ETV Bharat / state

ವಕ್ಫ್‌ ನೋಟಿಸ್​ ವಿಚಾರ: ವಿಜಯಪುರ ಜಿಲ್ಲೆಯ ರೈತರೊಂದಿಗೆ ಸಂಸದ ತೇಜಸ್ವಿ ಸೂರ್ಯ ಸಂವಾದ

ವಿಜಯಪುರ ಜಿಲ್ಲೆಯಲ್ಲಿ 15 ಸಾವಿರಕ್ಕೂ ಅಧಿಕ ಕರೆ ಜಾಗವನ್ನು ವಕ್ಫ್‌ ತನ್ನ ಆಸ್ತಿ ಎಂದು ನೋಟಿಸ್​ ಜಾರಿ ಮಾಡಿದೆ. ಈ ಸಂಬಂಧ ಇಂದು ರೈತರೊಂದಿಗೆ ಸಂಸದ ತೇಜಸ್ವಿ ಸೂರ್ಯ ಸಭೆ ನಡೆಸಿ, ಚರ್ಚಿಸಿದರು.

ರೈತರೊಂದಿಗೆ ಸಂಸದ ತೇಜಸ್ವಿ ಸೂರ್ಯ ಸಭೆ
ರೈತರೊಂದಿಗೆ ಸಂಸದ ತೇಜಸ್ವಿ ಸೂರ್ಯ (ETV Bharat)
author img

By ETV Bharat Karnataka Team

Published : 4 hours ago

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ ನೀಡಿದ ನೋಟಿಸ್‌ನಿಂದ ಆತಂಕಗೊಂಡಿದ್ದ ರೈತರು ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ವಕ್ಫ್‌ ಕಾಯ್ದೆ-2024ರ ಜಂಟಿ ಸದನ ಸಮಿತಿಯ ಸದಸ್ಯರೂ ಆಗಿರುವ ತೇಜಸ್ವಿ ಸೂರ್ಯ ಅವರನ್ನು ಭೇಟಿ ಮಾಡಿ ವಕ್ಫ್‌ ಅಕ್ರಮಗಳ ವಿರುದ್ಧ ನ್ಯಾಯ ಒದಗಿಸುವಂತೆ ಕೋರಿ ಮನವಿ ಪತ್ರ ಸಲ್ಲಿಸಿದರು.

ರೈತರ ಮನವಿ ಸ್ವೀಕರಿಸಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ರೈತರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದರು. ಈ ವೇಳೆ ಸಂಸದರ ಕಚೇರಿಯಲ್ಲೇ ಪತ್ರಿಕಾಗೋಷ್ಠಿ ನಡೆಸಿ, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ನೆರವಿನಿಂದ ವಕ್ಫ್‌ ಬೋರ್ಡ್‌ ರೈತರ ಭೂಮಿಗಳನ್ನು ಕಬಳಿಸಲು ನಡೆಸಿರುವ ಷಡ್ಯಂತ್ರದ ವಿರುದ್ಧ ಕಿಡಿಕಾರಿದರು. ತರಾತುರಿಯಲ್ಲಿ ನೀಡಲಾಗಿರುವ ವಕ್ಫ್‌ ಬೋರ್ಡ್‌ನ ನೋಟಿಸ್‌ನಿಂದ ರಾಜ್ಯದ ಸಾವಿರಾರು ರೈತರು ಮತ್ತು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದು, ಶೀಘ್ರವೇ ಅವರ ಆತಂಕ ದೂರ ಮಾಡಿ ನ್ಯಾಯ ನೀಡುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರ ವಕ್ಫ್‌ ಕಾನೂನಿಗೆ ತಿದ್ದುಪಡಿ ತರಲು ಹೊರಟಾಗಿನಿಂದಲೂ ದೇಶದಲ್ಲಿ ಮತ್ತು ವಿಶೇಷವಾಗಿ ರಾಜ್ಯದಲ್ಲಿ ವಕ್ಫ್‌ ಆಟೋಟೋಪ ಅಧಿಕವಾಗಿರುವ ಕುರಿತು ಅನುಮಾನ ವ್ಯಕ್ತಪಡಿಸಿದ ಸಂಸದರು, ವಿಜಯಪುರ ಜಿಲ್ಲೆಯೊಂದರಲ್ಲೇ 15 ಸಾವಿರಕ್ಕೂ ಅಧಿಕ ಕರೆ ಜಾಗವನ್ನು ವಕ್ಫ್‌ ತನ್ನ ಆಸ್ತಿ ಎಂದು ನೋಟಿಸ್​ ಜಾರಿಗೊಳಿಸಿದೆ. ಇದರ ಹೊರತಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿಯೂ ಕೂಡ ವಕ್ಫ್‌ ಅಕ್ರಮವಾಗಿ ಆಸ್ತಿ ಕಬಳಿಕೆಗೆ ಮುಂದಾಗಿದೆ. ದೇಶದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಜಾರಿಯಾಗುವುದಕ್ಕೂ ಮುಂಚಿತವಾಗಿ ಕರ್ನಾಟಕದಲ್ಲಿ ಈ ವಕ್ಫ್‌ ಕಾನೂನು ಬದಲಾಗುವುದಕ್ಕೂ ಸಾಧ್ಯವಾದಷ್ಟು ಜಾಗವನ್ನು ವಕ್ಫ್‌ ಹೆಸರಿಗೆ ನೋಂದಣಿಗೊಳಿಸಬೇಕು ಎನ್ನುವ ಹುನ್ನಾರದಲ್ಲಿ ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿರುವುದು ಅಕ್ಷ್ಯಮ್ಯ ಎಂದರು.

ಸಚಿವ ಜಮೀರ್‌ ಅಹ್ಮದ್‌ ವಿರುದ್ಧ ಆರೋಪ ಮಾಡಿದ ಸಂಸದರು, ಕಳೆದ 2-3 ವಾರದ ಹಿಂದೆ ಜಮೀರ್‌ ಅಹ್ಮದ್ ರಾಜ್ಯದ ಕೆಲವು ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳಿಗೆ ಮತ್ತು ಮುಸ್ಲಿಂ ಸಮಾಜದ ಮುಖಂಡರ ಜೊತೆ ಸಭೆ ನಡೆಸಿ ವಕ್ಫ್‌ ಬೋರ್ಡ್‌ ಹೆಸರಿಗೆ ರಿಜಿಸ್ಟರ್‌ ಮಾಡಿಸಲು ಸೂಚನೆ ನೀಡಿದ್ದಾರೆ. ಸಚಿವರ ಅದೇಶದ ಮೇರೆಗೆ ಜಿಲ್ಲಾಧಿಕಾರಿಗಳು, ತಲೆಮಾರುಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರ ಜಮೀನಿನ ಪಹಣಿಗಳನ್ನು ರಾತ್ರೋರಾತ್ರಿ ಬದಲಾವಣೆ ಮಾಡಿದ್ದಾರೆ. 1920ರಿಂದ ಇಲ್ಲಿ ರೈತರು ಸಾಗುವಳಿ ಮಾಡಿಕೊಂಡು ಬಂದಿರುವ ದಾಖಲೆಗಳಿದ್ದರೂ ಸಹ ರೈತರ ಜಮೀನು ಮಾತ್ರವಲ್ಲದೇ ಹಿಂದೂಗಳ ರುದ್ರಭೂಮಿಯನ್ನು ಸಹ ವಕ್ಫ್‌ ಆಸ್ತಿಯನ್ನು ಅಕ್ರಮವಾಗಿ ಕಬಳಿಕೆ ಮಾಡಲು ಅಧಿಕಾರಿಗಳೂ ಸಹ ಮುಂದಾಗಿರುವುದು ಸರಿಯಲ್ಲ ಎಂದು ಹೇಳಿದರು.

ವಕ್ಫ್ ಆಕ್ರಮಿತ ಆಸ್ತಿ, ವ್ಯಾಜ್ಯಗಳ ಕುರಿತಾಗಿ ವಿಜಯಪುರ ಜಿಲ್ಲೆಯ ಹೊನವಾಡ, ಕೋಲಾರ ಮತ್ತು ಇತರ ಗ್ರಾಮಗಳ ರೈತರೊಂದಿಗೆ ಇಂದು ಸಭೆ ನಡೆಸಿ, ಚರ್ಚಿಸಿದ್ದು, ಇಡೀ ವಿಜಯಪುರ ಜಿಲ್ಲೆಯೊಂದರಲ್ಲೇ 15 ಸಾವಿರ ಎಕರೆಗಳಿಗೂ ಅಧಿಕ ಭೂಮಿ ಅತಿಕ್ರಮಣವಾಗಿದ್ದು, ತಿಕೋಟಾ ತಾಲೂಕಿನ ಹೊನವಾಡ ಗ್ರಾಮ ಒಂದರಲ್ಲೇ 1,200 ಎಕರೆಗಳಷ್ಟು ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗಿದೆ ಎಂದರೆ ವಕ್ಫ್ ಬೋರ್ಡ್​ನಿಂದ ಯಾವ ಮಟ್ಟದ ಅತಿಕ್ರಮಣ ನಡೆದಿದೆ ಎಂಬುದನ್ನು ಊಹಿಸಬಹುದು ಎಂದರು.

ರೈತರೊಂದಿಗೆ ಸಂಸದ ತೇಜಸ್ವಿ ಸೂರ್ಯ ಸಭೆ
ರೈತರೊಂದಿಗೆ ಸಂಸದ ತೇಜಸ್ವಿ ಸೂರ್ಯ ಸಭೆ (ETV Bharat)

ಇತ್ತೀಚೆಗಷ್ಟೇ ವಿಜಯಪುರಕ್ಕೆ ಭೇಟಿ ನೀಡಿರುವ ವಕ್ಫ್ ವ್ಯವಹಾರಗಳ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಮುಂಬರುವ 15 ದಿನಗಳ ಒಳಗೆ ವಕ್ಫ್ ಆಸ್ತಿ ನೋಂದಣಿಗೆ ಜಿಲ್ಲಾಡಳಿತವನ್ನು ಒತ್ತಾಯಿಸಿರುವುದು ಆಶ್ಚರ್ಯ ತಂದಿದೆ. ತಮ್ಮ ತಾತ-ಮುತ್ತಾತಂದಿರ ಕಾಲದಿಂದಲೂ ಕೃಷಿ, ಇತರ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಎಷ್ಟೋ ಕುಟುಂಬಗಳಿಗೆ ತರಾತುರಿಯಲ್ಲಿ ನೋಟಿಸ್ ನೀಡಿರುವುದು ದುರದೃಷ್ಟಕರ. ಎಷ್ಟೋ ದಾಖಲೆಗಳನ್ನು ಪರಿಶೀಲಿಸಿದ ನಂತರ ಗಮನಕ್ಕೆ ಬಂದಿರುವ ಅಂಶವೆಂದರೆ, ವಕ್ಫ್ ಬೋರ್ಡ್ ತನ್ನ ಆಸ್ತಿಯೆಂದು ಘೋಷಿಸಿರುವ ಪತ್ರದಲ್ಲಿ ಎಲ್ಲಿಯೂ ಆ ಜಾಗ ವಕ್ಫ್​ಗೆ ಹೇಗೆ ಬಂದಿದೆ ಎಂಬುದರ ಕುರಿತಾಗಿ ಒಂದೇ ಒಂದು ಸಾಲು ಕೂಡ ಇರದೇ ಇರುವುದು ಆಶ್ಚರ್ಯ ತಂದಿದೆ ಎಂದು ವಿವರಿಸಿದರು.

ತನ್ನ ತುಷ್ಟೀಕರಣದ ನೀತಿಯ ಭಾಗವಾಗಿ ವಕ್ಫ್ ಕಾಯ್ದೆ ಹೆಸರಿನಲ್ಲಿ ಕಾನೂನು ಪ್ರಕಾರವೇ ಲೂಟಿಗೆ ಇಳಿಯುವ ಶಾಸನಬದ್ಧ ಅಧಿಕಾರವನ್ನು ಕಾಂಗ್ರೆಸ್‌ ಸರ್ಕಾರ ಒದಗಿಸಿದ್ದೇ ಈ ರೀತಿಯ ಗೊಂದಲಗಳಿಗೆ ಮೂಲ ಕಾರಣ. ಈ ಐತಿಹಾಸಿಕ ಪ್ರಮಾದವನ್ನು ಸರಿಪಡಿಸುವ ನಿಟ್ಟಿನಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶೀಘ್ರವೇ ತಿದ್ದುಪಡಿ ಮಸೂದೆ ಜಾರಿಗೆ ತರಲು ಹೊರಟಿದೆ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತರಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ -2024 ಮಸೂದೆ ಜಾರಿಗೆ ಬರುವ ಮೊದಲು ವಕ್ಫ್ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ ಕಬಳಿಸುವ ಹುನ್ನಾರವಿದು. ನಾನು ರಾಜ್ಯದ ರೈತರು ಮತ್ತು ಸಾರ್ವಜನಿಕರಲ್ಲಿ ವಿನಂತಿಸುವುದೇನೆಂದರೆ, ವಕ್ಫ್ ಬೋರ್ಡ್​ನಿಂದ ನೋಟಿಸ್ ಬಂದಿದೆ ಎಂದ ತಕ್ಷಣ ಗಾಬರಿ, ಆತಂಕಗೊಳ್ಳುವ ಅಗತ್ಯವಿಲ್ಲ. ಕಾನೂನು ಹೋರಾಟದ ಮೂಲಕ ಈ ರೀತಿಯ ಆಕ್ರಮಗಳ ವಿರುದ್ಧ ಸೆಣಸುವ ಎಲ್ಲ ಅವಕಾಶಗಳಿವೆ ಎಂಬುದರ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಮುಂದಿನ ಚಳಿಗಾಲದ ಅಧಿವೇಶನದಲ್ಲಿ ವಕ್ಫ್‌ 2004ರ ನೂತನ ನೀತಿ ಜಾರಿಯಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಶಿವಮೊಗ್ಗ: ಲಿಂಗನಮಕ್ಕಿ ಡ್ಯಾಂ ಮುತ್ತಿಗೆಗೆ ಹೊರಟ ರೈತರ ಬಂಧನ, ಬಿಡುಗಡೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ ನೀಡಿದ ನೋಟಿಸ್‌ನಿಂದ ಆತಂಕಗೊಂಡಿದ್ದ ರೈತರು ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ವಕ್ಫ್‌ ಕಾಯ್ದೆ-2024ರ ಜಂಟಿ ಸದನ ಸಮಿತಿಯ ಸದಸ್ಯರೂ ಆಗಿರುವ ತೇಜಸ್ವಿ ಸೂರ್ಯ ಅವರನ್ನು ಭೇಟಿ ಮಾಡಿ ವಕ್ಫ್‌ ಅಕ್ರಮಗಳ ವಿರುದ್ಧ ನ್ಯಾಯ ಒದಗಿಸುವಂತೆ ಕೋರಿ ಮನವಿ ಪತ್ರ ಸಲ್ಲಿಸಿದರು.

ರೈತರ ಮನವಿ ಸ್ವೀಕರಿಸಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ರೈತರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದರು. ಈ ವೇಳೆ ಸಂಸದರ ಕಚೇರಿಯಲ್ಲೇ ಪತ್ರಿಕಾಗೋಷ್ಠಿ ನಡೆಸಿ, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ನೆರವಿನಿಂದ ವಕ್ಫ್‌ ಬೋರ್ಡ್‌ ರೈತರ ಭೂಮಿಗಳನ್ನು ಕಬಳಿಸಲು ನಡೆಸಿರುವ ಷಡ್ಯಂತ್ರದ ವಿರುದ್ಧ ಕಿಡಿಕಾರಿದರು. ತರಾತುರಿಯಲ್ಲಿ ನೀಡಲಾಗಿರುವ ವಕ್ಫ್‌ ಬೋರ್ಡ್‌ನ ನೋಟಿಸ್‌ನಿಂದ ರಾಜ್ಯದ ಸಾವಿರಾರು ರೈತರು ಮತ್ತು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದು, ಶೀಘ್ರವೇ ಅವರ ಆತಂಕ ದೂರ ಮಾಡಿ ನ್ಯಾಯ ನೀಡುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರ ವಕ್ಫ್‌ ಕಾನೂನಿಗೆ ತಿದ್ದುಪಡಿ ತರಲು ಹೊರಟಾಗಿನಿಂದಲೂ ದೇಶದಲ್ಲಿ ಮತ್ತು ವಿಶೇಷವಾಗಿ ರಾಜ್ಯದಲ್ಲಿ ವಕ್ಫ್‌ ಆಟೋಟೋಪ ಅಧಿಕವಾಗಿರುವ ಕುರಿತು ಅನುಮಾನ ವ್ಯಕ್ತಪಡಿಸಿದ ಸಂಸದರು, ವಿಜಯಪುರ ಜಿಲ್ಲೆಯೊಂದರಲ್ಲೇ 15 ಸಾವಿರಕ್ಕೂ ಅಧಿಕ ಕರೆ ಜಾಗವನ್ನು ವಕ್ಫ್‌ ತನ್ನ ಆಸ್ತಿ ಎಂದು ನೋಟಿಸ್​ ಜಾರಿಗೊಳಿಸಿದೆ. ಇದರ ಹೊರತಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿಯೂ ಕೂಡ ವಕ್ಫ್‌ ಅಕ್ರಮವಾಗಿ ಆಸ್ತಿ ಕಬಳಿಕೆಗೆ ಮುಂದಾಗಿದೆ. ದೇಶದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಜಾರಿಯಾಗುವುದಕ್ಕೂ ಮುಂಚಿತವಾಗಿ ಕರ್ನಾಟಕದಲ್ಲಿ ಈ ವಕ್ಫ್‌ ಕಾನೂನು ಬದಲಾಗುವುದಕ್ಕೂ ಸಾಧ್ಯವಾದಷ್ಟು ಜಾಗವನ್ನು ವಕ್ಫ್‌ ಹೆಸರಿಗೆ ನೋಂದಣಿಗೊಳಿಸಬೇಕು ಎನ್ನುವ ಹುನ್ನಾರದಲ್ಲಿ ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿರುವುದು ಅಕ್ಷ್ಯಮ್ಯ ಎಂದರು.

ಸಚಿವ ಜಮೀರ್‌ ಅಹ್ಮದ್‌ ವಿರುದ್ಧ ಆರೋಪ ಮಾಡಿದ ಸಂಸದರು, ಕಳೆದ 2-3 ವಾರದ ಹಿಂದೆ ಜಮೀರ್‌ ಅಹ್ಮದ್ ರಾಜ್ಯದ ಕೆಲವು ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳಿಗೆ ಮತ್ತು ಮುಸ್ಲಿಂ ಸಮಾಜದ ಮುಖಂಡರ ಜೊತೆ ಸಭೆ ನಡೆಸಿ ವಕ್ಫ್‌ ಬೋರ್ಡ್‌ ಹೆಸರಿಗೆ ರಿಜಿಸ್ಟರ್‌ ಮಾಡಿಸಲು ಸೂಚನೆ ನೀಡಿದ್ದಾರೆ. ಸಚಿವರ ಅದೇಶದ ಮೇರೆಗೆ ಜಿಲ್ಲಾಧಿಕಾರಿಗಳು, ತಲೆಮಾರುಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರ ಜಮೀನಿನ ಪಹಣಿಗಳನ್ನು ರಾತ್ರೋರಾತ್ರಿ ಬದಲಾವಣೆ ಮಾಡಿದ್ದಾರೆ. 1920ರಿಂದ ಇಲ್ಲಿ ರೈತರು ಸಾಗುವಳಿ ಮಾಡಿಕೊಂಡು ಬಂದಿರುವ ದಾಖಲೆಗಳಿದ್ದರೂ ಸಹ ರೈತರ ಜಮೀನು ಮಾತ್ರವಲ್ಲದೇ ಹಿಂದೂಗಳ ರುದ್ರಭೂಮಿಯನ್ನು ಸಹ ವಕ್ಫ್‌ ಆಸ್ತಿಯನ್ನು ಅಕ್ರಮವಾಗಿ ಕಬಳಿಕೆ ಮಾಡಲು ಅಧಿಕಾರಿಗಳೂ ಸಹ ಮುಂದಾಗಿರುವುದು ಸರಿಯಲ್ಲ ಎಂದು ಹೇಳಿದರು.

ವಕ್ಫ್ ಆಕ್ರಮಿತ ಆಸ್ತಿ, ವ್ಯಾಜ್ಯಗಳ ಕುರಿತಾಗಿ ವಿಜಯಪುರ ಜಿಲ್ಲೆಯ ಹೊನವಾಡ, ಕೋಲಾರ ಮತ್ತು ಇತರ ಗ್ರಾಮಗಳ ರೈತರೊಂದಿಗೆ ಇಂದು ಸಭೆ ನಡೆಸಿ, ಚರ್ಚಿಸಿದ್ದು, ಇಡೀ ವಿಜಯಪುರ ಜಿಲ್ಲೆಯೊಂದರಲ್ಲೇ 15 ಸಾವಿರ ಎಕರೆಗಳಿಗೂ ಅಧಿಕ ಭೂಮಿ ಅತಿಕ್ರಮಣವಾಗಿದ್ದು, ತಿಕೋಟಾ ತಾಲೂಕಿನ ಹೊನವಾಡ ಗ್ರಾಮ ಒಂದರಲ್ಲೇ 1,200 ಎಕರೆಗಳಷ್ಟು ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗಿದೆ ಎಂದರೆ ವಕ್ಫ್ ಬೋರ್ಡ್​ನಿಂದ ಯಾವ ಮಟ್ಟದ ಅತಿಕ್ರಮಣ ನಡೆದಿದೆ ಎಂಬುದನ್ನು ಊಹಿಸಬಹುದು ಎಂದರು.

ರೈತರೊಂದಿಗೆ ಸಂಸದ ತೇಜಸ್ವಿ ಸೂರ್ಯ ಸಭೆ
ರೈತರೊಂದಿಗೆ ಸಂಸದ ತೇಜಸ್ವಿ ಸೂರ್ಯ ಸಭೆ (ETV Bharat)

ಇತ್ತೀಚೆಗಷ್ಟೇ ವಿಜಯಪುರಕ್ಕೆ ಭೇಟಿ ನೀಡಿರುವ ವಕ್ಫ್ ವ್ಯವಹಾರಗಳ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಮುಂಬರುವ 15 ದಿನಗಳ ಒಳಗೆ ವಕ್ಫ್ ಆಸ್ತಿ ನೋಂದಣಿಗೆ ಜಿಲ್ಲಾಡಳಿತವನ್ನು ಒತ್ತಾಯಿಸಿರುವುದು ಆಶ್ಚರ್ಯ ತಂದಿದೆ. ತಮ್ಮ ತಾತ-ಮುತ್ತಾತಂದಿರ ಕಾಲದಿಂದಲೂ ಕೃಷಿ, ಇತರ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಎಷ್ಟೋ ಕುಟುಂಬಗಳಿಗೆ ತರಾತುರಿಯಲ್ಲಿ ನೋಟಿಸ್ ನೀಡಿರುವುದು ದುರದೃಷ್ಟಕರ. ಎಷ್ಟೋ ದಾಖಲೆಗಳನ್ನು ಪರಿಶೀಲಿಸಿದ ನಂತರ ಗಮನಕ್ಕೆ ಬಂದಿರುವ ಅಂಶವೆಂದರೆ, ವಕ್ಫ್ ಬೋರ್ಡ್ ತನ್ನ ಆಸ್ತಿಯೆಂದು ಘೋಷಿಸಿರುವ ಪತ್ರದಲ್ಲಿ ಎಲ್ಲಿಯೂ ಆ ಜಾಗ ವಕ್ಫ್​ಗೆ ಹೇಗೆ ಬಂದಿದೆ ಎಂಬುದರ ಕುರಿತಾಗಿ ಒಂದೇ ಒಂದು ಸಾಲು ಕೂಡ ಇರದೇ ಇರುವುದು ಆಶ್ಚರ್ಯ ತಂದಿದೆ ಎಂದು ವಿವರಿಸಿದರು.

ತನ್ನ ತುಷ್ಟೀಕರಣದ ನೀತಿಯ ಭಾಗವಾಗಿ ವಕ್ಫ್ ಕಾಯ್ದೆ ಹೆಸರಿನಲ್ಲಿ ಕಾನೂನು ಪ್ರಕಾರವೇ ಲೂಟಿಗೆ ಇಳಿಯುವ ಶಾಸನಬದ್ಧ ಅಧಿಕಾರವನ್ನು ಕಾಂಗ್ರೆಸ್‌ ಸರ್ಕಾರ ಒದಗಿಸಿದ್ದೇ ಈ ರೀತಿಯ ಗೊಂದಲಗಳಿಗೆ ಮೂಲ ಕಾರಣ. ಈ ಐತಿಹಾಸಿಕ ಪ್ರಮಾದವನ್ನು ಸರಿಪಡಿಸುವ ನಿಟ್ಟಿನಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶೀಘ್ರವೇ ತಿದ್ದುಪಡಿ ಮಸೂದೆ ಜಾರಿಗೆ ತರಲು ಹೊರಟಿದೆ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತರಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ -2024 ಮಸೂದೆ ಜಾರಿಗೆ ಬರುವ ಮೊದಲು ವಕ್ಫ್ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ ಕಬಳಿಸುವ ಹುನ್ನಾರವಿದು. ನಾನು ರಾಜ್ಯದ ರೈತರು ಮತ್ತು ಸಾರ್ವಜನಿಕರಲ್ಲಿ ವಿನಂತಿಸುವುದೇನೆಂದರೆ, ವಕ್ಫ್ ಬೋರ್ಡ್​ನಿಂದ ನೋಟಿಸ್ ಬಂದಿದೆ ಎಂದ ತಕ್ಷಣ ಗಾಬರಿ, ಆತಂಕಗೊಳ್ಳುವ ಅಗತ್ಯವಿಲ್ಲ. ಕಾನೂನು ಹೋರಾಟದ ಮೂಲಕ ಈ ರೀತಿಯ ಆಕ್ರಮಗಳ ವಿರುದ್ಧ ಸೆಣಸುವ ಎಲ್ಲ ಅವಕಾಶಗಳಿವೆ ಎಂಬುದರ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಮುಂದಿನ ಚಳಿಗಾಲದ ಅಧಿವೇಶನದಲ್ಲಿ ವಕ್ಫ್‌ 2004ರ ನೂತನ ನೀತಿ ಜಾರಿಯಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಶಿವಮೊಗ್ಗ: ಲಿಂಗನಮಕ್ಕಿ ಡ್ಯಾಂ ಮುತ್ತಿಗೆಗೆ ಹೊರಟ ರೈತರ ಬಂಧನ, ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.