ETV Bharat / state

ಈ ಬಾರಿ 25 ಸಾವಿರ ಕೋಟಿ ಅಲ್ಪಾವಧಿ ಕೃಷಿ ಸಾಲ ವಿತರಣೆ ಗುರಿ: ಸಚಿವ ಕೆ ಎನ್ ರಾಜಣ್ಣ - short term agricultural loan

author img

By ETV Bharat Karnataka Team

Published : Jul 16, 2024, 4:05 PM IST

ಈ ಬಾರಿ 25 ಸಾವಿರ ಕೋಟಿ ರೂ. ಗಳ ಅಲ್ಪಾವಧಿ ಸಾಲ ನೀಡುವ ಗುರಿ ಹೊಂದಿದ್ದೇವೆ ಎಂದು ಸಹಕಾರ ಸಚಿವ ಕೆ. ಎನ್ ರಾಜಣ್ಣ ತಿಳಿಸಿದ್ದಾರೆ. ಈವರೆಗೆ 6799.17 ಕೋಟಿ ಬೆಳೆ ಸಾಲ ವಿತರಿಸಲಾಗಿದೆ ಎಂದು ಹೇಳಿದ್ದಾರೆ.

Congress MLA Dinesh Gooligowda, Minister K. N Rajanna
ಕಾಂಗ್ರೆಸ್ ಶಾಸಕ ದಿನೇಶ್ ಗೂಳಿಗೌಡ, ಸಚಿವ ಕೆ. ಎನ್ ರಾಜಣ್ಣ (ETV Bharat)
ಸಚಿವ ಕೆ ಎನ್ ರಾಜಣ್ಣ (ETV Bharat)

ಬೆಂಗಳೂರು : ಪ್ರಸಕ್ತ ಆರ್ಥಿಕ ವರ್ಷದಲ್ಲಿ 25 ಸಾವಿರ ಕೋಟಿ ರೂ. ಗಳ ಅಲ್ಪಾವಧಿ ಸಾಲ ನೀಡುವ ಗುರಿ ಹೊಂದಿದ್ದೇವೆ ಎಂದು ಸಹಕಾರ ಸಚಿವ ಕೆ. ಎನ್ ರಾಜಣ್ಣ ಸದನಕ್ಕೆ ಮಾಹಿತಿ ನೀಡಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲದ ಮೊತ್ತ ಏರಿಕೆ ಹಾಗೂ ಶೂನ್ಯ ಬಡ್ಡಿಯಲ್ಲಿ ವಿತರಣೆಯಾಗಿರುವುದರ ಬಗ್ಗೆ ಕಾಂಗ್ರೆಸ್ ಶಾಸಕ ದಿನೇಶ್ ಗೂಳಿಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರ್ಜಿ ಹಾಕಿದ ಎಲ್ಲ ರೈತರಿಗೆ ಸಾಲ ಕೊಡಲಾಗುವುದಿಲ್ಲ. ರೈತರ ಭೂಮಿ ಹಾಗೂ ಬೆಳೆ ಆಧಾರದ ಮೇಲೆ ಸಾಲ ವಿತರಣೆ ಮಾಡಲಾಗುತ್ತದೆ. ಹಿಂದಿನಿಂದಲೂ ಈ ಕ್ರಮವನ್ನ ಅನುಸರಿಸಿಕೊಂಡು ಬರಲಾಗುತ್ತಿದೆ. ಕಳೆದ ಸಾಲಿನಲ್ಲಿ 22,982.10 ಕೋಟಿ ಬೆಳೆ ಸಾಲ ನೀಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ 35.10 ಲಕ್ಷ ರೈತರಿಗೆ 25 ಸಾವಿರ ಕೋಟಿ ಅಲ್ಪಾವಧಿ ಸಾಲ ನೀಡುವ ಗುರಿ ಹೊಂದಿದ್ದೇವೆ. ಈವರೆಗೆ 6799.17 ಕೋಟಿ ಬೆಳೆ ಸಾಲ ವಿತರಿಸಲಾಗಿದೆ ಎಂದರು.

ಹಾಲಿನ ಪ್ರೋತ್ಸಾಹಧನ ಶೀಘ್ರ ಬಿಡುಗಡೆ : ಹಾಲಿನ ಪ್ರೋತ್ಸಾಹಧನ ಬಾಕಿ ಇದ್ದು, ಆದಷ್ಟು ಬೇಗ ಬಾಕಿ ಇರುವ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸಹಕಾರ ಸಚಿವ ಕೆ. ಎನ್ ರಾಜಣ್ಣ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶುಪಾಲಕರ ಹಾಲು ಉತ್ಪಾದನಾ ಪ್ರೋತ್ಸಾಹ ಧನವನ್ನ ಶೀಘ್ರವೇ ಬಿಡುಗಡೆ ಮಾಡಲು ಕ್ರಮ ವಹಿಸುತ್ತೇವೆ. ರಾಜ್ಯಾದ್ಯಂತ ಪ್ರೋತ್ಸಾಹ ಧನ ಬಿಡುಗಡೆ ಆಗಬೇಕಿದೆ. ಅದಕ್ಕೆ ಕ್ರಮ ವಹಿಸಲಾಗುತ್ತಿದೆ. ಸದಸ್ಯರು ಕೇಳಿರುವ ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಸದ್ಯ 3,06,826 ಹಾಲು ಉತ್ಪಾದಕರಿಗೆ 31.90 ಕೋಟಿ ರೂಪಾಯಿ ಪಾವತಿಗೆ ಬಾಕಿ ಇದೆ. ಇದನ್ನ ಶೀಘ್ರವೇ ಬಿಡುಗಡೆ ಮಾಡುತ್ತೇವೆ ಎಂದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ಪಶುಸಂಗೋಪನಾ ಸಚಿವ ವೆಂಕಟೇಶ್, ಬಿಜೆಪಿ ಅವಧಿಯಲ್ಲಿ 700 ಕೋಟಿ ಬಾಕಿ ಉಳಿಸಿಕೊಳ್ಳಲಾಗಿತ್ತು. ನಾವು ಬಂದ ನಂತರ 200 ಕೋಟಿ ಬಾಕಿ ನೀಡಿದ್ದೇವೆ ಎಂದರು. ಇದಕ್ಕೆ ಆಕ್ಷೇಪಿಸಿದ ಹನುಮಂತ ನಿರಾಣಿ, ಸರ್ಕಾರ ಯಾವುದೇ ಇರಲಿ ಬರಲಿ, ರೈತರ ಹಿತ ಮುಖ್ಯ. ಇಲ್ಲಿ ರಾಜಕೀಯ ಬೇಡ, ರೈತ ಹಿತಾಸಕ್ತಿ ಕಾಪಾಡಿ ಎಂದರು.

ಇದನ್ನೂ ಓದಿ : ಸರ್ಕಾರಿ ನೌಕರರ ವೇತನ - ಪಿಂಚಣಿ ಪರಿಷ್ಕರಣೆ, ₹ 20,208 ಕೋಟಿ ಹೆಚ್ಚುವರಿ ವೆಚ್ಚ: ಸಿಎಂ ಮಾಹಿತಿ - 7TH STATE PAY COMMISSION

ಸಚಿವ ಕೆ ಎನ್ ರಾಜಣ್ಣ (ETV Bharat)

ಬೆಂಗಳೂರು : ಪ್ರಸಕ್ತ ಆರ್ಥಿಕ ವರ್ಷದಲ್ಲಿ 25 ಸಾವಿರ ಕೋಟಿ ರೂ. ಗಳ ಅಲ್ಪಾವಧಿ ಸಾಲ ನೀಡುವ ಗುರಿ ಹೊಂದಿದ್ದೇವೆ ಎಂದು ಸಹಕಾರ ಸಚಿವ ಕೆ. ಎನ್ ರಾಜಣ್ಣ ಸದನಕ್ಕೆ ಮಾಹಿತಿ ನೀಡಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲದ ಮೊತ್ತ ಏರಿಕೆ ಹಾಗೂ ಶೂನ್ಯ ಬಡ್ಡಿಯಲ್ಲಿ ವಿತರಣೆಯಾಗಿರುವುದರ ಬಗ್ಗೆ ಕಾಂಗ್ರೆಸ್ ಶಾಸಕ ದಿನೇಶ್ ಗೂಳಿಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರ್ಜಿ ಹಾಕಿದ ಎಲ್ಲ ರೈತರಿಗೆ ಸಾಲ ಕೊಡಲಾಗುವುದಿಲ್ಲ. ರೈತರ ಭೂಮಿ ಹಾಗೂ ಬೆಳೆ ಆಧಾರದ ಮೇಲೆ ಸಾಲ ವಿತರಣೆ ಮಾಡಲಾಗುತ್ತದೆ. ಹಿಂದಿನಿಂದಲೂ ಈ ಕ್ರಮವನ್ನ ಅನುಸರಿಸಿಕೊಂಡು ಬರಲಾಗುತ್ತಿದೆ. ಕಳೆದ ಸಾಲಿನಲ್ಲಿ 22,982.10 ಕೋಟಿ ಬೆಳೆ ಸಾಲ ನೀಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ 35.10 ಲಕ್ಷ ರೈತರಿಗೆ 25 ಸಾವಿರ ಕೋಟಿ ಅಲ್ಪಾವಧಿ ಸಾಲ ನೀಡುವ ಗುರಿ ಹೊಂದಿದ್ದೇವೆ. ಈವರೆಗೆ 6799.17 ಕೋಟಿ ಬೆಳೆ ಸಾಲ ವಿತರಿಸಲಾಗಿದೆ ಎಂದರು.

ಹಾಲಿನ ಪ್ರೋತ್ಸಾಹಧನ ಶೀಘ್ರ ಬಿಡುಗಡೆ : ಹಾಲಿನ ಪ್ರೋತ್ಸಾಹಧನ ಬಾಕಿ ಇದ್ದು, ಆದಷ್ಟು ಬೇಗ ಬಾಕಿ ಇರುವ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸಹಕಾರ ಸಚಿವ ಕೆ. ಎನ್ ರಾಜಣ್ಣ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶುಪಾಲಕರ ಹಾಲು ಉತ್ಪಾದನಾ ಪ್ರೋತ್ಸಾಹ ಧನವನ್ನ ಶೀಘ್ರವೇ ಬಿಡುಗಡೆ ಮಾಡಲು ಕ್ರಮ ವಹಿಸುತ್ತೇವೆ. ರಾಜ್ಯಾದ್ಯಂತ ಪ್ರೋತ್ಸಾಹ ಧನ ಬಿಡುಗಡೆ ಆಗಬೇಕಿದೆ. ಅದಕ್ಕೆ ಕ್ರಮ ವಹಿಸಲಾಗುತ್ತಿದೆ. ಸದಸ್ಯರು ಕೇಳಿರುವ ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಸದ್ಯ 3,06,826 ಹಾಲು ಉತ್ಪಾದಕರಿಗೆ 31.90 ಕೋಟಿ ರೂಪಾಯಿ ಪಾವತಿಗೆ ಬಾಕಿ ಇದೆ. ಇದನ್ನ ಶೀಘ್ರವೇ ಬಿಡುಗಡೆ ಮಾಡುತ್ತೇವೆ ಎಂದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ಪಶುಸಂಗೋಪನಾ ಸಚಿವ ವೆಂಕಟೇಶ್, ಬಿಜೆಪಿ ಅವಧಿಯಲ್ಲಿ 700 ಕೋಟಿ ಬಾಕಿ ಉಳಿಸಿಕೊಳ್ಳಲಾಗಿತ್ತು. ನಾವು ಬಂದ ನಂತರ 200 ಕೋಟಿ ಬಾಕಿ ನೀಡಿದ್ದೇವೆ ಎಂದರು. ಇದಕ್ಕೆ ಆಕ್ಷೇಪಿಸಿದ ಹನುಮಂತ ನಿರಾಣಿ, ಸರ್ಕಾರ ಯಾವುದೇ ಇರಲಿ ಬರಲಿ, ರೈತರ ಹಿತ ಮುಖ್ಯ. ಇಲ್ಲಿ ರಾಜಕೀಯ ಬೇಡ, ರೈತ ಹಿತಾಸಕ್ತಿ ಕಾಪಾಡಿ ಎಂದರು.

ಇದನ್ನೂ ಓದಿ : ಸರ್ಕಾರಿ ನೌಕರರ ವೇತನ - ಪಿಂಚಣಿ ಪರಿಷ್ಕರಣೆ, ₹ 20,208 ಕೋಟಿ ಹೆಚ್ಚುವರಿ ವೆಚ್ಚ: ಸಿಎಂ ಮಾಹಿತಿ - 7TH STATE PAY COMMISSION

ETV Bharat Logo

Copyright © 2024 Ushodaya Enterprises Pvt. Ltd., All Rights Reserved.