಮೈಸೂರು ಫೆಸ್ಟ್' ಚಿತ್ರಸಂತೆ

ಕಾರ್ಯಕ್ರಮದಲ್ಲಿ ಶಾಸಕ ತನ್ವಿರ್ ಸೇಠ್, ಪರಿಷತ್ ಸದಸ್ಯ ಮರೀತೀಬ್ಬೆಗೌಡ, ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ, ಜಿಲ್ಲಾ ಪೊಲೀಸ್ ಆಯುಕ್ತ ರಮೇಶ್, ಎಸ್​ಪಿ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಡಾ. ಕೆಎಂ ಗಾಯಿತ್ರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮೈಸೂರು ಫೆಸ್ಟ್ ಉದ್ಘಾಟಿಸಿದ ಸಚಿವ ಹೆಚ್​ಸಿ ಮಹದೇವಪ್ಪ
ಮೈಸೂರು ಫೆಸ್ಟ್ ಉದ್ಘಾಟಿಸಿದ ಸಚಿವ ಹೆಚ್​ಸಿ ಮಹದೇವಪ್ಪ

ಇದನ್ನೂ ಓದಿ: ಗಣರಾಜ್ಯೋತ್ಸವ ಪರೇಡ್ ವೇಳೆ ಸಿಎಂ ಬಳಿ ಏಕಾಏಕಿ ನುಗ್ಗಲು ಯತ್ನಿಸಿದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸರು

ಮೈಸೂರು: ನಮ್ಮ ನಾಡಿದ ಸಂಸ್ಕೃತಿ, ಸಂಪ್ರದಾಯ, ಕಲೆ, ಸಾಹಿತ್ಯದ ಬಗ್ಗೆ ಹೊರಗಿನ ಜನರಿಗೆ ಮತ್ತಷ್ಟು ತಿಳಿಸುವ ಕೆಲಸವಾಗಬೇಕು. ಎಲ್ಲೆಡೆ ಚರ್ಚೆಯಾಗುವಂತೆ ಮಾಡಬೇಕು ಎಂದು ಸಚಿವ ಡಾ. ಹೆಚ್​ಸಿ ಮಹದೇವಪ್ಪ ಹೇಳಿದರು. ಕ್ಲಾಕ್ ಟವರ್ ಬಳಿ ಆಯೋಜಿಸಿದ್ದ 'ಮೈಸೂರು ಫೆಸ್ಟ್' ಚಿತ್ರಸಂತೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

'ಮೈಸೂರು ಫೆಸ್ಟ್' ಚಿತ್ರಸಂತೆ
'ಮೈಸೂರು ಫೆಸ್ಟ್' ಚಿತ್ರಸಂತೆ

ಅಂತಹದ್ದೇ ಗುರಿ ಇಟ್ಟುಕೊಂಡಿರುವ ಪ್ರವಾಸೋದ್ಯಮ ಇಲಾಖೆ, ಈ ಜಾತ್ರೆಯನ್ನು ಪ್ರಾರಂಭಿಸಿದೆ. ನಗರಸಭೆ, ಪುರಸಭೆ, ಪಟ್ಟಣದಲ್ಲಿ ಸಂಚರಿಸಿ ಕಲೆ, ವಿನ್ಯಾಸ, ಚಿತ್ರಸಂತೆ ಮೂಲಕ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸಲಾಗುತ್ತಿದೆ. ಮೈಸೂರು ಫೆಸ್ಟ್ ಅನ್ನು ಮುಂದಿನ ದಿನದಲ್ಲಿ ಬ್ರಾಂಡ್ ಮೈಸೂರು ಫೆಸ್ಟ್ ಆಗಿ ಮಾಡಬೇಕು. ದೇಶ ಸುತ್ತಬೇಕು, ಕೋಶ ಓದಬೇಕು ಎಂಬ ಮಾತಿನಂತೆ ಎಲ್ಲದರ ಬಗ್ಗೆಯೂ ತಿಳಿದುಕೊಳ್ಳಬೇಕು. ಈ ಹಬ್ಬ ನಿರಂತರವಾಗಿ ನಡೆಯಬೇಕು. ಇದರಿಂದ ಕಲಾವಿದರಿಗೆ ಹೆಚ್ಚಿನ ಅವಕಾಶ ಸಿಗುವಂತೆ ಆಗಲಿದೆ ಎಂದರು.

'ಮೈಸೂರು ಫೆಸ್ಟ್' ಚಿತ್ರಸಂತೆ
'ಮೈಸೂರು ಫೆಸ್ಟ್' ಚಿತ್ರಸಂತೆ

ರಾಜ್ಯ ಮತ್ತು ರಾಷ್ಟ್ರದಲ್ಲಿ 75ನೇ ಗಣರಾಜ್ಯೋತ್ಸವ ಮನೆ ಮಾಡಿದೆ. ಜನರ ಅನಿಸಿಕೆಗಳನ್ನು ಹೇಳಿಕೊಳ್ಳುವುದಕ್ಕೆ ನಮಗೆ ನಾವೇ ಸಂವಿಧಾನ ರಚಿಸಿಕೊಂಡ ದಿನವಿದು. ಎಲ್ಲರೂ ಜಾತ್ಯತೀತ, ಸಮಾಜವಾದಿ, ಸಾರ್ವಭೌಮತೆ ಅಳವಡಿಸಿಕೊಳ್ಳಬೇಕು. ಸಂವಿಧಾನದ ಎಲ್ಲ ತತ್ವಗಳು ಯಥಾವತ್ತಾಗಿ ಜಾರಿಯಾದರೆ ಸಮೃದ್ಧ ಭಾರತ ನಿರ್ಮಾಣವಾಗಲಿದೆ. ಮೇಲು - ಕೀಳು, ಭೇದ-ಭಾವವನ್ನು ತೊಡೆದು ಹಾಕಿ ಎಲ್ಲ ಯುವ ಮನಸ್ಸುಗಳನ್ನು ಒಂದೆಡೆ ಸೇರಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಇಂತಹ ಸಂವಿಧಾನ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು. ಭಾರತದಲ್ಲಿ ವಾಸಿಸುತ್ತಿರುವ 140 ಕೋಟಿ ಜನರು ಭಾರತೀಯರೇ. ಅದನ್ನು ಒತ್ತಿ ಹೇಳುವ ಸಂವಿಧಾನವನ್ನು ಅಳವಡಿಸಿಕೊಳ್ಳಬೇಕು. ಸಂವಿಧಾನ ಎಲ್ಲರನ್ನು ರಕ್ಷಿಸಲು ಇದೆ. ಇದು ಯಾವುದೇ ಜಾತಿ, ಸಮುದಾಯದ ರಕ್ಷಣೆಗೆ ಸೀಮಿತವಾಗಿಲ್ಲ ಎಂದು ಅವರು ಹೇಳಿದರು.

'ಮೈಸೂರು ಫೆಸ್ಟ್' ಚಿತ್ರಸಂತೆ
'ಮೈಸೂರು ಫೆಸ್ಟ್' ಚಿತ್ರಸಂತೆ

ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಮಾತನಾಡಿ, ಮೈಸೂರು ದಸರಾ ಸಂದರ್ಭದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಕಾರಣಾಂತರಗಳಿಂದ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಈ ಸಮಯದಲ್ಲಿ ಪ್ರವಾಸೋದ್ಯಮ ಇಲಾಖೆಯೊಂದಿಗೆ ಕೈಜೋಡಿಸಿ ಟೂರಿಸಂ ಕ್ಯಾಲೆಂಡರ್ ಅನ್ನು ಹೊರತರುತ್ತಿದ್ದೇವೆ. ಈ ಉತ್ಸವವು ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಕಲಾವಿದರ ಮಾರುಕಟ್ಟೆಗೆ ಅವಕಾಶ ಕಲ್ಪಿಸಿಕೊಟ್ಟಿದೆ. ಇಂದಿನ ಯುವಜನರಿಗೆ ನಮ್ಮ ಕಲೆಯ ಹಾಗೂ ಸಂಸ್ಕೃತಿಯ ಬಗ್ಗೆ ತಿಳಿಸಿಕೊಡಲು ಮೈಸೂರು ಫೆಸ್ಟ್ ಒಂದು ಬ್ರಿಡ್ಜ್ ಆಗಿದೆ. ದಸರಾ ಸಂದರ್ಭದಲ್ಲಿ ಪ್ರವಾಸಿ ಚಟುವಟಿಕೆಗಳಿಗಾಗಿ ಬಿಡುಗಡೆಯಾಗಿದ್ದ ಹಣವನ್ನು ಈ ಸಂದರ್ಭದಲ್ಲಿ ಬಳಸಿಕೊಂಡು ಚಿತ್ರಸಂತೆ, ಸ್ಥಳೀಯ ಕಲೆಗಳ ಪ್ರದರ್ಶನ, ಆಹಾರಮೇಳ ಹಾಗೂ ಮೂರು ದಿನಗಳು ವಿಶ್ವ ಪ್ರಸಿದ್ಧ ಅಂತಾರಾಷ್ಟ್ರೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಯಕ್ರಮಗಳು ನಡೆಯುತ್ತಿದ್ದು, ಮೈಸೂರು ದಸರಾ ಮರುಕಳುಹಿಸುತ್ತದೆ ಎಂದರು.

'ಮೈಸೂರು ಫೆಸ್ಟ್' ಚಿತ್ರಸಂತೆ
'ಮೈಸೂರು ಫೆಸ್ಟ್' ಚಿತ್ರಸಂತೆ

ಕಾರ್ಯಕ್ರಮದಲ್ಲಿ ಶಾಸಕ ತನ್ವಿರ್ ಸೇಠ್, ಪರಿಷತ್ ಸದಸ್ಯ ಮರೀತೀಬ್ಬೆಗೌಡ, ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ, ಜಿಲ್ಲಾ ಪೊಲೀಸ್ ಆಯುಕ್ತ ರಮೇಶ್, ಎಸ್​ಪಿ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಡಾ. ಕೆಎಂ ಗಾಯಿತ್ರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮೈಸೂರು ಫೆಸ್ಟ್ ಉದ್ಘಾಟಿಸಿದ ಸಚಿವ ಹೆಚ್​ಸಿ ಮಹದೇವಪ್ಪ
ಮೈಸೂರು ಫೆಸ್ಟ್ ಉದ್ಘಾಟಿಸಿದ ಸಚಿವ ಹೆಚ್​ಸಿ ಮಹದೇವಪ್ಪ

ಇದನ್ನೂ ಓದಿ: ಗಣರಾಜ್ಯೋತ್ಸವ ಪರೇಡ್ ವೇಳೆ ಸಿಎಂ ಬಳಿ ಏಕಾಏಕಿ ನುಗ್ಗಲು ಯತ್ನಿಸಿದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.