ETV Bharat / state

ಉಳ್ಳಾಲ ಮನೆ ಕುಸಿದ ಸ್ಥಳಕ್ಕೆ ಸಚಿವ ಕೃಷ್ಣ ಬೈರೇಗೌಡ ಭೇಟಿ: ಅಪಾಯಕಾರಿ ಪಾಯಿಂಟ್​ ಸರ್ವೆಗೆ ಸೂಚನೆ - Ullal house collapsed

author img

By ETV Bharat Karnataka Team

Published : Jun 27, 2024, 9:35 AM IST

ಉಳ್ಳಾಲದ ಮದನಿ ನಗರದಲ್ಲಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ ಘಟನಾ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭೇಟಿ ನೀಡಿ ಪರಿಹಾರದ ಭರವಸೆ ಜತೆಗೆ ಹಲವು ಸೂಚನೆಗಳನ್ನು ನೀಡಿದ್ದಾರೆ.

ಉಳ್ಳಾಲ ಮನೆ ಕುಸಿದ ಸ್ಥಳಕ್ಕೆ ಸಚಿವ ಕೃಷ್ಣ ಬೈರೇಗೌಡ ಭೇಟಿ
ಉಳ್ಳಾಲ ಮನೆ ಕುಸಿದ ಸ್ಥಳಕ್ಕೆ ಸಚಿವ ಕೃಷ್ಣ ಬೈರೇಗೌಡ ಭೇಟಿ (ETV Bharat)

ಉಳ್ಳಾಲ ಮನೆ ಕುಸಿದ ಸ್ಥಳಕ್ಕೆ ಸಚಿವ ಕೃಷ್ಣ ಬೈರೇಗೌಡ ಭೇಟಿ (ETV Bharat)

ಮಂಗಳೂರು: "ಕರಾವಳಿ ಭಾಗಗಳಲ್ಲಿ ಬೆಟ್ಟ ಕಡಿದು ಮನೆಗಳನ್ನು ನಿರ್ಮಿಸಿರುವುದರಿಂದ ಭೂಕುಸಿತಗಳು ತೀವ್ರತರದಲ್ಲಿ ನಡೆಯುತ್ತಲೇ ಬಂದಿದೆ. ಗ್ರಾ.ಪಂ ಅಧಿಕಾರಿಗಳ ಮೂಲಕ ಅಪಾಯಕಾರಿ ಪಾಯಿಂಟ್​ಗಳನ್ನು ಸರ್ವೆ ನಡೆಸಲು ಸೂಚಿಸಲಾಗಿದೆ" ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಉಳ್ಳಾಲದಲ್ಲಿ ಕಂಪೌಂಡ್ ಉರುಳಿ ಬಿದ್ದು, ಮನೆ ಕುಸಿದು ನಾಲ್ವರು ಸಾವನ್ನಪ್ಪಿದ ಘಟನಾ ಸ್ಥಳಕ್ಕೆ ಪೂರ್ವನಿಯೋಜಿತ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಬೆಂಗಳೂರಿನಿಂದ ಬುಧವಾರ ಸಂಜೆ ಆಗಮಿಸಿ ಪರಿಶೀಲಿಸಿದರು. ಈ ವೇಳೆ, ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತೀವ್ರತರದಲ್ಲಿ ಅಪಾಯ ಇರುವ ಸ್ಥಳಗಳಲ್ಲಿ ತುರ್ತು ಪರಿಹಾರ ಕ್ರಮಕ್ಕೆ ಆದೇಶಿಸಲಾಗಿದೆ. ಜಿಲ್ಲಾಧಿಕಾರಿ ಹಾಗೂ ಕಂದಾಯ ಅಧಿಕಾರಿಗಳೊಂದಿಗೆ ನಡೆಸುವ ಸಭೆಯಲ್ಲಿ ಈ ಕುರಿತು ಆದೇಶಿಸುವುದಾಗಿ ಮಾಹಿತಿ ನೀಡಿದರು.

"ಕರಾವಳಿ ಭಾಗಗಳಲ್ಲಿ ಬೆಟ್ಟ ಕಡಿದು ಮನೆಗಳನ್ನು ನಿರ್ಮಿಸಿರುವುದರಿಂದ ಭೂಕುಸಿತಗಳು ತೀವ್ರತರದಲ್ಲಿ ನಡೆಯುತ್ತಲೇ ಬಂದಿದೆ. ಜನ ಅನಿವಾರ್ಯವಾಗಿ ಕಟ್ಟುತ್ತಾರೆ. ಆದರೆ ಕಟ್ಟುವಾಗ ಅಡಿಪಾಯವನ್ನು ಗಟ್ಟಿಯಾಗಿಸಿ, ನೆರೆಮನೆಯ ಕಂಪೌಂಡ್ ವಾಲ್​ಗಳು 20 ಫೀಟ್ ಎತ್ತರವಿದ್ದರೂ ಸುರಕ್ಷತಾ ಕ್ರಮವಹಿಸದೆ ಕಟ್ಟುತ್ತಿದ್ದಾರೆ. ಎಲ್ಲ ಕಡೆಗಳಲ್ಲಿ ಇಂತಹ ವ್ಯವಸ್ಥೆ ಇದ್ದರೂ 1000 ಮನೆಗಳಲ್ಲಿ 999 ಮನೆಗಳು ಏನೂ ಆಗುವುದಿಲ್ಲ. ಒಂದು ಮನೆಯಲ್ಲಿ ಇಂತಹ ಅನಾಹುತ ಸಂಭವಿಸಿದಾಗ ಎಲ್ಲರೂ ಎಚ್ಚೆತ್ತುಕೊಳ್ಳುವ ವ್ಯವಸ್ಥೆಗಳಾಗುತ್ತಿದೆ. ಈ ನಿಟ್ಟಿನಲ್ಲಿ ಸುರಕ್ಷಾ ಕ್ರಮಗಳನ್ನು ಅನುಸರಿಸಿ ಮನೆ ನಿರ್ಮಿಸಿದಲ್ಲಿ ಎಲ್ಲರೂ ಸುರಕ್ಷಿತ. ಮದನಿನಗರ ದುರಂತ ಕುರಿತು ಅಪಾರ ನೋವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣ ಸ್ಥಳಕ್ಕೆ ತೆರಳಲು ಆದೇಶಿಸಿದ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದೇನೆ. ಸ್ಥಳದಲ್ಲಿರುವ ಅಪಾಯಕಾರಿ ಪ್ರದೇಶಕ್ಕೆ ತಕ್ಷಣ ಪರಿಹಾರ ಕ್ರಮಕ್ಕೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಅವರಲ್ಲಿ ತಿಳಿಸಲಾಗಿದೆ ಎಂದರು.

ಮೃತರ ಕುಟುಂಬಕ್ಕೆ ಪರಿಹಾರ ಕ್ರಮದ ಕುರಿತು ಜಿಲ್ಲಾಡಳಿತದೊಂದಿಗೆ ಸ್ಪಂದಿಸಲಿದ್ದೇನೆ. ಕೇಂದ್ರದ ಜಿಯೊಗ್ರಾಫಿಕಲ್​ ಸರ್ವೇ ಆಫ್ ಇಂಡಿಯಾ ಸಹಕಾರದಿಂದ ಭೂಕುಸಿತ ಆಗುವ ಪಾಯಿಂಟ್​ಗಳನ್ನು ಸರ್ವೆ ನಡೆಸಿ ಗುರುತಿಸಲಾಗುವುದು. ಅಲ್ಲಿ ತೀವ್ರ ಸ್ವರೂಪದಲ್ಲಿ ಇರುವ ಪಾಯಿಂಟ್​ಗಳಿಗೆ ತೊಂದರೆಗಳಾಗದಂತೆ ಕ್ರಮಕೈಗೊಳ್ಳುತ್ತೇವೆ ಎಂದು ಕೃಷ್ಣ ಬೈರೇಗೌಡರು ತಿಳಿಸಿದರು.

ತಡೆಗೋಡೆ ಕಟ್ಟಲು ಹೋದರೆ ಮಲೆನಾಡು ಭಾಗದಲ್ಲಿ ಇಡೀ ಗೋಡೆಗಳನ್ನೇ ಕಟ್ಟುತ್ತಾ ಹೋಗಬೇಕಿದೆ. ಸದ್ಯ ರಸ್ತೆ ಬದಿಯ ಕುಸಿತಗಳನ್ನು ಗುರುತಿಸಿ 70 ಕೋಟಿ ರೂಗಳ ಅನುದಾನ ಬಿಡುಗಡೆಗೊಳಿಸಲು ಇಲಾಖೆಯಿಂದ ಯೋಜನೆ ರೂಪಿಸಲಾಗಿದೆ. ಕಡಲ್ಕೊರೆತಕ್ಕೆ ಕಟ್ಟುವ ಗೋಡೆಗಳೇ ಕೊರೆತಕ್ಕೊಳಗಾಗುತ್ತಿವೆ. ಜಾಸ್ತಿ ಕಡಲ್ಕೊರೆತ ಬಾಧಿತ ಪ್ರದೇಶಕ್ಕೆ ಪರಿಹಾರ ಕ್ರಮಕೈಗೊಳ್ಳಲು ಸ್ಫೀಕರ್ ಅವರು ರೂ. 80 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಭರವಸೆ ನೀಡಿದರು.

ಈ ಸಂದರ್ಭ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರೂ ಜತೆಗಿದ್ದು ಘಟನೆ ಕುರಿತು ವಿವರ ನೀಡಿದರು. ಸರಕಾರದ ಪ್ರಧಾನ ಕಾರ್ಯದರ್ಶಿ ರಶ್ಮೀ ಮಹೇಶ್, ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಉಳ್ಳಾಲದಲ್ಲಿ ಮನೆ ಕುಸಿದು ನಾಲ್ವರ ದುರ್ಮರಣ: ಸ್ಥಳಕ್ಕೆ ಜಿಲ್ಲಾಧಿಕಾರಿ, ಸ್ಪೀಕರ್​ ಯು.ಟಿ ಖಾದರ್‌ ಭೇಟಿ - DC AND SPEAKER UT KHADER VISIT SPOT

ಉಳ್ಳಾಲ ಮನೆ ಕುಸಿದ ಸ್ಥಳಕ್ಕೆ ಸಚಿವ ಕೃಷ್ಣ ಬೈರೇಗೌಡ ಭೇಟಿ (ETV Bharat)

ಮಂಗಳೂರು: "ಕರಾವಳಿ ಭಾಗಗಳಲ್ಲಿ ಬೆಟ್ಟ ಕಡಿದು ಮನೆಗಳನ್ನು ನಿರ್ಮಿಸಿರುವುದರಿಂದ ಭೂಕುಸಿತಗಳು ತೀವ್ರತರದಲ್ಲಿ ನಡೆಯುತ್ತಲೇ ಬಂದಿದೆ. ಗ್ರಾ.ಪಂ ಅಧಿಕಾರಿಗಳ ಮೂಲಕ ಅಪಾಯಕಾರಿ ಪಾಯಿಂಟ್​ಗಳನ್ನು ಸರ್ವೆ ನಡೆಸಲು ಸೂಚಿಸಲಾಗಿದೆ" ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಉಳ್ಳಾಲದಲ್ಲಿ ಕಂಪೌಂಡ್ ಉರುಳಿ ಬಿದ್ದು, ಮನೆ ಕುಸಿದು ನಾಲ್ವರು ಸಾವನ್ನಪ್ಪಿದ ಘಟನಾ ಸ್ಥಳಕ್ಕೆ ಪೂರ್ವನಿಯೋಜಿತ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಬೆಂಗಳೂರಿನಿಂದ ಬುಧವಾರ ಸಂಜೆ ಆಗಮಿಸಿ ಪರಿಶೀಲಿಸಿದರು. ಈ ವೇಳೆ, ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತೀವ್ರತರದಲ್ಲಿ ಅಪಾಯ ಇರುವ ಸ್ಥಳಗಳಲ್ಲಿ ತುರ್ತು ಪರಿಹಾರ ಕ್ರಮಕ್ಕೆ ಆದೇಶಿಸಲಾಗಿದೆ. ಜಿಲ್ಲಾಧಿಕಾರಿ ಹಾಗೂ ಕಂದಾಯ ಅಧಿಕಾರಿಗಳೊಂದಿಗೆ ನಡೆಸುವ ಸಭೆಯಲ್ಲಿ ಈ ಕುರಿತು ಆದೇಶಿಸುವುದಾಗಿ ಮಾಹಿತಿ ನೀಡಿದರು.

"ಕರಾವಳಿ ಭಾಗಗಳಲ್ಲಿ ಬೆಟ್ಟ ಕಡಿದು ಮನೆಗಳನ್ನು ನಿರ್ಮಿಸಿರುವುದರಿಂದ ಭೂಕುಸಿತಗಳು ತೀವ್ರತರದಲ್ಲಿ ನಡೆಯುತ್ತಲೇ ಬಂದಿದೆ. ಜನ ಅನಿವಾರ್ಯವಾಗಿ ಕಟ್ಟುತ್ತಾರೆ. ಆದರೆ ಕಟ್ಟುವಾಗ ಅಡಿಪಾಯವನ್ನು ಗಟ್ಟಿಯಾಗಿಸಿ, ನೆರೆಮನೆಯ ಕಂಪೌಂಡ್ ವಾಲ್​ಗಳು 20 ಫೀಟ್ ಎತ್ತರವಿದ್ದರೂ ಸುರಕ್ಷತಾ ಕ್ರಮವಹಿಸದೆ ಕಟ್ಟುತ್ತಿದ್ದಾರೆ. ಎಲ್ಲ ಕಡೆಗಳಲ್ಲಿ ಇಂತಹ ವ್ಯವಸ್ಥೆ ಇದ್ದರೂ 1000 ಮನೆಗಳಲ್ಲಿ 999 ಮನೆಗಳು ಏನೂ ಆಗುವುದಿಲ್ಲ. ಒಂದು ಮನೆಯಲ್ಲಿ ಇಂತಹ ಅನಾಹುತ ಸಂಭವಿಸಿದಾಗ ಎಲ್ಲರೂ ಎಚ್ಚೆತ್ತುಕೊಳ್ಳುವ ವ್ಯವಸ್ಥೆಗಳಾಗುತ್ತಿದೆ. ಈ ನಿಟ್ಟಿನಲ್ಲಿ ಸುರಕ್ಷಾ ಕ್ರಮಗಳನ್ನು ಅನುಸರಿಸಿ ಮನೆ ನಿರ್ಮಿಸಿದಲ್ಲಿ ಎಲ್ಲರೂ ಸುರಕ್ಷಿತ. ಮದನಿನಗರ ದುರಂತ ಕುರಿತು ಅಪಾರ ನೋವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣ ಸ್ಥಳಕ್ಕೆ ತೆರಳಲು ಆದೇಶಿಸಿದ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದೇನೆ. ಸ್ಥಳದಲ್ಲಿರುವ ಅಪಾಯಕಾರಿ ಪ್ರದೇಶಕ್ಕೆ ತಕ್ಷಣ ಪರಿಹಾರ ಕ್ರಮಕ್ಕೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಅವರಲ್ಲಿ ತಿಳಿಸಲಾಗಿದೆ ಎಂದರು.

ಮೃತರ ಕುಟುಂಬಕ್ಕೆ ಪರಿಹಾರ ಕ್ರಮದ ಕುರಿತು ಜಿಲ್ಲಾಡಳಿತದೊಂದಿಗೆ ಸ್ಪಂದಿಸಲಿದ್ದೇನೆ. ಕೇಂದ್ರದ ಜಿಯೊಗ್ರಾಫಿಕಲ್​ ಸರ್ವೇ ಆಫ್ ಇಂಡಿಯಾ ಸಹಕಾರದಿಂದ ಭೂಕುಸಿತ ಆಗುವ ಪಾಯಿಂಟ್​ಗಳನ್ನು ಸರ್ವೆ ನಡೆಸಿ ಗುರುತಿಸಲಾಗುವುದು. ಅಲ್ಲಿ ತೀವ್ರ ಸ್ವರೂಪದಲ್ಲಿ ಇರುವ ಪಾಯಿಂಟ್​ಗಳಿಗೆ ತೊಂದರೆಗಳಾಗದಂತೆ ಕ್ರಮಕೈಗೊಳ್ಳುತ್ತೇವೆ ಎಂದು ಕೃಷ್ಣ ಬೈರೇಗೌಡರು ತಿಳಿಸಿದರು.

ತಡೆಗೋಡೆ ಕಟ್ಟಲು ಹೋದರೆ ಮಲೆನಾಡು ಭಾಗದಲ್ಲಿ ಇಡೀ ಗೋಡೆಗಳನ್ನೇ ಕಟ್ಟುತ್ತಾ ಹೋಗಬೇಕಿದೆ. ಸದ್ಯ ರಸ್ತೆ ಬದಿಯ ಕುಸಿತಗಳನ್ನು ಗುರುತಿಸಿ 70 ಕೋಟಿ ರೂಗಳ ಅನುದಾನ ಬಿಡುಗಡೆಗೊಳಿಸಲು ಇಲಾಖೆಯಿಂದ ಯೋಜನೆ ರೂಪಿಸಲಾಗಿದೆ. ಕಡಲ್ಕೊರೆತಕ್ಕೆ ಕಟ್ಟುವ ಗೋಡೆಗಳೇ ಕೊರೆತಕ್ಕೊಳಗಾಗುತ್ತಿವೆ. ಜಾಸ್ತಿ ಕಡಲ್ಕೊರೆತ ಬಾಧಿತ ಪ್ರದೇಶಕ್ಕೆ ಪರಿಹಾರ ಕ್ರಮಕೈಗೊಳ್ಳಲು ಸ್ಫೀಕರ್ ಅವರು ರೂ. 80 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಭರವಸೆ ನೀಡಿದರು.

ಈ ಸಂದರ್ಭ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರೂ ಜತೆಗಿದ್ದು ಘಟನೆ ಕುರಿತು ವಿವರ ನೀಡಿದರು. ಸರಕಾರದ ಪ್ರಧಾನ ಕಾರ್ಯದರ್ಶಿ ರಶ್ಮೀ ಮಹೇಶ್, ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಉಳ್ಳಾಲದಲ್ಲಿ ಮನೆ ಕುಸಿದು ನಾಲ್ವರ ದುರ್ಮರಣ: ಸ್ಥಳಕ್ಕೆ ಜಿಲ್ಲಾಧಿಕಾರಿ, ಸ್ಪೀಕರ್​ ಯು.ಟಿ ಖಾದರ್‌ ಭೇಟಿ - DC AND SPEAKER UT KHADER VISIT SPOT

ETV Bharat Logo

Copyright © 2024 Ushodaya Enterprises Pvt. Ltd., All Rights Reserved.