ETV Bharat / state

ಯುವನಿಧಿ: ಪ್ರಸಕ್ತ ಸಾಲಿನಲ್ಲಿ ಇದುವರೆಗೆ 1.45 ಲಕ್ಷ ಅಭ್ಯರ್ಥಿಗಳಿಗೆ ಹಣ ವರ್ಗಾವಣೆ- ಸಚಿವ ಶರಣ್ ಪ್ರಕಾಶ್ ಪಾಟೀಲ್ - SHARAN PRAKASH PATIL

ಯುವನಿಧಿ ಯೋಜನೆಯಡಿಯಲ್ಲಿ ಇದುವರೆಗೆ 1.45 ಲಕ್ಷ ಅಭ್ಯರ್ಥಿಗಳಿಗೆ ಹಣ ವರ್ಗಾಯಿಸಲಾಗಿದೆ ಎಂದು ಸಚಿವ ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

minister-sharan-prakash-patil
ಸದನದಲ್ಲಿ ಮಾತನಾಡಿದ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ (ETV Bharat)
author img

By ETV Bharat Karnataka Team

Published : Dec 9, 2024, 5:50 PM IST

ಬೆಳಗಾವಿ: ಯುವನಿಧಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 1.45 ಲಕ್ಷ ಮಂದಿಗೆ ಹಣ ವರ್ಗಾಯಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಮಾಹಿತಿ ನೀಡಿದರು.

ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ 2023-24ನೇ ಸಾಲಿನಲ್ಲಿ 1,81,690 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದುವರೆಗೆ ಕೇವಲ 1.45 ಲಕ್ಷ ಅರ್ಹ ಅಭ್ಯರ್ಥಿಗಳಿಗೆ ಮಾತ್ರ ಹಣ ವರ್ಗಾಯಿಸಲಾಗಿದೆ ಎಂಬ ಬಿಜೆಪಿ ಸದಸ್ಯ ಕೆ.ಎಸ್.ನವೀನ್ ಮಾತಿಗೆ ಸಚಿವರು ಪ್ರತಿಕ್ರಿಯಿಸಿದರು.

ಸಚಿವರ ಸ್ಪಷ್ಟನೆ: ಯುವನಿಧಿ ಯೋಜನೆಯಡಿ ಪ್ರಸ್ತಕ ಸಾಲಿನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ ಆರು ತಿಂಗಳೊಳಗೆ ಉನ್ನತ ಶಿಕ್ಷಣ ಸೇರದಿದ್ದರೆ ಹಾಗೂ ನೌಕರಿ ಸಿಗದಿದ್ದರೆ ಅಂತಹ ಅಭ್ಯರ್ಥಿಗಳಿಗೆ 3 ಸಾವಿರ ರೂ ನೀಡಲಾಗುತ್ತಿದೆ‌. 2023-24ನೇ ಶೈಕ್ಷಣಿಕ ಸಾಲಿನಲ್ಲಿ 5.26 ಲಕ್ಷ ಅಭ್ಯರ್ಥಿಗಳು ಯೋಜನೆಗೆ ಅರ್ಹರಾಗಿದ್ದರೂ ಅರ್ಜಿ ಸಲ್ಲಿಸಿರುವವರು ಮಾತ್ರ 1.81 ಲಕ್ಷ ಮಂದಿ. ಈ ಪೈಕಿ 1.45 ಲಕ್ಷ ಅಭ್ಯರ್ಥಿಗಳ ಅರ್ಜಿ ಪರಿಶೀಲಿಸಿ ಹಣ ಮಂಜೂರು ಮಾಡಲಾಗಿದೆ. ಉನ್ನತ ಶಿಕ್ಷಣ ಸೇರಿರುವುದು, ಆದಾಯ ತೆರಿಗೆ ಹಾಗೂ ಜಿಎಸ್​ಟಿ ವ್ಯಾಪ್ತಿಯಲ್ಲಿ ಬಂದಿರುವುದೂ ಸೇರಿದಂತೆ ವಿವಿಧ ಕಾರಣಗಳಿಗಾಗಿ ಯೋಜನೆಗೆ ಅನರ್ಹರಾಗಿದ್ದಾರೆ. ಇದು ನಿರಂತರ ಪ್ರಕ್ರಿಯೆ. ಅರ್ಹ ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಿದರೆ ಸಮಗ್ರವಾಗಿ ಪರಿಶೀಲಿಸಿ ಯೋಜನೆಯ ಫಲಾನುಭವಿಗಳಾಗಬಹುದು ಎಂದು ಸಚಿವ ಪಾಟೀಲ್ ತಿಳಿಸಿದರು.

ಇದನ್ನೂ ಓದಿ: ಅಧಿವೇಶನದ ಮೊದಲ ದಿನವೇ ವಕ್ಫ್, ಪಂಚಮಸಾಲಿ ಮೀಸಲಾತಿ ಸದ್ದು; ಸದನದಲ್ಲಿ ಮಾತಿನ ಚಕಮಕಿ, ಗದ್ದಲ

ಬೆಳಗಾವಿ: ಯುವನಿಧಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 1.45 ಲಕ್ಷ ಮಂದಿಗೆ ಹಣ ವರ್ಗಾಯಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಮಾಹಿತಿ ನೀಡಿದರು.

ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ 2023-24ನೇ ಸಾಲಿನಲ್ಲಿ 1,81,690 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದುವರೆಗೆ ಕೇವಲ 1.45 ಲಕ್ಷ ಅರ್ಹ ಅಭ್ಯರ್ಥಿಗಳಿಗೆ ಮಾತ್ರ ಹಣ ವರ್ಗಾಯಿಸಲಾಗಿದೆ ಎಂಬ ಬಿಜೆಪಿ ಸದಸ್ಯ ಕೆ.ಎಸ್.ನವೀನ್ ಮಾತಿಗೆ ಸಚಿವರು ಪ್ರತಿಕ್ರಿಯಿಸಿದರು.

ಸಚಿವರ ಸ್ಪಷ್ಟನೆ: ಯುವನಿಧಿ ಯೋಜನೆಯಡಿ ಪ್ರಸ್ತಕ ಸಾಲಿನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ ಆರು ತಿಂಗಳೊಳಗೆ ಉನ್ನತ ಶಿಕ್ಷಣ ಸೇರದಿದ್ದರೆ ಹಾಗೂ ನೌಕರಿ ಸಿಗದಿದ್ದರೆ ಅಂತಹ ಅಭ್ಯರ್ಥಿಗಳಿಗೆ 3 ಸಾವಿರ ರೂ ನೀಡಲಾಗುತ್ತಿದೆ‌. 2023-24ನೇ ಶೈಕ್ಷಣಿಕ ಸಾಲಿನಲ್ಲಿ 5.26 ಲಕ್ಷ ಅಭ್ಯರ್ಥಿಗಳು ಯೋಜನೆಗೆ ಅರ್ಹರಾಗಿದ್ದರೂ ಅರ್ಜಿ ಸಲ್ಲಿಸಿರುವವರು ಮಾತ್ರ 1.81 ಲಕ್ಷ ಮಂದಿ. ಈ ಪೈಕಿ 1.45 ಲಕ್ಷ ಅಭ್ಯರ್ಥಿಗಳ ಅರ್ಜಿ ಪರಿಶೀಲಿಸಿ ಹಣ ಮಂಜೂರು ಮಾಡಲಾಗಿದೆ. ಉನ್ನತ ಶಿಕ್ಷಣ ಸೇರಿರುವುದು, ಆದಾಯ ತೆರಿಗೆ ಹಾಗೂ ಜಿಎಸ್​ಟಿ ವ್ಯಾಪ್ತಿಯಲ್ಲಿ ಬಂದಿರುವುದೂ ಸೇರಿದಂತೆ ವಿವಿಧ ಕಾರಣಗಳಿಗಾಗಿ ಯೋಜನೆಗೆ ಅನರ್ಹರಾಗಿದ್ದಾರೆ. ಇದು ನಿರಂತರ ಪ್ರಕ್ರಿಯೆ. ಅರ್ಹ ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಿದರೆ ಸಮಗ್ರವಾಗಿ ಪರಿಶೀಲಿಸಿ ಯೋಜನೆಯ ಫಲಾನುಭವಿಗಳಾಗಬಹುದು ಎಂದು ಸಚಿವ ಪಾಟೀಲ್ ತಿಳಿಸಿದರು.

ಇದನ್ನೂ ಓದಿ: ಅಧಿವೇಶನದ ಮೊದಲ ದಿನವೇ ವಕ್ಫ್, ಪಂಚಮಸಾಲಿ ಮೀಸಲಾತಿ ಸದ್ದು; ಸದನದಲ್ಲಿ ಮಾತಿನ ಚಕಮಕಿ, ಗದ್ದಲ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.