ETV Bharat / state

ಮಂಗಳೂರು: ವಿಮಾನದಲ್ಲಿ ದುರ್ವರ್ತನೆ ತೋರಿದ ಪ್ರಯಾಣಿಕ ಪೊಲೀಸ್​ ವಶಕ್ಕೆ - Misbehavior on the plane

author img

By ETV Bharat Karnataka Team

Published : May 11, 2024, 9:37 AM IST

ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ವಿಮಾನದ ಸಿಬ್ಬಂದಿಯೊಂದಿಗೆ ಪ್ರಯಾಣಿಕನೋರ್ವ ದುರ್ವರ್ತನೆ ತೋರಿದ್ದಾನೆ. ಬಜ್ಪೆ ಪೊಲೀಸರು ಈ ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.

passenger in police custody  Dakshina Kannada
ಮಂಗಳೂರು ವಿಮಾನ ನಿಲ್ದಾಣ (ETV Bharat)

ಮಂಗಳೂರು: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದ ಪ್ರಯಾಣಿಕ ಪ್ರಯಾಣದ ವೇಳೆ ದುರ್ವರ್ತನೆ ತೋರಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ.

ಕೇರಳದ ಕಣ್ಣೂರು ನಿವಾಸಿ ಮುಹಮ್ಮದ್ ಬಿ.ಸಿ ಎಂಬಾತ ವಿಮಾನದಲ್ಲಿ ದುರ್ವರ್ತನೆ ತೋರಿದವನು. ಮೇ 8 ರಂದು ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ವಿಮಾನದ ಸಿಬ್ಬಂದಿಯೊಂದಿಗೆ ಈತ ಅಶಿಸ್ತಿನ ರೀತಿಯಲ್ಲಿ ವರ್ತಿಸಿದ್ದನು. ಜೊತೆಗೆ ಇತರ ಪ್ರಯಾಣಿಕರಿಗೆ ತೊಂದರೆ ನೀಡಿದ್ದನು.

ಆತನ ನಡವಳಿಕೆಯು ಇತರ ಪ್ರಯಾಣಿಕರಿಗೆ ಆತಂಕ ಸೃಷ್ಟಿಸಿತ್ತು. ಅದರಂತೆ ಮಂಗಳೂರಿಗೆ ವಿಮಾನ ಬಂದಿಳಿದ ಕೂಡಲೇ ಆತನನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನ ಜೊತೆಗೆ ಬಜ್ಪೆ ಠಾಣೆಗೆ ಹಸ್ತಾಂತರಿಸಿದ್ದಾರೆ. ಅದರಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ವಕೀಲ ದೇವರಾಜೇಗೌಡ ಬಂಧನ - DEVARAJEGOWDA ARREST

ಮಂಗಳೂರು: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದ ಪ್ರಯಾಣಿಕ ಪ್ರಯಾಣದ ವೇಳೆ ದುರ್ವರ್ತನೆ ತೋರಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ.

ಕೇರಳದ ಕಣ್ಣೂರು ನಿವಾಸಿ ಮುಹಮ್ಮದ್ ಬಿ.ಸಿ ಎಂಬಾತ ವಿಮಾನದಲ್ಲಿ ದುರ್ವರ್ತನೆ ತೋರಿದವನು. ಮೇ 8 ರಂದು ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ವಿಮಾನದ ಸಿಬ್ಬಂದಿಯೊಂದಿಗೆ ಈತ ಅಶಿಸ್ತಿನ ರೀತಿಯಲ್ಲಿ ವರ್ತಿಸಿದ್ದನು. ಜೊತೆಗೆ ಇತರ ಪ್ರಯಾಣಿಕರಿಗೆ ತೊಂದರೆ ನೀಡಿದ್ದನು.

ಆತನ ನಡವಳಿಕೆಯು ಇತರ ಪ್ರಯಾಣಿಕರಿಗೆ ಆತಂಕ ಸೃಷ್ಟಿಸಿತ್ತು. ಅದರಂತೆ ಮಂಗಳೂರಿಗೆ ವಿಮಾನ ಬಂದಿಳಿದ ಕೂಡಲೇ ಆತನನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನ ಜೊತೆಗೆ ಬಜ್ಪೆ ಠಾಣೆಗೆ ಹಸ್ತಾಂತರಿಸಿದ್ದಾರೆ. ಅದರಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ವಕೀಲ ದೇವರಾಜೇಗೌಡ ಬಂಧನ - DEVARAJEGOWDA ARREST

ETV Bharat Logo

Copyright © 2024 Ushodaya Enterprises Pvt. Ltd., All Rights Reserved.