ETV Bharat / state

ಇಡಿ ಮುಟ್ಟುಗೋಲು ಹಾಕಿಕೊಂಡಿರುವ ಸೈಟ್​ಗಳಿಗೂ ನಮಗೂ ಸಂಬಂಧವಿಲ್ಲ : ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ - ED RAID ON MUDA SITE

ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಅವರು ಇಡಿ ವಶಕ್ಕೆ ಪಡೆದಿರುವ ಮುಡಾದ 142 ಸೈಟ್​ ಬಗ್ಗೆ ಮಾತನಾಡಿದ್ದಾರೆ.

mlc-yathindra-siddaramaiah
ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Jan 21, 2025, 11:45 AM IST

ಮೈಸೂರು : ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿರುವ 300 ಕೋಟಿ ಮೌಲ್ಯದ 142 ಸೈಟ್​ಗಳಿಗೂ ನಮ್ಮ 14 ಸೈಟ್‌ ಗಳಿಗೂ ಯಾವುದೇ ಸಂಬಂಧವಿಲ್ಲ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತಪ್ಪು ಸಂದೇಶ ಹೋಗಲಿ ಎಂದು ಈ ರೀತಿ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿರುವ ಇಡಿ, 300 ಕೋಟಿ ಮೌಲ್ಯದ 142 ಸೈಟ್​ಗಳನ್ನ ವಶಕ್ಕೆ ಪಡೆದಿದೆ. ಈ ವಿಚಾರವನ್ನು ಇಡಿ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್‌ ಮಾಡಿತ್ತು. ಆ ಟ್ವೀಟ್‌ ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೂ ಟ್ಯಾಗ್‌ ಮಾಡಲಾಗಿದೆ. ಈ ಕುರಿತು ಜಲದರ್ಶಿನಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇಡಿ ಮುಟ್ಟುಗೋಲು ಹಾಕಿಕೊಂಡಿರುವ ಸೈಟ್​ಗಳಿಗೂ ನಮಗೂ ಸಂಬಂಧವಿಲ್ಲ : ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ (ETV Bharat)

ಇಡಿ‌ ಅವರು‌ ಮುಡಾ‌ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಟ್ಯಾಗ್‌ ಮಾಡಿ ಟ್ವೀಟ್ ಮಾಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತಪ್ಪು ಸಂದೇಶ ಹೋಗಲಿ ಎಂದು‌ ಈ‌ ರೀತಿ ಮಾಡಲಾಗಿದೆ. ಇದನ್ನು ಟ್ಯಾಗ್ ಮಾಡಿ‌ ಟ್ವೀಟ್ ಮಾಡುವ ಅಗತ್ಯ ಇರಲಿಲ್ಲ ಎಂದರು.

ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವ ಸಲುವಾಗಿ ಇದೇ 27ರಂದು ನ್ಯಾಯಾಲಯದಲ್ಲಿ ವಿಚಾರಣೆ ಇದೆ. ಹೀಗಾಗಿ ನ್ಯಾಯಾಲಯದ ದಿಕ್ಕು ತಪ್ಪಿಸುವ ಸಲುವಾಗಿ ಈ ರೀತಿಯಾಗಿ ಮಾಡಿರಬಹುದು ಎಂದು ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದರು.

ಇಡಿ ಅವರು ಮುಡಾದಲ್ಲಿ ಬೇರೆಯವರು ಮಾಡಿರುವ ಹಗರಣಗಳ ಕುರಿತು ತನಿಖೆ ಮಾಡಿದ್ದಾರೆ. ಅದನ್ನು ಟ್ವೀಟ್ ಮಾಡಿದ್ದಾರೆ. ಮುಡಾದಲ್ಲಿ ಬೇನಾಮಿ ಸೈಟ್​ಗಳು ಹಂಚಿಕೆ ಆಗಿರುವುದೇ ಬಿಜೆಪಿ‌ ಆಡಳಿತದ ಅವಧಿಯಲ್ಲಿ. ಮುಡಾ ಹಗರಣದ ಹೊಣೆಯನ್ನು ಬಿಜೆಪಿಯೇ ಹೊರಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ : ಮುಡಾ ಕೇಸ್ ಬಗ್ಗೆ ಇ.ಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ : ಸಿಎಂ ಸಿದ್ದರಾಮಯ್ಯ - CHIEF MINISTER SIDDARAMAIAH

ಮೈಸೂರು : ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿರುವ 300 ಕೋಟಿ ಮೌಲ್ಯದ 142 ಸೈಟ್​ಗಳಿಗೂ ನಮ್ಮ 14 ಸೈಟ್‌ ಗಳಿಗೂ ಯಾವುದೇ ಸಂಬಂಧವಿಲ್ಲ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತಪ್ಪು ಸಂದೇಶ ಹೋಗಲಿ ಎಂದು ಈ ರೀತಿ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿರುವ ಇಡಿ, 300 ಕೋಟಿ ಮೌಲ್ಯದ 142 ಸೈಟ್​ಗಳನ್ನ ವಶಕ್ಕೆ ಪಡೆದಿದೆ. ಈ ವಿಚಾರವನ್ನು ಇಡಿ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್‌ ಮಾಡಿತ್ತು. ಆ ಟ್ವೀಟ್‌ ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೂ ಟ್ಯಾಗ್‌ ಮಾಡಲಾಗಿದೆ. ಈ ಕುರಿತು ಜಲದರ್ಶಿನಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇಡಿ ಮುಟ್ಟುಗೋಲು ಹಾಕಿಕೊಂಡಿರುವ ಸೈಟ್​ಗಳಿಗೂ ನಮಗೂ ಸಂಬಂಧವಿಲ್ಲ : ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ (ETV Bharat)

ಇಡಿ‌ ಅವರು‌ ಮುಡಾ‌ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಟ್ಯಾಗ್‌ ಮಾಡಿ ಟ್ವೀಟ್ ಮಾಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತಪ್ಪು ಸಂದೇಶ ಹೋಗಲಿ ಎಂದು‌ ಈ‌ ರೀತಿ ಮಾಡಲಾಗಿದೆ. ಇದನ್ನು ಟ್ಯಾಗ್ ಮಾಡಿ‌ ಟ್ವೀಟ್ ಮಾಡುವ ಅಗತ್ಯ ಇರಲಿಲ್ಲ ಎಂದರು.

ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವ ಸಲುವಾಗಿ ಇದೇ 27ರಂದು ನ್ಯಾಯಾಲಯದಲ್ಲಿ ವಿಚಾರಣೆ ಇದೆ. ಹೀಗಾಗಿ ನ್ಯಾಯಾಲಯದ ದಿಕ್ಕು ತಪ್ಪಿಸುವ ಸಲುವಾಗಿ ಈ ರೀತಿಯಾಗಿ ಮಾಡಿರಬಹುದು ಎಂದು ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದರು.

ಇಡಿ ಅವರು ಮುಡಾದಲ್ಲಿ ಬೇರೆಯವರು ಮಾಡಿರುವ ಹಗರಣಗಳ ಕುರಿತು ತನಿಖೆ ಮಾಡಿದ್ದಾರೆ. ಅದನ್ನು ಟ್ವೀಟ್ ಮಾಡಿದ್ದಾರೆ. ಮುಡಾದಲ್ಲಿ ಬೇನಾಮಿ ಸೈಟ್​ಗಳು ಹಂಚಿಕೆ ಆಗಿರುವುದೇ ಬಿಜೆಪಿ‌ ಆಡಳಿತದ ಅವಧಿಯಲ್ಲಿ. ಮುಡಾ ಹಗರಣದ ಹೊಣೆಯನ್ನು ಬಿಜೆಪಿಯೇ ಹೊರಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ : ಮುಡಾ ಕೇಸ್ ಬಗ್ಗೆ ಇ.ಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ : ಸಿಎಂ ಸಿದ್ದರಾಮಯ್ಯ - CHIEF MINISTER SIDDARAMAIAH

ETV Bharat Logo

Copyright © 2025 Ushodaya Enterprises Pvt. Ltd., All Rights Reserved.