ETV Bharat / state

ಸಿಎಂ ಪತ್ನಿ ಹೆಸರಿನ 14 ನಿವೇಶನಗಳ ಕ್ರಯಪತ್ರ ರದ್ದತಿಗೆ ಮುಡಾ ಆಯುಕ್ತರಿಂದ ಆದೇಶ - Plot Deed Cancel

author img

By ETV Bharat Karnataka Team

Published : 3 hours ago

ಸಿಎಂ ಸಿದ್ದರಾಮಯ್ಯನವರ ಪತ್ನಿ ಹೆಸರಿನ 14 ಕ್ರಯಪತ್ರ ರದ್ದುಗೊಳಿಸುವಂತೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಘುನಂದನ್‌ ಸಬ್​ರಿಜಿಸ್ಟರ್​​ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

muda
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ETV Bharat)

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ(ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ, ಮೈಸೂರಿನ ವಿಜಯನಗರದ ಮೂರನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ವಾಪಾಸ್‌ ನೀಡಿದ ಬೆನ್ನಲ್ಲೇ, ನಿವೇಶನಗಳ ಕ್ರಯಪತ್ರವನ್ನು ರದ್ದುಗೊಳಿಸುವಂತೆ ಮುಡಾ ಆಯುಕ್ತ ರಘುನಂದನ್​,​ ಸಬ್​​ರಿಜಿಸ್ಟರ್​​ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಮುಡಾದಲ್ಲಿ ಪಾರ್ವತಿ 50:50ರಂತೆ ಪಡೆದ ನಿವೇಶನಗಳನ್ನು ಹಿಂದಿರುಗಿಸಿ, ಸೋಮವಾರ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಮಂಗಳವಾರ ಬೆಳಗ್ಗೆ ಅವರ ಪುತ್ರ ಹಾಗು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮುಡಾ ಆಯುಕ್ತರಿಗೆ ನೀಡಿದ್ದರು.

ಈ ಕುರಿತು ಪ್ರಾಧಿಕಾರದ ಆಯುಕ್ತ ರಘುನಂದನ್‌ 'ಈಟಿವಿ ಭಾರತ'ದೊಂದಿಗೆ ಮಾತನಾಡಿ, "ಯಾರೇ ನಿವೇಶನವನ್ನು ವಾಪಸ್‌ ನೀಡಿದರೂ ಹಿಂಪಡೆಯುತ್ತೇವೆ. ಅದರ ಆಧಾರದಲ್ಲಿ ಇಂದು ಪಾರ್ವತಿಯವರು ಮುಡಾಗೆ ವಾಪಸ್‌ ನೀಡಿರುವ ನಿವೇಶನಗಳನ್ನು ಹಿಂಪಡೆದು ಅವರ 14 ನಿವೇಶನಗಳ ಕ್ರಯಪತ್ರವನ್ನು ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ" ಎಂದು ಮಾಹಿತಿ ನೀಡಿದರು.

"ಈ ಬಗ್ಗೆ ಲೋಕಾಯುಕ್ತಕ್ಕೆ ಮಾಹಿತಿ ನೀಡಲಾಗುವುದು ಹಾಗೂ ಮುಂದಿನ ಕಾನೂನು ಪ್ರಕ್ರಿಯೆಯನ್ನು ಕಾನೂನು ತಜ್ಞರ ಜೊತೆ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು" ಎಂದರು.

ಇದನ್ನೂ ಓದಿ: ಮುಡಾ ಕೆಸರೆ ಜಮೀನು ಮಹಜರು: ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದೇನು? - Muda Plots Inspection

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ(ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ, ಮೈಸೂರಿನ ವಿಜಯನಗರದ ಮೂರನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ವಾಪಾಸ್‌ ನೀಡಿದ ಬೆನ್ನಲ್ಲೇ, ನಿವೇಶನಗಳ ಕ್ರಯಪತ್ರವನ್ನು ರದ್ದುಗೊಳಿಸುವಂತೆ ಮುಡಾ ಆಯುಕ್ತ ರಘುನಂದನ್​,​ ಸಬ್​​ರಿಜಿಸ್ಟರ್​​ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಮುಡಾದಲ್ಲಿ ಪಾರ್ವತಿ 50:50ರಂತೆ ಪಡೆದ ನಿವೇಶನಗಳನ್ನು ಹಿಂದಿರುಗಿಸಿ, ಸೋಮವಾರ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಮಂಗಳವಾರ ಬೆಳಗ್ಗೆ ಅವರ ಪುತ್ರ ಹಾಗು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮುಡಾ ಆಯುಕ್ತರಿಗೆ ನೀಡಿದ್ದರು.

ಈ ಕುರಿತು ಪ್ರಾಧಿಕಾರದ ಆಯುಕ್ತ ರಘುನಂದನ್‌ 'ಈಟಿವಿ ಭಾರತ'ದೊಂದಿಗೆ ಮಾತನಾಡಿ, "ಯಾರೇ ನಿವೇಶನವನ್ನು ವಾಪಸ್‌ ನೀಡಿದರೂ ಹಿಂಪಡೆಯುತ್ತೇವೆ. ಅದರ ಆಧಾರದಲ್ಲಿ ಇಂದು ಪಾರ್ವತಿಯವರು ಮುಡಾಗೆ ವಾಪಸ್‌ ನೀಡಿರುವ ನಿವೇಶನಗಳನ್ನು ಹಿಂಪಡೆದು ಅವರ 14 ನಿವೇಶನಗಳ ಕ್ರಯಪತ್ರವನ್ನು ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ" ಎಂದು ಮಾಹಿತಿ ನೀಡಿದರು.

"ಈ ಬಗ್ಗೆ ಲೋಕಾಯುಕ್ತಕ್ಕೆ ಮಾಹಿತಿ ನೀಡಲಾಗುವುದು ಹಾಗೂ ಮುಂದಿನ ಕಾನೂನು ಪ್ರಕ್ರಿಯೆಯನ್ನು ಕಾನೂನು ತಜ್ಞರ ಜೊತೆ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು" ಎಂದರು.

ಇದನ್ನೂ ಓದಿ: ಮುಡಾ ಕೆಸರೆ ಜಮೀನು ಮಹಜರು: ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದೇನು? - Muda Plots Inspection

ETV Bharat Logo

Copyright © 2024 Ushodaya Enterprises Pvt. Ltd., All Rights Reserved.