ETV Bharat / state

ಆಡಳಿತ ವೈಖರಿಯಿಂದ ಮೋದಿ ಜನಪ್ರಿಯತೆ ಇನ್ನಷ್ಟು ಉತ್ತುಂಗಕ್ಕೆ ಏರಿದೆ: ಬಿ.ವೈ. ವಿಜಯೇಂದ್ರ - VIJAYENDRA PRAISES PM MODI

author img

By ETV Bharat Karnataka Team

Published : Mar 23, 2024, 12:59 PM IST

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ನಿಷ್ಕ್ರಿಯವಾಗಿದ್ದು, ಬರಗಾಲ ನಿರ್ವಹಣೆಯಲ್ಲೂ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದರು.

B Y Vijayendra Pressmeet
ಬಿ ವೈ ವಿಜಯೇಂದ್ರ ಸುದ್ದಿಗೋಷ್ಠಿ

ಬೆಂಗಳೂರು: "ಮತ್ತೊಮ್ಮೆ ಮೋದಿ ಸರ್ಕಾರ ಎಂಬುದು ಕೇವಲ ಬಿಜೆಪಿ ಕಾರ್ಯಕರ್ತರ ಆಶಯವಲ್ಲ; ಇದು ರಾಜ್ಯದ ಮತ್ತು ದೇಶದ ಜವಾಬ್ದಾರಿಯುತ ಮತದಾರರ ನಿರ್ಧಾರ. ನರೇಂದ್ರ ಮೋದಿಯವರ ಕಳೆದ 10 ವರ್ಷಗಳ ಕಾರ್ಯವೈಖರಿ, ಆಡಳಿತ ವೈಖರಿ, ಕೇಂದ್ರದ ಮೋದಿ ನೇತೃತ್ವದ ಜನಪರ ಯೋಜನೆಗಳ ಪರಿಣಾಮವಾಗಿ ನರೇಂದ್ರ ಮೋದಿ ಅವರ ಜನಪ್ರಿಯತೆ ಇನ್ನೂ ಉತ್ತುಂಗಕ್ಕೆ ಏರಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಹೋಟೆಲ್ "ಜಿ.ಎಂ. ರಿಜಾಯ್ಸ್" ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ದೇಶದ ಜನತೆ ಮೋದಿಯವರ ನಾಯಕತ್ವವನ್ನು ಮೆಚ್ಚಿಕೊಂಡಿದ್ದಾರೆ. ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ. ಮೋದಿಯವರ ಮತ್ತು ಬಿಜೆಪಿ ಕೇಂದ್ರ ಸರ್ಕಾರದ ಯೋಜನೆಗಳು ಮನೆಮನೆಗೆ ತಲುಪಿವೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ" ಎಂದರು.

"ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಪರಿವರ್ತಿಸುವ ಸಂಕಲ್ಪದೊಂದಿಗೆ ಮೋದಿ ಸರ್ಕಾರದ ಜನಪರ ಯೋಜನೆಗಳನ್ನು ನೀಡಿದೆ. ಹಾಗಾಗಿ ಮೋದಿ ಮತ್ತೊಮ್ಮೆ ಎಂಬ ಘೋಷಣೆ ದೇಶಾದ್ಯಂತ ಕೇಳಿಸುತ್ತಿದೆ" ಎಂದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ: "ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂಬುದನ್ನು ನಾವು ಮತ್ತೆ ಸಾಬೀತು ಮಾಡಬೇಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ನಿಷ್ಕ್ರಿಯವಾಗಿದೆ. ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಎಚ್ಚೆತ್ತುಕೊಳ್ಳದೆ ಇರುವುದು ನಿಜಕ್ಕೂ ದುರಂತವೇ ಸರಿ" ಎಂದು ಟೀಕಿಸಿದರು.

"ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಶೂನ್ಯ. ಅಲ್ಪಸಂಖ್ಯಾತರ ತುಷ್ಟೀಕರಣವನ್ನು ಮಾಡುತ್ತಲೇ ಬಂದಿದೆ. ಇದಕ್ಕೆ ತಕ್ಕ ಉತ್ತರವನ್ನು ಕೊಡುವ ಸಂದರ್ಭ, ಕಾಲ ಕೂಡಿ ಬಂದಿದೆ ಎಂಬ ಭಾವನೆ ಪ್ರತಿಯೊಬ್ಬರದು. ಹಿಂದೆ ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ನೀಡಿದ ಕೊಡುಗೆಗಳು, ಕಾರ್ಯಕ್ರಮಗಳು, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ನೀಡಿದ ಜನಪರ ಯೋಜನೆಗಳನ್ನು ರಾಜ್ಯದ ಜನತೆ ಮರೆತಿಲ್ಲ. ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಿಸಿದ್ದಾರೆ. ಇದು ದೀರ್ಘ ಕಾಲದ ಹೋರಾಟ ಮತ್ತು ಪ್ರತಿಯೊಬ್ಬ ಭಾರತೀಯರ ಕನಸು ನನಸಾದ ಕಾಲ" ಎಂದು ಹೇಳಿದರು.

"370ನೇ ವಿಧಿ ರದ್ದತಿ, ತ್ರಿವಳಿ ತಲಾಖ್ ರದ್ದು ಸೇರಿ ಅನೇಕ ಕಾರ್ಯಗಳು ನಡೆದಿವೆ. ಮೂಲಭೂತ ಸೌಕರ್ಯ ನೀಡಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ಇದೆಲ್ಲದರ ಪರಿಣಾಮವಾಗಿ ದೇಶ ಮಾತ್ರವಲ್ಲದೆ ಕರ್ನಾಟಕ ರಾಜ್ಯದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ಅಭಿಪ್ರಾಯ ಸರ್ವಸಾಮಾನ್ಯವಾಗಿದೆ. ಎಲ್ಲಾ ಕಡೆಗಳಲ್ಲಿ ಅದನ್ನು ಕೇಳುವಂತಾಗಿದೆ. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗ. ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗದಷ್ಟೇ ಪ್ರಾಮುಖ್ಯತೆಯನ್ನು ಅದು ಪಡೆದಿದೆ. ಮಾಧ್ಯಮರಂಗ ಪರಿವರ್ತನೆ ಆಗಿ ಪ್ರಜಾಪ್ರಭುತ್ವಕ್ಕೆ ದೊಡ್ಡ ಶಕ್ತಿ ಕೊಟ್ಟಿದೆ. ಚುನಾವಣೆ ಬಂದಾಗ ಪತ್ರಿಕಾರಂಗಕ್ಕೆ ಇನ್ನೂ ಹೆಚ್ಚು ಪ್ರಾಮುಖ್ಯತೆ ಸಹಜವಾಗಿಯೇ ಇರುತ್ತದೆ" ಎಂದು ನುಡಿದರು.

"ಇಂಥ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ಮೀಡಿಯಾ ಸೆಂಟರ್ ಉದ್ಘಾಟನೆ ಮಾಡಿದ್ದೇವೆ. ಮಾಧ್ಯಮಗಳು ನಿರಂತರವಾಗಿ ಸುದ್ದಿ ಪ್ರಸಾರ ಮಾಡಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಈ ಮಾಧ್ಯಮ ಕೇಂದ್ರದಲ್ಲಿ ವೈಫೈ ಸೇರಿದಂತೆ ಅತ್ಯಾಧುನಿಕ ವ್ಯವಸ್ಥೆ ಇರಲಿದೆ. ನಮ್ಮ ರಾಷ್ಟ್ರೀಯ ನಾಯಕರು ಯಾರೇ ಬಂದರೂ ಈ ಮಾಧ್ಯಮ ಕೇಂದ್ರಕ್ಕೆ ಭೇಟಿ ಕೊಡಲಿದ್ದಾರೆ. ಪತ್ರಿಕಾಗೋಷ್ಠಿಗಳನ್ನೂ ಇಲ್ಲಿಯೇ ಅಧಿಕೃತವಾಗಿ ನಡೆಸಲಾಗುವುದು. ಚುನಾವಣಾ ಫಲಿತಾಂಶ ಪ್ರಕಟವಾಗುವವರೆಗೆ ಈ ಕೇಂದ್ರದಲ್ಲಿ ನಿರಂತರವಾಗಿ ಚಟುವಟಿಕೆಗಳು ನಡೆಯಲಿವೆ. ಈ ವ್ಯವಸ್ಥೆಯ ಸದುಪಯೋಗವನ್ನು ಪತ್ರಿಕಾ ಹಾಗೂ ಮಾಧ್ಯಮ ಸ್ನೇಹಿತರು ಪಡೆಯಬೇಕು" ಎಂದು ಅವರು ಮನವಿ ಮಾಡಿದರು.

"ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ 'ನದಿಗಳಲ್ಲಿ ನೀರಿಲ್ಲ; ಕುಡಿಯುವ ನೀರಿನ ಹಾಹಾಕಾರ ಇದೆ' ಎಂದು ತಿಳಿಸಿದ್ದನ್ನು ಗಮನಿಸಿದ್ದೇನೆ. ಈ ಹಿಂದೆ ಯಾವತ್ತು ಕಾವೇರಿ ನೀರನ್ನು ತಮಿಳುನಾಡಿಗೆ ಯಥೇಚ್ಛವಾಗಿ ಹರಿಸುತ್ತಿದ್ದರೋ ಆಗಲೇ ಕಾಂಗ್ರೆಸ್ ಸರ್ಕಾರ- ಮುಖ್ಯಮಂತ್ರಿಗಳಿಗೆ ಜ್ಞಾನೋದಯ ಆಗಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಇಂದು ನೀರಿಗಾಗಿ ಹಾಹಾಕಾರ ಇರುತ್ತಿರಲಿಲ್ಲ" ಎಂದು ಅವರು ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, "ಈಚೆಗೆ ನಡೆದ 4 ರಾಜ್ಯಗಳ ಚುನಾವಣಾ ಸೆಮಿಫೈನಲ್‍ನಲ್ಲಿ 3 ರಾಜ್ಯಗಳನ್ನು ನಾವು ದೊಡ್ಡ ಅಂತರದಲ್ಲಿ ಗೆದ್ದಿದ್ದೇವೆ. ಕಾಂಗ್ರೆಸ್ ಸೆಮಿಫೈನಲ್‍ನಲ್ಲಿ ಸೋತು ಸುಣ್ಣವಾಗಿದೆ. ನಾವಂತೂ ಫೈನಲ್‍ಗೆ ತಲುಪಿದ್ದೇವೆ. ವಿಪಕ್ಷಗಳ ಇಂಡಿಯಾ ಒಕ್ಕೂಟದ ಜೊತೆಗೆ ಶಸ್ತ್ರಸಜ್ಜಿತರಾಗಿದ್ದ ನಿತೀಶ್ ಕುಮಾರ್ ಅಲ್ಲಿ ಶಸ್ತ್ರತ್ಯಾಗ ಮಾಡಿ ನಮ್ಮ ಜೊತೆ ಬಂದಿದ್ದಾರೆ. 'ಇಂಡಿಯಾ' ಒಕ್ಕೂಟವು ನಾಯಕತ್ವ ಇಲ್ಲದೆ, ದಿಕ್ಕುಗಾಣದಂತಿದೆ. ಮ್ಯಾಚ್, ಮ್ಯಾಚಿನ ದಿನಾಂಕ ಫಿಕ್ಸ್ ಆಗಿದೆ. ಆಟಗಾರರೂ ಫಿಕ್ಸ್ ಆಗಿದ್ದಾರೆ. ಸಾರ್ವಜನಿಕರೂ ಫಿಕ್ಸ್ ಆಗಿದ್ದಾರೆ. ನಮ್ಮ ಕ್ಯಾಪ್ಟನ್ ನರೇಂದ್ರ ಮೋದಿಯವರು ಎಂದು ನಿಗದಿಯಾಗಿದೆ. ಅವರ ಕ್ಯಾಪ್ಟನ್ ಇನ್ನೂ ಫಿಕ್ಸ್ ಆಗಿಲ್ಲ" ಎಂದರು.

"ಜನರ ಭಾವನೆ, ಜನಮಿಡಿತದೊಂದಿಗೆ ಮೋದಿಯವರು ಗೆಲ್ಲಲಿದ್ದಾರೆ. ನಾಯಕತ್ವ ಘೋಷಣೆ ಆಗುವ ಮೊದಲೇ ಮ್ಯಾಚ್ (ಚುನಾವಣೆ) ನಡೆಯಲಿದ್ದು, ಇಂಡಿಯಾ ಒಕ್ಕೂಟ ಸೋತು ಸುಣ್ಣವಾಗಲಿದೆ. ಕರ್ನಾಟಕದಲ್ಲೂ ನಮಗೆ ಒಳ್ಳೆಯ ವಾತಾವರಣ ಇದೆ. 10 ತಿಂಗಳಲ್ಲಿ 10 ತಪ್ಪು, 10 ಭ್ರಷ್ಟಾಚಾರಗಳನ್ನು, ಸಮಾಜದ್ರೋಹಿಯಾದ ಕೆಲಸಗಳನ್ನು ಕಾಂಗ್ರೆಸ್ ಮಾಡಿದೆ" ಎಂದು ಟೀಕಿಸಿದರು.

"ಮಂಡ್ಯದಲ್ಲಿ ಹನುಮಧ್ವಜ ಇಳಿಸಿ ಹಿಂದೂಗಳಿಗೆ ಅನ್ಯಾಯ ಮಾಡಿದ್ದಾರೆ. ಹಿಂದೂ ಕಾರ್ಯಕರ್ತರ ರಾಮಜನ್ಮಭೂಮಿಯ ಕೇಸನ್ನು 24 ವರ್ಷಗಳ ಬಳಿಕ ಕೆದಕಿ ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುವ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದು, ಅವರು ಕಾಂಗ್ರೆಸ್ ಕಾರ್ಯಕರ್ತರೆಂದು ಸಾಬೀತಾಗಿದೆ. ಚುನಾವಣೆ ಬಂದಾಗ ಪ್ರಚಾರ ಬೇಕೇ ಬೇಕು. ಅದೇ ರೀತಿ ಸುಳ್ಳು ಸುದ್ದಿಗಳು ಬಂದಾಗ ಅದಕ್ಕೆ ಸ್ಪಷ್ಟನೆ ನೀಡುವುದು ಪಕ್ಷದ ಕರ್ತವ್ಯ. ಇವೆರಡನ್ನು ಒಂದೇ ಜಾಗದಲ್ಲಿ ಮಾಡಲಾಗುವುದು" ಎಂದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಶಾಸಕ ಎಸ್.ಎ. ರಾಮದಾಸ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ್, ರಾಜ್ಯ ವಕ್ತಾರರಾದ ಅಶೋಕ್ ಗೌಡ, ಹೆಚ್.ಎನ್. ಚಂದ್ರಶೇಖರ್, ಸುರಭಿ ಹೋದಿಗೆರೆ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಮತ್ತು ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ: ರಾಜ್ಯದಲ್ಲಿ ಮೊದಲ ಬಾರಿಗೆ ಹೆಚ್ಚು ಮಹಿಳೆಯರಿಗೆ ಮಣೆ; ಕಾಂಗ್ರೆಸ್​ನಿಂದ 6, ಬಿಜೆಪಿಯಿಂದ ಇಬ್ಬರಿಗೆ ಟಿಕೆಟ್ - women candidates

ಬೆಂಗಳೂರು: "ಮತ್ತೊಮ್ಮೆ ಮೋದಿ ಸರ್ಕಾರ ಎಂಬುದು ಕೇವಲ ಬಿಜೆಪಿ ಕಾರ್ಯಕರ್ತರ ಆಶಯವಲ್ಲ; ಇದು ರಾಜ್ಯದ ಮತ್ತು ದೇಶದ ಜವಾಬ್ದಾರಿಯುತ ಮತದಾರರ ನಿರ್ಧಾರ. ನರೇಂದ್ರ ಮೋದಿಯವರ ಕಳೆದ 10 ವರ್ಷಗಳ ಕಾರ್ಯವೈಖರಿ, ಆಡಳಿತ ವೈಖರಿ, ಕೇಂದ್ರದ ಮೋದಿ ನೇತೃತ್ವದ ಜನಪರ ಯೋಜನೆಗಳ ಪರಿಣಾಮವಾಗಿ ನರೇಂದ್ರ ಮೋದಿ ಅವರ ಜನಪ್ರಿಯತೆ ಇನ್ನೂ ಉತ್ತುಂಗಕ್ಕೆ ಏರಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಹೋಟೆಲ್ "ಜಿ.ಎಂ. ರಿಜಾಯ್ಸ್" ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ದೇಶದ ಜನತೆ ಮೋದಿಯವರ ನಾಯಕತ್ವವನ್ನು ಮೆಚ್ಚಿಕೊಂಡಿದ್ದಾರೆ. ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ. ಮೋದಿಯವರ ಮತ್ತು ಬಿಜೆಪಿ ಕೇಂದ್ರ ಸರ್ಕಾರದ ಯೋಜನೆಗಳು ಮನೆಮನೆಗೆ ತಲುಪಿವೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ" ಎಂದರು.

"ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಪರಿವರ್ತಿಸುವ ಸಂಕಲ್ಪದೊಂದಿಗೆ ಮೋದಿ ಸರ್ಕಾರದ ಜನಪರ ಯೋಜನೆಗಳನ್ನು ನೀಡಿದೆ. ಹಾಗಾಗಿ ಮೋದಿ ಮತ್ತೊಮ್ಮೆ ಎಂಬ ಘೋಷಣೆ ದೇಶಾದ್ಯಂತ ಕೇಳಿಸುತ್ತಿದೆ" ಎಂದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ: "ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂಬುದನ್ನು ನಾವು ಮತ್ತೆ ಸಾಬೀತು ಮಾಡಬೇಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ನಿಷ್ಕ್ರಿಯವಾಗಿದೆ. ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಎಚ್ಚೆತ್ತುಕೊಳ್ಳದೆ ಇರುವುದು ನಿಜಕ್ಕೂ ದುರಂತವೇ ಸರಿ" ಎಂದು ಟೀಕಿಸಿದರು.

"ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಶೂನ್ಯ. ಅಲ್ಪಸಂಖ್ಯಾತರ ತುಷ್ಟೀಕರಣವನ್ನು ಮಾಡುತ್ತಲೇ ಬಂದಿದೆ. ಇದಕ್ಕೆ ತಕ್ಕ ಉತ್ತರವನ್ನು ಕೊಡುವ ಸಂದರ್ಭ, ಕಾಲ ಕೂಡಿ ಬಂದಿದೆ ಎಂಬ ಭಾವನೆ ಪ್ರತಿಯೊಬ್ಬರದು. ಹಿಂದೆ ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ನೀಡಿದ ಕೊಡುಗೆಗಳು, ಕಾರ್ಯಕ್ರಮಗಳು, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ನೀಡಿದ ಜನಪರ ಯೋಜನೆಗಳನ್ನು ರಾಜ್ಯದ ಜನತೆ ಮರೆತಿಲ್ಲ. ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಿಸಿದ್ದಾರೆ. ಇದು ದೀರ್ಘ ಕಾಲದ ಹೋರಾಟ ಮತ್ತು ಪ್ರತಿಯೊಬ್ಬ ಭಾರತೀಯರ ಕನಸು ನನಸಾದ ಕಾಲ" ಎಂದು ಹೇಳಿದರು.

"370ನೇ ವಿಧಿ ರದ್ದತಿ, ತ್ರಿವಳಿ ತಲಾಖ್ ರದ್ದು ಸೇರಿ ಅನೇಕ ಕಾರ್ಯಗಳು ನಡೆದಿವೆ. ಮೂಲಭೂತ ಸೌಕರ್ಯ ನೀಡಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ಇದೆಲ್ಲದರ ಪರಿಣಾಮವಾಗಿ ದೇಶ ಮಾತ್ರವಲ್ಲದೆ ಕರ್ನಾಟಕ ರಾಜ್ಯದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ಅಭಿಪ್ರಾಯ ಸರ್ವಸಾಮಾನ್ಯವಾಗಿದೆ. ಎಲ್ಲಾ ಕಡೆಗಳಲ್ಲಿ ಅದನ್ನು ಕೇಳುವಂತಾಗಿದೆ. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗ. ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗದಷ್ಟೇ ಪ್ರಾಮುಖ್ಯತೆಯನ್ನು ಅದು ಪಡೆದಿದೆ. ಮಾಧ್ಯಮರಂಗ ಪರಿವರ್ತನೆ ಆಗಿ ಪ್ರಜಾಪ್ರಭುತ್ವಕ್ಕೆ ದೊಡ್ಡ ಶಕ್ತಿ ಕೊಟ್ಟಿದೆ. ಚುನಾವಣೆ ಬಂದಾಗ ಪತ್ರಿಕಾರಂಗಕ್ಕೆ ಇನ್ನೂ ಹೆಚ್ಚು ಪ್ರಾಮುಖ್ಯತೆ ಸಹಜವಾಗಿಯೇ ಇರುತ್ತದೆ" ಎಂದು ನುಡಿದರು.

"ಇಂಥ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ಮೀಡಿಯಾ ಸೆಂಟರ್ ಉದ್ಘಾಟನೆ ಮಾಡಿದ್ದೇವೆ. ಮಾಧ್ಯಮಗಳು ನಿರಂತರವಾಗಿ ಸುದ್ದಿ ಪ್ರಸಾರ ಮಾಡಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಈ ಮಾಧ್ಯಮ ಕೇಂದ್ರದಲ್ಲಿ ವೈಫೈ ಸೇರಿದಂತೆ ಅತ್ಯಾಧುನಿಕ ವ್ಯವಸ್ಥೆ ಇರಲಿದೆ. ನಮ್ಮ ರಾಷ್ಟ್ರೀಯ ನಾಯಕರು ಯಾರೇ ಬಂದರೂ ಈ ಮಾಧ್ಯಮ ಕೇಂದ್ರಕ್ಕೆ ಭೇಟಿ ಕೊಡಲಿದ್ದಾರೆ. ಪತ್ರಿಕಾಗೋಷ್ಠಿಗಳನ್ನೂ ಇಲ್ಲಿಯೇ ಅಧಿಕೃತವಾಗಿ ನಡೆಸಲಾಗುವುದು. ಚುನಾವಣಾ ಫಲಿತಾಂಶ ಪ್ರಕಟವಾಗುವವರೆಗೆ ಈ ಕೇಂದ್ರದಲ್ಲಿ ನಿರಂತರವಾಗಿ ಚಟುವಟಿಕೆಗಳು ನಡೆಯಲಿವೆ. ಈ ವ್ಯವಸ್ಥೆಯ ಸದುಪಯೋಗವನ್ನು ಪತ್ರಿಕಾ ಹಾಗೂ ಮಾಧ್ಯಮ ಸ್ನೇಹಿತರು ಪಡೆಯಬೇಕು" ಎಂದು ಅವರು ಮನವಿ ಮಾಡಿದರು.

"ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ 'ನದಿಗಳಲ್ಲಿ ನೀರಿಲ್ಲ; ಕುಡಿಯುವ ನೀರಿನ ಹಾಹಾಕಾರ ಇದೆ' ಎಂದು ತಿಳಿಸಿದ್ದನ್ನು ಗಮನಿಸಿದ್ದೇನೆ. ಈ ಹಿಂದೆ ಯಾವತ್ತು ಕಾವೇರಿ ನೀರನ್ನು ತಮಿಳುನಾಡಿಗೆ ಯಥೇಚ್ಛವಾಗಿ ಹರಿಸುತ್ತಿದ್ದರೋ ಆಗಲೇ ಕಾಂಗ್ರೆಸ್ ಸರ್ಕಾರ- ಮುಖ್ಯಮಂತ್ರಿಗಳಿಗೆ ಜ್ಞಾನೋದಯ ಆಗಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಇಂದು ನೀರಿಗಾಗಿ ಹಾಹಾಕಾರ ಇರುತ್ತಿರಲಿಲ್ಲ" ಎಂದು ಅವರು ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, "ಈಚೆಗೆ ನಡೆದ 4 ರಾಜ್ಯಗಳ ಚುನಾವಣಾ ಸೆಮಿಫೈನಲ್‍ನಲ್ಲಿ 3 ರಾಜ್ಯಗಳನ್ನು ನಾವು ದೊಡ್ಡ ಅಂತರದಲ್ಲಿ ಗೆದ್ದಿದ್ದೇವೆ. ಕಾಂಗ್ರೆಸ್ ಸೆಮಿಫೈನಲ್‍ನಲ್ಲಿ ಸೋತು ಸುಣ್ಣವಾಗಿದೆ. ನಾವಂತೂ ಫೈನಲ್‍ಗೆ ತಲುಪಿದ್ದೇವೆ. ವಿಪಕ್ಷಗಳ ಇಂಡಿಯಾ ಒಕ್ಕೂಟದ ಜೊತೆಗೆ ಶಸ್ತ್ರಸಜ್ಜಿತರಾಗಿದ್ದ ನಿತೀಶ್ ಕುಮಾರ್ ಅಲ್ಲಿ ಶಸ್ತ್ರತ್ಯಾಗ ಮಾಡಿ ನಮ್ಮ ಜೊತೆ ಬಂದಿದ್ದಾರೆ. 'ಇಂಡಿಯಾ' ಒಕ್ಕೂಟವು ನಾಯಕತ್ವ ಇಲ್ಲದೆ, ದಿಕ್ಕುಗಾಣದಂತಿದೆ. ಮ್ಯಾಚ್, ಮ್ಯಾಚಿನ ದಿನಾಂಕ ಫಿಕ್ಸ್ ಆಗಿದೆ. ಆಟಗಾರರೂ ಫಿಕ್ಸ್ ಆಗಿದ್ದಾರೆ. ಸಾರ್ವಜನಿಕರೂ ಫಿಕ್ಸ್ ಆಗಿದ್ದಾರೆ. ನಮ್ಮ ಕ್ಯಾಪ್ಟನ್ ನರೇಂದ್ರ ಮೋದಿಯವರು ಎಂದು ನಿಗದಿಯಾಗಿದೆ. ಅವರ ಕ್ಯಾಪ್ಟನ್ ಇನ್ನೂ ಫಿಕ್ಸ್ ಆಗಿಲ್ಲ" ಎಂದರು.

"ಜನರ ಭಾವನೆ, ಜನಮಿಡಿತದೊಂದಿಗೆ ಮೋದಿಯವರು ಗೆಲ್ಲಲಿದ್ದಾರೆ. ನಾಯಕತ್ವ ಘೋಷಣೆ ಆಗುವ ಮೊದಲೇ ಮ್ಯಾಚ್ (ಚುನಾವಣೆ) ನಡೆಯಲಿದ್ದು, ಇಂಡಿಯಾ ಒಕ್ಕೂಟ ಸೋತು ಸುಣ್ಣವಾಗಲಿದೆ. ಕರ್ನಾಟಕದಲ್ಲೂ ನಮಗೆ ಒಳ್ಳೆಯ ವಾತಾವರಣ ಇದೆ. 10 ತಿಂಗಳಲ್ಲಿ 10 ತಪ್ಪು, 10 ಭ್ರಷ್ಟಾಚಾರಗಳನ್ನು, ಸಮಾಜದ್ರೋಹಿಯಾದ ಕೆಲಸಗಳನ್ನು ಕಾಂಗ್ರೆಸ್ ಮಾಡಿದೆ" ಎಂದು ಟೀಕಿಸಿದರು.

"ಮಂಡ್ಯದಲ್ಲಿ ಹನುಮಧ್ವಜ ಇಳಿಸಿ ಹಿಂದೂಗಳಿಗೆ ಅನ್ಯಾಯ ಮಾಡಿದ್ದಾರೆ. ಹಿಂದೂ ಕಾರ್ಯಕರ್ತರ ರಾಮಜನ್ಮಭೂಮಿಯ ಕೇಸನ್ನು 24 ವರ್ಷಗಳ ಬಳಿಕ ಕೆದಕಿ ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುವ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದು, ಅವರು ಕಾಂಗ್ರೆಸ್ ಕಾರ್ಯಕರ್ತರೆಂದು ಸಾಬೀತಾಗಿದೆ. ಚುನಾವಣೆ ಬಂದಾಗ ಪ್ರಚಾರ ಬೇಕೇ ಬೇಕು. ಅದೇ ರೀತಿ ಸುಳ್ಳು ಸುದ್ದಿಗಳು ಬಂದಾಗ ಅದಕ್ಕೆ ಸ್ಪಷ್ಟನೆ ನೀಡುವುದು ಪಕ್ಷದ ಕರ್ತವ್ಯ. ಇವೆರಡನ್ನು ಒಂದೇ ಜಾಗದಲ್ಲಿ ಮಾಡಲಾಗುವುದು" ಎಂದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಶಾಸಕ ಎಸ್.ಎ. ರಾಮದಾಸ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ್, ರಾಜ್ಯ ವಕ್ತಾರರಾದ ಅಶೋಕ್ ಗೌಡ, ಹೆಚ್.ಎನ್. ಚಂದ್ರಶೇಖರ್, ಸುರಭಿ ಹೋದಿಗೆರೆ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಮತ್ತು ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ: ರಾಜ್ಯದಲ್ಲಿ ಮೊದಲ ಬಾರಿಗೆ ಹೆಚ್ಚು ಮಹಿಳೆಯರಿಗೆ ಮಣೆ; ಕಾಂಗ್ರೆಸ್​ನಿಂದ 6, ಬಿಜೆಪಿಯಿಂದ ಇಬ್ಬರಿಗೆ ಟಿಕೆಟ್ - women candidates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.