ETV Bharat / state

ಮೋದಿ ಪದಗ್ರಹಣ: ವಿಜಯೋತ್ಸವದ ಬಳಿಕ ಇಬ್ಬರಿಗೆ ಚೂರಿ ಇರಿತ, ಐವರ ಬಂಧನ - Two people stabbed

author img

By ETV Bharat Karnataka Team

Published : Jun 10, 2024, 10:42 AM IST

ವಿಜಯೋತ್ಸವದ ಬಳಿಕ ಇಬ್ಬರಿಗೆ ಚೂರಿ ಇರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಇನ್ನೊಬ್ಬ ವ್ಯಕ್ತಿಗೆ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Mangaluru Police Commissioner Office
ಮಂಗಳೂರು ಪೊಲೀಸ್​ ಆಯುಕ್ತರ ಕಚೇರಿ (ETV Bharat)

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪದಗ್ರಹಣದ ಹಿನ್ನೆಲೆಯಲ್ಲಿ ನಡೆದ ವಿಜಯೋತ್ಸವದ ಬಳಿಕ 20-25 ಮಂದಿಯ ತಂಡವೊಂದು ಇಬ್ಬರಿಗೆ ಭಾನುವಾರ ರಾತ್ರಿ ಚೂರಿ ಇರಿದ ಘಟನೆ ನಗರದ ಮುಡಿಪು ಸಮೀಪದ ಬೋಳಿಯಾರುನಲ್ಲಿ ನಡೆದಿದೆ. ಇನ್ನೋಳಿ ನಿವಾಸಿಗಳಾದ ಹರೀಶ್ (41), ನಂದಕುಮಾರ್ (24) ಚೂರಿ ಇರಿತಕ್ಕೊಳಗಾದವರು. ಇನ್ನೋಳಿ‌ ನಿವಾಸಿ ಕೃಷ್ಣ ಕುಮಾರ್ ಹಲ್ಲೆಗೊಳಗಾಗಿದ್ದಾರೆ.

ಭಾನುವಾರ ಸಂಜೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಬೋಳಿಯಾರುನಲ್ಲಿ ವಿಜಯೋತ್ಸವ ನಡೆದಿತ್ತು. ಬಳಿಕ ತೆರಳುತ್ತಿದ್ದ ವೇಳೆ ಮೂವರು ಬಿಜೆಪಿ ಕಾರ್ಯಕರ್ತರು ಕೆಲ ಘೋಷಣೆಗಳನ್ನು ಕೂಗಿದ್ದರು. ನಂತರ ಆಕ್ರೋಶಿತ ಯುವಕರ ಗುಂಪೊಂದು ಕೆಲ ಬೈಕ್‌ಗಳಲ್ಲಿ ಅವರನ್ನು ಹಿಂಬಾಲಿಸಿಕೊಂಡು ಹೋಗಿದೆ. ಬಾರ್​​ವೊಂದರ ಬಳಿ ಯುವಕರು ನಿಂತಿದ್ದ ವೇಳೆ ವಾಗ್ವಾದ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರ ಗುಂಪು ಮೂವರನ್ನು ಥಳಿಸಿ, ಇಬ್ಬರಿಗೆ ಚೂರಿಯಿಂದ ಇರಿದಿದೆ. ಇವರಲ್ಲಿ ಒಬ್ಬರು ಅಪಾಯದಿಂದ ಪಾರಾಗಿದ್ದು, ಮತ್ತೊಬ್ಬರಿಗೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪಾನಮತ್ತ ಪುಂಡರಿಂದ ಮಹಿಳೆ ಮತ್ತು ಯುವತಿ ಮೇಲೆ ಹಲ್ಲೆ ಆರೋಪ: ಪ್ರಕರಣ ದಾಖಲು, ಪುಂಡರಿಗಾಗಿ ಹುಡುಕಾಟ - assault by drunken men

ಆರೋಪಿಗಳ ಬಂಧನ: ಚೂರಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಣಾಜೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಕೀರ್(28), ಅಬ್ದುಲ್ ರಜಾಕ್ (40), ಅಬೂಬಕ್ಕರ್ ಸಿದ್ದಿಕ್(35), ಸವಾದ್ (18) ಮತ್ತು ಮೋನು ಅಲಿಯಾಸ್ ಹಫೀಜ್ (24) ಬಂಧಿತರು.

ಪೊಲೀಸರು ಘಟನೆ ನಡೆದ ಬಾ‌ರ್ ಮುಂಭಾಗದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಕೊಣಾಜೆ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಪ್ರತಿ ದೂರು ದಾಖಲಿಸಲಾಗಿದೆ. ಈ ದೂರನ್ನು ಆಧರಿಸಿ ಪೊಲೀಸರು ಐಪಿಸಿ ಸೆಕ್ಷನ್ 143, 147, 148, 153ಎ, 504, 506, 149 ಅನ್ವಯ ವಿನಯ್, ಸುಭಾಶ್‌, ರಂಜಿತ್, ಧನಂಜಯ ಎಂಬವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪದಗ್ರಹಣದ ಹಿನ್ನೆಲೆಯಲ್ಲಿ ನಡೆದ ವಿಜಯೋತ್ಸವದ ಬಳಿಕ 20-25 ಮಂದಿಯ ತಂಡವೊಂದು ಇಬ್ಬರಿಗೆ ಭಾನುವಾರ ರಾತ್ರಿ ಚೂರಿ ಇರಿದ ಘಟನೆ ನಗರದ ಮುಡಿಪು ಸಮೀಪದ ಬೋಳಿಯಾರುನಲ್ಲಿ ನಡೆದಿದೆ. ಇನ್ನೋಳಿ ನಿವಾಸಿಗಳಾದ ಹರೀಶ್ (41), ನಂದಕುಮಾರ್ (24) ಚೂರಿ ಇರಿತಕ್ಕೊಳಗಾದವರು. ಇನ್ನೋಳಿ‌ ನಿವಾಸಿ ಕೃಷ್ಣ ಕುಮಾರ್ ಹಲ್ಲೆಗೊಳಗಾಗಿದ್ದಾರೆ.

ಭಾನುವಾರ ಸಂಜೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಬೋಳಿಯಾರುನಲ್ಲಿ ವಿಜಯೋತ್ಸವ ನಡೆದಿತ್ತು. ಬಳಿಕ ತೆರಳುತ್ತಿದ್ದ ವೇಳೆ ಮೂವರು ಬಿಜೆಪಿ ಕಾರ್ಯಕರ್ತರು ಕೆಲ ಘೋಷಣೆಗಳನ್ನು ಕೂಗಿದ್ದರು. ನಂತರ ಆಕ್ರೋಶಿತ ಯುವಕರ ಗುಂಪೊಂದು ಕೆಲ ಬೈಕ್‌ಗಳಲ್ಲಿ ಅವರನ್ನು ಹಿಂಬಾಲಿಸಿಕೊಂಡು ಹೋಗಿದೆ. ಬಾರ್​​ವೊಂದರ ಬಳಿ ಯುವಕರು ನಿಂತಿದ್ದ ವೇಳೆ ವಾಗ್ವಾದ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರ ಗುಂಪು ಮೂವರನ್ನು ಥಳಿಸಿ, ಇಬ್ಬರಿಗೆ ಚೂರಿಯಿಂದ ಇರಿದಿದೆ. ಇವರಲ್ಲಿ ಒಬ್ಬರು ಅಪಾಯದಿಂದ ಪಾರಾಗಿದ್ದು, ಮತ್ತೊಬ್ಬರಿಗೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪಾನಮತ್ತ ಪುಂಡರಿಂದ ಮಹಿಳೆ ಮತ್ತು ಯುವತಿ ಮೇಲೆ ಹಲ್ಲೆ ಆರೋಪ: ಪ್ರಕರಣ ದಾಖಲು, ಪುಂಡರಿಗಾಗಿ ಹುಡುಕಾಟ - assault by drunken men

ಆರೋಪಿಗಳ ಬಂಧನ: ಚೂರಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಣಾಜೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಕೀರ್(28), ಅಬ್ದುಲ್ ರಜಾಕ್ (40), ಅಬೂಬಕ್ಕರ್ ಸಿದ್ದಿಕ್(35), ಸವಾದ್ (18) ಮತ್ತು ಮೋನು ಅಲಿಯಾಸ್ ಹಫೀಜ್ (24) ಬಂಧಿತರು.

ಪೊಲೀಸರು ಘಟನೆ ನಡೆದ ಬಾ‌ರ್ ಮುಂಭಾಗದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಕೊಣಾಜೆ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಪ್ರತಿ ದೂರು ದಾಖಲಿಸಲಾಗಿದೆ. ಈ ದೂರನ್ನು ಆಧರಿಸಿ ಪೊಲೀಸರು ಐಪಿಸಿ ಸೆಕ್ಷನ್ 143, 147, 148, 153ಎ, 504, 506, 149 ಅನ್ವಯ ವಿನಯ್, ಸುಭಾಶ್‌, ರಂಜಿತ್, ಧನಂಜಯ ಎಂಬವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.