ETV Bharat / state

ಚಿಕ್ಕಮಗಳೂರು: ಮಳೆ ಹಾನಿ ಪ್ರದೇಶಗಳಿಗೆ ಸಚಿವ ಕೃಷ್ಣ ಬೈರೇಗೌಡ ಭೇಟಿ, ಪರಿಶೀಲನೆ - Krishnabyre Gowda

author img

By ETV Bharat Karnataka Team

Published : Aug 5, 2024, 8:27 PM IST

ಮಳೆ ಹಾನಿ ಪ್ರದೇಶಗಳಿಗೆ ಭೇಟಿ ವೇಳೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರ ಹೇಳಿಕೆಯ ವಿರುದ್ಧ ವಾಗ್ದಾಳಿ ನಡೆಸಿದರು.

Minister Krishna Byre Gowda visited Rain damage places of Chikkamagaluru
ಮಳೆ ಹಾನಿ ಪ್ರದೇಶಗಳಿಗೆ ಸಚಿವ ಕೃಷ್ಣ ಬೈರೇಗೌಡ ಭೇಟಿ (ETV Bharat)
ಮಳೆ ಹಾನಿ ಪ್ರದೇಶಗಳಿಗೆ ಸಚಿವ ಕೃಷ್ಣ ಬೈರೇಗೌಡ ಭೇಟಿ (ETV Bharat)

ಚಿಕ್ಕಮಗಳೂರು: ನಿರಂತರ ಮಳೆಯಿಂದ ಮನೆ, ತೋಟ, ಗುಡ್ಡ ಕುಸಿತ ಉಂಟಾಗಿರುವ ಸ್ಥಳಗಳು ಸೇರಿದಂತೆ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪರಿಶೀಲನೆ ನಡೆಸಿದರು. ಚಿಕ್ಕಮಗಳೂರು ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದು, ಕಾಫಿ ತೋಟ, ಸೇತುವೆ ನಾಶ, ಮನೆ ಕುಸಿದ ಸ್ಥಳಗಳ ಪರಿಶೀಲನೆ ನಡೆಸಿದರು.

ಅಲ್ಲಂಪುರ, ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ದತ್ತಪೀಠ ರಸ್ತೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಿದ್ದು, ಗ್ರಾಮಸ್ಥರ ಜೊತೆ ಸಚಿವರು ಹಾನಿ ಬಗ್ಗೆ ಚರ್ಚೆ ನಡೆಸಿದರು. ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತ ಹಾಗೂ ಅವಘಡಗಳ ಮಾಹಿತಿ ಕಲೆ ಹಾಕಿದರು. ಜನರು ತಮ್ಮ ಸಂಕಷ್ಟವನ್ನು ಸಚಿವರ ಬಳಿ ತೋಡಿಕೊಂಡಿದ್ದು, ಕಷ್ಟದಲ್ಲಿದ್ದ ಜನರಿಗೆ ಸಾಂತ್ವನ ಹೇಳಿದರು. ಈ ವೇಳೆ ಕಾಂಗ್ರೆಸ್ ಶಾಸಕರು, ಮುಖಂಡರು ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಜೊತೆಗಿದ್ದರು.

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ ವೇಳೆಗೆ ಸರ್ಕಾರ ಬಿದ್ದು ಹೋಗುತ್ತೆ ಎನ್ನುವ ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, "ಬಿಜೆಪಿ-ಜೆಡಿಎಸ್ ಏನಾದ್ರೂ ಮಾಡಿ‌ ಸರ್ಕಾರ ಉರುಳಿಸಬೇಕು ಅಂತಿದ್ದಾರೆ. ಜನರಿಂದ ಆಯ್ಕೆಯಾಗಿರೋ ಕರ್ನಾಟಕದ ಸರ್ಕಾರವನ್ನು ಉರುಳಿಸಬೇಕು ಎನ್ನುವುದು ಅವರ ಪ್ರಯತ್ನ. ಕೇಂದ್ರ ಬಿಜೆಪಿ ಸರ್ಕಾರದಲ್ಲಿ ಕುಮಾರಸ್ವಾಮಿ ಮಂತ್ರಿಯಾಗಿದ್ದಾರೆ. ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ಸ್ವಾಮಿ? ಕಾಂಗ್ರೆಸ್ ಸರ್ಕಾರವನ್ನು ಬೀಳಿಸಬೇಕೆಂಬುದು ಒಂದೇನಾ ನಿಮ್ಮ ಕೊಡುಗೆ? ಸರ್ಕಾರವನ್ನು ಬೀಳಿಸುವುದಕ್ಕೆ, ಎತ್ತುವುದಕ್ಕೆ ವೋಟ್ ಹಾಕಿರುವ ಜನರಿದ್ದಾರೆ. ನೀವೆಲ್ಲಾ ಸೇರಿ ಸೆಂಟ್ರಲ್​ನಲ್ಲಿ ಸರ್ಕಾರ ರಚನೆ ಮಾಡಿದ್ದೀರಲ್ಲಾ? ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು" ಎಂದು ಪ್ರಶ್ನಿಸಿದರು.

"ಆಪರೇಷನ್ ಮಾಡಿ ಕರ್ನಾಟಕದಲ್ಲಿ ಸರ್ಕಾರ ಬೀಳಿಸಿದರೆ, ಕರ್ನಾಟಕಕ್ಕೆ ಅದೇ ಕೊಡುಗೆನಾ? ಮೇಕೆದಾಟು ಯೋಜನೆಗೆ ಕೇಂದ್ರದಿಂದ ಒಂದು ಪರ್ಮಿಷನ್ ಕೊಡಿಸಿ, ಆಗ ನಾನು ಕಾಂಗ್ರೆಸ್ಸಿಗನಾಗಿ ಕೈಮುಗಿದು ನಿಮಗೆ ಧನ್ಯವಾದ ತಿಳಿಸುತ್ತೇನೆ. ಭದ್ರಾ ಮೇಲ್ದಂಡೆ, ಕಳಸ ಬಂಡೂರಿ ಯೋಜನೆಯನ್ನು ಕೇಂದ್ರ ಸರ್ಕಾರ ಕೆಳಗೆ ಹಾಕಿಕೊಂಡು ಕೂತಿದೆ. ಇದನ್ನು ಮಾಡಿದರೆ ನೀವು ಕೇಂದ್ರದಲ್ಲಿ ಮಂತ್ರಿಯಾಗಿದ್ದಕ್ಕೆ ಸಾರ್ಥಕವಾಗುತ್ತದೆ. ಆ ಕಡೆ ಪ್ರಲ್ಹಾದ್ ಜೋಶಿ, ಈ ಕಡೆ ಕುಮಾರಸ್ವಾಮಿ ಇಬ್ಬರದ್ದು ಕಾಂಗ್ರೆಸ್ ಸರ್ಕಾರ ಬೀಳಿಸುವ ಸ್ಕೆಚ್" ಎಂದರು.

"ಸರ್ಕಾರ ಬೀಳಿಸಿದರೆ ಕರ್ನಾಟಕಕ್ಕೆ ಏನು ಸಿಕ್ತು? ನೀವು ಇವತ್ತು ಮಂತ್ರಿಯಾಗಿರೋದು, ಸರ್ಕಾರ ರಚನೆಯಾಗಿರೋದು ಬರೀ ದ್ವೇಷ ಸಾಧನೆ ಮಾಡೋದಕ್ಕಾ? ಸರ್ಕಾರ ಬೀಳಿಸ್ತೀವಿ, ಅನ್ನೋದು ಯಾವ ಪುರುಷಾರ್ಥ? ಅದಕ್ಕಾಗಿ ಜನ ನಿಮ್ಮನ್ನು ದೆಹಲಿಗೆ ಕಳಿಸಿರೋದಾ ಅಂತ ಯೋಚನೆ ಮಾಡಿ. ಕೇಂದ್ರ ಬಿಜೆಪಿಯಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಮುಚ್ಚಿ ಹಾಕುವುದಕ್ಕೆ ಇವೆಲ್ಲ ಗಿಮಿಕ್ ಮಾಡ್ತಿದ್ದಾರೆ" ಎಂದು ಹೇಳಿಕೆ ನೀಡಿದರು.

ಇದನ್ನೂ ಓದಿ: ಮಳೆಹಾನಿ: ಚಿಕ್ಕಮಗಳೂರು ಜಿಲ್ಲೆಗೆ ವಿಶೇಷ ಪ್ಯಾಕೇಜ್‌ಗಾಗಿ ಸಿಎಂಗೆ ಸಚಿವ ಕೆ.ಜೆ. ಜಾರ್ಜ್ ಮನವಿ - Chikkamagaluru Rain Damage

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಕೃಷ್ಣ ಬೈರೇಗೌಡ ಭೇಟಿ (ETV Bharat)

ಚಿಕ್ಕಮಗಳೂರು: ನಿರಂತರ ಮಳೆಯಿಂದ ಮನೆ, ತೋಟ, ಗುಡ್ಡ ಕುಸಿತ ಉಂಟಾಗಿರುವ ಸ್ಥಳಗಳು ಸೇರಿದಂತೆ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪರಿಶೀಲನೆ ನಡೆಸಿದರು. ಚಿಕ್ಕಮಗಳೂರು ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದು, ಕಾಫಿ ತೋಟ, ಸೇತುವೆ ನಾಶ, ಮನೆ ಕುಸಿದ ಸ್ಥಳಗಳ ಪರಿಶೀಲನೆ ನಡೆಸಿದರು.

ಅಲ್ಲಂಪುರ, ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ದತ್ತಪೀಠ ರಸ್ತೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಿದ್ದು, ಗ್ರಾಮಸ್ಥರ ಜೊತೆ ಸಚಿವರು ಹಾನಿ ಬಗ್ಗೆ ಚರ್ಚೆ ನಡೆಸಿದರು. ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತ ಹಾಗೂ ಅವಘಡಗಳ ಮಾಹಿತಿ ಕಲೆ ಹಾಕಿದರು. ಜನರು ತಮ್ಮ ಸಂಕಷ್ಟವನ್ನು ಸಚಿವರ ಬಳಿ ತೋಡಿಕೊಂಡಿದ್ದು, ಕಷ್ಟದಲ್ಲಿದ್ದ ಜನರಿಗೆ ಸಾಂತ್ವನ ಹೇಳಿದರು. ಈ ವೇಳೆ ಕಾಂಗ್ರೆಸ್ ಶಾಸಕರು, ಮುಖಂಡರು ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಜೊತೆಗಿದ್ದರು.

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ ವೇಳೆಗೆ ಸರ್ಕಾರ ಬಿದ್ದು ಹೋಗುತ್ತೆ ಎನ್ನುವ ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, "ಬಿಜೆಪಿ-ಜೆಡಿಎಸ್ ಏನಾದ್ರೂ ಮಾಡಿ‌ ಸರ್ಕಾರ ಉರುಳಿಸಬೇಕು ಅಂತಿದ್ದಾರೆ. ಜನರಿಂದ ಆಯ್ಕೆಯಾಗಿರೋ ಕರ್ನಾಟಕದ ಸರ್ಕಾರವನ್ನು ಉರುಳಿಸಬೇಕು ಎನ್ನುವುದು ಅವರ ಪ್ರಯತ್ನ. ಕೇಂದ್ರ ಬಿಜೆಪಿ ಸರ್ಕಾರದಲ್ಲಿ ಕುಮಾರಸ್ವಾಮಿ ಮಂತ್ರಿಯಾಗಿದ್ದಾರೆ. ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ಸ್ವಾಮಿ? ಕಾಂಗ್ರೆಸ್ ಸರ್ಕಾರವನ್ನು ಬೀಳಿಸಬೇಕೆಂಬುದು ಒಂದೇನಾ ನಿಮ್ಮ ಕೊಡುಗೆ? ಸರ್ಕಾರವನ್ನು ಬೀಳಿಸುವುದಕ್ಕೆ, ಎತ್ತುವುದಕ್ಕೆ ವೋಟ್ ಹಾಕಿರುವ ಜನರಿದ್ದಾರೆ. ನೀವೆಲ್ಲಾ ಸೇರಿ ಸೆಂಟ್ರಲ್​ನಲ್ಲಿ ಸರ್ಕಾರ ರಚನೆ ಮಾಡಿದ್ದೀರಲ್ಲಾ? ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು" ಎಂದು ಪ್ರಶ್ನಿಸಿದರು.

"ಆಪರೇಷನ್ ಮಾಡಿ ಕರ್ನಾಟಕದಲ್ಲಿ ಸರ್ಕಾರ ಬೀಳಿಸಿದರೆ, ಕರ್ನಾಟಕಕ್ಕೆ ಅದೇ ಕೊಡುಗೆನಾ? ಮೇಕೆದಾಟು ಯೋಜನೆಗೆ ಕೇಂದ್ರದಿಂದ ಒಂದು ಪರ್ಮಿಷನ್ ಕೊಡಿಸಿ, ಆಗ ನಾನು ಕಾಂಗ್ರೆಸ್ಸಿಗನಾಗಿ ಕೈಮುಗಿದು ನಿಮಗೆ ಧನ್ಯವಾದ ತಿಳಿಸುತ್ತೇನೆ. ಭದ್ರಾ ಮೇಲ್ದಂಡೆ, ಕಳಸ ಬಂಡೂರಿ ಯೋಜನೆಯನ್ನು ಕೇಂದ್ರ ಸರ್ಕಾರ ಕೆಳಗೆ ಹಾಕಿಕೊಂಡು ಕೂತಿದೆ. ಇದನ್ನು ಮಾಡಿದರೆ ನೀವು ಕೇಂದ್ರದಲ್ಲಿ ಮಂತ್ರಿಯಾಗಿದ್ದಕ್ಕೆ ಸಾರ್ಥಕವಾಗುತ್ತದೆ. ಆ ಕಡೆ ಪ್ರಲ್ಹಾದ್ ಜೋಶಿ, ಈ ಕಡೆ ಕುಮಾರಸ್ವಾಮಿ ಇಬ್ಬರದ್ದು ಕಾಂಗ್ರೆಸ್ ಸರ್ಕಾರ ಬೀಳಿಸುವ ಸ್ಕೆಚ್" ಎಂದರು.

"ಸರ್ಕಾರ ಬೀಳಿಸಿದರೆ ಕರ್ನಾಟಕಕ್ಕೆ ಏನು ಸಿಕ್ತು? ನೀವು ಇವತ್ತು ಮಂತ್ರಿಯಾಗಿರೋದು, ಸರ್ಕಾರ ರಚನೆಯಾಗಿರೋದು ಬರೀ ದ್ವೇಷ ಸಾಧನೆ ಮಾಡೋದಕ್ಕಾ? ಸರ್ಕಾರ ಬೀಳಿಸ್ತೀವಿ, ಅನ್ನೋದು ಯಾವ ಪುರುಷಾರ್ಥ? ಅದಕ್ಕಾಗಿ ಜನ ನಿಮ್ಮನ್ನು ದೆಹಲಿಗೆ ಕಳಿಸಿರೋದಾ ಅಂತ ಯೋಚನೆ ಮಾಡಿ. ಕೇಂದ್ರ ಬಿಜೆಪಿಯಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಮುಚ್ಚಿ ಹಾಕುವುದಕ್ಕೆ ಇವೆಲ್ಲ ಗಿಮಿಕ್ ಮಾಡ್ತಿದ್ದಾರೆ" ಎಂದು ಹೇಳಿಕೆ ನೀಡಿದರು.

ಇದನ್ನೂ ಓದಿ: ಮಳೆಹಾನಿ: ಚಿಕ್ಕಮಗಳೂರು ಜಿಲ್ಲೆಗೆ ವಿಶೇಷ ಪ್ಯಾಕೇಜ್‌ಗಾಗಿ ಸಿಎಂಗೆ ಸಚಿವ ಕೆ.ಜೆ. ಜಾರ್ಜ್ ಮನವಿ - Chikkamagaluru Rain Damage

ETV Bharat Logo

Copyright © 2024 Ushodaya Enterprises Pvt. Ltd., All Rights Reserved.