ETV Bharat / state

ರಾಜ್ಯಪಾಲರು ತಪ್ಪಿತಸ್ಥರು ಎಂಬುದು ಮೇಲ್ನೋಟಕ್ಕೆ ಸಾಬೀತು: ಸಚಿವ ಶಿವಾನಂದ ಪಾಟೀಲ್ - Shivananda Patil

author img

By ETV Bharat Karnataka Team

Published : Aug 19, 2024, 4:39 PM IST

Updated : Aug 19, 2024, 5:38 PM IST

ಮುಡಾ ಪ್ರಕರಣವನ್ನು ರಾಜ್ಯಪಾಲರು ಎತ್ತಿಕೊಂಡಿರುವ ಉದ್ದೇಶವೆಂದರೆ ಜನರಿಂದ ಚುನಾಯಿತವಾದ ಸರ್ಕಾರವನ್ನು ಅಸ್ಥಿರಗೊಳಿಸುವುದಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ದೂರಿದರು.

ಸಚಿವ ಶಿವಾನಂದ ಪಾಟೀಲ್
ಸಚಿವ ಶಿವಾನಂದ ಪಾಟೀಲ್ (ETV Bharat)
ಸಚಿವ ಶಿವಾನಂದ ಪಾಟೀಲ್ (ETV Bharat)

ಹಾವೇರಿ: ಕಾನೂನು ಹೋರಾಟ ಪ್ರಾರಂಭವಾಗಿದೆ. ರಾಜ್ಯಪಾಲರು ತಪ್ಪಿತಸ್ಥರಿದ್ದಾರೆ ಎಂದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಇಂದು ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯಪಾಲರ ಮುಂದೆ ಅನೇಕ ಪ್ರಕರಣಗಳು ಹಲವು ವರ್ಷಗಳಿಂದ ಬಿದ್ದಿದ್ದಾವೆ. ಆದರೆ ಅವರು ನಿರ್ದಿಷ್ಟವಾಗಿ ಈ ಪ್ರಕರಣವನ್ನು ಎತ್ತಿಕೊಂಡಿರುವ ಉದ್ದೇಶವೆಂದರೆ ಜನರಿಂದ ಚುನಾಯಿತವಾದ ಸರ್ಕಾರವನ್ನು ಅಸ್ಥಿರಗೊಳಿಸುವುದಾಗಿದೆ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವುದು ಬಿಜೆಪಿಯವರ ಮನಸ್ಸಿನಲ್ಲಿದೆ. ಇದು 2016ರಿಂದ ನಿರಂತರವಾಗಿ ನಡೆದಿದೆ ಎಂದು ದೂರಿದರು.

ಬಿಜೆಪಿಯವರು ಏಳೆಂಟು ಸರ್ಕಾರಗಳನ್ನು ವಾಮಮಾರ್ಗದಿಂದ ಕಿತ್ತುಹಾಕಿದ್ದಾರೆ. ಕರ್ನಾಟಕದಲ್ಲಿಯೂ ಸಹ ಇದು ಸಫಲವಾಗುತ್ತದೆ ಎಂಬ ಪ್ರಯತ್ನವನ್ನು ಮಾಡುತ್ತಿದ್ದಾರೆ. ಚುನಾಯಿತ ಪ್ರತಿನಿಧಿಗಳಾದ ನಾವು ಸಿದ್ದರಾಮಯ್ಯನವರ ಜೊತೆ ಇದ್ದೇವೆ, ಪಕ್ಷ ಅವರ ಜೊತೆ ಇದೆ. ಪಕ್ಷದ ವರಿಷ್ಠರು ಅವರ ಜೊತೆಗಿದ್ದಾರೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ನೀಡುವದಿಲ್ಲ. ಕಾನೂನು ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಶಾಸಕರಾದ ಬಸವರಾಜ್ ಶಿವಣ್ಣನವರ, ರುದ್ರಪ್ಪ ಲಮಾಣಿ, ಯು.ಬಿ.ಬಣಕಾರ ಸೇರಿದಂತೆ ಹಲವು ಜನಪ್ರತಿನಿಧಿಗಳು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮತ್ತೊಂದೆಡೆ, ಹುಬ್ಬಳ್ಳಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ರಾಜ್ಯಪಾಲರ ಹುದ್ದೆಗೆ ಮೊದಲಿನ ಗೌರವ ಈಗ ಇಲ್ಲ. ಉನ್ನತ ಸ್ಥಾನದಲ್ಲಿದ್ದು ಹೇಸಿಗೆ ನಿರ್ಧಾರ ತಗೆದುಕೊಳ್ಳಬಾರದು. 2014ರಿಂದ ಎಲ್ಲ ರಾಜ್ಯದಲ್ಲಿ ರಾಜ್ಯಪಾಲರ ಜೊತೆ ಸಂಘರ್ಷ ಇದ್ದೆ ಇದೆ. ಬಹುತೇಕ ವಿರೋಧ ಪಕ್ಷಗಳಿರುವಲ್ಲೆಲ್ಲ ಇದೆ ಎಂದರು.

ಸಂಸದ ಜಗದೀಶ್‌ ಶೆಟ್ಟರ್‌ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಸಿಎಂ ರಾಜೀನಾಮೆಯಿಂದ ಕಾಂಗ್ರೆಸ್ ನಾಯಕರಿಗೆ ಖುಷಿ ಇದೆ ಎಂಬುದು ಮಾಧ್ಯಮಗಳ ಸೃಷ್ಟಿ. ಜಗದೀಶ್ ಶೆಟ್ಟರ್ ಈ ಹೇಳಿಕೆ ಕೊಟ್ಟಿದ್ರೆ ಅವರು ನಮ್ಮ ಪಕ್ಷದವರಾ? ಬೇಕಾದವರು ಬೇಕಾದನ್ನು ಹೇಳ್ತಾರೆ ನಮ್ಮ ಪಕ್ಷದವರು ಹೇಳಿದ್ರೆ ಅದು ಬೇರೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದರೆ ಅದಕ್ಕೆ ಸಿದ್ದರಾಮಯ್ಯ ನೇರ ಹೊಣೆ: ಆರ್.ಅಶೋಕ್ - BJP JDS Protest

ಸಚಿವ ಶಿವಾನಂದ ಪಾಟೀಲ್ (ETV Bharat)

ಹಾವೇರಿ: ಕಾನೂನು ಹೋರಾಟ ಪ್ರಾರಂಭವಾಗಿದೆ. ರಾಜ್ಯಪಾಲರು ತಪ್ಪಿತಸ್ಥರಿದ್ದಾರೆ ಎಂದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಇಂದು ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯಪಾಲರ ಮುಂದೆ ಅನೇಕ ಪ್ರಕರಣಗಳು ಹಲವು ವರ್ಷಗಳಿಂದ ಬಿದ್ದಿದ್ದಾವೆ. ಆದರೆ ಅವರು ನಿರ್ದಿಷ್ಟವಾಗಿ ಈ ಪ್ರಕರಣವನ್ನು ಎತ್ತಿಕೊಂಡಿರುವ ಉದ್ದೇಶವೆಂದರೆ ಜನರಿಂದ ಚುನಾಯಿತವಾದ ಸರ್ಕಾರವನ್ನು ಅಸ್ಥಿರಗೊಳಿಸುವುದಾಗಿದೆ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವುದು ಬಿಜೆಪಿಯವರ ಮನಸ್ಸಿನಲ್ಲಿದೆ. ಇದು 2016ರಿಂದ ನಿರಂತರವಾಗಿ ನಡೆದಿದೆ ಎಂದು ದೂರಿದರು.

ಬಿಜೆಪಿಯವರು ಏಳೆಂಟು ಸರ್ಕಾರಗಳನ್ನು ವಾಮಮಾರ್ಗದಿಂದ ಕಿತ್ತುಹಾಕಿದ್ದಾರೆ. ಕರ್ನಾಟಕದಲ್ಲಿಯೂ ಸಹ ಇದು ಸಫಲವಾಗುತ್ತದೆ ಎಂಬ ಪ್ರಯತ್ನವನ್ನು ಮಾಡುತ್ತಿದ್ದಾರೆ. ಚುನಾಯಿತ ಪ್ರತಿನಿಧಿಗಳಾದ ನಾವು ಸಿದ್ದರಾಮಯ್ಯನವರ ಜೊತೆ ಇದ್ದೇವೆ, ಪಕ್ಷ ಅವರ ಜೊತೆ ಇದೆ. ಪಕ್ಷದ ವರಿಷ್ಠರು ಅವರ ಜೊತೆಗಿದ್ದಾರೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ನೀಡುವದಿಲ್ಲ. ಕಾನೂನು ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಶಾಸಕರಾದ ಬಸವರಾಜ್ ಶಿವಣ್ಣನವರ, ರುದ್ರಪ್ಪ ಲಮಾಣಿ, ಯು.ಬಿ.ಬಣಕಾರ ಸೇರಿದಂತೆ ಹಲವು ಜನಪ್ರತಿನಿಧಿಗಳು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮತ್ತೊಂದೆಡೆ, ಹುಬ್ಬಳ್ಳಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ರಾಜ್ಯಪಾಲರ ಹುದ್ದೆಗೆ ಮೊದಲಿನ ಗೌರವ ಈಗ ಇಲ್ಲ. ಉನ್ನತ ಸ್ಥಾನದಲ್ಲಿದ್ದು ಹೇಸಿಗೆ ನಿರ್ಧಾರ ತಗೆದುಕೊಳ್ಳಬಾರದು. 2014ರಿಂದ ಎಲ್ಲ ರಾಜ್ಯದಲ್ಲಿ ರಾಜ್ಯಪಾಲರ ಜೊತೆ ಸಂಘರ್ಷ ಇದ್ದೆ ಇದೆ. ಬಹುತೇಕ ವಿರೋಧ ಪಕ್ಷಗಳಿರುವಲ್ಲೆಲ್ಲ ಇದೆ ಎಂದರು.

ಸಂಸದ ಜಗದೀಶ್‌ ಶೆಟ್ಟರ್‌ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಸಿಎಂ ರಾಜೀನಾಮೆಯಿಂದ ಕಾಂಗ್ರೆಸ್ ನಾಯಕರಿಗೆ ಖುಷಿ ಇದೆ ಎಂಬುದು ಮಾಧ್ಯಮಗಳ ಸೃಷ್ಟಿ. ಜಗದೀಶ್ ಶೆಟ್ಟರ್ ಈ ಹೇಳಿಕೆ ಕೊಟ್ಟಿದ್ರೆ ಅವರು ನಮ್ಮ ಪಕ್ಷದವರಾ? ಬೇಕಾದವರು ಬೇಕಾದನ್ನು ಹೇಳ್ತಾರೆ ನಮ್ಮ ಪಕ್ಷದವರು ಹೇಳಿದ್ರೆ ಅದು ಬೇರೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದರೆ ಅದಕ್ಕೆ ಸಿದ್ದರಾಮಯ್ಯ ನೇರ ಹೊಣೆ: ಆರ್.ಅಶೋಕ್ - BJP JDS Protest

Last Updated : Aug 19, 2024, 5:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.